Homeಕರ್ನಾಟಕಸಿದ್ದರಾಮಯ್ಯ ಮಂಡಿಸಿದ್ದು 'ಸಾಬ್ರ' ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್‌ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು

ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್‌ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ ಎಂದು ನನ್ನ ಅನುಮಾನ. ಯಾಕೆಂದರೆ, ಇಂದು ಸಿದ್ದರಾಮಯ್ಯ ಅವರ ರಾಜ್ಯದ 2025-26 ಆರ್ಥಿಕ ವರ್ಷದ ಬಜೆಟ್ ಮಂಡಿಸಿ ಮುಗಿಸುತ್ತಿದ್ದಂತೆ ಬಿಜೆಪಿ ಮತ್ತು ಕನ್ನಡ ಮಾಧ್ಯಮಗಳು ಒಂದೇ ಧ್ವನಿಯಲ್ಲಿ ಮಾತನಾಡುತ್ತಿವೆ. ಮುಖ್ಯಮಂತ್ರಿ ಮಂಡಿಸಿದ ಬಜೆಟ್ ಅನ್ನು ವಿಶ್ಲೇಷಣೆ ಮಾಡಿದರೆ ಇವರುಗಳ ಒಂದೇ ಧ್ವನಿಯನ್ನು ಒಪ್ಪಬಹುದಿತ್ತು. ಆದರೆ, ಕನ್ನಡ ಮಾಧ್ಯಮಗಳು ಮತ್ತು ವಿಪಕ್ಷ ಬಿಜೆಪಿ ಬಜೆಟ್‌ ಅನ್ನು ಕೋಮುದೃಷ್ಠಿಯಿಂದ ನೋಡುತ್ತಾ ಎಂದಿನಂತೆ ಮುಸ್ಲಿಮರ ವಿರುದ್ಧ ನಂಜು ಕಾರಿಕೊಳ್ಳುತ್ತಿವೆ.

ರಾಜ್ಯ ಸರ್ಕಾರದ ಬಜೆಟ್ ವಿಶ್ಲೇಷಣೆ ಮಾಡುವುದು, ಅದರಲ್ಲಿನ ಮಿತಿಗಳ ಬಗ್ಗೆ ಟೀಕೆ ಮಾಡುವುದು ವಿಪಕ್ಷವಾಗಿ ಬಿಜೆಪಿ ಮತ್ತು ಮಾಧ್ಯಮಗಳ ಕರ್ತವ್ಯವೆ ಆಗಿದೆ. ಆದರೆ ಈ ಮಾಧ್ಯಮಗಳು ಅವುಗಳನ್ನು ಬಿಟ್ಟು ಬಜೆಟ್‌ ಅನ್ನು ಕೂಡಾ ಕೋಮುವಾದಿ ನೆಲೆಯಲ್ಲಿ ಮಾತನಾಡುತ್ತಾ, ಈಗಾಗಲೆ ಕುಗ್ಗಿರುವ ಈ ರಾಜ್ಯದ ಮುಸ್ಲಿಮರನ್ನು ಮತ್ತಷ್ಟು ಅವಮಾನಿಸುತ್ತಾ ಇವೆ. ಸಿದ್ದರಾಮಯ್ಯ ಮಂಡಿಸಿದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್ ‘ಸಾಬ್ರ’ ಬಜೆಟ್ ಎಂಬುವುದು ನಿಜವೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದನ್ನು ಅಂಕೆಯಲ್ಲಿ ಬರೆದರೆ, 4,095,490,000,000 ಆಗುತ್ತದೆ. ಮುಸ್ಲಿಮರು ಸೇರಿ ಈ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತರಿಗೆ ಮೀಸಲಿಟ್ಟ ಹಣ ಕೇವಲ 1,300 ಕೋಟಿ ರೂಪಾಯಿಗಳಾಗಿವೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. 2% ಕ್ರಿಶ್ಚಿಯನ್ನರು, 1% ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಇದ್ದಾರೆ. ಈ ವಿಚಾರ ಬಿಜೆಪಿಗಾಗಲಿ, ಕನ್ನಡ ಮಾಧ್ಯಮಗಳಿಗಾಗಲಿ ತಿಳಿದಿಲ್ಲ ಎಂಬುವುದೇನಿಲ್ಲ.

