Homeಕರ್ನಾಟಕಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

- Advertisement -
- Advertisement -

“ನೀನು ಯಾವನಯ್ಯಾ ನಾನ್‌ವೆಜ್‌ ತಿನ್ನಲ್ವೇನಯ್ಯ? ನಾನು ಏನು ತಿಂದೆ ಅಂತ ಕೇಳಲು ನೀನ್ಯಾವನು?” ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತನೊಬ್ಬನಿಗೆ ತರಾಟೆ ತೆಗೆದುಕೊಂಡ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ‘ಬಾಡಿನ ಘಮಲು’ ಜೋರಾಗಿದೆ.

‘ಬಾಡು ತಿಂದ ಬಳಿಕ ದೇವಾಸ್ಥಾನಕ್ಕೆ ಸಿದ್ದರಾಮಯ್ಯ ಹೋಗಿದ್ದಾರೆ’ ಎಂದು ಬಿಜೆಪಿಯವರು ಹೇಳಿಕೆ ನೀಡಿದ್ದಾರೆಂದು ಸಿದ್ದರಾಮಯ್ಯನವರ ಆಹಾರ ಹಕ್ಕನ್ನು ಕೆಣಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾಂಸಾಹಾರ ಕೇಂದ್ರಿತ ಶೂದ್ರ, ದಲಿತ ಸಂಸ್ಕೃತಿಯ ಕುರಿತು ಜನರೇ ಈಗ ಬಿಜೆಪಿಗೆ ಪಾಠ ಹೇಳುತ್ತಿದ್ದಾರೆ.

‘ನಮ್ಮ ಆಹಾರ ನಮ್ಮ ಹಕ್ಕು. ನಾವು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಕೇಳಲು ನೀವ್ಯಾರು?’ ಎಂಬ ಪ್ರಶ್ನೆ ಬಿರುಸು ಪಡೆದಿದೆ. ‘ಬಾಡೇ ನಮ್‌ ಗಾಡು’ ಅಭಿಯಾನದ ಎರಡನೇ ಆವೃತ್ತಿಯೂ ಚಾಲನೆ ಪಡೆದಿದೆ.

ಹಂಸಲೇಖ ಅವರು ಮಾಂಸಾಹಾರದ ಕುರಿತು ಮಾತನಾಡಿದ್ದ ಸಂದರ್ಭದಲ್ಲಿ ಮಾಂಸಾಹಾರಿಗಳ ಕುರಿತು ಕೆಲವರು ಕುಹಕವಾಡಿದ್ದರು. ಇದರಿಂದ ಸಿಟ್ಟಿಗೆದ್ದ ಬಹುಸಂಖ್ಯಾತ ಮಾಂಸಪ್ರಿಯರು, ‘ಬಾಡೇ ನಮ್‌ ಗಾಡು’ ಅಭಿಯಾನವನ್ನು ಆರಂಭಿಸಿ, ಯಶಸ್ವಿಯಾಗಿದ್ದರು. ಸಿದ್ದರಾಮಯ್ಯನವರು ತಮ್ಮ ಆಹಾರ ಸಂಸ್ಕೃತಿ ಹಾಗೂ ಹಕ್ಕನ್ನು ಪ್ರತಿಪಾದಿಸಿದ ಬಳಿಕ ಮತ್ತೊಮ್ಮೆ ‘ಬಾಡೇ ನಮ್‌ ಗಾಡು’ ಎಂದು ಜನರು ಹೇಳತೊಡಗಿದ್ದಾರೆ.

“ನಾಳೆಯಿಂದ ಬರುವ ಅಮಾವಾಸ್ಯೆವರೆಗೂ #ಬಾಡೇ_ನಮ್_ಗಾಡು ಬೃಹತ್ ಅಭಿಯಾನ. ಈ Hashtag ಬಳಸಿ ಬಾಡೂಟದ ಫೋಟೋ ಪೋಸ್ಟ್ ಮಾಡಬೇಕು. ಬಾಡು ತಿನ್ನದದವರಿಗೂ ನೋಡೋಕೆ ಮುಕ್ತ ಅವಕಾಶವಿದೆ. ಶ್ರಾವಣ, ಸೋಮವಾರ, ಶುಕ್ರವಾರ ಅಂತ ಕಥೆ ಹೊಡೆಯೋ ದಲಿತ ಮತ್ತು ಶೂದ್ರ $#%% ಕ್ಕೆ ಪ್ರವೇಶ ನಿಷಿದ್ಧ. ಇನ್ನುಳಿದಂತೆ ಸರ್ವರಿಗೂ ಮುಕ್ತ ಪ್ರವೇಶ. ಪ್ರಕಟಣೆ : ಅಖಿಲ ಕರ್ನಾಟಕ ಬಾಡು ಪ್ರಿಯ ಸಂಘ” ಎಂಬ ಸಂದೇಶ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬಂದ ಕೆಲವು ಪ್ರತಿಕ್ರಿಯೆಗಳ ಝಲಕ್‌ ಹೀಗಿದೆ:

