Homeಕರ್ನಾಟಕಸಿದ್ದರಾಮಯ್ಯ ಮಂಡಿಸಿದ್ದು 'ಸಾಬ್ರ' ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್‌ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು

ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್‌ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ ಎಂದು ನನ್ನ ಅನುಮಾನ. ಯಾಕೆಂದರೆ, ಇಂದು ಸಿದ್ದರಾಮಯ್ಯ ಅವರ ರಾಜ್ಯದ 2025-26 ಆರ್ಥಿಕ ವರ್ಷದ ಬಜೆಟ್ ಮಂಡಿಸಿ ಮುಗಿಸುತ್ತಿದ್ದಂತೆ ಬಿಜೆಪಿ ಮತ್ತು ಕನ್ನಡ ಮಾಧ್ಯಮಗಳು ಒಂದೇ ಧ್ವನಿಯಲ್ಲಿ ಮಾತನಾಡುತ್ತಿವೆ. ಮುಖ್ಯಮಂತ್ರಿ ಮಂಡಿಸಿದ ಬಜೆಟ್ ಅನ್ನು ವಿಶ್ಲೇಷಣೆ ಮಾಡಿದರೆ ಇವರುಗಳ ಒಂದೇ ಧ್ವನಿಯನ್ನು ಒಪ್ಪಬಹುದಿತ್ತು. ಆದರೆ, ಕನ್ನಡ ಮಾಧ್ಯಮಗಳು ಮತ್ತು ವಿಪಕ್ಷ ಬಿಜೆಪಿ ಬಜೆಟ್‌ ಅನ್ನು ಕೋಮುದೃಷ್ಠಿಯಿಂದ ನೋಡುತ್ತಾ ಎಂದಿನಂತೆ ಮುಸ್ಲಿಮರ ವಿರುದ್ಧ ನಂಜು ಕಾರಿಕೊಳ್ಳುತ್ತಿವೆ.

ರಾಜ್ಯ ಸರ್ಕಾರದ ಬಜೆಟ್ ವಿಶ್ಲೇಷಣೆ ಮಾಡುವುದು, ಅದರಲ್ಲಿನ ಮಿತಿಗಳ ಬಗ್ಗೆ ಟೀಕೆ ಮಾಡುವುದು ವಿಪಕ್ಷವಾಗಿ ಬಿಜೆಪಿ ಮತ್ತು ಮಾಧ್ಯಮಗಳ ಕರ್ತವ್ಯವೆ ಆಗಿದೆ. ಆದರೆ ಈ ಮಾಧ್ಯಮಗಳು ಅವುಗಳನ್ನು ಬಿಟ್ಟು ಬಜೆಟ್‌ ಅನ್ನು ಕೂಡಾ ಕೋಮುವಾದಿ ನೆಲೆಯಲ್ಲಿ ಮಾತನಾಡುತ್ತಾ, ಈಗಾಗಲೆ ಕುಗ್ಗಿರುವ ಈ ರಾಜ್ಯದ ಮುಸ್ಲಿಮರನ್ನು ಮತ್ತಷ್ಟು ಅವಮಾನಿಸುತ್ತಾ ಇವೆ. ಸಿದ್ದರಾಮಯ್ಯ ಮಂಡಿಸಿದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್ ‘ಸಾಬ್ರ’ ಬಜೆಟ್ ಎಂಬುವುದು ನಿಜವೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದನ್ನು ಅಂಕೆಯಲ್ಲಿ ಬರೆದರೆ, 4,095,490,000,000 ಆಗುತ್ತದೆ. ಮುಸ್ಲಿಮರು ಸೇರಿ ಈ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತರಿಗೆ ಮೀಸಲಿಟ್ಟ ಹಣ ಕೇವಲ 1,300 ಕೋಟಿ ರೂಪಾಯಿಗಳಾಗಿವೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. 2% ಕ್ರಿಶ್ಚಿಯನ್ನರು, 1% ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಇದ್ದಾರೆ. ಈ ವಿಚಾರ ಬಿಜೆಪಿಗಾಗಲಿ, ಕನ್ನಡ ಮಾಧ್ಯಮಗಳಿಗಾಗಲಿ ತಿಳಿದಿಲ್ಲ ಎಂಬುವುದೇನಿಲ್ಲ.

