Homeಕರ್ನಾಟಕಸಿದ್ದರಾಮಯ್ಯ ಮಂಡಿಸಿದ್ದು 'ಸಾಬ್ರ' ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್‌ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು

ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್‌ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ ಎಂದು ನನ್ನ ಅನುಮಾನ. ಯಾಕೆಂದರೆ, ಇಂದು ಸಿದ್ದರಾಮಯ್ಯ ಅವರ ರಾಜ್ಯದ 2025-26 ಆರ್ಥಿಕ ವರ್ಷದ ಬಜೆಟ್ ಮಂಡಿಸಿ ಮುಗಿಸುತ್ತಿದ್ದಂತೆ ಬಿಜೆಪಿ ಮತ್ತು ಕನ್ನಡ ಮಾಧ್ಯಮಗಳು ಒಂದೇ ಧ್ವನಿಯಲ್ಲಿ ಮಾತನಾಡುತ್ತಿವೆ. ಮುಖ್ಯಮಂತ್ರಿ ಮಂಡಿಸಿದ ಬಜೆಟ್ ಅನ್ನು ವಿಶ್ಲೇಷಣೆ ಮಾಡಿದರೆ ಇವರುಗಳ ಒಂದೇ ಧ್ವನಿಯನ್ನು ಒಪ್ಪಬಹುದಿತ್ತು. ಆದರೆ, ಕನ್ನಡ ಮಾಧ್ಯಮಗಳು ಮತ್ತು ವಿಪಕ್ಷ ಬಿಜೆಪಿ ಬಜೆಟ್‌ ಅನ್ನು ಕೋಮುದೃಷ್ಠಿಯಿಂದ ನೋಡುತ್ತಾ ಎಂದಿನಂತೆ ಮುಸ್ಲಿಮರ ವಿರುದ್ಧ ನಂಜು ಕಾರಿಕೊಳ್ಳುತ್ತಿವೆ.

ರಾಜ್ಯ ಸರ್ಕಾರದ ಬಜೆಟ್ ವಿಶ್ಲೇಷಣೆ ಮಾಡುವುದು, ಅದರಲ್ಲಿನ ಮಿತಿಗಳ ಬಗ್ಗೆ ಟೀಕೆ ಮಾಡುವುದು ವಿಪಕ್ಷವಾಗಿ ಬಿಜೆಪಿ ಮತ್ತು ಮಾಧ್ಯಮಗಳ ಕರ್ತವ್ಯವೆ ಆಗಿದೆ. ಆದರೆ ಈ ಮಾಧ್ಯಮಗಳು ಅವುಗಳನ್ನು ಬಿಟ್ಟು ಬಜೆಟ್‌ ಅನ್ನು ಕೂಡಾ ಕೋಮುವಾದಿ ನೆಲೆಯಲ್ಲಿ ಮಾತನಾಡುತ್ತಾ, ಈಗಾಗಲೆ ಕುಗ್ಗಿರುವ ಈ ರಾಜ್ಯದ ಮುಸ್ಲಿಮರನ್ನು ಮತ್ತಷ್ಟು ಅವಮಾನಿಸುತ್ತಾ ಇವೆ. ಸಿದ್ದರಾಮಯ್ಯ ಮಂಡಿಸಿದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಬಜೆಟ್ ‘ಸಾಬ್ರ’ ಬಜೆಟ್ ಎಂಬುವುದು ನಿಜವೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದನ್ನು ಅಂಕೆಯಲ್ಲಿ ಬರೆದರೆ, 4,095,490,000,000 ಆಗುತ್ತದೆ. ಮುಸ್ಲಿಮರು ಸೇರಿ ಈ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತರಿಗೆ ಮೀಸಲಿಟ್ಟ ಹಣ ಕೇವಲ 1,300 ಕೋಟಿ ರೂಪಾಯಿಗಳಾಗಿವೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. 2% ಕ್ರಿಶ್ಚಿಯನ್ನರು, 1% ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಇದ್ದಾರೆ. ಈ ವಿಚಾರ ಬಿಜೆಪಿಗಾಗಲಿ, ಕನ್ನಡ ಮಾಧ್ಯಮಗಳಿಗಾಗಲಿ ತಿಳಿದಿಲ್ಲ ಎಂಬುವುದೇನಿಲ್ಲ.

