Homeಕರ್ನಾಟಕಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

’ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’

- Advertisement -
- Advertisement -

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

’ಪೋಷಕರು ಪಾವತಿಸಬೇಕಾದ ರಿಯಾಯಿತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

’ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಿಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

’ಪೋಷಕರಿಂದ ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂತಿದೆ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ..? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ.. ? ಎಂಬುದರ ಬಗ್ಗೆ ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ’ ಎಂದು ಒತ್ತಾಯಿಸಿದ್ದಾರೆ.

’ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ಇದೇ 15 ರಿಂದ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ’ ಎಂದಿದ್ದಾರೆ.

’ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು. ಪೋಷಕರ ಸಂಘಗಳ ಜತೆ ಚರ್ಚಿಸಿ ವೈಜ್ಞಾನಿಕವಾದ ಮಾನದಂಡದಲ್ಲಿ ಶುಲ್ಕದ ಪ್ರಮಾಣವನ್ನು ನಿಗಧಿ ಮಾಡಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ಶಾಲಾ ಶುಲ್ಕ ಸಮಸ್ಯೆ ಮುಂದುವರೆದಷ್ಟು ಮಕ್ಕಳ ಕಲಿಕೆಯ ಮೇಲೆ, ಮಾನಸಿಕತೆ ಮೇಲೆ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಸಗಿ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಅರಾಜಕ ನಿಲುವಿನ ಸಂಕೇತ ಮತ್ತು ಕ್ರೌರ್ಯದ ಸಂಗತಿ. ಆದ್ದರಿಂದ ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕ”  ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...