HomeUncategorized'ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!' - 'ನಾಡ ಉಳಿಸಿ ಸಮಾವೇಶ'ದಲ್ಲಿ ಚನ್ನರಾಯಪಟ್ಟಣ...

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

- Advertisement -
- Advertisement -

ಬೆಂಗಳೂರು: “ನಮ್ಮ ಭೂಮಿ ನಮ್ಮ ಹಕ್ಕು! ನಮ್ಮ ಭೂಮಿ ನಮ್ಮ ಹಕ್ಕು! ಎಲ್ಲಿಯತನಕ ಹೋರಾಟ? ಗೆಲ್ಲುವ ತನಕ ಹೋರಾಟ!” – ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜುಲೈ 4) ನಡೆದ ‘ನಾಡ ಉಳಿಸಿ ಸಮಾವೇಶ’ದ ವೇದಿಕೆಯಲ್ಲಿ ಮೊಳಗಿದ ಈ ಘೋಷಣೆಗಳು, ನೆರೆದಿದ್ದ ನೂರಾರು ಹೋರಾಟಗಾರರಲ್ಲಿ ರೋಮಾಂಚನ ಮೂಡಿಸಿತು. ಚನ್ನರಾಯಪಟ್ಟಣ ಭೂಸ್ವಾಧೀನ ವ್ಯಾಪ್ತಿಯ ರೈತ ಮಹಿಳೆ ಲಕ್ಷ್ಮಮ್ಮ ಅವರ ಕಂಚಿನ ಕಂಠದಿಂದ ಹೊರಹೊಮ್ಮಿದ ಈ ನುಡಿಗಳು, ಅವರ ಹೋರಾಟದ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದವು.

“ನಾನು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ ಲಕ್ಷ್ಮಮ್ಮ. ಈಗ ನಾವು ಹೋರಾಟ ಮಾಡುತ್ತಾ ಇದ್ದು 1188 ದಿನ ಆಗೈತೆ, ನಾವು ಬೇಕಾದಷ್ಟು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈ ಸರಕಾರಕ್ಕೆ ಕಣ್ಣೂ ಕಾಣ್ಸೋಲ್ಲ, ಕಿವಿನೂ ಕೇಳ್ಸೋಲ್ಲ, ಏನೂ ಕಾಣ್ಸೋಲ್ಲ. ನಾವು ಪಟ್ಟ ಕಷ್ಟ ಯಾವ ರೈತರಿಗೂ ಬರಬಾರದು,” ಎಂದು ತಮ್ಮ ಗ್ರಾಮೀಣ ಶೈಲಿಯಲ್ಲೇ ನೋವನ್ನು ಹಂಚಿಕೊಂಡರು.

‘ಕಂಪ್ಯೂಟರ್ ತಿಂದು ಬದುಕುತ್ತೀರಾ? ಅನ್ನ ಕೊಡೋದು ರೈತರು!’ “ನಾವು ರೈತರು ಹೂವು ಬೆಳೆಯುತ್ತೇವೆ, ಹಾಲು ಕರೆಯುತ್ತೇವೆ, ತರಕಾರಿ ಬೆಳೆಯುತ್ತೀವಿ, ಹಣ್ಣುಹಂಪಲ, ದ್ರಾಕ್ಷಿ ಬೆಳೆಯುತ್ತೇವೆ. ಹೀಗೆ ಎಲ್ಲ ಬೆಳೆದು ಬೆಂಗಳೂರಿಗೆ ಕಳುಹಿಸುತ್ತೇವೆ. ಇವರು ಅದನ್ನು ಅರ್ಥಮಾಡಿಕೊಳ್ಳಬೇಕು! ಕಂಪ್ಯೂಟರ್‌ ಮುಂದೆ ಕುಳಿತುಕೊಂಡರೆ ಏನು ಬೆಳೆವುದಕ್ಕೆ ಸಾಧ್ಯ? ಬೆಂಗಳೂರು ಜನ ಏನು ತಿಂತಾರೆ? ಇವರೆನೂ ಕಂಪ್ಯೂಟರ್‌ ಕೊಟ್ಟ ಆಹಾರ ತಿಂತಾರ? ರೈತರು ಕೊಟ್ಟ ಆಹಾರನಲ್ಲವಾ ಇವರು ತಿನ್ನೋದು! ಅದಕ್ಕೆ ಸರಕಾರ ರೈತರ ಪರ ಇರಬೇಕು ಅಂತ ನಾವು ಹೇಳುತ್ತಾ ಇದ್ದೇವೆ,” ಎಂದು ಲಕ್ಷ್ಮಮ್ಮ ಸರಕಾರಕ್ಕೆ ತೀಕ್ಷ್ಣ ಪ್ರಶ್ನೆಗಳನ್ನು ಎಸೆದರು.

