Homeಅಂಕಣಗಳುಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ....?

ಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ….?

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್‍ರವರು ನನ್ನನ್ನು ಖೋಟಾ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಗುರುತರ ಆರೋಪ ಮಾಡಿ ನನ್ನನ್ನು ನೋಯಿಸಿದ್ದಾರೆ. ನಾನು ಸಾರ್ವಜನಿಕ ಜೀವನವನ್ನು ಆರಂಭಿಸಿ 60 ವರ್ಷಗಳ ಮೇಲಾಗಿದೆ. ಅಪಾರ ಸಂಖ್ಯೆಯಲ್ಲಿ ಸ್ನೇಹಿತರ, ಸಾಮಾಜಿಕ ಕಾರ್ಯಕರ್ತರ, ಸಾಮಾಜಿಕ ಹೋರಾಟಗಾರರ ಒಡನಾಟ ನನಗಿದೆ. ಹೀಗಾಗಿ ಸಮಾಜದ ಎಲ್ಲ ಸ್ತರದ ಜನ ನನ್ನನ್ನು ವಿನಾಕಾರಣ ಅಪಮಾನಕ್ಕೀಡುಮಾಡಿದ ಬಸನಗೌಡ ಯತ್ನಾಳ್ ವಿರುದ್ಧವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿ.

ಅಷ್ಟೇಅಲ್ಲದೆ ವಿಧಾನಸಭೆಯಲ್ಲೂ ಮಾನ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಯತ್ನಾಳರವರ ಆಧಾರರಹಿತ ನಿಂದನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಸೆಂಬ್ಲಿಯಲ್ಲಿ ಈ ಕುರಿತು ಪ್ರಸ್ತಾಪಿಸುವುದಾಗಿಯೂ ಯತ್ನಾಳರಿಗೆ ಅಧಿವೇಶನಕ್ಕೆ ಭಾಗವಹಿಸಲು ಅನುಮತಿ ನೀಡಬಾರದೆಂದು ಸ್ಪೀಕರ್‍ಗೆ ಮನವಿ ಮಾಡುವುದಾಗಿಯೂ ಪ್ರಸ್ತಾಪ ಮಾಡಿದ್ದಾರೆ. ಅಷ್ಟೇಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಇದರ ಜೊತೆಜೊತೆಗೇ ಬೀದಿಗಿಳಿದು ಪ್ರತಿಭಟಿಸುವುದಾಗಿಯೂ ತಿಳಿಸಿದ್ದರು. ಅಸೆಂಬ್ಲಿ ಸ್ಪೀಕರ್ ಸಿದ್ದರಾಮಯ್ಯನವರಿಗೆ ಈ ಕುರಿತು ಮಾತನಾಡಲು ಅವಕಾಶ ಕೊಡಲಿಲ್ಲವಾಗಿ ಕಾಂಗ್ರೆಸ್ ಶಾಸಕರೆಲ್ಲರೂ ಅಸೆಂಬ್ಲಿ ಬಾವಿಯೊಳಗೆ ಕುಳಿತು ಸಿದ್ದರಾಮಯ್ಯನವರಿಗೆ ಯತ್ನಾಳರ ವರ್ತನೆ ಬಗೆಗೆ ಮಾತನಾಡಲು ಅವಕಾಶ ನೀಡಬೇಕೆಂದೂ, ಯತ್ನಾಳರನ್ನು ಅಧಿವೇಶನಕ್ಕೆ ಬರಗೊಡಬಾರದೆಂದೂ ಸ್ಪೀಕರನ್ನು ಒತ್ತಾಯಿಸುತ್ತಿದ್ದಾರೆ.

ನಾನು ಅಸೆಂಬ್ಲಿ ಪಾರ್ಲಿಮೆಂಟುಗಳು ಸುವ್ಯವಸ್ಥೆಯಿಂದ ನಡೆಯಬೇಕೆಂದೂ, ವಿರೋಧಪಕ್ಷಗಳು ಅದಕ್ಕೆ ನೆರವಾಗಬೇಕೆಂದೂ ಅಷ್ಟು ವರ್ಷಗಳಿಂದ ಹೇಳುತ್ತಾ ಬಂದಿದ್ದೇನೆ. ಯಾವುದಾದರೂ ಗಹನ ವಿಚಾರವನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಲೇಬೇಕೆಂದು ವಿರೋಧ ಪಕ್ಷ ಬಯಸಿ, ಅದಕ್ಕೆ ಆಡಳಿತ ಪಕ್ಷ ಅವಕಾಶ ಕೊಡದಿದ್ದಾಗ, ಒಂದು ದಿನ ಪೂರ್ತಿ ಸರ್ಕಾರದ ವಿರುದ್ಧ ಅಸೆಂಬ್ಲಿಯಲ್ಲೇ ಹೋರಾಡಬೇಕು. ಸರ್ಕಾರ ಅದಕ್ಕೂ ಬಗ್ಗದಿದ್ದರೆ ಈ ಹೋರಾಟವನ್ನು ನಡುಬೀದಿಯಲ್ಲಿ ಮತದಾರರ ಬೆಂಬಲದೊಂದಿಗೆ ಮುಂದುವರೆಸಬೇಕು ಎಂಬುದು ನನ್ನ ಖಚಿತ ಅಭಿಪ್ರಾಯ. ಸಿದ್ದರಾಮಯ್ಯನವರೂ ಈ ನನ್ನ ನಿಲುವನ್ನು ಒಪ್ಪಬೇಕೆಂದು ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ.