ಮುಸ್ಲಿಮರು ಈ ರಾಜ್ಯದ 1 ಕೋಟಿ(13%)ಯಷ್ಟು ಜನಸಂಖ್ಯೆ ಹೊಂದಿರುವ ದೊಡ್ಡ ಸಮುದಾಯ. ಮುಖ್ಯಮಂತ್ರಿ ಮಂಡಿಸಿದ ನಾಲ್ಕು ಲಕ್ಷ ಕೋಟಿ ರೂಪಾಯಿಯ ಬೃಹತ್ ಬಜೆಟ್‌ನಲ್ಲಿ, ನೇರವಾಗಿ ಮುಸ್ಲಿಮರಿಗೆ ಎಂದು ಮೀಸಲಿಟ್ಟ ಅನುದಾನ ಕೇವಲ 250 ಕೋಟಿ ರೂಪಾಯಿಗಳು ಮಾತ್ರವಾಗಿದೆ. ಇದು ಬಜೆಟ್‌ನ 0.061% ಮಾತ್ರ. ಉಳಿದಂತೆ 1000 ಕೋಟಿ ರೂಪಾಯಿಗಳನ್ನು ಅಲ್ಪಸಂಖ್ಯಾತರಿಗೆ ಸರ್ಕಾರ ಮೀಸಲಿಟ್ಟಿದೆ.

ಮುಸ್ಲಿಮರಿಗೆ ನೇರವಾಗಿ ನೀಡಿರುವ 250 ಕೋಟಿ ಹಾಗೂ 1000 ಕೋಟಿ ರೂಪಾಯಿಗಳು ಸೇರಿಸಿ 1300 ಕೋಟಿಯಾಗುತ್ತದೆ. ಇತರ ಅಲ್ಪಸಂಖ್ಯಾತ ಸಮುದಾಯದ ಎಲ್ಲಾ ಪಾಲನ್ನು ಮುಸ್ಲಿಮರೆ ಪಡೆದರೂ, ಅಲ್ಲಿ ಸಿಗುವುದು ಬಜೆಟ್‌ನ ಪಾಲು 0.318% ಅಷ್ಟೇ. ಬಜೆಟ್‌ನ ಮೊತ್ತದಲ್ಲಿ ಒಂದು ಶೇಖಡ ಕೂಡಾ ಇಲ್ಲ. ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ಇಲ್ಲ.

ಈ ರಾಜ್ಯದಲ್ಲೆ ದುಡಿದು, ಇಲ್ಲೆ ಖರ್ಚು ಮಾಡಿ ತೆರಿಗೆ ಕಟ್ಟುವ, ಈ ರಾಜ್ಯದ ಅಭಿವೃದ್ಧಿಗೆ ಪಾಲು ನೀಡುವ 13% ಮುಸ್ಲಿಮರಿಗೆ ರಾಜ್ಯ ಕನಿಷ್ಠ ಪಕ್ಷ ಅರ್ಧ ಶೇಖಡಾ ಕೂಡಾ ವಾಪಾಸು ನೀಡುತ್ತಾ ಇಲ್ಲ.‌ ಈ ಅನ್ಯಾಯವನ್ನು ವಿಪಕ್ಷಗಳು ಮತ್ತು ಮಾಧ್ಯಮಗಳು ಕೇಳಬೇಕು ಅಲ್ಲವೆ?  ಬಿಜೆಪಿ ರೀತಿಯ ವಿಪಕ್ಷವಾಗಲಿ, ಮಾಧ್ಯಮವಾಗಲಿ ಮೇಲಿನಂತೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಬೇಕೆ ವಿನಃ, ಅವಮಾನಿತ, ಅನುಮಾನಿತ ಮತ್ತು ಹಿಂದುಳಿದ ಸಮುದಾಯವನ್ನು ಮತ್ತಷ್ಟು ಕುಗ್ಗಿಸುವುದಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...