Homeಕರ್ನಾಟಕಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

’ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’

- Advertisement -
- Advertisement -

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

’ಪೋಷಕರು ಪಾವತಿಸಬೇಕಾದ ರಿಯಾಯಿತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

’ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಿಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

’ಪೋಷಕರಿಂದ ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂತಿದೆ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ..? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ.. ? ಎಂಬುದರ ಬಗ್ಗೆ ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ’ ಎಂದು ಒತ್ತಾಯಿಸಿದ್ದಾರೆ.

’ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ಇದೇ 15 ರಿಂದ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ’ ಎಂದಿದ್ದಾರೆ.

’ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು. ಪೋಷಕರ ಸಂಘಗಳ ಜತೆ ಚರ್ಚಿಸಿ ವೈಜ್ಞಾನಿಕವಾದ ಮಾನದಂಡದಲ್ಲಿ ಶುಲ್ಕದ ಪ್ರಮಾಣವನ್ನು ನಿಗಧಿ ಮಾಡಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ಶಾಲಾ ಶುಲ್ಕ ಸಮಸ್ಯೆ ಮುಂದುವರೆದಷ್ಟು ಮಕ್ಕಳ ಕಲಿಕೆಯ ಮೇಲೆ, ಮಾನಸಿಕತೆ ಮೇಲೆ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಸಗಿ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಅರಾಜಕ ನಿಲುವಿನ ಸಂಕೇತ ಮತ್ತು ಕ್ರೌರ್ಯದ ಸಂಗತಿ. ಆದ್ದರಿಂದ ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕ”  ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...