Homeಅಂಕಣಗಳುಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ....?

ಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ….?

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್‍ರವರು ನನ್ನನ್ನು ಖೋಟಾ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಗುರುತರ ಆರೋಪ ಮಾಡಿ ನನ್ನನ್ನು ನೋಯಿಸಿದ್ದಾರೆ. ನಾನು ಸಾರ್ವಜನಿಕ ಜೀವನವನ್ನು ಆರಂಭಿಸಿ 60 ವರ್ಷಗಳ ಮೇಲಾಗಿದೆ. ಅಪಾರ ಸಂಖ್ಯೆಯಲ್ಲಿ ಸ್ನೇಹಿತರ, ಸಾಮಾಜಿಕ ಕಾರ್ಯಕರ್ತರ, ಸಾಮಾಜಿಕ ಹೋರಾಟಗಾರರ ಒಡನಾಟ ನನಗಿದೆ. ಹೀಗಾಗಿ ಸಮಾಜದ ಎಲ್ಲ ಸ್ತರದ ಜನ ನನ್ನನ್ನು ವಿನಾಕಾರಣ ಅಪಮಾನಕ್ಕೀಡುಮಾಡಿದ ಬಸನಗೌಡ ಯತ್ನಾಳ್ ವಿರುದ್ಧವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿ.

ಅಷ್ಟೇಅಲ್ಲದೆ ವಿಧಾನಸಭೆಯಲ್ಲೂ ಮಾನ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಯತ್ನಾಳರವರ ಆಧಾರರಹಿತ ನಿಂದನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಸೆಂಬ್ಲಿಯಲ್ಲಿ ಈ ಕುರಿತು ಪ್ರಸ್ತಾಪಿಸುವುದಾಗಿಯೂ ಯತ್ನಾಳರಿಗೆ ಅಧಿವೇಶನಕ್ಕೆ ಭಾಗವಹಿಸಲು ಅನುಮತಿ ನೀಡಬಾರದೆಂದು ಸ್ಪೀಕರ್‍ಗೆ ಮನವಿ ಮಾಡುವುದಾಗಿಯೂ ಪ್ರಸ್ತಾಪ ಮಾಡಿದ್ದಾರೆ. ಅಷ್ಟೇಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಇದರ ಜೊತೆಜೊತೆಗೇ ಬೀದಿಗಿಳಿದು ಪ್ರತಿಭಟಿಸುವುದಾಗಿಯೂ ತಿಳಿಸಿದ್ದರು. ಅಸೆಂಬ್ಲಿ ಸ್ಪೀಕರ್ ಸಿದ್ದರಾಮಯ್ಯನವರಿಗೆ ಈ ಕುರಿತು ಮಾತನಾಡಲು ಅವಕಾಶ ಕೊಡಲಿಲ್ಲವಾಗಿ ಕಾಂಗ್ರೆಸ್ ಶಾಸಕರೆಲ್ಲರೂ ಅಸೆಂಬ್ಲಿ ಬಾವಿಯೊಳಗೆ ಕುಳಿತು ಸಿದ್ದರಾಮಯ್ಯನವರಿಗೆ ಯತ್ನಾಳರ ವರ್ತನೆ ಬಗೆಗೆ ಮಾತನಾಡಲು ಅವಕಾಶ ನೀಡಬೇಕೆಂದೂ, ಯತ್ನಾಳರನ್ನು ಅಧಿವೇಶನಕ್ಕೆ ಬರಗೊಡಬಾರದೆಂದೂ ಸ್ಪೀಕರನ್ನು ಒತ್ತಾಯಿಸುತ್ತಿದ್ದಾರೆ.

ನಾನು ಅಸೆಂಬ್ಲಿ ಪಾರ್ಲಿಮೆಂಟುಗಳು ಸುವ್ಯವಸ್ಥೆಯಿಂದ ನಡೆಯಬೇಕೆಂದೂ, ವಿರೋಧಪಕ್ಷಗಳು ಅದಕ್ಕೆ ನೆರವಾಗಬೇಕೆಂದೂ ಅಷ್ಟು ವರ್ಷಗಳಿಂದ ಹೇಳುತ್ತಾ ಬಂದಿದ್ದೇನೆ. ಯಾವುದಾದರೂ ಗಹನ ವಿಚಾರವನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಲೇಬೇಕೆಂದು ವಿರೋಧ ಪಕ್ಷ ಬಯಸಿ, ಅದಕ್ಕೆ ಆಡಳಿತ ಪಕ್ಷ ಅವಕಾಶ ಕೊಡದಿದ್ದಾಗ, ಒಂದು ದಿನ ಪೂರ್ತಿ ಸರ್ಕಾರದ ವಿರುದ್ಧ ಅಸೆಂಬ್ಲಿಯಲ್ಲೇ ಹೋರಾಡಬೇಕು. ಸರ್ಕಾರ ಅದಕ್ಕೂ ಬಗ್ಗದಿದ್ದರೆ ಈ ಹೋರಾಟವನ್ನು ನಡುಬೀದಿಯಲ್ಲಿ ಮತದಾರರ ಬೆಂಬಲದೊಂದಿಗೆ ಮುಂದುವರೆಸಬೇಕು ಎಂಬುದು ನನ್ನ ಖಚಿತ ಅಭಿಪ್ರಾಯ. ಸಿದ್ದರಾಮಯ್ಯನವರೂ ಈ ನನ್ನ ನಿಲುವನ್ನು ಒಪ್ಪಬೇಕೆಂದು ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ.

