HomeUncategorized'ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!' - 'ನಾಡ ಉಳಿಸಿ ಸಮಾವೇಶ'ದಲ್ಲಿ ಚನ್ನರಾಯಪಟ್ಟಣ...

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

- Advertisement -
- Advertisement -

ಬೆಂಗಳೂರು: “ನಮ್ಮ ಭೂಮಿ ನಮ್ಮ ಹಕ್ಕು! ನಮ್ಮ ಭೂಮಿ ನಮ್ಮ ಹಕ್ಕು! ಎಲ್ಲಿಯತನಕ ಹೋರಾಟ? ಗೆಲ್ಲುವ ತನಕ ಹೋರಾಟ!” – ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜುಲೈ 4) ನಡೆದ ‘ನಾಡ ಉಳಿಸಿ ಸಮಾವೇಶ’ದ ವೇದಿಕೆಯಲ್ಲಿ ಮೊಳಗಿದ ಈ ಘೋಷಣೆಗಳು, ನೆರೆದಿದ್ದ ನೂರಾರು ಹೋರಾಟಗಾರರಲ್ಲಿ ರೋಮಾಂಚನ ಮೂಡಿಸಿತು. ಚನ್ನರಾಯಪಟ್ಟಣ ಭೂಸ್ವಾಧೀನ ವ್ಯಾಪ್ತಿಯ ರೈತ ಮಹಿಳೆ ಲಕ್ಷ್ಮಮ್ಮ ಅವರ ಕಂಚಿನ ಕಂಠದಿಂದ ಹೊರಹೊಮ್ಮಿದ ಈ ನುಡಿಗಳು, ಅವರ ಹೋರಾಟದ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದವು.

“ನಾನು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ ಲಕ್ಷ್ಮಮ್ಮ. ಈಗ ನಾವು ಹೋರಾಟ ಮಾಡುತ್ತಾ ಇದ್ದು 1188 ದಿನ ಆಗೈತೆ, ನಾವು ಬೇಕಾದಷ್ಟು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈ ಸರಕಾರಕ್ಕೆ ಕಣ್ಣೂ ಕಾಣ್ಸೋಲ್ಲ, ಕಿವಿನೂ ಕೇಳ್ಸೋಲ್ಲ, ಏನೂ ಕಾಣ್ಸೋಲ್ಲ. ನಾವು ಪಟ್ಟ ಕಷ್ಟ ಯಾವ ರೈತರಿಗೂ ಬರಬಾರದು,” ಎಂದು ತಮ್ಮ ಗ್ರಾಮೀಣ ಶೈಲಿಯಲ್ಲೇ ನೋವನ್ನು ಹಂಚಿಕೊಂಡರು.

‘ಕಂಪ್ಯೂಟರ್ ತಿಂದು ಬದುಕುತ್ತೀರಾ? ಅನ್ನ ಕೊಡೋದು ರೈತರು!’ “ನಾವು ರೈತರು ಹೂವು ಬೆಳೆಯುತ್ತೇವೆ, ಹಾಲು ಕರೆಯುತ್ತೇವೆ, ತರಕಾರಿ ಬೆಳೆಯುತ್ತೀವಿ, ಹಣ್ಣುಹಂಪಲ, ದ್ರಾಕ್ಷಿ ಬೆಳೆಯುತ್ತೇವೆ. ಹೀಗೆ ಎಲ್ಲ ಬೆಳೆದು ಬೆಂಗಳೂರಿಗೆ ಕಳುಹಿಸುತ್ತೇವೆ. ಇವರು ಅದನ್ನು ಅರ್ಥಮಾಡಿಕೊಳ್ಳಬೇಕು! ಕಂಪ್ಯೂಟರ್‌ ಮುಂದೆ ಕುಳಿತುಕೊಂಡರೆ ಏನು ಬೆಳೆವುದಕ್ಕೆ ಸಾಧ್ಯ? ಬೆಂಗಳೂರು ಜನ ಏನು ತಿಂತಾರೆ? ಇವರೆನೂ ಕಂಪ್ಯೂಟರ್‌ ಕೊಟ್ಟ ಆಹಾರ ತಿಂತಾರ? ರೈತರು ಕೊಟ್ಟ ಆಹಾರನಲ್ಲವಾ ಇವರು ತಿನ್ನೋದು! ಅದಕ್ಕೆ ಸರಕಾರ ರೈತರ ಪರ ಇರಬೇಕು ಅಂತ ನಾವು ಹೇಳುತ್ತಾ ಇದ್ದೇವೆ,” ಎಂದು ಲಕ್ಷ್ಮಮ್ಮ ಸರಕಾರಕ್ಕೆ ತೀಕ್ಷ್ಣ ಪ್ರಶ್ನೆಗಳನ್ನು ಎಸೆದರು.

