Homeಅಂಕಣಗಳುಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ....?

ಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ….?

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್‍ರವರು ನನ್ನನ್ನು ಖೋಟಾ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಗುರುತರ ಆರೋಪ ಮಾಡಿ ನನ್ನನ್ನು ನೋಯಿಸಿದ್ದಾರೆ. ನಾನು ಸಾರ್ವಜನಿಕ ಜೀವನವನ್ನು ಆರಂಭಿಸಿ 60 ವರ್ಷಗಳ ಮೇಲಾಗಿದೆ. ಅಪಾರ ಸಂಖ್ಯೆಯಲ್ಲಿ ಸ್ನೇಹಿತರ, ಸಾಮಾಜಿಕ ಕಾರ್ಯಕರ್ತರ, ಸಾಮಾಜಿಕ ಹೋರಾಟಗಾರರ ಒಡನಾಟ ನನಗಿದೆ. ಹೀಗಾಗಿ ಸಮಾಜದ ಎಲ್ಲ ಸ್ತರದ ಜನ ನನ್ನನ್ನು ವಿನಾಕಾರಣ ಅಪಮಾನಕ್ಕೀಡುಮಾಡಿದ ಬಸನಗೌಡ ಯತ್ನಾಳ್ ವಿರುದ್ಧವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿ.

ಅಷ್ಟೇಅಲ್ಲದೆ ವಿಧಾನಸಭೆಯಲ್ಲೂ ಮಾನ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಯತ್ನಾಳರವರ ಆಧಾರರಹಿತ ನಿಂದನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಸೆಂಬ್ಲಿಯಲ್ಲಿ ಈ ಕುರಿತು ಪ್ರಸ್ತಾಪಿಸುವುದಾಗಿಯೂ ಯತ್ನಾಳರಿಗೆ ಅಧಿವೇಶನಕ್ಕೆ ಭಾಗವಹಿಸಲು ಅನುಮತಿ ನೀಡಬಾರದೆಂದು ಸ್ಪೀಕರ್‍ಗೆ ಮನವಿ ಮಾಡುವುದಾಗಿಯೂ ಪ್ರಸ್ತಾಪ ಮಾಡಿದ್ದಾರೆ. ಅಷ್ಟೇಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಇದರ ಜೊತೆಜೊತೆಗೇ ಬೀದಿಗಿಳಿದು ಪ್ರತಿಭಟಿಸುವುದಾಗಿಯೂ ತಿಳಿಸಿದ್ದರು. ಅಸೆಂಬ್ಲಿ ಸ್ಪೀಕರ್ ಸಿದ್ದರಾಮಯ್ಯನವರಿಗೆ ಈ ಕುರಿತು ಮಾತನಾಡಲು ಅವಕಾಶ ಕೊಡಲಿಲ್ಲವಾಗಿ ಕಾಂಗ್ರೆಸ್ ಶಾಸಕರೆಲ್ಲರೂ ಅಸೆಂಬ್ಲಿ ಬಾವಿಯೊಳಗೆ ಕುಳಿತು ಸಿದ್ದರಾಮಯ್ಯನವರಿಗೆ ಯತ್ನಾಳರ ವರ್ತನೆ ಬಗೆಗೆ ಮಾತನಾಡಲು ಅವಕಾಶ ನೀಡಬೇಕೆಂದೂ, ಯತ್ನಾಳರನ್ನು ಅಧಿವೇಶನಕ್ಕೆ ಬರಗೊಡಬಾರದೆಂದೂ ಸ್ಪೀಕರನ್ನು ಒತ್ತಾಯಿಸುತ್ತಿದ್ದಾರೆ.

ನಾನು ಅಸೆಂಬ್ಲಿ ಪಾರ್ಲಿಮೆಂಟುಗಳು ಸುವ್ಯವಸ್ಥೆಯಿಂದ ನಡೆಯಬೇಕೆಂದೂ, ವಿರೋಧಪಕ್ಷಗಳು ಅದಕ್ಕೆ ನೆರವಾಗಬೇಕೆಂದೂ ಅಷ್ಟು ವರ್ಷಗಳಿಂದ ಹೇಳುತ್ತಾ ಬಂದಿದ್ದೇನೆ. ಯಾವುದಾದರೂ ಗಹನ ವಿಚಾರವನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಲೇಬೇಕೆಂದು ವಿರೋಧ ಪಕ್ಷ ಬಯಸಿ, ಅದಕ್ಕೆ ಆಡಳಿತ ಪಕ್ಷ ಅವಕಾಶ ಕೊಡದಿದ್ದಾಗ, ಒಂದು ದಿನ ಪೂರ್ತಿ ಸರ್ಕಾರದ ವಿರುದ್ಧ ಅಸೆಂಬ್ಲಿಯಲ್ಲೇ ಹೋರಾಡಬೇಕು. ಸರ್ಕಾರ ಅದಕ್ಕೂ ಬಗ್ಗದಿದ್ದರೆ ಈ ಹೋರಾಟವನ್ನು ನಡುಬೀದಿಯಲ್ಲಿ ಮತದಾರರ ಬೆಂಬಲದೊಂದಿಗೆ ಮುಂದುವರೆಸಬೇಕು ಎಂಬುದು ನನ್ನ ಖಚಿತ ಅಭಿಪ್ರಾಯ. ಸಿದ್ದರಾಮಯ್ಯನವರೂ ಈ ನನ್ನ ನಿಲುವನ್ನು ಒಪ್ಪಬೇಕೆಂದು ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ.