ಹತ್ತಾರು ವರ್ಷಗಳಿಂದ ಈ ವ್ಯಾಧಿ ಕಾಡುತ್ತಿದೆ. ಪ್ರತಿ ಅಧಿವೇಶನದಲ್ಲೂ ಹತ್ತಾರು ಮಸೂದೆಗಳು ಅಂಗೀಕಾರವಾಗುತ್ತವೆ. ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡುತ್ತಾರೆ. ಆಡಳಿತ ಪಕ್ಷದವರು ಕೈಎತ್ತಿ ಅವುಗಳನ್ನು ಅಂಗೀಕರಿಸುತ್ತಾರೆ. ಇದೆಂಥ ಪ್ರಜಾಪ್ರಭುತ್ವ? ಸದನದಲ್ಲಿ ಕೂಗಾಟವೇ ಮುಖ್ಯವಾಗಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ವಿಚಾರ ಗೌಣವೆನಿಸಿದೆ. ಈ ಪರಿಸ್ಥಿತಿ ಬದಲಾಗಬೇಕೆಂಬುದು ನನ್ನ ಅನಿಸಿಕೆ. ಆದ್ದರಿಂದ ಸಿದ್ದರಾಮಯ್ಯನವರು, ಎಚ್.ಡಿ ಕುಮಾರಸ್ವಾಮಿಯವರು ಈ ಹೊಸಪದ್ಧತಿಗೆ ನಾಂದಿ ಹಾಡಬೇಕೆಂದು ನನ್ನ ವಿನಂತಿ.

ಯತ್ನಾಳರ ಬೇಜವಾಬ್ದಾರಿ ಆಧಾರರಹಿತ ಮಾತುಗಳನ್ನು ಬಿಜೆಪಿ ಸರ್ಕಾರ ಮತ್ತು ಅವರ ಶಾಸಕರು ಅನುಮೋದಿಸುವ ರೀತಿ ಮಾತನಾಡುತ್ತಿರುವುದರಿಂದ ಅವರನ್ನೂ ಒಳಗೊಂಡಂತೆ ಎಲ್ಲರ ಮೇಲು ಕಾನೂನುಕ್ರಮ ಕೈಗೊಳ್ಳಲೂ ಒತ್ತಾಯ ಬರುತ್ತಿದೆ. ಇದು ನನ್ನೊಬ್ಬನ ಮಾನ, ಅಪಮಾನದ ಪ್ರಶ್ನೆಯಲ್ಲ. ನಮ್ಮ ಸಮಾಜದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಸಂಘರ್ಷ. ಸುಳ್ಳಿಗೆ ಸೋಲಾಗುತ್ತದೆ, ಆದರೆ ಆ ಸೋಲು ನಮ್ಮ ಘನತೆಯ ಗೆಲುವಿನ ಮುಂದೆ ಬಾಗಿರುವಂತದ್ದಾಗಿರಬೇಕು. ವಿರೋಧ ಪಕ್ಷದ ಮುಖ್ಯಸ್ಥರೂ ಆದ ನೀವಿಬ್ಬರು, ಸಮಾಜದಲ್ಲಿ ದ್ವೇಷದ ರಾಜಕೀಯ ಬಿತ್ತುವ ದುಷ್ಟಶಕ್ತಿಗಳ ವಿರುದ್ಧ ಜನರ ನಡುವೆ, ಬೀದಿಯಲ್ಲಿ ಹೋರಾಟ ಸಂಘಟಿಸಿ. ನಮ್ಮ ದೇಶದ ಇತಿಹಾಸವನ್ನು ಗಮನಿಸಿದರೆ, ಎಲ್ಲವೂ ಕೈಮೀರಿಹೋದಾಗ ಜನರ ನಡುವಿನಿಂದಲೇ `ನಾಯಕತ್ವ’ ಉದ್ಭವಿಸಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಾ ಬಂದಿವೆ. ಈಗ ಅಂತಹ ಸಂದರ್ಭ ಮತ್ತೆ ಬಂದಿದೆ. ವೇದಿಕೆಯ ಭಾಷಣಗಳಿಗೆ ಕಿವಿಯಾಗಿ ಬೇಸತ್ತಿರುವ ನಮ್ಮ ಜನಕ್ಕೆ ಈಗ ಬೀದಿಬೀದಿಯಲ್ಲಿ ತಮ್ಮ ಹೆಜ್ಜೆಯ ಜೊತೆಗೆ ಹೆಜ್ಜೆಹಾಕುವ `ನಾಯಕ’ ಬೇಕಾಗಿದ್ದಾರೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಿ ಎನ್ನುವುದು ನನ್ನ ಭಿನ್ನಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...