HomeUncategorized'ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!' - 'ನಾಡ ಉಳಿಸಿ ಸಮಾವೇಶ'ದಲ್ಲಿ ಚನ್ನರಾಯಪಟ್ಟಣ...

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

- Advertisement -
- Advertisement -

ಬೆಂಗಳೂರು: “ನಮ್ಮ ಭೂಮಿ ನಮ್ಮ ಹಕ್ಕು! ನಮ್ಮ ಭೂಮಿ ನಮ್ಮ ಹಕ್ಕು! ಎಲ್ಲಿಯತನಕ ಹೋರಾಟ? ಗೆಲ್ಲುವ ತನಕ ಹೋರಾಟ!” – ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜುಲೈ 4) ನಡೆದ ‘ನಾಡ ಉಳಿಸಿ ಸಮಾವೇಶ’ದ ವೇದಿಕೆಯಲ್ಲಿ ಮೊಳಗಿದ ಈ ಘೋಷಣೆಗಳು, ನೆರೆದಿದ್ದ ನೂರಾರು ಹೋರಾಟಗಾರರಲ್ಲಿ ರೋಮಾಂಚನ ಮೂಡಿಸಿತು. ಚನ್ನರಾಯಪಟ್ಟಣ ಭೂಸ್ವಾಧೀನ ವ್ಯಾಪ್ತಿಯ ರೈತ ಮಹಿಳೆ ಲಕ್ಷ್ಮಮ್ಮ ಅವರ ಕಂಚಿನ ಕಂಠದಿಂದ ಹೊರಹೊಮ್ಮಿದ ಈ ನುಡಿಗಳು, ಅವರ ಹೋರಾಟದ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದವು.

“ನಾನು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ ಲಕ್ಷ್ಮಮ್ಮ. ಈಗ ನಾವು ಹೋರಾಟ ಮಾಡುತ್ತಾ ಇದ್ದು 1188 ದಿನ ಆಗೈತೆ, ನಾವು ಬೇಕಾದಷ್ಟು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈ ಸರಕಾರಕ್ಕೆ ಕಣ್ಣೂ ಕಾಣ್ಸೋಲ್ಲ, ಕಿವಿನೂ ಕೇಳ್ಸೋಲ್ಲ, ಏನೂ ಕಾಣ್ಸೋಲ್ಲ. ನಾವು ಪಟ್ಟ ಕಷ್ಟ ಯಾವ ರೈತರಿಗೂ ಬರಬಾರದು,” ಎಂದು ತಮ್ಮ ಗ್ರಾಮೀಣ ಶೈಲಿಯಲ್ಲೇ ನೋವನ್ನು ಹಂಚಿಕೊಂಡರು.

‘ಕಂಪ್ಯೂಟರ್ ತಿಂದು ಬದುಕುತ್ತೀರಾ? ಅನ್ನ ಕೊಡೋದು ರೈತರು!’ “ನಾವು ರೈತರು ಹೂವು ಬೆಳೆಯುತ್ತೇವೆ, ಹಾಲು ಕರೆಯುತ್ತೇವೆ, ತರಕಾರಿ ಬೆಳೆಯುತ್ತೀವಿ, ಹಣ್ಣುಹಂಪಲ, ದ್ರಾಕ್ಷಿ ಬೆಳೆಯುತ್ತೇವೆ. ಹೀಗೆ ಎಲ್ಲ ಬೆಳೆದು ಬೆಂಗಳೂರಿಗೆ ಕಳುಹಿಸುತ್ತೇವೆ. ಇವರು ಅದನ್ನು ಅರ್ಥಮಾಡಿಕೊಳ್ಳಬೇಕು! ಕಂಪ್ಯೂಟರ್‌ ಮುಂದೆ ಕುಳಿತುಕೊಂಡರೆ ಏನು ಬೆಳೆವುದಕ್ಕೆ ಸಾಧ್ಯ? ಬೆಂಗಳೂರು ಜನ ಏನು ತಿಂತಾರೆ? ಇವರೆನೂ ಕಂಪ್ಯೂಟರ್‌ ಕೊಟ್ಟ ಆಹಾರ ತಿಂತಾರ? ರೈತರು ಕೊಟ್ಟ ಆಹಾರನಲ್ಲವಾ ಇವರು ತಿನ್ನೋದು! ಅದಕ್ಕೆ ಸರಕಾರ ರೈತರ ಪರ ಇರಬೇಕು ಅಂತ ನಾವು ಹೇಳುತ್ತಾ ಇದ್ದೇವೆ,” ಎಂದು ಲಕ್ಷ್ಮಮ್ಮ ಸರಕಾರಕ್ಕೆ ತೀಕ್ಷ್ಣ ಪ್ರಶ್ನೆಗಳನ್ನು ಎಸೆದರು.

