Homeಕರ್ನಾಟಕಸಿದ್ದರಾಮಯ್ಯ ಮಂಡಿಸಿದ್ದು 'ಸಾಬ್ರ' ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್‌ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು

ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್‌ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ ಎಂದು ನನ್ನ ಅನುಮಾನ. ಯಾಕೆಂದರೆ, ಇಂದು ಸಿದ್ದರಾಮಯ್ಯ ಅವರ ರಾಜ್ಯದ 2025-26 ಆರ್ಥಿಕ ವರ್ಷದ ಬಜೆಟ್ ಮಂಡಿಸಿ ಮುಗಿಸುತ್ತಿದ್ದಂತೆ ಬಿಜೆಪಿ ಮತ್ತು ಕನ್ನಡ ಮಾಧ್ಯಮಗಳು ಒಂದೇ ಧ್ವನಿಯಲ್ಲಿ ಮಾತನಾಡುತ್ತಿವೆ. ಮುಖ್ಯಮಂತ್ರಿ ಮಂಡಿಸಿದ ಬಜೆಟ್ ಅನ್ನು ವಿಶ್ಲೇಷಣೆ ಮಾಡಿದರೆ ಇವರುಗಳ ಒಂದೇ ಧ್ವನಿಯನ್ನು ಒಪ್ಪಬಹುದಿತ್ತು. ಆದರೆ, ಕನ್ನಡ ಮಾಧ್ಯಮಗಳು ಮತ್ತು ವಿಪಕ್ಷ ಬಿಜೆಪಿ ಬಜೆಟ್‌ ಅನ್ನು ಕೋಮುದೃಷ್ಠಿಯಿಂದ ನೋಡುತ್ತಾ ಎಂದಿನಂತೆ ಮುಸ್ಲಿಮರ ವಿರುದ್ಧ ನಂಜು ಕಾರಿಕೊಳ್ಳುತ್ತಿವೆ.

ರಾಜ್ಯ ಸರ್ಕಾರದ ಬಜೆಟ್ ವಿಶ್ಲೇಷಣೆ ಮಾಡುವುದು, ಅದರಲ್ಲಿನ ಮಿತಿಗಳ ಬಗ್ಗೆ ಟೀಕೆ ಮಾಡುವುದು ವಿಪಕ್ಷವಾಗಿ ಬಿಜೆಪಿ ಮತ್ತು ಮಾಧ್ಯಮಗಳ ಕರ್ತವ್ಯವೆ ಆಗಿದೆ. ಆದರೆ ಈ ಮಾಧ್ಯಮಗಳು ಅವುಗಳನ್ನು ಬಿಟ್ಟು ಬಜೆಟ್‌ ಅನ್ನು ಕೂಡಾ ಕೋಮುವಾದಿ ನೆಲೆಯಲ್ಲಿ ಮಾತನಾಡುತ್ತಾ, ಈಗಾಗಲೆ ಕುಗ್ಗಿರುವ ಈ ರಾಜ್ಯದ ಮುಸ್ಲಿಮರನ್ನು ಮತ್ತಷ್ಟು ಅವಮಾನಿಸುತ್ತಾ ಇವೆ. ಸಿದ್ದರಾಮಯ್ಯ ಮಂಡಿಸಿದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್ ‘ಸಾಬ್ರ’ ಬಜೆಟ್ ಎಂಬುವುದು ನಿಜವೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದನ್ನು ಅಂಕೆಯಲ್ಲಿ ಬರೆದರೆ, 4,095,490,000,000 ಆಗುತ್ತದೆ. ಮುಸ್ಲಿಮರು ಸೇರಿ ಈ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತರಿಗೆ ಮೀಸಲಿಟ್ಟ ಹಣ ಕೇವಲ 1,300 ಕೋಟಿ ರೂಪಾಯಿಗಳಾಗಿವೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. 2% ಕ್ರಿಶ್ಚಿಯನ್ನರು, 1% ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಇದ್ದಾರೆ. ಈ ವಿಚಾರ ಬಿಜೆಪಿಗಾಗಲಿ, ಕನ್ನಡ ಮಾಧ್ಯಮಗಳಿಗಾಗಲಿ ತಿಳಿದಿಲ್ಲ ಎಂಬುವುದೇನಿಲ್ಲ.

