HomeUncategorized'ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!' - 'ನಾಡ ಉಳಿಸಿ ಸಮಾವೇಶ'ದಲ್ಲಿ ಚನ್ನರಾಯಪಟ್ಟಣ...

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

- Advertisement -
- Advertisement -

ಬೆಂಗಳೂರು: “ನಮ್ಮ ಭೂಮಿ ನಮ್ಮ ಹಕ್ಕು! ನಮ್ಮ ಭೂಮಿ ನಮ್ಮ ಹಕ್ಕು! ಎಲ್ಲಿಯತನಕ ಹೋರಾಟ? ಗೆಲ್ಲುವ ತನಕ ಹೋರಾಟ!” – ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜುಲೈ 4) ನಡೆದ ‘ನಾಡ ಉಳಿಸಿ ಸಮಾವೇಶ’ದ ವೇದಿಕೆಯಲ್ಲಿ ಮೊಳಗಿದ ಈ ಘೋಷಣೆಗಳು, ನೆರೆದಿದ್ದ ನೂರಾರು ಹೋರಾಟಗಾರರಲ್ಲಿ ರೋಮಾಂಚನ ಮೂಡಿಸಿತು. ಚನ್ನರಾಯಪಟ್ಟಣ ಭೂಸ್ವಾಧೀನ ವ್ಯಾಪ್ತಿಯ ರೈತ ಮಹಿಳೆ ಲಕ್ಷ್ಮಮ್ಮ ಅವರ ಕಂಚಿನ ಕಂಠದಿಂದ ಹೊರಹೊಮ್ಮಿದ ಈ ನುಡಿಗಳು, ಅವರ ಹೋರಾಟದ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದವು.

“ನಾನು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ ಲಕ್ಷ್ಮಮ್ಮ. ಈಗ ನಾವು ಹೋರಾಟ ಮಾಡುತ್ತಾ ಇದ್ದು 1188 ದಿನ ಆಗೈತೆ, ನಾವು ಬೇಕಾದಷ್ಟು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈ ಸರಕಾರಕ್ಕೆ ಕಣ್ಣೂ ಕಾಣ್ಸೋಲ್ಲ, ಕಿವಿನೂ ಕೇಳ್ಸೋಲ್ಲ, ಏನೂ ಕಾಣ್ಸೋಲ್ಲ. ನಾವು ಪಟ್ಟ ಕಷ್ಟ ಯಾವ ರೈತರಿಗೂ ಬರಬಾರದು,” ಎಂದು ತಮ್ಮ ಗ್ರಾಮೀಣ ಶೈಲಿಯಲ್ಲೇ ನೋವನ್ನು ಹಂಚಿಕೊಂಡರು.

‘ಕಂಪ್ಯೂಟರ್ ತಿಂದು ಬದುಕುತ್ತೀರಾ? ಅನ್ನ ಕೊಡೋದು ರೈತರು!’ “ನಾವು ರೈತರು ಹೂವು ಬೆಳೆಯುತ್ತೇವೆ, ಹಾಲು ಕರೆಯುತ್ತೇವೆ, ತರಕಾರಿ ಬೆಳೆಯುತ್ತೀವಿ, ಹಣ್ಣುಹಂಪಲ, ದ್ರಾಕ್ಷಿ ಬೆಳೆಯುತ್ತೇವೆ. ಹೀಗೆ ಎಲ್ಲ ಬೆಳೆದು ಬೆಂಗಳೂರಿಗೆ ಕಳುಹಿಸುತ್ತೇವೆ. ಇವರು ಅದನ್ನು ಅರ್ಥಮಾಡಿಕೊಳ್ಳಬೇಕು! ಕಂಪ್ಯೂಟರ್‌ ಮುಂದೆ ಕುಳಿತುಕೊಂಡರೆ ಏನು ಬೆಳೆವುದಕ್ಕೆ ಸಾಧ್ಯ? ಬೆಂಗಳೂರು ಜನ ಏನು ತಿಂತಾರೆ? ಇವರೆನೂ ಕಂಪ್ಯೂಟರ್‌ ಕೊಟ್ಟ ಆಹಾರ ತಿಂತಾರ? ರೈತರು ಕೊಟ್ಟ ಆಹಾರನಲ್ಲವಾ ಇವರು ತಿನ್ನೋದು! ಅದಕ್ಕೆ ಸರಕಾರ ರೈತರ ಪರ ಇರಬೇಕು ಅಂತ ನಾವು ಹೇಳುತ್ತಾ ಇದ್ದೇವೆ,” ಎಂದು ಲಕ್ಷ್ಮಮ್ಮ ಸರಕಾರಕ್ಕೆ ತೀಕ್ಷ್ಣ ಪ್ರಶ್ನೆಗಳನ್ನು ಎಸೆದರು.

