Homeಕರ್ನಾಟಕಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

- Advertisement -
- Advertisement -

“ನೀನು ಯಾವನಯ್ಯಾ ನಾನ್‌ವೆಜ್‌ ತಿನ್ನಲ್ವೇನಯ್ಯ? ನಾನು ಏನು ತಿಂದೆ ಅಂತ ಕೇಳಲು ನೀನ್ಯಾವನು?” ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತನೊಬ್ಬನಿಗೆ ತರಾಟೆ ತೆಗೆದುಕೊಂಡ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ‘ಬಾಡಿನ ಘಮಲು’ ಜೋರಾಗಿದೆ.

‘ಬಾಡು ತಿಂದ ಬಳಿಕ ದೇವಾಸ್ಥಾನಕ್ಕೆ ಸಿದ್ದರಾಮಯ್ಯ ಹೋಗಿದ್ದಾರೆ’ ಎಂದು ಬಿಜೆಪಿಯವರು ಹೇಳಿಕೆ ನೀಡಿದ್ದಾರೆಂದು ಸಿದ್ದರಾಮಯ್ಯನವರ ಆಹಾರ ಹಕ್ಕನ್ನು ಕೆಣಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾಂಸಾಹಾರ ಕೇಂದ್ರಿತ ಶೂದ್ರ, ದಲಿತ ಸಂಸ್ಕೃತಿಯ ಕುರಿತು ಜನರೇ ಈಗ ಬಿಜೆಪಿಗೆ ಪಾಠ ಹೇಳುತ್ತಿದ್ದಾರೆ.

‘ನಮ್ಮ ಆಹಾರ ನಮ್ಮ ಹಕ್ಕು. ನಾವು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಕೇಳಲು ನೀವ್ಯಾರು?’ ಎಂಬ ಪ್ರಶ್ನೆ ಬಿರುಸು ಪಡೆದಿದೆ. ‘ಬಾಡೇ ನಮ್‌ ಗಾಡು’ ಅಭಿಯಾನದ ಎರಡನೇ ಆವೃತ್ತಿಯೂ ಚಾಲನೆ ಪಡೆದಿದೆ.

ಹಂಸಲೇಖ ಅವರು ಮಾಂಸಾಹಾರದ ಕುರಿತು ಮಾತನಾಡಿದ್ದ ಸಂದರ್ಭದಲ್ಲಿ ಮಾಂಸಾಹಾರಿಗಳ ಕುರಿತು ಕೆಲವರು ಕುಹಕವಾಡಿದ್ದರು. ಇದರಿಂದ ಸಿಟ್ಟಿಗೆದ್ದ ಬಹುಸಂಖ್ಯಾತ ಮಾಂಸಪ್ರಿಯರು, ‘ಬಾಡೇ ನಮ್‌ ಗಾಡು’ ಅಭಿಯಾನವನ್ನು ಆರಂಭಿಸಿ, ಯಶಸ್ವಿಯಾಗಿದ್ದರು. ಸಿದ್ದರಾಮಯ್ಯನವರು ತಮ್ಮ ಆಹಾರ ಸಂಸ್ಕೃತಿ ಹಾಗೂ ಹಕ್ಕನ್ನು ಪ್ರತಿಪಾದಿಸಿದ ಬಳಿಕ ಮತ್ತೊಮ್ಮೆ ‘ಬಾಡೇ ನಮ್‌ ಗಾಡು’ ಎಂದು ಜನರು ಹೇಳತೊಡಗಿದ್ದಾರೆ.

“ನಾಳೆಯಿಂದ ಬರುವ ಅಮಾವಾಸ್ಯೆವರೆಗೂ #ಬಾಡೇ_ನಮ್_ಗಾಡು ಬೃಹತ್ ಅಭಿಯಾನ. ಈ Hashtag ಬಳಸಿ ಬಾಡೂಟದ ಫೋಟೋ ಪೋಸ್ಟ್ ಮಾಡಬೇಕು. ಬಾಡು ತಿನ್ನದದವರಿಗೂ ನೋಡೋಕೆ ಮುಕ್ತ ಅವಕಾಶವಿದೆ. ಶ್ರಾವಣ, ಸೋಮವಾರ, ಶುಕ್ರವಾರ ಅಂತ ಕಥೆ ಹೊಡೆಯೋ ದಲಿತ ಮತ್ತು ಶೂದ್ರ $#%% ಕ್ಕೆ ಪ್ರವೇಶ ನಿಷಿದ್ಧ. ಇನ್ನುಳಿದಂತೆ ಸರ್ವರಿಗೂ ಮುಕ್ತ ಪ್ರವೇಶ. ಪ್ರಕಟಣೆ : ಅಖಿಲ ಕರ್ನಾಟಕ ಬಾಡು ಪ್ರಿಯ ಸಂಘ” ಎಂಬ ಸಂದೇಶ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬಂದ ಕೆಲವು ಪ್ರತಿಕ್ರಿಯೆಗಳ ಝಲಕ್‌ ಹೀಗಿದೆ:

