Homeಕರ್ನಾಟಕಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

- Advertisement -
- Advertisement -

“ನೀನು ಯಾವನಯ್ಯಾ ನಾನ್‌ವೆಜ್‌ ತಿನ್ನಲ್ವೇನಯ್ಯ? ನಾನು ಏನು ತಿಂದೆ ಅಂತ ಕೇಳಲು ನೀನ್ಯಾವನು?” ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತನೊಬ್ಬನಿಗೆ ತರಾಟೆ ತೆಗೆದುಕೊಂಡ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ‘ಬಾಡಿನ ಘಮಲು’ ಜೋರಾಗಿದೆ.

‘ಬಾಡು ತಿಂದ ಬಳಿಕ ದೇವಾಸ್ಥಾನಕ್ಕೆ ಸಿದ್ದರಾಮಯ್ಯ ಹೋಗಿದ್ದಾರೆ’ ಎಂದು ಬಿಜೆಪಿಯವರು ಹೇಳಿಕೆ ನೀಡಿದ್ದಾರೆಂದು ಸಿದ್ದರಾಮಯ್ಯನವರ ಆಹಾರ ಹಕ್ಕನ್ನು ಕೆಣಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾಂಸಾಹಾರ ಕೇಂದ್ರಿತ ಶೂದ್ರ, ದಲಿತ ಸಂಸ್ಕೃತಿಯ ಕುರಿತು ಜನರೇ ಈಗ ಬಿಜೆಪಿಗೆ ಪಾಠ ಹೇಳುತ್ತಿದ್ದಾರೆ.

‘ನಮ್ಮ ಆಹಾರ ನಮ್ಮ ಹಕ್ಕು. ನಾವು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಕೇಳಲು ನೀವ್ಯಾರು?’ ಎಂಬ ಪ್ರಶ್ನೆ ಬಿರುಸು ಪಡೆದಿದೆ. ‘ಬಾಡೇ ನಮ್‌ ಗಾಡು’ ಅಭಿಯಾನದ ಎರಡನೇ ಆವೃತ್ತಿಯೂ ಚಾಲನೆ ಪಡೆದಿದೆ.

ಹಂಸಲೇಖ ಅವರು ಮಾಂಸಾಹಾರದ ಕುರಿತು ಮಾತನಾಡಿದ್ದ ಸಂದರ್ಭದಲ್ಲಿ ಮಾಂಸಾಹಾರಿಗಳ ಕುರಿತು ಕೆಲವರು ಕುಹಕವಾಡಿದ್ದರು. ಇದರಿಂದ ಸಿಟ್ಟಿಗೆದ್ದ ಬಹುಸಂಖ್ಯಾತ ಮಾಂಸಪ್ರಿಯರು, ‘ಬಾಡೇ ನಮ್‌ ಗಾಡು’ ಅಭಿಯಾನವನ್ನು ಆರಂಭಿಸಿ, ಯಶಸ್ವಿಯಾಗಿದ್ದರು. ಸಿದ್ದರಾಮಯ್ಯನವರು ತಮ್ಮ ಆಹಾರ ಸಂಸ್ಕೃತಿ ಹಾಗೂ ಹಕ್ಕನ್ನು ಪ್ರತಿಪಾದಿಸಿದ ಬಳಿಕ ಮತ್ತೊಮ್ಮೆ ‘ಬಾಡೇ ನಮ್‌ ಗಾಡು’ ಎಂದು ಜನರು ಹೇಳತೊಡಗಿದ್ದಾರೆ.

“ನಾಳೆಯಿಂದ ಬರುವ ಅಮಾವಾಸ್ಯೆವರೆಗೂ #ಬಾಡೇ_ನಮ್_ಗಾಡು ಬೃಹತ್ ಅಭಿಯಾನ. ಈ Hashtag ಬಳಸಿ ಬಾಡೂಟದ ಫೋಟೋ ಪೋಸ್ಟ್ ಮಾಡಬೇಕು. ಬಾಡು ತಿನ್ನದದವರಿಗೂ ನೋಡೋಕೆ ಮುಕ್ತ ಅವಕಾಶವಿದೆ. ಶ್ರಾವಣ, ಸೋಮವಾರ, ಶುಕ್ರವಾರ ಅಂತ ಕಥೆ ಹೊಡೆಯೋ ದಲಿತ ಮತ್ತು ಶೂದ್ರ $#%% ಕ್ಕೆ ಪ್ರವೇಶ ನಿಷಿದ್ಧ. ಇನ್ನುಳಿದಂತೆ ಸರ್ವರಿಗೂ ಮುಕ್ತ ಪ್ರವೇಶ. ಪ್ರಕಟಣೆ : ಅಖಿಲ ಕರ್ನಾಟಕ ಬಾಡು ಪ್ರಿಯ ಸಂಘ” ಎಂಬ ಸಂದೇಶ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬಂದ ಕೆಲವು ಪ್ರತಿಕ್ರಿಯೆಗಳ ಝಲಕ್‌ ಹೀಗಿದೆ:

