Homeಅಂಕಣಗಳುಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ....?

ಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ….?

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್‍ರವರು ನನ್ನನ್ನು ಖೋಟಾ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಗುರುತರ ಆರೋಪ ಮಾಡಿ ನನ್ನನ್ನು ನೋಯಿಸಿದ್ದಾರೆ. ನಾನು ಸಾರ್ವಜನಿಕ ಜೀವನವನ್ನು ಆರಂಭಿಸಿ 60 ವರ್ಷಗಳ ಮೇಲಾಗಿದೆ. ಅಪಾರ ಸಂಖ್ಯೆಯಲ್ಲಿ ಸ್ನೇಹಿತರ, ಸಾಮಾಜಿಕ ಕಾರ್ಯಕರ್ತರ, ಸಾಮಾಜಿಕ ಹೋರಾಟಗಾರರ ಒಡನಾಟ ನನಗಿದೆ. ಹೀಗಾಗಿ ಸಮಾಜದ ಎಲ್ಲ ಸ್ತರದ ಜನ ನನ್ನನ್ನು ವಿನಾಕಾರಣ ಅಪಮಾನಕ್ಕೀಡುಮಾಡಿದ ಬಸನಗೌಡ ಯತ್ನಾಳ್ ವಿರುದ್ಧವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿ.

ಅಷ್ಟೇಅಲ್ಲದೆ ವಿಧಾನಸಭೆಯಲ್ಲೂ ಮಾನ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಯತ್ನಾಳರವರ ಆಧಾರರಹಿತ ನಿಂದನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಸೆಂಬ್ಲಿಯಲ್ಲಿ ಈ ಕುರಿತು ಪ್ರಸ್ತಾಪಿಸುವುದಾಗಿಯೂ ಯತ್ನಾಳರಿಗೆ ಅಧಿವೇಶನಕ್ಕೆ ಭಾಗವಹಿಸಲು ಅನುಮತಿ ನೀಡಬಾರದೆಂದು ಸ್ಪೀಕರ್‍ಗೆ ಮನವಿ ಮಾಡುವುದಾಗಿಯೂ ಪ್ರಸ್ತಾಪ ಮಾಡಿದ್ದಾರೆ. ಅಷ್ಟೇಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಇದರ ಜೊತೆಜೊತೆಗೇ ಬೀದಿಗಿಳಿದು ಪ್ರತಿಭಟಿಸುವುದಾಗಿಯೂ ತಿಳಿಸಿದ್ದರು. ಅಸೆಂಬ್ಲಿ ಸ್ಪೀಕರ್ ಸಿದ್ದರಾಮಯ್ಯನವರಿಗೆ ಈ ಕುರಿತು ಮಾತನಾಡಲು ಅವಕಾಶ ಕೊಡಲಿಲ್ಲವಾಗಿ ಕಾಂಗ್ರೆಸ್ ಶಾಸಕರೆಲ್ಲರೂ ಅಸೆಂಬ್ಲಿ ಬಾವಿಯೊಳಗೆ ಕುಳಿತು ಸಿದ್ದರಾಮಯ್ಯನವರಿಗೆ ಯತ್ನಾಳರ ವರ್ತನೆ ಬಗೆಗೆ ಮಾತನಾಡಲು ಅವಕಾಶ ನೀಡಬೇಕೆಂದೂ, ಯತ್ನಾಳರನ್ನು ಅಧಿವೇಶನಕ್ಕೆ ಬರಗೊಡಬಾರದೆಂದೂ ಸ್ಪೀಕರನ್ನು ಒತ್ತಾಯಿಸುತ್ತಿದ್ದಾರೆ.

ನಾನು ಅಸೆಂಬ್ಲಿ ಪಾರ್ಲಿಮೆಂಟುಗಳು ಸುವ್ಯವಸ್ಥೆಯಿಂದ ನಡೆಯಬೇಕೆಂದೂ, ವಿರೋಧಪಕ್ಷಗಳು ಅದಕ್ಕೆ ನೆರವಾಗಬೇಕೆಂದೂ ಅಷ್ಟು ವರ್ಷಗಳಿಂದ ಹೇಳುತ್ತಾ ಬಂದಿದ್ದೇನೆ. ಯಾವುದಾದರೂ ಗಹನ ವಿಚಾರವನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಲೇಬೇಕೆಂದು ವಿರೋಧ ಪಕ್ಷ ಬಯಸಿ, ಅದಕ್ಕೆ ಆಡಳಿತ ಪಕ್ಷ ಅವಕಾಶ ಕೊಡದಿದ್ದಾಗ, ಒಂದು ದಿನ ಪೂರ್ತಿ ಸರ್ಕಾರದ ವಿರುದ್ಧ ಅಸೆಂಬ್ಲಿಯಲ್ಲೇ ಹೋರಾಡಬೇಕು. ಸರ್ಕಾರ ಅದಕ್ಕೂ ಬಗ್ಗದಿದ್ದರೆ ಈ ಹೋರಾಟವನ್ನು ನಡುಬೀದಿಯಲ್ಲಿ ಮತದಾರರ ಬೆಂಬಲದೊಂದಿಗೆ ಮುಂದುವರೆಸಬೇಕು ಎಂಬುದು ನನ್ನ ಖಚಿತ ಅಭಿಪ್ರಾಯ. ಸಿದ್ದರಾಮಯ್ಯನವರೂ ಈ ನನ್ನ ನಿಲುವನ್ನು ಒಪ್ಪಬೇಕೆಂದು ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ.