ರಾಜ್ಯ ಸರ್ಕಾರ ತಕ್ಷಣ ಒಂದು ಆದೇಶ ಹೊರಡಿಸಿ ಎಲ್ಲ ದೇವಸ್ಥಾನಗಳ ಮುಂದೆ ಅಲ್ಲಿಗೆ ಭೇಟಿ ನೀಡುವ ಭಕ್ತರ ಹೊಟ್ಟೆಯಲ್ಲಿ ಏನಿದೆ ಎಂದು ಪರೀಕ್ಷೆ ಮಾಡಲು ಸ್ಕಾನಿಂಗ್ ಮೆಷಿನ್ ಅಳವಡಿಸುವುದನ್ನು ಕಡ್ಡಾಯಗೊಳಿಸ ಬೇಕು.

– ದಿನೇಶ್ ಅಮೀನ್‌ ಮಟ್ಟು

***

ಮಾಂಸಾಹಾರದ ಕುರಿತಾದ ಕೀಳರಿಮೆಯನ್ನು ಮೊದಲು ತೊಡೆದು ಹಾಕಿ. ನಮ್ಮ ಬದುಕು ,ನಮ್ಮ ಊಟ, ನಮ್ಮ ಆಚರಣೆ- ಇದೊಂದು ‘ಪುಷ್ಕಳ’ ಕಂ ಸಮೃದ್ಧ ದ್ರಾವಿಡ ಸಂಸ್ಕೃತಿ. ಮಾಂಸದೂಟದ ಜತೆಗಿನ ಸುಂದರ ನೆನಪುಗಳನ್ನು ಚಿತ್ರ ಬರೆಹಗಳ ಮೂಲಕ ಆದಷ್ಟೂ ದಾಖಲಿಸಿ. ಇಲ್ಲಿ ಯಾವ ಸಂಪಾದಕನೂ ಇಲ್ಲ. ನಿಮ್ಮ ಗೋಡೆ ನಿಮ್ಮಿಷ್ಟ. ನಡೀರಿ. ಇದೊಂದು ಆಂದೋಲನವಾಗಲಿ.

– ದಿನೇಶ್ ಕುಕ್ಕುಜಡ್ಕ

*****

****

ದೇವಸ್ಥಾನಕ್ಕೆ ಹೋಗುವ ಮುನ್ನ ಮಾತ್ರೆ ತೆಗೆದುಕೊಂಡೋ, ಇನ್ಯಾವುದೋ ರೀತಿಯಲ್ಲಿಯೋ ಜಠರ, ಕರುಳು ಸಂಪೂರ್ಣ ಖಾಲಿ ಮಾಡಿ, ಸೋಪು ಸರ್ಫು ಹಾಕಿ ತೊಳೆದು ಹೊಟ್ಟೆಯೊಳಗೆ ಏನೂ ಇಲ್ಲ ಎಂಬುದನ್ನು ಖಾತ್ರಿ ಮಾಡಿಕೊಂಡು ಆಮೇಲೆ ಹೋಗಬೇಕಾಗಿ ವಿನಂತಿ. ಹಾಗೆಯೇ ಹೋದುದು ಕನ್ನಡ ಸುದ್ದಿವಾಹಿನಿಗಳಿಗೆ ಗೊತ್ತಾದರೆ ಕಷ್ಟ.

– ಶ್ರೀನಿವಾಸ ಕಾರ್ಕಳ

****

2016- ದನದ ಮಾಂಸ ತಿಂದ ಎಂದು ಬಡಿದು ಕೊಂದರು ಸೈಯದ್ ಅಕ್ಲಾಕ್‌‌ನನ್ನು. 2022- ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋದರೆಂದು ದಾಳಿ ನಡೆಸಿದರು ಸಿದ್ದರಾಮಯ್ಯ ಮೇಲೆ. ಬಿಜೆಪಿಯ ಈ ಕ್ರೊನಾಲಜಿ ಗಮನಿಸಿ. ನಿನ್ನೆ ಅಕ್ಲಾಕ್, ಇವತ್ತು ಸಿದ್ದರಾಮಯ್ಯ, ನಾಳೆ ನೀವು, ನೀವು. #ನಮ್ಮ_ಆಹಾರ_ನಮ್ಮ_ಹಕ್ಕು #ಕ್ರೊನಾಲಜಿ_ಸಂಝೇ #bjp_is_sick #my_food_my_right

-ಶಶಿ ಸಂಪಳ್ಳಿ

***

ಏಯ್, ನೀ ಯಾವನಯ್ಯಾ ಕೇಳಾಕೆ? ಆಹಾರ ಅವರವರ ಹಕ್ಕು. ಬಾಡು ನಮ್ಮ ಗಾಡು. ಯಾವುದು ತಿನ್ನಬೇಕು ಯಾವುದು ತಿನ್ನಬಾರದು ಎಂದು ಕೇಳೋಕೆ ನೀನು ಯಾವನಯ್ಯ.

