HomeUncategorized'ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!' - 'ನಾಡ ಉಳಿಸಿ ಸಮಾವೇಶ'ದಲ್ಲಿ ಚನ್ನರಾಯಪಟ್ಟಣ...

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

- Advertisement -
- Advertisement -

ಬೆಂಗಳೂರು: “ನಮ್ಮ ಭೂಮಿ ನಮ್ಮ ಹಕ್ಕು! ನಮ್ಮ ಭೂಮಿ ನಮ್ಮ ಹಕ್ಕು! ಎಲ್ಲಿಯತನಕ ಹೋರಾಟ? ಗೆಲ್ಲುವ ತನಕ ಹೋರಾಟ!” – ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜುಲೈ 4) ನಡೆದ ‘ನಾಡ ಉಳಿಸಿ ಸಮಾವೇಶ’ದ ವೇದಿಕೆಯಲ್ಲಿ ಮೊಳಗಿದ ಈ ಘೋಷಣೆಗಳು, ನೆರೆದಿದ್ದ ನೂರಾರು ಹೋರಾಟಗಾರರಲ್ಲಿ ರೋಮಾಂಚನ ಮೂಡಿಸಿತು. ಚನ್ನರಾಯಪಟ್ಟಣ ಭೂಸ್ವಾಧೀನ ವ್ಯಾಪ್ತಿಯ ರೈತ ಮಹಿಳೆ ಲಕ್ಷ್ಮಮ್ಮ ಅವರ ಕಂಚಿನ ಕಂಠದಿಂದ ಹೊರಹೊಮ್ಮಿದ ಈ ನುಡಿಗಳು, ಅವರ ಹೋರಾಟದ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದವು.

“ನಾನು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ ಲಕ್ಷ್ಮಮ್ಮ. ಈಗ ನಾವು ಹೋರಾಟ ಮಾಡುತ್ತಾ ಇದ್ದು 1188 ದಿನ ಆಗೈತೆ, ನಾವು ಬೇಕಾದಷ್ಟು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈ ಸರಕಾರಕ್ಕೆ ಕಣ್ಣೂ ಕಾಣ್ಸೋಲ್ಲ, ಕಿವಿನೂ ಕೇಳ್ಸೋಲ್ಲ, ಏನೂ ಕಾಣ್ಸೋಲ್ಲ. ನಾವು ಪಟ್ಟ ಕಷ್ಟ ಯಾವ ರೈತರಿಗೂ ಬರಬಾರದು,” ಎಂದು ತಮ್ಮ ಗ್ರಾಮೀಣ ಶೈಲಿಯಲ್ಲೇ ನೋವನ್ನು ಹಂಚಿಕೊಂಡರು.

‘ಕಂಪ್ಯೂಟರ್ ತಿಂದು ಬದುಕುತ್ತೀರಾ? ಅನ್ನ ಕೊಡೋದು ರೈತರು!’ “ನಾವು ರೈತರು ಹೂವು ಬೆಳೆಯುತ್ತೇವೆ, ಹಾಲು ಕರೆಯುತ್ತೇವೆ, ತರಕಾರಿ ಬೆಳೆಯುತ್ತೀವಿ, ಹಣ್ಣುಹಂಪಲ, ದ್ರಾಕ್ಷಿ ಬೆಳೆಯುತ್ತೇವೆ. ಹೀಗೆ ಎಲ್ಲ ಬೆಳೆದು ಬೆಂಗಳೂರಿಗೆ ಕಳುಹಿಸುತ್ತೇವೆ. ಇವರು ಅದನ್ನು ಅರ್ಥಮಾಡಿಕೊಳ್ಳಬೇಕು! ಕಂಪ್ಯೂಟರ್‌ ಮುಂದೆ ಕುಳಿತುಕೊಂಡರೆ ಏನು ಬೆಳೆವುದಕ್ಕೆ ಸಾಧ್ಯ? ಬೆಂಗಳೂರು ಜನ ಏನು ತಿಂತಾರೆ? ಇವರೆನೂ ಕಂಪ್ಯೂಟರ್‌ ಕೊಟ್ಟ ಆಹಾರ ತಿಂತಾರ? ರೈತರು ಕೊಟ್ಟ ಆಹಾರನಲ್ಲವಾ ಇವರು ತಿನ್ನೋದು! ಅದಕ್ಕೆ ಸರಕಾರ ರೈತರ ಪರ ಇರಬೇಕು ಅಂತ ನಾವು ಹೇಳುತ್ತಾ ಇದ್ದೇವೆ,” ಎಂದು ಲಕ್ಷ್ಮಮ್ಮ ಸರಕಾರಕ್ಕೆ ತೀಕ್ಷ್ಣ ಪ್ರಶ್ನೆಗಳನ್ನು ಎಸೆದರು.

