Homeಅಂಕಣಗಳುಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ....?

ಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ….?

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್‍ರವರು ನನ್ನನ್ನು ಖೋಟಾ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಗುರುತರ ಆರೋಪ ಮಾಡಿ ನನ್ನನ್ನು ನೋಯಿಸಿದ್ದಾರೆ. ನಾನು ಸಾರ್ವಜನಿಕ ಜೀವನವನ್ನು ಆರಂಭಿಸಿ 60 ವರ್ಷಗಳ ಮೇಲಾಗಿದೆ. ಅಪಾರ ಸಂಖ್ಯೆಯಲ್ಲಿ ಸ್ನೇಹಿತರ, ಸಾಮಾಜಿಕ ಕಾರ್ಯಕರ್ತರ, ಸಾಮಾಜಿಕ ಹೋರಾಟಗಾರರ ಒಡನಾಟ ನನಗಿದೆ. ಹೀಗಾಗಿ ಸಮಾಜದ ಎಲ್ಲ ಸ್ತರದ ಜನ ನನ್ನನ್ನು ವಿನಾಕಾರಣ ಅಪಮಾನಕ್ಕೀಡುಮಾಡಿದ ಬಸನಗೌಡ ಯತ್ನಾಳ್ ವಿರುದ್ಧವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿ.

ಅಷ್ಟೇಅಲ್ಲದೆ ವಿಧಾನಸಭೆಯಲ್ಲೂ ಮಾನ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಯತ್ನಾಳರವರ ಆಧಾರರಹಿತ ನಿಂದನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಸೆಂಬ್ಲಿಯಲ್ಲಿ ಈ ಕುರಿತು ಪ್ರಸ್ತಾಪಿಸುವುದಾಗಿಯೂ ಯತ್ನಾಳರಿಗೆ ಅಧಿವೇಶನಕ್ಕೆ ಭಾಗವಹಿಸಲು ಅನುಮತಿ ನೀಡಬಾರದೆಂದು ಸ್ಪೀಕರ್‍ಗೆ ಮನವಿ ಮಾಡುವುದಾಗಿಯೂ ಪ್ರಸ್ತಾಪ ಮಾಡಿದ್ದಾರೆ. ಅಷ್ಟೇಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಇದರ ಜೊತೆಜೊತೆಗೇ ಬೀದಿಗಿಳಿದು ಪ್ರತಿಭಟಿಸುವುದಾಗಿಯೂ ತಿಳಿಸಿದ್ದರು. ಅಸೆಂಬ್ಲಿ ಸ್ಪೀಕರ್ ಸಿದ್ದರಾಮಯ್ಯನವರಿಗೆ ಈ ಕುರಿತು ಮಾತನಾಡಲು ಅವಕಾಶ ಕೊಡಲಿಲ್ಲವಾಗಿ ಕಾಂಗ್ರೆಸ್ ಶಾಸಕರೆಲ್ಲರೂ ಅಸೆಂಬ್ಲಿ ಬಾವಿಯೊಳಗೆ ಕುಳಿತು ಸಿದ್ದರಾಮಯ್ಯನವರಿಗೆ ಯತ್ನಾಳರ ವರ್ತನೆ ಬಗೆಗೆ ಮಾತನಾಡಲು ಅವಕಾಶ ನೀಡಬೇಕೆಂದೂ, ಯತ್ನಾಳರನ್ನು ಅಧಿವೇಶನಕ್ಕೆ ಬರಗೊಡಬಾರದೆಂದೂ ಸ್ಪೀಕರನ್ನು ಒತ್ತಾಯಿಸುತ್ತಿದ್ದಾರೆ.

ನಾನು ಅಸೆಂಬ್ಲಿ ಪಾರ್ಲಿಮೆಂಟುಗಳು ಸುವ್ಯವಸ್ಥೆಯಿಂದ ನಡೆಯಬೇಕೆಂದೂ, ವಿರೋಧಪಕ್ಷಗಳು ಅದಕ್ಕೆ ನೆರವಾಗಬೇಕೆಂದೂ ಅಷ್ಟು ವರ್ಷಗಳಿಂದ ಹೇಳುತ್ತಾ ಬಂದಿದ್ದೇನೆ. ಯಾವುದಾದರೂ ಗಹನ ವಿಚಾರವನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಲೇಬೇಕೆಂದು ವಿರೋಧ ಪಕ್ಷ ಬಯಸಿ, ಅದಕ್ಕೆ ಆಡಳಿತ ಪಕ್ಷ ಅವಕಾಶ ಕೊಡದಿದ್ದಾಗ, ಒಂದು ದಿನ ಪೂರ್ತಿ ಸರ್ಕಾರದ ವಿರುದ್ಧ ಅಸೆಂಬ್ಲಿಯಲ್ಲೇ ಹೋರಾಡಬೇಕು. ಸರ್ಕಾರ ಅದಕ್ಕೂ ಬಗ್ಗದಿದ್ದರೆ ಈ ಹೋರಾಟವನ್ನು ನಡುಬೀದಿಯಲ್ಲಿ ಮತದಾರರ ಬೆಂಬಲದೊಂದಿಗೆ ಮುಂದುವರೆಸಬೇಕು ಎಂಬುದು ನನ್ನ ಖಚಿತ ಅಭಿಪ್ರಾಯ. ಸಿದ್ದರಾಮಯ್ಯನವರೂ ಈ ನನ್ನ ನಿಲುವನ್ನು ಒಪ್ಪಬೇಕೆಂದು ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ.

