Homeಕರ್ನಾಟಕಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

’ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’

- Advertisement -
- Advertisement -

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

’ಪೋಷಕರು ಪಾವತಿಸಬೇಕಾದ ರಿಯಾಯಿತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

’ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಿಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

’ಪೋಷಕರಿಂದ ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂತಿದೆ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ..? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ.. ? ಎಂಬುದರ ಬಗ್ಗೆ ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ’ ಎಂದು ಒತ್ತಾಯಿಸಿದ್ದಾರೆ.

’ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ಇದೇ 15 ರಿಂದ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ’ ಎಂದಿದ್ದಾರೆ.

’ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು. ಪೋಷಕರ ಸಂಘಗಳ ಜತೆ ಚರ್ಚಿಸಿ ವೈಜ್ಞಾನಿಕವಾದ ಮಾನದಂಡದಲ್ಲಿ ಶುಲ್ಕದ ಪ್ರಮಾಣವನ್ನು ನಿಗಧಿ ಮಾಡಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ಶಾಲಾ ಶುಲ್ಕ ಸಮಸ್ಯೆ ಮುಂದುವರೆದಷ್ಟು ಮಕ್ಕಳ ಕಲಿಕೆಯ ಮೇಲೆ, ಮಾನಸಿಕತೆ ಮೇಲೆ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಸಗಿ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಅರಾಜಕ ನಿಲುವಿನ ಸಂಕೇತ ಮತ್ತು ಕ್ರೌರ್ಯದ ಸಂಗತಿ. ಆದ್ದರಿಂದ ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕ”  ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...