‘ಅನ್ನರಾಮಯ್ಯ’ನವರೇ, ನಮಗೆ ಭೂಮಿ ಉಳಿಸಿ! ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು “ನಾವೆಲ್ಲಾ ಅನ್ನರಾಮಯ್ಯ ಎಂದು ಕರೆಯುತ್ತೇವಿ. ಅವರು ಬಡವರಿಗೆ ಅಕ್ಕಿ ಕೊಟ್ರೂ, ಬಡವರೆಲ್ಲಾ ಊಟ ತಿಂದ್ರೂ, ಗಂಜಿ ಕೊಟ್ರೂ ಒಳ್ಳೆಯ ಕೆಲಸ ಮಾಡಿದ್ರೂ. ಇವಾಗಲೂ ಹಾಗೆಯೇ ನಮಗೆ ನಮ್ಮ ಭೂಮಿ ಕೊಟ್ರೆ ನಮ್ಮ ರೈತರಿಗೆ ಒಂದು ಒಳ್ಳೆಯ ಕೆಲಸ ಅಂತ ಆಗುತ್ತದೆ. ನಾವು ಜಮೀನಿನಲ್ಲಿ ಬೆಳೆ ಬೆಳೆದು ನಾಲ್ಕು ಜನಕ್ಕೆ ಊಟ ಹಾಕುತ್ತೇವೆ. ಎಷ್ಟು ಜನ ಬಂದ್ರೂ ಊಟ ಹಾಕುವ ಸಾಮರ್ಥ್ಯ ನಮಗೆ ಇದೆ. ನಾವು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಭೂಮಿ ತಾಯಿ ನಮಗೆ ತಾಯಿ ಇದ್ದಂಗೆ. ನಾವು ಭೂಮಿಯೊಳಗೆ ಬೆಳೆದು ತಿನ್ನುವ ರೈತರು. ಬಿಸಿಲು, ಚಳಿ ಎನ್ನದೆ ನಾವು ದುಡಿಯುತ್ತೇವೆ, 10 ಜನಕ್ಕೆ ಊಟ ಹಾಕುತ್ತೇವೆ,” ಎಂದು ತಮ್ಮ ಬದುಕಿನ ಆಧಾರವನ್ನು ವಿವರಿಸಿದರು.

“ಏನಾದ್ರೂ ಮಾಡಿ ನಮ್ಮ ಭೂಮಿಯನ್ನು ನಮಗೆ ಉಳಿಸಿ ಕೊಡಬೇಕು ಸಿದ್ದರಾಮಣ್ಣೊವ್ರೇ. ನಾವು ಜನಕ್ಕೆ ಊಟ ಹಾಕುತ್ತಿದ್ದೇವೆ. ನಮ್ಮ ಭೂಮಿ ತಂಟೆಗೆ ಬರಬೇಡಿ,” ಎಂದು ಲಕ್ಷ್ಮಮ್ಮ ಸಭೆಯಲ್ಲಿ ಗುಡುಗಿದರು. ಅವರ ಈ ಮಾತುಗಳು ರೈತ ಸಮುದಾಯದ ಅಸಹಾಯಕತೆ ಮತ್ತು ದೃಢ ನಿಲುವನ್ನು ಏಕಕಾಲಕ್ಕೆ ಪ್ರತಿಬಿಂಬಿಸಿದವು.

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...