Homeಮುಖಪುಟವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ

ವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ

- Advertisement -
- Advertisement -

ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ. ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದು ಅವರು ತಮ್ಮ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯನವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಗಲೂ ಸಹ ಚಾಮರಾಜನಗರಕ್ಕೆ ಹೋದವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯವನ್ನು ಧಿಕ್ಕರಿಸಿ ಚಾಮರಾಜನಗರ ಜಿಲ್ಲೆಗೆ ಹಲವಾರು ಭೇಟಿ ನೀಡಿದ್ದರು. ಅಲ್ಲದೇ ಅವರ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಮಾಧ್ಯಮಗಳು ದೊಡ್ಡ ಸುದ್ದಿಯಾಗಿಸಿದ್ದವು. ಆದರೆ ಅದಕ್ಕೆ ತಲೆ ಕೆಡಿಸಿಕೊಳ್ಳದ ಸಿದ್ದರಾಮಯ್ಯನವರು ದೇವರಾಜ ಅರಸುರವರ ನಂತರ ಪೂರ್ಣಾವಧಿ ಅಧಿಕಾರ ನಡೆಸಿದ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಭಾಜನರಾಗಿದ್ದರು. ಇಂದು ಕೂಡ ವಾಸ್ತು ಧಿಕ್ಕರಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರ ತೆರೆಸಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.

ಇದನ್ನೂ ಓದಿ; ತಮಿಳುನಾಡಿನಂತೆ ಕರ್ನಾಟಕವೂ NEP ತಿರಸ್ಕರಿಸಬೇಕು: ಕಣ್ಕಟ್ಟು ಪುಸ್ತಕದ ಕುರಿತ ಸಂವಾದದಲ್ಲಿ ಎಸ್‌.ಜಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...