ಮುಸ್ಲಿಮರು ಈ ರಾಜ್ಯದ 1 ಕೋಟಿ(13%)ಯಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಸಮುದಾಯ. ಮುಖ್ಯಮಂತ್ರಿ ಮಂಡಿಸಿದ ನಾಲ್ಕು ಲಕ್ಷ ಕೋಟಿ ರೂಪಾಯಿಯ ಬೃಹತ್ ಬಜೆಟ್‌ನಲ್ಲಿ, ನೇರವಾಗಿ ಮುಸ್ಲಿಮರಿಗೆ ಎಂದು ಮೀಸಲಿಟ್ಟ ಅನುದಾನ ಕೇವಲ 250 ಕೋಟಿ ರೂಪಾಯಿಗಳು ಮಾತ್ರವಾಗಿದೆ. ಇದು ಬಜೆಟ್‌ನ 0.061% ಮಾತ್ರ. ಉಳಿದಂತೆ 1000 ಕೋಟಿ ರೂಪಾಯಿಗಳನ್ನು ಅಲ್ಪಸಂಖ್ಯಾತರಿಗೆ ಸರ್ಕಾರ ಮೀಸಲಿಟ್ಟಿದೆ.

ಮುಸ್ಲಿಮರಿಗೆ ನೇರವಾಗಿ ನೀಡಿರುವ 250 ಕೋಟಿ ಹಾಗೂ 1000 ಕೋಟಿ ರೂಪಾಯಿಗಳು ಸೇರಿಸಿ 1300 ಕೋಟಿಯಾಗುತ್ತದೆ. ಇತರ ಅಲ್ಪಸಂಖ್ಯಾತ ಸಮುದಾಯದ ಎಲ್ಲಾ ಪಾಲನ್ನು ಮುಸ್ಲಿಮರೆ ಪಡೆದರೂ, ಅಲ್ಲಿ ಸಿಗುವುದು ಬಜೆಟ್‌ನ ಪಾಲು 0.318% ಅಷ್ಟೇ. ಬಜೆಟ್‌ನ ಮೊತ್ತದಲ್ಲಿ ಒಂದು ಶೇಖಡ ಕೂಡಾ ಇಲ್ಲ. ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ಇಲ್ಲ.

ಈ ರಾಜ್ಯದಲ್ಲೆ ದುಡಿದು, ಇಲ್ಲೆ ಖರ್ಚು ಮಾಡಿ ತೆರಿಗೆ ಕಟ್ಟುವ, ಈ ರಾಜ್ಯದ ಅಭಿವೃದ್ಧಿಗೆ ಪಾಲು ನೀಡುವ 13% ಮುಸ್ಲಿಮರಿಗೆ ರಾಜ್ಯ ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ವಾಪಾಸು ನೀಡುತ್ತಾ ಇಲ್ಲ.‌ ಈ ಅನ್ಯಾಯವನ್ನು ವಿಪಕ್ಷಗಳು ಮತ್ತು ಮಾಧ್ಯಮಗಳು ಕೇಳಬೇಕು ಅಲ್ಲವೆ?  ಬಿಜೆಪಿ ರೀತಿಯ ವಿಪಕ್ಷವಾಗಲಿ, ಮಾಧ್ಯಮವಾಗಲಿ ಮೇಲಿನಂತೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕೆ ವಿನಃ, ಅವಮಾನಿತ, ಅನುಮಾನಿತ ಮತ್ತು ಹಿಂದುಳಿದ ಸಮುದಾಯವನ್ನು ಮತ್ತಷ್ಟು ಕುಗ್ಗಿಸುವುದಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...