Homeಅಂಕಣಗಳುಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ....?

ಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ….?

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್‍ರವರು ನನ್ನನ್ನು ಖೋಟಾ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಗುರುತರ ಆರೋಪ ಮಾಡಿ ನನ್ನನ್ನು ನೋಯಿಸಿದ್ದಾರೆ. ನಾನು ಸಾರ್ವಜನಿಕ ಜೀವನವನ್ನು ಆರಂಭಿಸಿ 60 ವರ್ಷಗಳ ಮೇಲಾಗಿದೆ. ಅಪಾರ ಸಂಖ್ಯೆಯಲ್ಲಿ ಸ್ನೇಹಿತರ, ಸಾಮಾಜಿಕ ಕಾರ್ಯಕರ್ತರ, ಸಾಮಾಜಿಕ ಹೋರಾಟಗಾರರ ಒಡನಾಟ ನನಗಿದೆ. ಹೀಗಾಗಿ ಸಮಾಜದ ಎಲ್ಲ ಸ್ತರದ ಜನ ನನ್ನನ್ನು ವಿನಾಕಾರಣ ಅಪಮಾನಕ್ಕೀಡುಮಾಡಿದ ಬಸನಗೌಡ ಯತ್ನಾಳ್ ವಿರುದ್ಧವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿ.

ಅಷ್ಟೇಅಲ್ಲದೆ ವಿಧಾನಸಭೆಯಲ್ಲೂ ಮಾನ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಯತ್ನಾಳರವರ ಆಧಾರರಹಿತ ನಿಂದನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಸೆಂಬ್ಲಿಯಲ್ಲಿ ಈ ಕುರಿತು ಪ್ರಸ್ತಾಪಿಸುವುದಾಗಿಯೂ ಯತ್ನಾಳರಿಗೆ ಅಧಿವೇಶನಕ್ಕೆ ಭಾಗವಹಿಸಲು ಅನುಮತಿ ನೀಡಬಾರದೆಂದು ಸ್ಪೀಕರ್‍ಗೆ ಮನವಿ ಮಾಡುವುದಾಗಿಯೂ ಪ್ರಸ್ತಾಪ ಮಾಡಿದ್ದಾರೆ. ಅಷ್ಟೇಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಇದರ ಜೊತೆಜೊತೆಗೇ ಬೀದಿಗಿಳಿದು ಪ್ರತಿಭಟಿಸುವುದಾಗಿಯೂ ತಿಳಿಸಿದ್ದರು. ಅಸೆಂಬ್ಲಿ ಸ್ಪೀಕರ್ ಸಿದ್ದರಾಮಯ್ಯನವರಿಗೆ ಈ ಕುರಿತು ಮಾತನಾಡಲು ಅವಕಾಶ ಕೊಡಲಿಲ್ಲವಾಗಿ ಕಾಂಗ್ರೆಸ್ ಶಾಸಕರೆಲ್ಲರೂ ಅಸೆಂಬ್ಲಿ ಬಾವಿಯೊಳಗೆ ಕುಳಿತು ಸಿದ್ದರಾಮಯ್ಯನವರಿಗೆ ಯತ್ನಾಳರ ವರ್ತನೆ ಬಗೆಗೆ ಮಾತನಾಡಲು ಅವಕಾಶ ನೀಡಬೇಕೆಂದೂ, ಯತ್ನಾಳರನ್ನು ಅಧಿವೇಶನಕ್ಕೆ ಬರಗೊಡಬಾರದೆಂದೂ ಸ್ಪೀಕರನ್ನು ಒತ್ತಾಯಿಸುತ್ತಿದ್ದಾರೆ.

ನಾನು ಅಸೆಂಬ್ಲಿ ಪಾರ್ಲಿಮೆಂಟುಗಳು ಸುವ್ಯವಸ್ಥೆಯಿಂದ ನಡೆಯಬೇಕೆಂದೂ, ವಿರೋಧಪಕ್ಷಗಳು ಅದಕ್ಕೆ ನೆರವಾಗಬೇಕೆಂದೂ ಅಷ್ಟು ವರ್ಷಗಳಿಂದ ಹೇಳುತ್ತಾ ಬಂದಿದ್ದೇನೆ. ಯಾವುದಾದರೂ ಗಹನ ವಿಚಾರವನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಲೇಬೇಕೆಂದು ವಿರೋಧ ಪಕ್ಷ ಬಯಸಿ, ಅದಕ್ಕೆ ಆಡಳಿತ ಪಕ್ಷ ಅವಕಾಶ ಕೊಡದಿದ್ದಾಗ, ಒಂದು ದಿನ ಪೂರ್ತಿ ಸರ್ಕಾರದ ವಿರುದ್ಧ ಅಸೆಂಬ್ಲಿಯಲ್ಲೇ ಹೋರಾಡಬೇಕು. ಸರ್ಕಾರ ಅದಕ್ಕೂ ಬಗ್ಗದಿದ್ದರೆ ಈ ಹೋರಾಟವನ್ನು ನಡುಬೀದಿಯಲ್ಲಿ ಮತದಾರರ ಬೆಂಬಲದೊಂದಿಗೆ ಮುಂದುವರೆಸಬೇಕು ಎಂಬುದು ನನ್ನ ಖಚಿತ ಅಭಿಪ್ರಾಯ. ಸಿದ್ದರಾಮಯ್ಯನವರೂ ಈ ನನ್ನ ನಿಲುವನ್ನು ಒಪ್ಪಬೇಕೆಂದು ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ.