ರಾಜ್ಯ ಸರ್ಕಾರ ತಕ್ಷಣ ಒಂದು ಆದೇಶ ಹೊರಡಿಸಿ ಎಲ್ಲ ದೇವಸ್ಥಾನಗಳ ಮುಂದೆ ಅಲ್ಲಿಗೆ ಭೇಟಿ ನೀಡುವ ಭಕ್ತರ ಹೊಟ್ಟೆಯಲ್ಲಿ ಏನಿದೆ ಎಂದು ಪರೀಕ್ಷೆ ಮಾಡಲು ಸ್ಕಾನಿಂಗ್ ಮೆಷಿನ್ ಅಳವಡಿಸುವುದನ್ನು ಕಡ್ಡಾಯಗೊಳಿಸ ಬೇಕು.

– ದಿನೇಶ್ ಅಮೀನ್‌ ಮಟ್ಟು

***

ಮಾಂಸಾಹಾರದ ಕುರಿತಾದ ಕೀಳರಿಮೆಯನ್ನು ಮೊದಲು ತೊಡೆದು ಹಾಕಿ. ನಮ್ಮ ಬದುಕು ,ನಮ್ಮ ಊಟ, ನಮ್ಮ ಆಚರಣೆ- ಇದೊಂದು ‘ಪುಷ್ಕಳ’ ಕಂ ಸಮೃದ್ಧ ದ್ರಾವಿಡ ಸಂಸ್ಕೃತಿ. ಮಾಂಸದೂಟದ ಜತೆಗಿನ ಸುಂದರ ನೆನಪುಗಳನ್ನು ಚಿತ್ರ ಬರೆಹಗಳ ಮೂಲಕ ಆದಷ್ಟೂ ದಾಖಲಿಸಿ. ಇಲ್ಲಿ ಯಾವ ಸಂಪಾದಕನೂ ಇಲ್ಲ. ನಿಮ್ಮ ಗೋಡೆ ನಿಮ್ಮಿಷ್ಟ. ನಡೀರಿ. ಇದೊಂದು ಆಂದೋಲನವಾಗಲಿ.

– ದಿನೇಶ್ ಕುಕ್ಕುಜಡ್ಕ

*****

****

ದೇವಸ್ಥಾನಕ್ಕೆ ಹೋಗುವ ಮುನ್ನ ಮಾತ್ರೆ ತೆಗೆದುಕೊಂಡೋ, ಇನ್ಯಾವುದೋ ರೀತಿಯಲ್ಲಿಯೋ ಜಠರ, ಕರುಳು ಸಂಪೂರ್ಣ ಖಾಲಿ ಮಾಡಿ, ಸೋಪು ಸರ್ಫು ಹಾಕಿ ತೊಳೆದು ಹೊಟ್ಟೆಯೊಳಗೆ ಏನೂ ಇಲ್ಲ ಎಂಬುದನ್ನು ಖಾತ್ರಿ ಮಾಡಿಕೊಂಡು ಆಮೇಲೆ ಹೋಗಬೇಕಾಗಿ ವಿನಂತಿ. ಹಾಗೆಯೇ ಹೋದುದು ಕನ್ನಡ ಸುದ್ದಿವಾಹಿನಿಗಳಿಗೆ ಗೊತ್ತಾದರೆ ಕಷ್ಟ.