ಮುಸ್ಲಿಮರು ಈ ರಾಜ್ಯದ 1 ಕೋಟಿ(13%)ಯಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಸಮುದಾಯ. ಮುಖ್ಯಮಂತ್ರಿ ಮಂಡಿಸಿದ ನಾಲ್ಕು ಲಕ್ಷ ಕೋಟಿ ರೂಪಾಯಿಯ ಬೃಹತ್ ಬಜೆಟ್‌ನಲ್ಲಿ, ನೇರವಾಗಿ ಮುಸ್ಲಿಮರಿಗೆ ಎಂದು ಮೀಸಲಿಟ್ಟ ಅನುದಾನ ಕೇವಲ 250 ಕೋಟಿ ರೂಪಾಯಿಗಳು ಮಾತ್ರವಾಗಿದೆ. ಇದು ಬಜೆಟ್‌ನ 0.061% ಮಾತ್ರ. ಉಳಿದಂತೆ 1000 ಕೋಟಿ ರೂಪಾಯಿಗಳನ್ನು ಅಲ್ಪಸಂಖ್ಯಾತರಿಗೆ ಸರ್ಕಾರ ಮೀಸಲಿಟ್ಟಿದೆ.

ಮುಸ್ಲಿಮರಿಗೆ ನೇರವಾಗಿ ನೀಡಿರುವ 250 ಕೋಟಿ ಹಾಗೂ 1000 ಕೋಟಿ ರೂಪಾಯಿಗಳು ಸೇರಿಸಿ 1300 ಕೋಟಿಯಾಗುತ್ತದೆ. ಇತರ ಅಲ್ಪಸಂಖ್ಯಾತ ಸಮುದಾಯದ ಎಲ್ಲಾ ಪಾಲನ್ನು ಮುಸ್ಲಿಮರೆ ಪಡೆದರೂ, ಅಲ್ಲಿ ಸಿಗುವುದು ಬಜೆಟ್‌ನ ಪಾಲು 0.318% ಅಷ್ಟೇ. ಬಜೆಟ್‌ನ ಮೊತ್ತದಲ್ಲಿ ಒಂದು ಶೇಖಡ ಕೂಡಾ ಇಲ್ಲ. ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ಇಲ್ಲ.

ಈ ರಾಜ್ಯದಲ್ಲೆ ದುಡಿದು, ಇಲ್ಲೆ ಖರ್ಚು ಮಾಡಿ ತೆರಿಗೆ ಕಟ್ಟುವ, ಈ ರಾಜ್ಯದ ಅಭಿವೃದ್ಧಿಗೆ ಪಾಲು ನೀಡುವ 13% ಮುಸ್ಲಿಮರಿಗೆ ರಾಜ್ಯ ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ವಾಪಾಸು ನೀಡುತ್ತಾ ಇಲ್ಲ.‌ ಈ ಅನ್ಯಾಯವನ್ನು ವಿಪಕ್ಷಗಳು ಮತ್ತು ಮಾಧ್ಯಮಗಳು ಕೇಳಬೇಕು ಅಲ್ಲವೆ?  ಬಿಜೆಪಿ ರೀತಿಯ ವಿಪಕ್ಷವಾಗಲಿ, ಮಾಧ್ಯಮವಾಗಲಿ ಮೇಲಿನಂತೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕೆ ವಿನಃ, ಅವಮಾನಿತ, ಅನುಮಾನಿತ ಮತ್ತು ಹಿಂದುಳಿದ ಸಮುದಾಯವನ್ನು ಮತ್ತಷ್ಟು ಕುಗ್ಗಿಸುವುದಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...