Homeಅಂಕಣಗಳುಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ....?

ಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ….?

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್‍ರವರು ನನ್ನನ್ನು ಖೋಟಾ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಗುರುತರ ಆರೋಪ ಮಾಡಿ ನನ್ನನ್ನು ನೋಯಿಸಿದ್ದಾರೆ. ನಾನು ಸಾರ್ವಜನಿಕ ಜೀವನವನ್ನು ಆರಂಭಿಸಿ 60 ವರ್ಷಗಳ ಮೇಲಾಗಿದೆ. ಅಪಾರ ಸಂಖ್ಯೆಯಲ್ಲಿ ಸ್ನೇಹಿತರ, ಸಾಮಾಜಿಕ ಕಾರ್ಯಕರ್ತರ, ಸಾಮಾಜಿಕ ಹೋರಾಟಗಾರರ ಒಡನಾಟ ನನಗಿದೆ. ಹೀಗಾಗಿ ಸಮಾಜದ ಎಲ್ಲ ಸ್ತರದ ಜನ ನನ್ನನ್ನು ವಿನಾಕಾರಣ ಅಪಮಾನಕ್ಕೀಡುಮಾಡಿದ ಬಸನಗೌಡ ಯತ್ನಾಳ್ ವಿರುದ್ಧವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿ.

ಅಷ್ಟೇಅಲ್ಲದೆ ವಿಧಾನಸಭೆಯಲ್ಲೂ ಮಾನ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಯತ್ನಾಳರವರ ಆಧಾರರಹಿತ ನಿಂದನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಸೆಂಬ್ಲಿಯಲ್ಲಿ ಈ ಕುರಿತು ಪ್ರಸ್ತಾಪಿಸುವುದಾಗಿಯೂ ಯತ್ನಾಳರಿಗೆ ಅಧಿವೇಶನಕ್ಕೆ ಭಾಗವಹಿಸಲು ಅನುಮತಿ ನೀಡಬಾರದೆಂದು ಸ್ಪೀಕರ್‍ಗೆ ಮನವಿ ಮಾಡುವುದಾಗಿಯೂ ಪ್ರಸ್ತಾಪ ಮಾಡಿದ್ದಾರೆ. ಅಷ್ಟೇಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಇದರ ಜೊತೆಜೊತೆಗೇ ಬೀದಿಗಿಳಿದು ಪ್ರತಿಭಟಿಸುವುದಾಗಿಯೂ ತಿಳಿಸಿದ್ದರು. ಅಸೆಂಬ್ಲಿ ಸ್ಪೀಕರ್ ಸಿದ್ದರಾಮಯ್ಯನವರಿಗೆ ಈ ಕುರಿತು ಮಾತನಾಡಲು ಅವಕಾಶ ಕೊಡಲಿಲ್ಲವಾಗಿ ಕಾಂಗ್ರೆಸ್ ಶಾಸಕರೆಲ್ಲರೂ ಅಸೆಂಬ್ಲಿ ಬಾವಿಯೊಳಗೆ ಕುಳಿತು ಸಿದ್ದರಾಮಯ್ಯನವರಿಗೆ ಯತ್ನಾಳರ ವರ್ತನೆ ಬಗೆಗೆ ಮಾತನಾಡಲು ಅವಕಾಶ ನೀಡಬೇಕೆಂದೂ, ಯತ್ನಾಳರನ್ನು ಅಧಿವೇಶನಕ್ಕೆ ಬರಗೊಡಬಾರದೆಂದೂ ಸ್ಪೀಕರನ್ನು ಒತ್ತಾಯಿಸುತ್ತಿದ್ದಾರೆ.

ನಾನು ಅಸೆಂಬ್ಲಿ ಪಾರ್ಲಿಮೆಂಟುಗಳು ಸುವ್ಯವಸ್ಥೆಯಿಂದ ನಡೆಯಬೇಕೆಂದೂ, ವಿರೋಧಪಕ್ಷಗಳು ಅದಕ್ಕೆ ನೆರವಾಗಬೇಕೆಂದೂ ಅಷ್ಟು ವರ್ಷಗಳಿಂದ ಹೇಳುತ್ತಾ ಬಂದಿದ್ದೇನೆ. ಯಾವುದಾದರೂ ಗಹನ ವಿಚಾರವನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಲೇಬೇಕೆಂದು ವಿರೋಧ ಪಕ್ಷ ಬಯಸಿ, ಅದಕ್ಕೆ ಆಡಳಿತ ಪಕ್ಷ ಅವಕಾಶ ಕೊಡದಿದ್ದಾಗ, ಒಂದು ದಿನ ಪೂರ್ತಿ ಸರ್ಕಾರದ ವಿರುದ್ಧ ಅಸೆಂಬ್ಲಿಯಲ್ಲೇ ಹೋರಾಡಬೇಕು. ಸರ್ಕಾರ ಅದಕ್ಕೂ ಬಗ್ಗದಿದ್ದರೆ ಈ ಹೋರಾಟವನ್ನು ನಡುಬೀದಿಯಲ್ಲಿ ಮತದಾರರ ಬೆಂಬಲದೊಂದಿಗೆ ಮುಂದುವರೆಸಬೇಕು ಎಂಬುದು ನನ್ನ ಖಚಿತ ಅಭಿಪ್ರಾಯ. ಸಿದ್ದರಾಮಯ್ಯನವರೂ ಈ ನನ್ನ ನಿಲುವನ್ನು ಒಪ್ಪಬೇಕೆಂದು ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ.