ಹತ್ತಾರು ವರ್ಷಗಳಿಂದ ಈ ವ್ಯಾಧಿ ಕಾಡುತ್ತಿದೆ. ಪ್ರತಿ ಅಧಿವೇಶನದಲ್ಲೂ ಹತ್ತಾರು ಮಸೂದೆಗಳು ಅಂಗೀಕಾರವಾಗುತ್ತವೆ. ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡುತ್ತಾರೆ. ಆಡಳಿತ ಪಕ್ಷದವರು ಕೈಎತ್ತಿ ಅವುಗಳನ್ನು ಅಂಗೀಕರಿಸುತ್ತಾರೆ. ಇದೆಂಥ ಪ್ರಜಾಪ್ರಭುತ್ವ? ಸದನದಲ್ಲಿ ಕೂಗಾಟವೇ ಮುಖ್ಯವಾಗಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ವಿಚಾರ ಗೌಣವೆನಿಸಿದೆ. ಈ ಪರಿಸ್ಥಿತಿ ಬದಲಾಗಬೇಕೆಂಬುದು ನನ್ನ ಅನಿಸಿಕೆ. ಆದ್ದರಿಂದ ಸಿದ್ದರಾಮಯ್ಯನವರು, ಎಚ್.ಡಿ ಕುಮಾರಸ್ವಾಮಿಯವರು ಈ ಹೊಸಪದ್ಧತಿಗೆ ನಾಂದಿ ಹಾಡಬೇಕೆಂದು ನನ್ನ ವಿನಂತಿ.

ಯತ್ನಾಳರ ಬೇಜವಾಬ್ದಾರಿ ಆಧಾರರಹಿತ ಮಾತುಗಳನ್ನು ಬಿಜೆಪಿ ಸರ್ಕಾರ ಮತ್ತು ಅವರ ಶಾಸಕರು ಅನುಮೋದಿಸುವ ರೀತಿ ಮಾತನಾಡುತ್ತಿರುವುದರಿಂದ ಅವರನ್ನೂ ಒಳಗೊಂಡಂತೆ ಎಲ್ಲರ ಮೇಲು ಕಾನೂನುಕ್ರಮ ಕೈಗೊಳ್ಳಲೂ ಒತ್ತಾಯ ಬರುತ್ತಿದೆ. ಇದು ನನ್ನೊಬ್ಬನ ಮಾನ, ಅಪಮಾನದ ಪ್ರಶ್ನೆಯಲ್ಲ. ನಮ್ಮ ಸಮಾಜದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಸಂಘರ್ಷ. ಸುಳ್ಳಿಗೆ ಸೋಲಾಗುತ್ತದೆ, ಆದರೆ ಆ ಸೋಲು ನಮ್ಮ ಘನತೆಯ ಗೆಲುವಿನ ಮುಂದೆ ಬಾಗಿರುವಂತದ್ದಾಗಿರಬೇಕು. ವಿರೋಧ ಪಕ್ಷದ ಮುಖ್ಯಸ್ಥರೂ ಆದ ನೀವಿಬ್ಬರು, ಸಮಾಜದಲ್ಲಿ ದ್ವೇಷದ ರಾಜಕೀಯ ಬಿತ್ತುವ ದುಷ್ಟಶಕ್ತಿಗಳ ವಿರುದ್ಧ ಜನರ ನಡುವೆ, ಬೀದಿಯಲ್ಲಿ ಹೋರಾಟ ಸಂಘಟಿಸಿ. ನಮ್ಮ ದೇಶದ ಇತಿಹಾಸವನ್ನು ಗಮನಿಸಿದರೆ, ಎಲ್ಲವೂ ಕೈಮೀರಿಹೋದಾಗ ಜನರ ನಡುವಿನಿಂದಲೇ `ನಾಯಕತ್ವ’ ಉದ್ಭವಿಸಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಾ ಬಂದಿವೆ. ಈಗ ಅಂತಹ ಸಂದರ್ಭ ಮತ್ತೆ ಬಂದಿದೆ. ವೇದಿಕೆಯ ಭಾಷಣಗಳಿಗೆ ಕಿವಿಯಾಗಿ ಬೇಸತ್ತಿರುವ ನಮ್ಮ ಜನಕ್ಕೆ ಈಗ ಬೀದಿಬೀದಿಯಲ್ಲಿ ತಮ್ಮ ಹೆಜ್ಜೆಯ ಜೊತೆಗೆ ಹೆಜ್ಜೆಹಾಕುವ `ನಾಯಕ’ ಬೇಕಾಗಿದ್ದಾರೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಿ ಎನ್ನುವುದು ನನ್ನ ಭಿನ್ನಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...