Homeಕರ್ನಾಟಕಸಿದ್ದರಾಮಯ್ಯ ಮಂಡಿಸಿದ್ದು 'ಸಾಬ್ರ' ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್‌ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು

ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್‌ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ ಎಂದು ನನ್ನ ಅನುಮಾನ. ಯಾಕೆಂದರೆ, ಇಂದು ಸಿದ್ದರಾಮಯ್ಯ ಅವರ ರಾಜ್ಯದ 2025-26 ಆರ್ಥಿಕ ವರ್ಷದ ಬಜೆಟ್ ಮಂಡಿಸಿ ಮುಗಿಸುತ್ತಿದ್ದಂತೆ ಬಿಜೆಪಿ ಮತ್ತು ಕನ್ನಡ ಮಾಧ್ಯಮಗಳು ಒಂದೇ ಧ್ವನಿಯಲ್ಲಿ ಮಾತನಾಡುತ್ತಿವೆ. ಮುಖ್ಯಮಂತ್ರಿ ಮಂಡಿಸಿದ ಬಜೆಟ್ ಅನ್ನು ವಿಶ್ಲೇಷಣೆ ಮಾಡಿದರೆ ಇವರುಗಳ ಒಂದೇ ಧ್ವನಿಯನ್ನು ಒಪ್ಪಬಹುದಿತ್ತು. ಆದರೆ, ಕನ್ನಡ ಮಾಧ್ಯಮಗಳು ಮತ್ತು ವಿಪಕ್ಷ ಬಿಜೆಪಿ ಬಜೆಟ್‌ ಅನ್ನು ಕೋಮುದೃಷ್ಠಿಯಿಂದ ನೋಡುತ್ತಾ ಎಂದಿನಂತೆ ಮುಸ್ಲಿಮರ ವಿರುದ್ಧ ನಂಜು ಕಾರಿಕೊಳ್ಳುತ್ತಿವೆ.

ರಾಜ್ಯ ಸರ್ಕಾರದ ಬಜೆಟ್ ವಿಶ್ಲೇಷಣೆ ಮಾಡುವುದು, ಅದರಲ್ಲಿನ ಮಿತಿಗಳ ಬಗ್ಗೆ ಟೀಕೆ ಮಾಡುವುದು ವಿಪಕ್ಷವಾಗಿ ಬಿಜೆಪಿ ಮತ್ತು ಮಾಧ್ಯಮಗಳ ಕರ್ತವ್ಯವೆ ಆಗಿದೆ. ಆದರೆ ಈ ಮಾಧ್ಯಮಗಳು ಅವುಗಳನ್ನು ಬಿಟ್ಟು ಬಜೆಟ್‌ ಅನ್ನು ಕೂಡಾ ಕೋಮುವಾದಿ ನೆಲೆಯಲ್ಲಿ ಮಾತನಾಡುತ್ತಾ, ಈಗಾಗಲೆ ಕುಗ್ಗಿರುವ ಈ ರಾಜ್ಯದ ಮುಸ್ಲಿಮರನ್ನು ಮತ್ತಷ್ಟು ಅವಮಾನಿಸುತ್ತಾ ಇವೆ. ಸಿದ್ದರಾಮಯ್ಯ ಮಂಡಿಸಿದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್ ‘ಸಾಬ್ರ’ ಬಜೆಟ್ ಎಂಬುವುದು ನಿಜವೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದನ್ನು ಅಂಕೆಯಲ್ಲಿ ಬರೆದರೆ, 4,095,490,000,000 ಆಗುತ್ತದೆ. ಮುಸ್ಲಿಮರು ಸೇರಿ ಈ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತರಿಗೆ ಮೀಸಲಿಟ್ಟ ಹಣ ಕೇವಲ 1,300 ಕೋಟಿ ರೂಪಾಯಿಗಳಾಗಿವೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. 2% ಕ್ರಿಶ್ಚಿಯನ್ನರು, 1% ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಇದ್ದಾರೆ. ಈ ವಿಚಾರ ಬಿಜೆಪಿಗಾಗಲಿ, ಕನ್ನಡ ಮಾಧ್ಯಮಗಳಿಗಾಗಲಿ ತಿಳಿದಿಲ್ಲ ಎಂಬುವುದೇನಿಲ್ಲ.