‘ಅನ್ನರಾಮಯ್ಯ’ನವರೇ, ನಮಗೆ ಭೂಮಿ ಉಳಿಸಿ! ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು “ನಾವೆಲ್ಲಾ ಅನ್ನರಾಮಯ್ಯ ಎಂದು ಕರೆಯುತ್ತೇವಿ. ಅವರು ಬಡವರಿಗೆ ಅಕ್ಕಿ ಕೊಟ್ರೂ, ಬಡವರೆಲ್ಲಾ ಊಟ ತಿಂದ್ರೂ, ಗಂಜಿ ಕೊಟ್ರೂ ಒಳ್ಳೆಯ ಕೆಲಸ ಮಾಡಿದ್ರೂ. ಇವಾಗಲೂ ಹಾಗೆಯೇ ನಮಗೆ ನಮ್ಮ ಭೂಮಿ ಕೊಟ್ರೆ ನಮ್ಮ ರೈತರಿಗೆ ಒಂದು ಒಳ್ಳೆಯ ಕೆಲಸ ಅಂತ ಆಗುತ್ತದೆ. ನಾವು ಜಮೀನಿನಲ್ಲಿ ಬೆಳೆ ಬೆಳೆದು ನಾಲ್ಕು ಜನಕ್ಕೆ ಊಟ ಹಾಕುತ್ತೇವೆ. ಎಷ್ಟು ಜನ ಬಂದ್ರೂ ಊಟ ಹಾಕುವ ಸಾಮರ್ಥ್ಯ ನಮಗೆ ಇದೆ. ನಾವು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಭೂಮಿ ತಾಯಿ ನಮಗೆ ತಾಯಿ ಇದ್ದಂಗೆ. ನಾವು ಭೂಮಿಯೊಳಗೆ ಬೆಳೆದು ತಿನ್ನುವ ರೈತರು. ಬಿಸಿಲು, ಚಳಿ ಎನ್ನದೆ ನಾವು ದುಡಿಯುತ್ತೇವೆ, 10 ಜನಕ್ಕೆ ಊಟ ಹಾಕುತ್ತೇವೆ,” ಎಂದು ತಮ್ಮ ಬದುಕಿನ ಆಧಾರವನ್ನು ವಿವರಿಸಿದರು.

“ಏನಾದ್ರೂ ಮಾಡಿ ನಮ್ಮ ಭೂಮಿಯನ್ನು ನಮಗೆ ಉಳಿಸಿ ಕೊಡಬೇಕು ಸಿದ್ದರಾಮಣ್ಣೊವ್ರೇ. ನಾವು ಜನಕ್ಕೆ ಊಟ ಹಾಕುತ್ತಿದ್ದೇವೆ. ನಮ್ಮ ಭೂಮಿ ತಂಟೆಗೆ ಬರಬೇಡಿ,” ಎಂದು ಲಕ್ಷ್ಮಮ್ಮ ಸಭೆಯಲ್ಲಿ ಗುಡುಗಿದರು. ಅವರ ಈ ಮಾತುಗಳು ರೈತ ಸಮುದಾಯದ ಅಸಹಾಯಕತೆ ಮತ್ತು ದೃಢ ನಿಲುವನ್ನು ಏಕಕಾಲಕ್ಕೆ ಪ್ರತಿಬಿಂಬಿಸಿದವು.

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...