ಹತ್ತಾರು ವರ್ಷಗಳಿಂದ ಈ ವ್ಯಾಧಿ ಕಾಡುತ್ತಿದೆ. ಪ್ರತಿ ಅಧಿವೇಶನದಲ್ಲೂ ಹತ್ತಾರು ಮಸೂದೆಗಳು ಅಂಗೀಕಾರವಾಗುತ್ತವೆ. ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡುತ್ತಾರೆ. ಆಡಳಿತ ಪಕ್ಷದವರು ಕೈಎತ್ತಿ ಅವುಗಳನ್ನು ಅಂಗೀಕರಿಸುತ್ತಾರೆ. ಇದೆಂಥ ಪ್ರಜಾಪ್ರಭುತ್ವ? ಸದನದಲ್ಲಿ ಕೂಗಾಟವೇ ಮುಖ್ಯವಾಗಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ವಿಚಾರ ಗೌಣವೆನಿಸಿದೆ. ಈ ಪರಿಸ್ಥಿತಿ ಬದಲಾಗಬೇಕೆಂಬುದು ನನ್ನ ಅನಿಸಿಕೆ. ಆದ್ದರಿಂದ ಸಿದ್ದರಾಮಯ್ಯನವರು, ಎಚ್.ಡಿ ಕುಮಾರಸ್ವಾಮಿಯವರು ಈ ಹೊಸಪದ್ಧತಿಗೆ ನಾಂದಿ ಹಾಡಬೇಕೆಂದು ನನ್ನ ವಿನಂತಿ.

ಯತ್ನಾಳರ ಬೇಜವಾಬ್ದಾರಿ ಆಧಾರರಹಿತ ಮಾತುಗಳನ್ನು ಬಿಜೆಪಿ ಸರ್ಕಾರ ಮತ್ತು ಅವರ ಶಾಸಕರು ಅನುಮೋದಿಸುವ ರೀತಿ ಮಾತನಾಡುತ್ತಿರುವುದರಿಂದ ಅವರನ್ನೂ ಒಳಗೊಂಡಂತೆ ಎಲ್ಲರ ಮೇಲು ಕಾನೂನುಕ್ರಮ ಕೈಗೊಳ್ಳಲೂ ಒತ್ತಾಯ ಬರುತ್ತಿದೆ. ಇದು ನನ್ನೊಬ್ಬನ ಮಾನ, ಅಪಮಾನದ ಪ್ರಶ್ನೆಯಲ್ಲ. ನಮ್ಮ ಸಮಾಜದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಸಂಘರ್ಷ. ಸುಳ್ಳಿಗೆ ಸೋಲಾಗುತ್ತದೆ, ಆದರೆ ಆ ಸೋಲು ನಮ್ಮ ಘನತೆಯ ಗೆಲುವಿನ ಮುಂದೆ ಬಾಗಿರುವಂತದ್ದಾಗಿರಬೇಕು. ವಿರೋಧ ಪಕ್ಷದ ಮುಖ್ಯಸ್ಥರೂ ಆದ ನೀವಿಬ್ಬರು, ಸಮಾಜದಲ್ಲಿ ದ್ವೇಷದ ರಾಜಕೀಯ ಬಿತ್ತುವ ದುಷ್ಟಶಕ್ತಿಗಳ ವಿರುದ್ಧ ಜನರ ನಡುವೆ, ಬೀದಿಯಲ್ಲಿ ಹೋರಾಟ ಸಂಘಟಿಸಿ. ನಮ್ಮ ದೇಶದ ಇತಿಹಾಸವನ್ನು ಗಮನಿಸಿದರೆ, ಎಲ್ಲವೂ ಕೈಮೀರಿಹೋದಾಗ ಜನರ ನಡುವಿನಿಂದಲೇ `ನಾಯಕತ್ವ’ ಉದ್ಭವಿಸಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಾ ಬಂದಿವೆ. ಈಗ ಅಂತಹ ಸಂದರ್ಭ ಮತ್ತೆ ಬಂದಿದೆ. ವೇದಿಕೆಯ ಭಾಷಣಗಳಿಗೆ ಕಿವಿಯಾಗಿ ಬೇಸತ್ತಿರುವ ನಮ್ಮ ಜನಕ್ಕೆ ಈಗ ಬೀದಿಬೀದಿಯಲ್ಲಿ ತಮ್ಮ ಹೆಜ್ಜೆಯ ಜೊತೆಗೆ ಹೆಜ್ಜೆಹಾಕುವ `ನಾಯಕ’ ಬೇಕಾಗಿದ್ದಾರೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಿ ಎನ್ನುವುದು ನನ್ನ ಭಿನ್ನಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...