Homeಕರ್ನಾಟಕಸಿದ್ದರಾಮಯ್ಯ ಮಂಡಿಸಿದ್ದು 'ಸಾಬ್ರ' ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್‌ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು

ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್‌ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ ಎಂದು ನನ್ನ ಅನುಮಾನ. ಯಾಕೆಂದರೆ, ಇಂದು ಸಿದ್ದರಾಮಯ್ಯ ಅವರ ರಾಜ್ಯದ 2025-26 ಆರ್ಥಿಕ ವರ್ಷದ ಬಜೆಟ್ ಮಂಡಿಸಿ ಮುಗಿಸುತ್ತಿದ್ದಂತೆ ಬಿಜೆಪಿ ಮತ್ತು ಕನ್ನಡ ಮಾಧ್ಯಮಗಳು ಒಂದೇ ಧ್ವನಿಯಲ್ಲಿ ಮಾತನಾಡುತ್ತಿವೆ. ಮುಖ್ಯಮಂತ್ರಿ ಮಂಡಿಸಿದ ಬಜೆಟ್ ಅನ್ನು ವಿಶ್ಲೇಷಣೆ ಮಾಡಿದರೆ ಇವರುಗಳ ಒಂದೇ ಧ್ವನಿಯನ್ನು ಒಪ್ಪಬಹುದಿತ್ತು. ಆದರೆ, ಕನ್ನಡ ಮಾಧ್ಯಮಗಳು ಮತ್ತು ವಿಪಕ್ಷ ಬಿಜೆಪಿ ಬಜೆಟ್‌ ಅನ್ನು ಕೋಮುದೃಷ್ಠಿಯಿಂದ ನೋಡುತ್ತಾ ಎಂದಿನಂತೆ ಮುಸ್ಲಿಮರ ವಿರುದ್ಧ ನಂಜು ಕಾರಿಕೊಳ್ಳುತ್ತಿವೆ.

ರಾಜ್ಯ ಸರ್ಕಾರದ ಬಜೆಟ್ ವಿಶ್ಲೇಷಣೆ ಮಾಡುವುದು, ಅದರಲ್ಲಿನ ಮಿತಿಗಳ ಬಗ್ಗೆ ಟೀಕೆ ಮಾಡುವುದು ವಿಪಕ್ಷವಾಗಿ ಬಿಜೆಪಿ ಮತ್ತು ಮಾಧ್ಯಮಗಳ ಕರ್ತವ್ಯವೆ ಆಗಿದೆ. ಆದರೆ ಈ ಮಾಧ್ಯಮಗಳು ಅವುಗಳನ್ನು ಬಿಟ್ಟು ಬಜೆಟ್‌ ಅನ್ನು ಕೂಡಾ ಕೋಮುವಾದಿ ನೆಲೆಯಲ್ಲಿ ಮಾತನಾಡುತ್ತಾ, ಈಗಾಗಲೆ ಕುಗ್ಗಿರುವ ಈ ರಾಜ್ಯದ ಮುಸ್ಲಿಮರನ್ನು ಮತ್ತಷ್ಟು ಅವಮಾನಿಸುತ್ತಾ ಇವೆ. ಸಿದ್ದರಾಮಯ್ಯ ಮಂಡಿಸಿದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್ ‘ಸಾಬ್ರ’ ಬಜೆಟ್ ಎಂಬುವುದು ನಿಜವೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದನ್ನು ಅಂಕೆಯಲ್ಲಿ ಬರೆದರೆ, 4,095,490,000,000 ಆಗುತ್ತದೆ. ಮುಸ್ಲಿಮರು ಸೇರಿ ಈ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತರಿಗೆ ಮೀಸಲಿಟ್ಟ ಹಣ ಕೇವಲ 1,300 ಕೋಟಿ ರೂಪಾಯಿಗಳಾಗಿವೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. 2% ಕ್ರಿಶ್ಚಿಯನ್ನರು, 1% ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಇದ್ದಾರೆ. ಈ ವಿಚಾರ ಬಿಜೆಪಿಗಾಗಲಿ, ಕನ್ನಡ ಮಾಧ್ಯಮಗಳಿಗಾಗಲಿ ತಿಳಿದಿಲ್ಲ ಎಂಬುವುದೇನಿಲ್ಲ.