‘ಅನ್ನರಾಮಯ್ಯ’ನವರೇ, ನಮಗೆ ಭೂಮಿ ಉಳಿಸಿ! ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು “ನಾವೆಲ್ಲಾ ಅನ್ನರಾಮಯ್ಯ ಎಂದು ಕರೆಯುತ್ತೇವಿ. ಅವರು ಬಡವರಿಗೆ ಅಕ್ಕಿ ಕೊಟ್ರೂ, ಬಡವರೆಲ್ಲಾ ಊಟ ತಿಂದ್ರೂ, ಗಂಜಿ ಕೊಟ್ರೂ ಒಳ್ಳೆಯ ಕೆಲಸ ಮಾಡಿದ್ರೂ. ಇವಾಗಲೂ ಹಾಗೆಯೇ ನಮಗೆ ನಮ್ಮ ಭೂಮಿ ಕೊಟ್ರೆ ನಮ್ಮ ರೈತರಿಗೆ ಒಂದು ಒಳ್ಳೆಯ ಕೆಲಸ ಅಂತ ಆಗುತ್ತದೆ. ನಾವು ಜಮೀನಿನಲ್ಲಿ ಬೆಳೆ ಬೆಳೆದು ನಾಲ್ಕು ಜನಕ್ಕೆ ಊಟ ಹಾಕುತ್ತೇವೆ. ಎಷ್ಟು ಜನ ಬಂದ್ರೂ ಊಟ ಹಾಕುವ ಸಾಮರ್ಥ್ಯ ನಮಗೆ ಇದೆ. ನಾವು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಭೂಮಿ ತಾಯಿ ನಮಗೆ ತಾಯಿ ಇದ್ದಂಗೆ. ನಾವು ಭೂಮಿಯೊಳಗೆ ಬೆಳೆದು ತಿನ್ನುವ ರೈತರು. ಬಿಸಿಲು, ಚಳಿ ಎನ್ನದೆ ನಾವು ದುಡಿಯುತ್ತೇವೆ, 10 ಜನಕ್ಕೆ ಊಟ ಹಾಕುತ್ತೇವೆ,” ಎಂದು ತಮ್ಮ ಬದುಕಿನ ಆಧಾರವನ್ನು ವಿವರಿಸಿದರು.

“ಏನಾದ್ರೂ ಮಾಡಿ ನಮ್ಮ ಭೂಮಿಯನ್ನು ನಮಗೆ ಉಳಿಸಿ ಕೊಡಬೇಕು ಸಿದ್ದರಾಮಣ್ಣೊವ್ರೇ. ನಾವು ಜನಕ್ಕೆ ಊಟ ಹಾಕುತ್ತಿದ್ದೇವೆ. ನಮ್ಮ ಭೂಮಿ ತಂಟೆಗೆ ಬರಬೇಡಿ,” ಎಂದು ಲಕ್ಷ್ಮಮ್ಮ ಸಭೆಯಲ್ಲಿ ಗುಡುಗಿದರು. ಅವರ ಈ ಮಾತುಗಳು ರೈತ ಸಮುದಾಯದ ಅಸಹಾಯಕತೆ ಮತ್ತು ದೃಢ ನಿಲುವನ್ನು ಏಕಕಾಲಕ್ಕೆ ಪ್ರತಿಬಿಂಬಿಸಿದವು.

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...