‘ಅನ್ನರಾಮಯ್ಯ’ನವರೇ, ನಮಗೆ ಭೂಮಿ ಉಳಿಸಿ! ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು “ನಾವೆಲ್ಲಾ ಅನ್ನರಾಮಯ್ಯ ಎಂದು ಕರೆಯುತ್ತೇವಿ. ಅವರು ಬಡವರಿಗೆ ಅಕ್ಕಿ ಕೊಟ್ರೂ, ಬಡವರೆಲ್ಲಾ ಊಟ ತಿಂದ್ರೂ, ಗಂಜಿ ಕೊಟ್ರೂ ಒಳ್ಳೆಯ ಕೆಲಸ ಮಾಡಿದ್ರೂ. ಇವಾಗಲೂ ಹಾಗೆಯೇ ನಮಗೆ ನಮ್ಮ ಭೂಮಿ ಕೊಟ್ರೆ ನಮ್ಮ ರೈತರಿಗೆ ಒಂದು ಒಳ್ಳೆಯ ಕೆಲಸ ಅಂತ ಆಗುತ್ತದೆ. ನಾವು ಜಮೀನಿನಲ್ಲಿ ಬೆಳೆ ಬೆಳೆದು ನಾಲ್ಕು ಜನಕ್ಕೆ ಊಟ ಹಾಕುತ್ತೇವೆ. ಎಷ್ಟು ಜನ ಬಂದ್ರೂ ಊಟ ಹಾಕುವ ಸಾಮರ್ಥ್ಯ ನಮಗೆ ಇದೆ. ನಾವು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಭೂಮಿ ತಾಯಿ ನಮಗೆ ತಾಯಿ ಇದ್ದಂಗೆ. ನಾವು ಭೂಮಿಯೊಳಗೆ ಬೆಳೆದು ತಿನ್ನುವ ರೈತರು. ಬಿಸಿಲು, ಚಳಿ ಎನ್ನದೆ ನಾವು ದುಡಿಯುತ್ತೇವೆ, 10 ಜನಕ್ಕೆ ಊಟ ಹಾಕುತ್ತೇವೆ,” ಎಂದು ತಮ್ಮ ಬದುಕಿನ ಆಧಾರವನ್ನು ವಿವರಿಸಿದರು.

“ಏನಾದ್ರೂ ಮಾಡಿ ನಮ್ಮ ಭೂಮಿಯನ್ನು ನಮಗೆ ಉಳಿಸಿ ಕೊಡಬೇಕು ಸಿದ್ದರಾಮಣ್ಣೊವ್ರೇ. ನಾವು ಜನಕ್ಕೆ ಊಟ ಹಾಕುತ್ತಿದ್ದೇವೆ. ನಮ್ಮ ಭೂಮಿ ತಂಟೆಗೆ ಬರಬೇಡಿ,” ಎಂದು ಲಕ್ಷ್ಮಮ್ಮ ಸಭೆಯಲ್ಲಿ ಗುಡುಗಿದರು. ಅವರ ಈ ಮಾತುಗಳು ರೈತ ಸಮುದಾಯದ ಅಸಹಾಯಕತೆ ಮತ್ತು ದೃಢ ನಿಲುವನ್ನು ಏಕಕಾಲಕ್ಕೆ ಪ್ರತಿಬಿಂಬಿಸಿದವು.

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...