ರಾಜ್ಯ ಸರ್ಕಾರ ತಕ್ಷಣ ಒಂದು ಆದೇಶ ಹೊರಡಿಸಿ ಎಲ್ಲ ದೇವಸ್ಥಾನಗಳ ಮುಂದೆ ಅಲ್ಲಿಗೆ ಭೇಟಿ ನೀಡುವ ಭಕ್ತರ ಹೊಟ್ಟೆಯಲ್ಲಿ ಏನಿದೆ ಎಂದು ಪರೀಕ್ಷೆ ಮಾಡಲು ಸ್ಕಾನಿಂಗ್ ಮೆಷಿನ್ ಅಳವಡಿಸುವುದನ್ನು ಕಡ್ಡಾಯಗೊಳಿಸ ಬೇಕು.

– ದಿನೇಶ್ ಅಮೀನ್‌ ಮಟ್ಟು

***

ಮಾಂಸಾಹಾರದ ಕುರಿತಾದ ಕೀಳರಿಮೆಯನ್ನು ಮೊದಲು ತೊಡೆದು ಹಾಕಿ. ನಮ್ಮ ಬದುಕು ,ನಮ್ಮ ಊಟ, ನಮ್ಮ ಆಚರಣೆ- ಇದೊಂದು ‘ಪುಷ್ಕಳ’ ಕಂ ಸಮೃದ್ಧ ದ್ರಾವಿಡ ಸಂಸ್ಕೃತಿ. ಮಾಂಸದೂಟದ ಜತೆಗಿನ ಸುಂದರ ನೆನಪುಗಳನ್ನು ಚಿತ್ರ ಬರೆಹಗಳ ಮೂಲಕ ಆದಷ್ಟೂ ದಾಖಲಿಸಿ. ಇಲ್ಲಿ ಯಾವ ಸಂಪಾದಕನೂ ಇಲ್ಲ. ನಿಮ್ಮ ಗೋಡೆ ನಿಮ್ಮಿಷ್ಟ. ನಡೀರಿ. ಇದೊಂದು ಆಂದೋಲನವಾಗಲಿ.

– ದಿನೇಶ್ ಕುಕ್ಕುಜಡ್ಕ

*****

****

ದೇವಸ್ಥಾನಕ್ಕೆ ಹೋಗುವ ಮುನ್ನ ಮಾತ್ರೆ ತೆಗೆದುಕೊಂಡೋ, ಇನ್ಯಾವುದೋ ರೀತಿಯಲ್ಲಿಯೋ ಜಠರ, ಕರುಳು ಸಂಪೂರ್ಣ ಖಾಲಿ ಮಾಡಿ, ಸೋಪು ಸರ್ಫು ಹಾಕಿ ತೊಳೆದು ಹೊಟ್ಟೆಯೊಳಗೆ ಏನೂ ಇಲ್ಲ ಎಂಬುದನ್ನು ಖಾತ್ರಿ ಮಾಡಿಕೊಂಡು ಆಮೇಲೆ ಹೋಗಬೇಕಾಗಿ ವಿನಂತಿ. ಹಾಗೆಯೇ ಹೋದುದು ಕನ್ನಡ ಸುದ್ದಿವಾಹಿನಿಗಳಿಗೆ ಗೊತ್ತಾದರೆ ಕಷ್ಟ.

– ಶ್ರೀನಿವಾಸ ಕಾರ್ಕಳ

****

2016- ದನದ ಮಾಂಸ ತಿಂದ ಎಂದು ಬಡಿದು ಕೊಂದರು ಸೈಯದ್ ಅಕ್ಲಾಕ್‌‌ನನ್ನು. 2022- ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋದರೆಂದು ದಾಳಿ ನಡೆಸಿದರು ಸಿದ್ದರಾಮಯ್ಯ ಮೇಲೆ. ಬಿಜೆಪಿಯ ಈ ಕ್ರೊನಾಲಜಿ ಗಮನಿಸಿ. ನಿನ್ನೆ ಅಕ್ಲಾಕ್, ಇವತ್ತು ಸಿದ್ದರಾಮಯ್ಯ, ನಾಳೆ ನೀವು, ನೀವು. #ನಮ್ಮ_ಆಹಾರ_ನಮ್ಮ_ಹಕ್ಕು #ಕ್ರೊನಾಲಜಿ_ಸಂಝೇ #bjp_is_sick #my_food_my_right

-ಶಶಿ ಸಂಪಳ್ಳಿ

***

ಏಯ್, ನೀ ಯಾವನಯ್ಯಾ ಕೇಳಾಕೆ? ಆಹಾರ ಅವರವರ ಹಕ್ಕು. ಬಾಡು ನಮ್ಮ ಗಾಡು. ಯಾವುದು ತಿನ್ನಬೇಕು ಯಾವುದು ತಿನ್ನಬಾರದು ಎಂದು ಕೇಳೋಕೆ ನೀನು ಯಾವನಯ್ಯ.