– ಹನುಮೇಶ್‌ ಗುಂಡೂರು

***

ಮಾಂಸ ತಿನ್ನುವವರು
ಇವಿಎಂನಲ್ಲಿ
ಕಮಲದ ಮೇಲೆ
ಬೆರಳಿಡಬೇಡಿ,
ಮಡಿ ಕೆಟ್ಟು ಮೈಲಿಗೆಯಾದೀತು.

– ಡಾ.ಶ್ರೀನಿವಾಸ ಕಕ್ಕಿಲ್ಲಾಯ

***

ಮಾಂಸಾಹಾರ ತಿಂದವರು ದೇವಸ್ಥಾನಕ್ಕೆ ಬರಬಾರದೆಂದು ಯಾವ ದೇವರು ಬಂದು ಹೇಳಿದ್ದು ಅಂತ ಯಾರಾದರೂ ದಾಖಲೆ ಸಮೇತ ಹೇಳಿದರೆ ಒಳ್ಳೆಯದು. ಯಾಕಂದ್ರೆ ನಮ್ಮ ಮಾರಮ್ಮನಿಗೆ ನಾವು ಕುರಿ‌ ಕಡಿದೇ ಹಬ್ಬ ಮಾಡೋದು.‌ ಹಾಗಾದ್ರೆ ಮಾರಮ್ಮ ದೇವರಲ್ಲವೇ?

– ದೇಶಾದ್ರಿ ಹೊಸಮನೆ

***

ನಾನು ಮಾಂಸಹಾರಿ. ಮಾಂಸ ತಿನ್ನುತ್ತೇನೆ. ಇದು ನನ್ನ ಆಹಾರದ ಆಯ್ಕೆ ಮತ್ತು ಹಕ್ಕು.
ನೀನ್ಯಾವನಯ್ಯ ಕೇಳುವುದಕ್ಕೆ. #isupportsiddaramaiah

– ಶ್ರೀಪಾದ ಭಟ್‌

***

#ಬಾಡೇ_ನಮ್_ಗಾಡು

ಸುಮ್ನೆ ಮಾತಾಡೋದೇನು ಅಂತ ಬರುವಾಗ ಕೆ.ಎಂ.ದೊಡ್ಡೀಲಿ ಎರಡೂವರೆ ಕೆ.ಜಿ. ಹಂದಿ ಬಾಡು ತಂದು ಮೆಣಸುಪ್ಪಿನ ಕರಿ ಮಾಡಿ ಹೊಟ್ಟೆ ತುಂಬಾ ತಿಂದೊ. ನಾಳೆಗೂ ಇದೆ. ತಿಂಡಿಗೇ ಬನ್ನಿ.

– ಕೃಷ್ಣೇಗೌಡ ಟಿ.ಲಿಂಗಯ್ಯ

***

ಒಂದು ಎರಡು
ಬಾಳೆಲೆ ಹರಡು
ಮೂರು ನಾಕು
ಬಾಡು ಹಾಕು
ಐದು ಆರು
ಕೋಳಿ ಸಾರು
ಏಳು ಎಂಟು
ಮೀನು ಉಂಟು
ಒಂಬತ್ತು ಹತ್ತು
ಬಲು ರುಚಿ ಇತ್ತು
ಒಂದರಿಂದ ಹತ್ತು ಹೀಗಿತ್ತು
ಬಾಡಿನ ಗತ್ತು ಮುಗಿದಿತ್ತು.
( ಮೂಲ ಕವಿಗಳ ಕ್ಷಮೆ ಕೋರಿ)

– ಪುರುಷೋತ್ತಮ ಬಿಳಿಮಲೆ

****

***

***

ಹೀಗೆ ಸೋಷಿಯಲ್ ಮೀಡಿಯಾಗಳ ತುಂಬಾ ಬಾಡಿನ ಘಮಲು ಹೆಚ್ಚಾಗಿದೆ. ಮಾಂಸ ತಿನ್ನುವವರನ್ನು ಹಂಗಿಸುವ ಬಿಜೆಪಿಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...