ಹತ್ತಾರು ವರ್ಷಗಳಿಂದ ಈ ವ್ಯಾಧಿ ಕಾಡುತ್ತಿದೆ. ಪ್ರತಿ ಅಧಿವೇಶನದಲ್ಲೂ ಹತ್ತಾರು ಮಸೂದೆಗಳು ಅಂಗೀಕಾರವಾಗುತ್ತವೆ. ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡುತ್ತಾರೆ. ಆಡಳಿತ ಪಕ್ಷದವರು ಕೈಎತ್ತಿ ಅವುಗಳನ್ನು ಅಂಗೀಕರಿಸುತ್ತಾರೆ. ಇದೆಂಥ ಪ್ರಜಾಪ್ರಭುತ್ವ? ಸದನದಲ್ಲಿ ಕೂಗಾಟವೇ ಮುಖ್ಯವಾಗಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ವಿಚಾರ ಗೌಣವೆನಿಸಿದೆ. ಈ ಪರಿಸ್ಥಿತಿ ಬದಲಾಗಬೇಕೆಂಬುದು ನನ್ನ ಅನಿಸಿಕೆ. ಆದ್ದರಿಂದ ಸಿದ್ದರಾಮಯ್ಯನವರು, ಎಚ್.ಡಿ ಕುಮಾರಸ್ವಾಮಿಯವರು ಈ ಹೊಸಪದ್ಧತಿಗೆ ನಾಂದಿ ಹಾಡಬೇಕೆಂದು ನನ್ನ ವಿನಂತಿ.

ಯತ್ನಾಳರ ಬೇಜವಾಬ್ದಾರಿ ಆಧಾರರಹಿತ ಮಾತುಗಳನ್ನು ಬಿಜೆಪಿ ಸರ್ಕಾರ ಮತ್ತು ಅವರ ಶಾಸಕರು ಅನುಮೋದಿಸುವ ರೀತಿ ಮಾತನಾಡುತ್ತಿರುವುದರಿಂದ ಅವರನ್ನೂ ಒಳಗೊಂಡಂತೆ ಎಲ್ಲರ ಮೇಲು ಕಾನೂನುಕ್ರಮ ಕೈಗೊಳ್ಳಲೂ ಒತ್ತಾಯ ಬರುತ್ತಿದೆ. ಇದು ನನ್ನೊಬ್ಬನ ಮಾನ, ಅಪಮಾನದ ಪ್ರಶ್ನೆಯಲ್ಲ. ನಮ್ಮ ಸಮಾಜದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಸಂಘರ್ಷ. ಸುಳ್ಳಿಗೆ ಸೋಲಾಗುತ್ತದೆ, ಆದರೆ ಆ ಸೋಲು ನಮ್ಮ ಘನತೆಯ ಗೆಲುವಿನ ಮುಂದೆ ಬಾಗಿರುವಂತದ್ದಾಗಿರಬೇಕು. ವಿರೋಧ ಪಕ್ಷದ ಮುಖ್ಯಸ್ಥರೂ ಆದ ನೀವಿಬ್ಬರು, ಸಮಾಜದಲ್ಲಿ ದ್ವೇಷದ ರಾಜಕೀಯ ಬಿತ್ತುವ ದುಷ್ಟಶಕ್ತಿಗಳ ವಿರುದ್ಧ ಜನರ ನಡುವೆ, ಬೀದಿಯಲ್ಲಿ ಹೋರಾಟ ಸಂಘಟಿಸಿ. ನಮ್ಮ ದೇಶದ ಇತಿಹಾಸವನ್ನು ಗಮನಿಸಿದರೆ, ಎಲ್ಲವೂ ಕೈಮೀರಿಹೋದಾಗ ಜನರ ನಡುವಿನಿಂದಲೇ `ನಾಯಕತ್ವ’ ಉದ್ಭವಿಸಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಾ ಬಂದಿವೆ. ಈಗ ಅಂತಹ ಸಂದರ್ಭ ಮತ್ತೆ ಬಂದಿದೆ. ವೇದಿಕೆಯ ಭಾಷಣಗಳಿಗೆ ಕಿವಿಯಾಗಿ ಬೇಸತ್ತಿರುವ ನಮ್ಮ ಜನಕ್ಕೆ ಈಗ ಬೀದಿಬೀದಿಯಲ್ಲಿ ತಮ್ಮ ಹೆಜ್ಜೆಯ ಜೊತೆಗೆ ಹೆಜ್ಜೆಹಾಕುವ `ನಾಯಕ’ ಬೇಕಾಗಿದ್ದಾರೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಿ ಎನ್ನುವುದು ನನ್ನ ಭಿನ್ನಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...