ಮುಸ್ಲಿಮರು ಈ ರಾಜ್ಯದ 1 ಕೋಟಿ(13%)ಯಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಸಮುದಾಯ. ಮುಖ್ಯಮಂತ್ರಿ ಮಂಡಿಸಿದ ನಾಲ್ಕು ಲಕ್ಷ ಕೋಟಿ ರೂಪಾಯಿಯ ಬೃಹತ್ ಬಜೆಟ್‌ನಲ್ಲಿ, ನೇರವಾಗಿ ಮುಸ್ಲಿಮರಿಗೆ ಎಂದು ಮೀಸಲಿಟ್ಟ ಅನುದಾನ ಕೇವಲ 250 ಕೋಟಿ ರೂಪಾಯಿಗಳು ಮಾತ್ರವಾಗಿದೆ. ಇದು ಬಜೆಟ್‌ನ 0.061% ಮಾತ್ರ. ಉಳಿದಂತೆ 1000 ಕೋಟಿ ರೂಪಾಯಿಗಳನ್ನು ಅಲ್ಪಸಂಖ್ಯಾತರಿಗೆ ಸರ್ಕಾರ ಮೀಸಲಿಟ್ಟಿದೆ.

ಮುಸ್ಲಿಮರಿಗೆ ನೇರವಾಗಿ ನೀಡಿರುವ 250 ಕೋಟಿ ಹಾಗೂ 1000 ಕೋಟಿ ರೂಪಾಯಿಗಳು ಸೇರಿಸಿ 1300 ಕೋಟಿಯಾಗುತ್ತದೆ. ಇತರ ಅಲ್ಪಸಂಖ್ಯಾತ ಸಮುದಾಯದ ಎಲ್ಲಾ ಪಾಲನ್ನು ಮುಸ್ಲಿಮರೆ ಪಡೆದರೂ, ಅಲ್ಲಿ ಸಿಗುವುದು ಬಜೆಟ್‌ನ ಪಾಲು 0.318% ಅಷ್ಟೇ. ಬಜೆಟ್‌ನ ಮೊತ್ತದಲ್ಲಿ ಒಂದು ಶೇಖಡ ಕೂಡಾ ಇಲ್ಲ. ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ಇಲ್ಲ.

ಈ ರಾಜ್ಯದಲ್ಲೆ ದುಡಿದು, ಇಲ್ಲೆ ಖರ್ಚು ಮಾಡಿ ತೆರಿಗೆ ಕಟ್ಟುವ, ಈ ರಾಜ್ಯದ ಅಭಿವೃದ್ಧಿಗೆ ಪಾಲು ನೀಡುವ 13% ಮುಸ್ಲಿಮರಿಗೆ ರಾಜ್ಯ ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ವಾಪಾಸು ನೀಡುತ್ತಾ ಇಲ್ಲ.‌ ಈ ಅನ್ಯಾಯವನ್ನು ವಿಪಕ್ಷಗಳು ಮತ್ತು ಮಾಧ್ಯಮಗಳು ಕೇಳಬೇಕು ಅಲ್ಲವೆ?  ಬಿಜೆಪಿ ರೀತಿಯ ವಿಪಕ್ಷವಾಗಲಿ, ಮಾಧ್ಯಮವಾಗಲಿ ಮೇಲಿನಂತೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕೆ ವಿನಃ, ಅವಮಾನಿತ, ಅನುಮಾನಿತ ಮತ್ತು ಹಿಂದುಳಿದ ಸಮುದಾಯವನ್ನು ಮತ್ತಷ್ಟು ಕುಗ್ಗಿಸುವುದಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...