‘ಅನ್ನರಾಮಯ್ಯ’ನವರೇ, ನಮಗೆ ಭೂಮಿ ಉಳಿಸಿ! ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು “ನಾವೆಲ್ಲಾ ಅನ್ನರಾಮಯ್ಯ ಎಂದು ಕರೆಯುತ್ತೇವಿ. ಅವರು ಬಡವರಿಗೆ ಅಕ್ಕಿ ಕೊಟ್ರೂ, ಬಡವರೆಲ್ಲಾ ಊಟ ತಿಂದ್ರೂ, ಗಂಜಿ ಕೊಟ್ರೂ ಒಳ್ಳೆಯ ಕೆಲಸ ಮಾಡಿದ್ರೂ. ಇವಾಗಲೂ ಹಾಗೆಯೇ ನಮಗೆ ನಮ್ಮ ಭೂಮಿ ಕೊಟ್ರೆ ನಮ್ಮ ರೈತರಿಗೆ ಒಂದು ಒಳ್ಳೆಯ ಕೆಲಸ ಅಂತ ಆಗುತ್ತದೆ. ನಾವು ಜಮೀನಿನಲ್ಲಿ ಬೆಳೆ ಬೆಳೆದು ನಾಲ್ಕು ಜನಕ್ಕೆ ಊಟ ಹಾಕುತ್ತೇವೆ. ಎಷ್ಟು ಜನ ಬಂದ್ರೂ ಊಟ ಹಾಕುವ ಸಾಮರ್ಥ್ಯ ನಮಗೆ ಇದೆ. ನಾವು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಭೂಮಿ ತಾಯಿ ನಮಗೆ ತಾಯಿ ಇದ್ದಂಗೆ. ನಾವು ಭೂಮಿಯೊಳಗೆ ಬೆಳೆದು ತಿನ್ನುವ ರೈತರು. ಬಿಸಿಲು, ಚಳಿ ಎನ್ನದೆ ನಾವು ದುಡಿಯುತ್ತೇವೆ, 10 ಜನಕ್ಕೆ ಊಟ ಹಾಕುತ್ತೇವೆ,” ಎಂದು ತಮ್ಮ ಬದುಕಿನ ಆಧಾರವನ್ನು ವಿವರಿಸಿದರು.

“ಏನಾದ್ರೂ ಮಾಡಿ ನಮ್ಮ ಭೂಮಿಯನ್ನು ನಮಗೆ ಉಳಿಸಿ ಕೊಡಬೇಕು ಸಿದ್ದರಾಮಣ್ಣೊವ್ರೇ. ನಾವು ಜನಕ್ಕೆ ಊಟ ಹಾಕುತ್ತಿದ್ದೇವೆ. ನಮ್ಮ ಭೂಮಿ ತಂಟೆಗೆ ಬರಬೇಡಿ,” ಎಂದು ಲಕ್ಷ್ಮಮ್ಮ ಸಭೆಯಲ್ಲಿ ಗುಡುಗಿದರು. ಅವರ ಈ ಮಾತುಗಳು ರೈತ ಸಮುದಾಯದ ಅಸಹಾಯಕತೆ ಮತ್ತು ದೃಢ ನಿಲುವನ್ನು ಏಕಕಾಲಕ್ಕೆ ಪ್ರತಿಬಿಂಬಿಸಿದವು.

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...