– ಹನುಮೇಶ್‌ ಗುಂಡೂರು

***

ಮಾಂಸ ತಿನ್ನುವವರು
ಇವಿಎಂನಲ್ಲಿ
ಕಮಲದ ಮೇಲೆ
ಬೆರಳಿಡಬೇಡಿ,
ಮಡಿ ಕೆಟ್ಟು ಮೈಲಿಗೆಯಾದೀತು.

– ಡಾ.ಶ್ರೀನಿವಾಸ ಕಕ್ಕಿಲ್ಲಾಯ

***

ಮಾಂಸಾಹಾರ ತಿಂದವರು ದೇವಸ್ಥಾನಕ್ಕೆ ಬರಬಾರದೆಂದು ಯಾವ ದೇವರು ಬಂದು ಹೇಳಿದ್ದು ಅಂತ ಯಾರಾದರೂ ದಾಖಲೆ ಸಮೇತ ಹೇಳಿದರೆ ಒಳ್ಳೆಯದು. ಯಾಕಂದ್ರೆ ನಮ್ಮ ಮಾರಮ್ಮನಿಗೆ ನಾವು ಕುರಿ‌ ಕಡಿದೇ ಹಬ್ಬ ಮಾಡೋದು.‌ ಹಾಗಾದ್ರೆ ಮಾರಮ್ಮ ದೇವರಲ್ಲವೇ?

– ದೇಶಾದ್ರಿ ಹೊಸಮನೆ

***

ನಾನು ಮಾಂಸಹಾರಿ. ಮಾಂಸ ತಿನ್ನುತ್ತೇನೆ. ಇದು ನನ್ನ ಆಹಾರದ ಆಯ್ಕೆ ಮತ್ತು ಹಕ್ಕು.
ನೀನ್ಯಾವನಯ್ಯ ಕೇಳುವುದಕ್ಕೆ. #isupportsiddaramaiah

– ಶ್ರೀಪಾದ ಭಟ್‌

***

#ಬಾಡೇ_ನಮ್_ಗಾಡು

ಸುಮ್ನೆ ಮಾತಾಡೋದೇನು ಅಂತ ಬರುವಾಗ ಕೆ.ಎಂ.ದೊಡ್ಡೀಲಿ ಎರಡೂವರೆ ಕೆ.ಜಿ. ಹಂದಿ ಬಾಡು ತಂದು ಮೆಣಸುಪ್ಪಿನ ಕರಿ ಮಾಡಿ ಹೊಟ್ಟೆ ತುಂಬಾ ತಿಂದೊ. ನಾಳೆಗೂ ಇದೆ. ತಿಂಡಿಗೇ ಬನ್ನಿ.

– ಕೃಷ್ಣೇಗೌಡ ಟಿ.ಲಿಂಗಯ್ಯ

***

ಒಂದು ಎರಡು
ಬಾಳೆಲೆ ಹರಡು
ಮೂರು ನಾಕು
ಬಾಡು ಹಾಕು
ಐದು ಆರು
ಕೋಳಿ ಸಾರು
ಏಳು ಎಂಟು
ಮೀನು ಉಂಟು
ಒಂಬತ್ತು ಹತ್ತು
ಬಲು ರುಚಿ ಇತ್ತು
ಒಂದರಿಂದ ಹತ್ತು ಹೀಗಿತ್ತು
ಬಾಡಿನ ಗತ್ತು ಮುಗಿದಿತ್ತು.
( ಮೂಲ ಕವಿಗಳ ಕ್ಷಮೆ ಕೋರಿ)

– ಪುರುಷೋತ್ತಮ ಬಿಳಿಮಲೆ

****

***

***

ಹೀಗೆ ಸೋಷಿಯಲ್ ಮೀಡಿಯಾಗಳ ತುಂಬಾ ಬಾಡಿನ ಘಮಲು ಹೆಚ್ಚಾಗಿದೆ. ಮಾಂಸ ತಿನ್ನುವವರನ್ನು ಹಂಗಿಸುವ ಬಿಜೆಪಿಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...