ಮುಸ್ಲಿಮರು ಈ ರಾಜ್ಯದ 1 ಕೋಟಿ(13%)ಯಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಸಮುದಾಯ. ಮುಖ್ಯಮಂತ್ರಿ ಮಂಡಿಸಿದ ನಾಲ್ಕು ಲಕ್ಷ ಕೋಟಿ ರೂಪಾಯಿಯ ಬೃಹತ್ ಬಜೆಟ್‌ನಲ್ಲಿ, ನೇರವಾಗಿ ಮುಸ್ಲಿಮರಿಗೆ ಎಂದು ಮೀಸಲಿಟ್ಟ ಅನುದಾನ ಕೇವಲ 250 ಕೋಟಿ ರೂಪಾಯಿಗಳು ಮಾತ್ರವಾಗಿದೆ. ಇದು ಬಜೆಟ್‌ನ 0.061% ಮಾತ್ರ. ಉಳಿದಂತೆ 1000 ಕೋಟಿ ರೂಪಾಯಿಗಳನ್ನು ಅಲ್ಪಸಂಖ್ಯಾತರಿಗೆ ಸರ್ಕಾರ ಮೀಸಲಿಟ್ಟಿದೆ.

ಮುಸ್ಲಿಮರಿಗೆ ನೇರವಾಗಿ ನೀಡಿರುವ 250 ಕೋಟಿ ಹಾಗೂ 1000 ಕೋಟಿ ರೂಪಾಯಿಗಳು ಸೇರಿಸಿ 1300 ಕೋಟಿಯಾಗುತ್ತದೆ. ಇತರ ಅಲ್ಪಸಂಖ್ಯಾತ ಸಮುದಾಯದ ಎಲ್ಲಾ ಪಾಲನ್ನು ಮುಸ್ಲಿಮರೆ ಪಡೆದರೂ, ಅಲ್ಲಿ ಸಿಗುವುದು ಬಜೆಟ್‌ನ ಪಾಲು 0.318% ಅಷ್ಟೇ. ಬಜೆಟ್‌ನ ಮೊತ್ತದಲ್ಲಿ ಒಂದು ಶೇಖಡ ಕೂಡಾ ಇಲ್ಲ. ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ಇಲ್ಲ.

ಈ ರಾಜ್ಯದಲ್ಲೆ ದುಡಿದು, ಇಲ್ಲೆ ಖರ್ಚು ಮಾಡಿ ತೆರಿಗೆ ಕಟ್ಟುವ, ಈ ರಾಜ್ಯದ ಅಭಿವೃದ್ಧಿಗೆ ಪಾಲು ನೀಡುವ 13% ಮುಸ್ಲಿಮರಿಗೆ ರಾಜ್ಯ ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ವಾಪಾಸು ನೀಡುತ್ತಾ ಇಲ್ಲ.‌ ಈ ಅನ್ಯಾಯವನ್ನು ವಿಪಕ್ಷಗಳು ಮತ್ತು ಮಾಧ್ಯಮಗಳು ಕೇಳಬೇಕು ಅಲ್ಲವೆ?  ಬಿಜೆಪಿ ರೀತಿಯ ವಿಪಕ್ಷವಾಗಲಿ, ಮಾಧ್ಯಮವಾಗಲಿ ಮೇಲಿನಂತೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕೆ ವಿನಃ, ಅವಮಾನಿತ, ಅನುಮಾನಿತ ಮತ್ತು ಹಿಂದುಳಿದ ಸಮುದಾಯವನ್ನು ಮತ್ತಷ್ಟು ಕುಗ್ಗಿಸುವುದಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...