HomeUncategorized'ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!' - 'ನಾಡ ಉಳಿಸಿ ಸಮಾವೇಶ'ದಲ್ಲಿ ಚನ್ನರಾಯಪಟ್ಟಣ...

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

- Advertisement -
- Advertisement -

ಬೆಂಗಳೂರು: “ನಮ್ಮ ಭೂಮಿ ನಮ್ಮ ಹಕ್ಕು! ನಮ್ಮ ಭೂಮಿ ನಮ್ಮ ಹಕ್ಕು! ಎಲ್ಲಿಯತನಕ ಹೋರಾಟ? ಗೆಲ್ಲುವ ತನಕ ಹೋರಾಟ!” – ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜುಲೈ 4) ನಡೆದ ‘ನಾಡ ಉಳಿಸಿ ಸಮಾವೇಶ’ದ ವೇದಿಕೆಯಲ್ಲಿ ಮೊಳಗಿದ ಈ ಘೋಷಣೆಗಳು, ನೆರೆದಿದ್ದ ನೂರಾರು ಹೋರಾಟಗಾರರಲ್ಲಿ ರೋಮಾಂಚನ ಮೂಡಿಸಿತು. ಚನ್ನರಾಯಪಟ್ಟಣ ಭೂಸ್ವಾಧೀನ ವ್ಯಾಪ್ತಿಯ ರೈತ ಮಹಿಳೆ ಲಕ್ಷ್ಮಮ್ಮ ಅವರ ಕಂಚಿನ ಕಂಠದಿಂದ ಹೊರಹೊಮ್ಮಿದ ಈ ನುಡಿಗಳು, ಅವರ ಹೋರಾಟದ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದವು.

“ನಾನು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ ಲಕ್ಷ್ಮಮ್ಮ. ಈಗ ನಾವು ಹೋರಾಟ ಮಾಡುತ್ತಾ ಇದ್ದು 1188 ದಿನ ಆಗೈತೆ, ನಾವು ಬೇಕಾದಷ್ಟು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈ ಸರಕಾರಕ್ಕೆ ಕಣ್ಣೂ ಕಾಣ್ಸೋಲ್ಲ, ಕಿವಿನೂ ಕೇಳ್ಸೋಲ್ಲ, ಏನೂ ಕಾಣ್ಸೋಲ್ಲ. ನಾವು ಪಟ್ಟ ಕಷ್ಟ ಯಾವ ರೈತರಿಗೂ ಬರಬಾರದು,” ಎಂದು ತಮ್ಮ ಗ್ರಾಮೀಣ ಶೈಲಿಯಲ್ಲೇ ನೋವನ್ನು ಹಂಚಿಕೊಂಡರು.

‘ಕಂಪ್ಯೂಟರ್ ತಿಂದು ಬದುಕುತ್ತೀರಾ? ಅನ್ನ ಕೊಡೋದು ರೈತರು!’ “ನಾವು ರೈತರು ಹೂವು ಬೆಳೆಯುತ್ತೇವೆ, ಹಾಲು ಕರೆಯುತ್ತೇವೆ, ತರಕಾರಿ ಬೆಳೆಯುತ್ತೀವಿ, ಹಣ್ಣುಹಂಪಲ, ದ್ರಾಕ್ಷಿ ಬೆಳೆಯುತ್ತೇವೆ. ಹೀಗೆ ಎಲ್ಲ ಬೆಳೆದು ಬೆಂಗಳೂರಿಗೆ ಕಳುಹಿಸುತ್ತೇವೆ. ಇವರು ಅದನ್ನು ಅರ್ಥಮಾಡಿಕೊಳ್ಳಬೇಕು! ಕಂಪ್ಯೂಟರ್‌ ಮುಂದೆ ಕುಳಿತುಕೊಂಡರೆ ಏನು ಬೆಳೆವುದಕ್ಕೆ ಸಾಧ್ಯ? ಬೆಂಗಳೂರು ಜನ ಏನು ತಿಂತಾರೆ? ಇವರೆನೂ ಕಂಪ್ಯೂಟರ್‌ ಕೊಟ್ಟ ಆಹಾರ ತಿಂತಾರ? ರೈತರು ಕೊಟ್ಟ ಆಹಾರನಲ್ಲವಾ ಇವರು ತಿನ್ನೋದು! ಅದಕ್ಕೆ ಸರಕಾರ ರೈತರ ಪರ ಇರಬೇಕು ಅಂತ ನಾವು ಹೇಳುತ್ತಾ ಇದ್ದೇವೆ,” ಎಂದು ಲಕ್ಷ್ಮಮ್ಮ ಸರಕಾರಕ್ಕೆ ತೀಕ್ಷ್ಣ ಪ್ರಶ್ನೆಗಳನ್ನು ಎಸೆದರು.