ಹತ್ತಾರು ವರ್ಷಗಳಿಂದ ಈ ವ್ಯಾಧಿ ಕಾಡುತ್ತಿದೆ. ಪ್ರತಿ ಅಧಿವೇಶನದಲ್ಲೂ ಹತ್ತಾರು ಮಸೂದೆಗಳು ಅಂಗೀಕಾರವಾಗುತ್ತವೆ. ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡುತ್ತಾರೆ. ಆಡಳಿತ ಪಕ್ಷದವರು ಕೈಎತ್ತಿ ಅವುಗಳನ್ನು ಅಂಗೀಕರಿಸುತ್ತಾರೆ. ಇದೆಂಥ ಪ್ರಜಾಪ್ರಭುತ್ವ? ಸದನದಲ್ಲಿ ಕೂಗಾಟವೇ ಮುಖ್ಯವಾಗಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ವಿಚಾರ ಗೌಣವೆನಿಸಿದೆ. ಈ ಪರಿಸ್ಥಿತಿ ಬದಲಾಗಬೇಕೆಂಬುದು ನನ್ನ ಅನಿಸಿಕೆ. ಆದ್ದರಿಂದ ಸಿದ್ದರಾಮಯ್ಯನವರು, ಎಚ್.ಡಿ ಕುಮಾರಸ್ವಾಮಿಯವರು ಈ ಹೊಸಪದ್ಧತಿಗೆ ನಾಂದಿ ಹಾಡಬೇಕೆಂದು ನನ್ನ ವಿನಂತಿ.

ಯತ್ನಾಳರ ಬೇಜವಾಬ್ದಾರಿ ಆಧಾರರಹಿತ ಮಾತುಗಳನ್ನು ಬಿಜೆಪಿ ಸರ್ಕಾರ ಮತ್ತು ಅವರ ಶಾಸಕರು ಅನುಮೋದಿಸುವ ರೀತಿ ಮಾತನಾಡುತ್ತಿರುವುದರಿಂದ ಅವರನ್ನೂ ಒಳಗೊಂಡಂತೆ ಎಲ್ಲರ ಮೇಲು ಕಾನೂನುಕ್ರಮ ಕೈಗೊಳ್ಳಲೂ ಒತ್ತಾಯ ಬರುತ್ತಿದೆ. ಇದು ನನ್ನೊಬ್ಬನ ಮಾನ, ಅಪಮಾನದ ಪ್ರಶ್ನೆಯಲ್ಲ. ನಮ್ಮ ಸಮಾಜದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಸಂಘರ್ಷ. ಸುಳ್ಳಿಗೆ ಸೋಲಾಗುತ್ತದೆ, ಆದರೆ ಆ ಸೋಲು ನಮ್ಮ ಘನತೆಯ ಗೆಲುವಿನ ಮುಂದೆ ಬಾಗಿರುವಂತದ್ದಾಗಿರಬೇಕು. ವಿರೋಧ ಪಕ್ಷದ ಮುಖ್ಯಸ್ಥರೂ ಆದ ನೀವಿಬ್ಬರು, ಸಮಾಜದಲ್ಲಿ ದ್ವೇಷದ ರಾಜಕೀಯ ಬಿತ್ತುವ ದುಷ್ಟಶಕ್ತಿಗಳ ವಿರುದ್ಧ ಜನರ ನಡುವೆ, ಬೀದಿಯಲ್ಲಿ ಹೋರಾಟ ಸಂಘಟಿಸಿ. ನಮ್ಮ ದೇಶದ ಇತಿಹಾಸವನ್ನು ಗಮನಿಸಿದರೆ, ಎಲ್ಲವೂ ಕೈಮೀರಿಹೋದಾಗ ಜನರ ನಡುವಿನಿಂದಲೇ `ನಾಯಕತ್ವ’ ಉದ್ಭವಿಸಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಾ ಬಂದಿವೆ. ಈಗ ಅಂತಹ ಸಂದರ್ಭ ಮತ್ತೆ ಬಂದಿದೆ. ವೇದಿಕೆಯ ಭಾಷಣಗಳಿಗೆ ಕಿವಿಯಾಗಿ ಬೇಸತ್ತಿರುವ ನಮ್ಮ ಜನಕ್ಕೆ ಈಗ ಬೀದಿಬೀದಿಯಲ್ಲಿ ತಮ್ಮ ಹೆಜ್ಜೆಯ ಜೊತೆಗೆ ಹೆಜ್ಜೆಹಾಕುವ `ನಾಯಕ’ ಬೇಕಾಗಿದ್ದಾರೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಿ ಎನ್ನುವುದು ನನ್ನ ಭಿನ್ನಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...