ಮುಸ್ಲಿಮರು ಈ ರಾಜ್ಯದ 1 ಕೋಟಿ(13%)ಯಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಸಮುದಾಯ. ಮುಖ್ಯಮಂತ್ರಿ ಮಂಡಿಸಿದ ನಾಲ್ಕು ಲಕ್ಷ ಕೋಟಿ ರೂಪಾಯಿಯ ಬೃಹತ್ ಬಜೆಟ್‌ನಲ್ಲಿ, ನೇರವಾಗಿ ಮುಸ್ಲಿಮರಿಗೆ ಎಂದು ಮೀಸಲಿಟ್ಟ ಅನುದಾನ ಕೇವಲ 250 ಕೋಟಿ ರೂಪಾಯಿಗಳು ಮಾತ್ರವಾಗಿದೆ. ಇದು ಬಜೆಟ್‌ನ 0.061% ಮಾತ್ರ. ಉಳಿದಂತೆ 1000 ಕೋಟಿ ರೂಪಾಯಿಗಳನ್ನು ಅಲ್ಪಸಂಖ್ಯಾತರಿಗೆ ಸರ್ಕಾರ ಮೀಸಲಿಟ್ಟಿದೆ.

ಮುಸ್ಲಿಮರಿಗೆ ನೇರವಾಗಿ ನೀಡಿರುವ 250 ಕೋಟಿ ಹಾಗೂ 1000 ಕೋಟಿ ರೂಪಾಯಿಗಳು ಸೇರಿಸಿ 1300 ಕೋಟಿಯಾಗುತ್ತದೆ. ಇತರ ಅಲ್ಪಸಂಖ್ಯಾತ ಸಮುದಾಯದ ಎಲ್ಲಾ ಪಾಲನ್ನು ಮುಸ್ಲಿಮರೆ ಪಡೆದರೂ, ಅಲ್ಲಿ ಸಿಗುವುದು ಬಜೆಟ್‌ನ ಪಾಲು 0.318% ಅಷ್ಟೇ. ಬಜೆಟ್‌ನ ಮೊತ್ತದಲ್ಲಿ ಒಂದು ಶೇಖಡ ಕೂಡಾ ಇಲ್ಲ. ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ಇಲ್ಲ.

ಈ ರಾಜ್ಯದಲ್ಲೆ ದುಡಿದು, ಇಲ್ಲೆ ಖರ್ಚು ಮಾಡಿ ತೆರಿಗೆ ಕಟ್ಟುವ, ಈ ರಾಜ್ಯದ ಅಭಿವೃದ್ಧಿಗೆ ಪಾಲು ನೀಡುವ 13% ಮುಸ್ಲಿಮರಿಗೆ ರಾಜ್ಯ ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ವಾಪಾಸು ನೀಡುತ್ತಾ ಇಲ್ಲ.‌ ಈ ಅನ್ಯಾಯವನ್ನು ವಿಪಕ್ಷಗಳು ಮತ್ತು ಮಾಧ್ಯಮಗಳು ಕೇಳಬೇಕು ಅಲ್ಲವೆ?  ಬಿಜೆಪಿ ರೀತಿಯ ವಿಪಕ್ಷವಾಗಲಿ, ಮಾಧ್ಯಮವಾಗಲಿ ಮೇಲಿನಂತೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕೆ ವಿನಃ, ಅವಮಾನಿತ, ಅನುಮಾನಿತ ಮತ್ತು ಹಿಂದುಳಿದ ಸಮುದಾಯವನ್ನು ಮತ್ತಷ್ಟು ಕುಗ್ಗಿಸುವುದಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...