‘ಅನ್ನರಾಮಯ್ಯ’ನವರೇ, ನಮಗೆ ಭೂಮಿ ಉಳಿಸಿ! ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು “ನಾವೆಲ್ಲಾ ಅನ್ನರಾಮಯ್ಯ ಎಂದು ಕರೆಯುತ್ತೇವಿ. ಅವರು ಬಡವರಿಗೆ ಅಕ್ಕಿ ಕೊಟ್ರೂ, ಬಡವರೆಲ್ಲಾ ಊಟ ತಿಂದ್ರೂ, ಗಂಜಿ ಕೊಟ್ರೂ ಒಳ್ಳೆಯ ಕೆಲಸ ಮಾಡಿದ್ರೂ. ಇವಾಗಲೂ ಹಾಗೆಯೇ ನಮಗೆ ನಮ್ಮ ಭೂಮಿ ಕೊಟ್ರೆ ನಮ್ಮ ರೈತರಿಗೆ ಒಂದು ಒಳ್ಳೆಯ ಕೆಲಸ ಅಂತ ಆಗುತ್ತದೆ. ನಾವು ಜಮೀನಿನಲ್ಲಿ ಬೆಳೆ ಬೆಳೆದು ನಾಲ್ಕು ಜನಕ್ಕೆ ಊಟ ಹಾಕುತ್ತೇವೆ. ಎಷ್ಟು ಜನ ಬಂದ್ರೂ ಊಟ ಹಾಕುವ ಸಾಮರ್ಥ್ಯ ನಮಗೆ ಇದೆ. ನಾವು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಭೂಮಿ ತಾಯಿ ನಮಗೆ ತಾಯಿ ಇದ್ದಂಗೆ. ನಾವು ಭೂಮಿಯೊಳಗೆ ಬೆಳೆದು ತಿನ್ನುವ ರೈತರು. ಬಿಸಿಲು, ಚಳಿ ಎನ್ನದೆ ನಾವು ದುಡಿಯುತ್ತೇವೆ, 10 ಜನಕ್ಕೆ ಊಟ ಹಾಕುತ್ತೇವೆ,” ಎಂದು ತಮ್ಮ ಬದುಕಿನ ಆಧಾರವನ್ನು ವಿವರಿಸಿದರು.

“ಏನಾದ್ರೂ ಮಾಡಿ ನಮ್ಮ ಭೂಮಿಯನ್ನು ನಮಗೆ ಉಳಿಸಿ ಕೊಡಬೇಕು ಸಿದ್ದರಾಮಣ್ಣೊವ್ರೇ. ನಾವು ಜನಕ್ಕೆ ಊಟ ಹಾಕುತ್ತಿದ್ದೇವೆ. ನಮ್ಮ ಭೂಮಿ ತಂಟೆಗೆ ಬರಬೇಡಿ,” ಎಂದು ಲಕ್ಷ್ಮಮ್ಮ ಸಭೆಯಲ್ಲಿ ಗುಡುಗಿದರು. ಅವರ ಈ ಮಾತುಗಳು ರೈತ ಸಮುದಾಯದ ಅಸಹಾಯಕತೆ ಮತ್ತು ದೃಢ ನಿಲುವನ್ನು ಏಕಕಾಲಕ್ಕೆ ಪ್ರತಿಬಿಂಬಿಸಿದವು.

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...