ಹತ್ತಾರು ವರ್ಷಗಳಿಂದ ಈ ವ್ಯಾಧಿ ಕಾಡುತ್ತಿದೆ. ಪ್ರತಿ ಅಧಿವೇಶನದಲ್ಲೂ ಹತ್ತಾರು ಮಸೂದೆಗಳು ಅಂಗೀಕಾರವಾಗುತ್ತವೆ. ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡುತ್ತಾರೆ. ಆಡಳಿತ ಪಕ್ಷದವರು ಕೈಎತ್ತಿ ಅವುಗಳನ್ನು ಅಂಗೀಕರಿಸುತ್ತಾರೆ. ಇದೆಂಥ ಪ್ರಜಾಪ್ರಭುತ್ವ? ಸದನದಲ್ಲಿ ಕೂಗಾಟವೇ ಮುಖ್ಯವಾಗಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ವಿಚಾರ ಗೌಣವೆನಿಸಿದೆ. ಈ ಪರಿಸ್ಥಿತಿ ಬದಲಾಗಬೇಕೆಂಬುದು ನನ್ನ ಅನಿಸಿಕೆ. ಆದ್ದರಿಂದ ಸಿದ್ದರಾಮಯ್ಯನವರು, ಎಚ್.ಡಿ ಕುಮಾರಸ್ವಾಮಿಯವರು ಈ ಹೊಸಪದ್ಧತಿಗೆ ನಾಂದಿ ಹಾಡಬೇಕೆಂದು ನನ್ನ ವಿನಂತಿ.

ಯತ್ನಾಳರ ಬೇಜವಾಬ್ದಾರಿ ಆಧಾರರಹಿತ ಮಾತುಗಳನ್ನು ಬಿಜೆಪಿ ಸರ್ಕಾರ ಮತ್ತು ಅವರ ಶಾಸಕರು ಅನುಮೋದಿಸುವ ರೀತಿ ಮಾತನಾಡುತ್ತಿರುವುದರಿಂದ ಅವರನ್ನೂ ಒಳಗೊಂಡಂತೆ ಎಲ್ಲರ ಮೇಲು ಕಾನೂನುಕ್ರಮ ಕೈಗೊಳ್ಳಲೂ ಒತ್ತಾಯ ಬರುತ್ತಿದೆ. ಇದು ನನ್ನೊಬ್ಬನ ಮಾನ, ಅಪಮಾನದ ಪ್ರಶ್ನೆಯಲ್ಲ. ನಮ್ಮ ಸಮಾಜದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಸಂಘರ್ಷ. ಸುಳ್ಳಿಗೆ ಸೋಲಾಗುತ್ತದೆ, ಆದರೆ ಆ ಸೋಲು ನಮ್ಮ ಘನತೆಯ ಗೆಲುವಿನ ಮುಂದೆ ಬಾಗಿರುವಂತದ್ದಾಗಿರಬೇಕು. ವಿರೋಧ ಪಕ್ಷದ ಮುಖ್ಯಸ್ಥರೂ ಆದ ನೀವಿಬ್ಬರು, ಸಮಾಜದಲ್ಲಿ ದ್ವೇಷದ ರಾಜಕೀಯ ಬಿತ್ತುವ ದುಷ್ಟಶಕ್ತಿಗಳ ವಿರುದ್ಧ ಜನರ ನಡುವೆ, ಬೀದಿಯಲ್ಲಿ ಹೋರಾಟ ಸಂಘಟಿಸಿ. ನಮ್ಮ ದೇಶದ ಇತಿಹಾಸವನ್ನು ಗಮನಿಸಿದರೆ, ಎಲ್ಲವೂ ಕೈಮೀರಿಹೋದಾಗ ಜನರ ನಡುವಿನಿಂದಲೇ `ನಾಯಕತ್ವ’ ಉದ್ಭವಿಸಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಾ ಬಂದಿವೆ. ಈಗ ಅಂತಹ ಸಂದರ್ಭ ಮತ್ತೆ ಬಂದಿದೆ. ವೇದಿಕೆಯ ಭಾಷಣಗಳಿಗೆ ಕಿವಿಯಾಗಿ ಬೇಸತ್ತಿರುವ ನಮ್ಮ ಜನಕ್ಕೆ ಈಗ ಬೀದಿಬೀದಿಯಲ್ಲಿ ತಮ್ಮ ಹೆಜ್ಜೆಯ ಜೊತೆಗೆ ಹೆಜ್ಜೆಹಾಕುವ `ನಾಯಕ’ ಬೇಕಾಗಿದ್ದಾರೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಿ ಎನ್ನುವುದು ನನ್ನ ಭಿನ್ನಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...