ಹತ್ತಾರು ವರ್ಷಗಳಿಂದ ಈ ವ್ಯಾಧಿ ಕಾಡುತ್ತಿದೆ. ಪ್ರತಿ ಅಧಿವೇಶನದಲ್ಲೂ ಹತ್ತಾರು ಮಸೂದೆಗಳು ಅಂಗೀಕಾರವಾಗುತ್ತವೆ. ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡುತ್ತಾರೆ. ಆಡಳಿತ ಪಕ್ಷದವರು ಕೈಎತ್ತಿ ಅವುಗಳನ್ನು ಅಂಗೀಕರಿಸುತ್ತಾರೆ. ಇದೆಂಥ ಪ್ರಜಾಪ್ರಭುತ್ವ? ಸದನದಲ್ಲಿ ಕೂಗಾಟವೇ ಮುಖ್ಯವಾಗಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ವಿಚಾರ ಗೌಣವೆನಿಸಿದೆ. ಈ ಪರಿಸ್ಥಿತಿ ಬದಲಾಗಬೇಕೆಂಬುದು ನನ್ನ ಅನಿಸಿಕೆ. ಆದ್ದರಿಂದ ಸಿದ್ದರಾಮಯ್ಯನವರು, ಎಚ್.ಡಿ ಕುಮಾರಸ್ವಾಮಿಯವರು ಈ ಹೊಸಪದ್ಧತಿಗೆ ನಾಂದಿ ಹಾಡಬೇಕೆಂದು ನನ್ನ ವಿನಂತಿ.

ಯತ್ನಾಳರ ಬೇಜವಾಬ್ದಾರಿ ಆಧಾರರಹಿತ ಮಾತುಗಳನ್ನು ಬಿಜೆಪಿ ಸರ್ಕಾರ ಮತ್ತು ಅವರ ಶಾಸಕರು ಅನುಮೋದಿಸುವ ರೀತಿ ಮಾತನಾಡುತ್ತಿರುವುದರಿಂದ ಅವರನ್ನೂ ಒಳಗೊಂಡಂತೆ ಎಲ್ಲರ ಮೇಲು ಕಾನೂನುಕ್ರಮ ಕೈಗೊಳ್ಳಲೂ ಒತ್ತಾಯ ಬರುತ್ತಿದೆ. ಇದು ನನ್ನೊಬ್ಬನ ಮಾನ, ಅಪಮಾನದ ಪ್ರಶ್ನೆಯಲ್ಲ. ನಮ್ಮ ಸಮಾಜದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಸಂಘರ್ಷ. ಸುಳ್ಳಿಗೆ ಸೋಲಾಗುತ್ತದೆ, ಆದರೆ ಆ ಸೋಲು ನಮ್ಮ ಘನತೆಯ ಗೆಲುವಿನ ಮುಂದೆ ಬಾಗಿರುವಂತದ್ದಾಗಿರಬೇಕು. ವಿರೋಧ ಪಕ್ಷದ ಮುಖ್ಯಸ್ಥರೂ ಆದ ನೀವಿಬ್ಬರು, ಸಮಾಜದಲ್ಲಿ ದ್ವೇಷದ ರಾಜಕೀಯ ಬಿತ್ತುವ ದುಷ್ಟಶಕ್ತಿಗಳ ವಿರುದ್ಧ ಜನರ ನಡುವೆ, ಬೀದಿಯಲ್ಲಿ ಹೋರಾಟ ಸಂಘಟಿಸಿ. ನಮ್ಮ ದೇಶದ ಇತಿಹಾಸವನ್ನು ಗಮನಿಸಿದರೆ, ಎಲ್ಲವೂ ಕೈಮೀರಿಹೋದಾಗ ಜನರ ನಡುವಿನಿಂದಲೇ `ನಾಯಕತ್ವ’ ಉದ್ಭವಿಸಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಾ ಬಂದಿವೆ. ಈಗ ಅಂತಹ ಸಂದರ್ಭ ಮತ್ತೆ ಬಂದಿದೆ. ವೇದಿಕೆಯ ಭಾಷಣಗಳಿಗೆ ಕಿವಿಯಾಗಿ ಬೇಸತ್ತಿರುವ ನಮ್ಮ ಜನಕ್ಕೆ ಈಗ ಬೀದಿಬೀದಿಯಲ್ಲಿ ತಮ್ಮ ಹೆಜ್ಜೆಯ ಜೊತೆಗೆ ಹೆಜ್ಜೆಹಾಕುವ `ನಾಯಕ’ ಬೇಕಾಗಿದ್ದಾರೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಿ ಎನ್ನುವುದು ನನ್ನ ಭಿನ್ನಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...