– ಶ್ರೀನಿವಾಸ ಕಾರ್ಕಳ

****

2016- ದನದ ಮಾಂಸ ತಿಂದ ಎಂದು ಬಡಿದು ಕೊಂದರು ಸೈಯದ್ ಅಕ್ಲಾಕ್‌‌ನನ್ನು. 2022- ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋದರೆಂದು ದಾಳಿ ನಡೆಸಿದರು ಸಿದ್ದರಾಮಯ್ಯ ಮೇಲೆ. ಬಿಜೆಪಿಯ ಈ ಕ್ರೊನಾಲಜಿ ಗಮನಿಸಿ. ನಿನ್ನೆ ಅಕ್ಲಾಕ್, ಇವತ್ತು ಸಿದ್ದರಾಮಯ್ಯ, ನಾಳೆ ನೀವು, ನೀವು. #ನಮ್ಮ_ಆಹಾರ_ನಮ್ಮ_ಹಕ್ಕು #ಕ್ರೊನಾಲಜಿ_ಸಂಝೇ #bjp_is_sick #my_food_my_right

-ಶಶಿ ಸಂಪಳ್ಳಿ

***

ಏಯ್, ನೀ ಯಾವನಯ್ಯಾ ಕೇಳಾಕೆ? ಆಹಾರ ಅವರವರ ಹಕ್ಕು. ಬಾಡು ನಮ್ಮ ಗಾಡು. ಯಾವುದು ತಿನ್ನಬೇಕು ಯಾವುದು ತಿನ್ನಬಾರದು ಎಂದು ಕೇಳೋಕೆ ನೀನು ಯಾವನಯ್ಯ.

– ಹನುಮೇಶ್‌ ಗುಂಡೂರು

***

ಮಾಂಸ ತಿನ್ನುವವರು
ಇವಿಎಂನಲ್ಲಿ
ಕಮಲದ ಮೇಲೆ
ಬೆರಳಿಡಬೇಡಿ,
ಮಡಿ ಕೆಟ್ಟು ಮೈಲಿಗೆಯಾದೀತು.

– ಡಾ.ಶ್ರೀನಿವಾಸ ಕಕ್ಕಿಲ್ಲಾಯ

***

ಮಾಂಸಾಹಾರ ತಿಂದವರು ದೇವಸ್ಥಾನಕ್ಕೆ ಬರಬಾರದೆಂದು ಯಾವ ದೇವರು ಬಂದು ಹೇಳಿದ್ದು ಅಂತ ಯಾರಾದರೂ ದಾಖಲೆ ಸಮೇತ ಹೇಳಿದರೆ ಒಳ್ಳೆಯದು. ಯಾಕಂದ್ರೆ ನಮ್ಮ ಮಾರಮ್ಮನಿಗೆ ನಾವು ಕುರಿ‌ ಕಡಿದೇ ಹಬ್ಬ ಮಾಡೋದು.‌ ಹಾಗಾದ್ರೆ ಮಾರಮ್ಮ ದೇವರಲ್ಲವೇ?

– ದೇಶಾದ್ರಿ ಹೊಸಮನೆ

***

ನಾನು ಮಾಂಸಹಾರಿ. ಮಾಂಸ ತಿನ್ನುತ್ತೇನೆ. ಇದು ನನ್ನ ಆಹಾರದ ಆಯ್ಕೆ ಮತ್ತು ಹಕ್ಕು.
ನೀನ್ಯಾವನಯ್ಯ ಕೇಳುವುದಕ್ಕೆ. #isupportsiddaramaiah

– ಶ್ರೀಪಾದ ಭಟ್‌

***

#ಬಾಡೇ_ನಮ್_ಗಾಡು

ಸುಮ್ನೆ ಮಾತಾಡೋದೇನು ಅಂತ ಬರುವಾಗ ಕೆ.ಎಂ.ದೊಡ್ಡೀಲಿ ಎರಡೂವರೆ ಕೆ.ಜಿ. ಹಂದಿ ಬಾಡು ತಂದು ಮೆಣಸುಪ್ಪಿನ ಕರಿ ಮಾಡಿ ಹೊಟ್ಟೆ ತುಂಬಾ ತಿಂದೊ. ನಾಳೆಗೂ ಇದೆ. ತಿಂಡಿಗೇ ಬನ್ನಿ.

– ಕೃಷ್ಣೇಗೌಡ ಟಿ.ಲಿಂಗಯ್ಯ

***

ಒಂದು ಎರಡು
ಬಾಳೆಲೆ ಹರಡು
ಮೂರು ನಾಕು
ಬಾಡು ಹಾಕು
ಐದು ಆರು
ಕೋಳಿ ಸಾರು
ಏಳು ಎಂಟು
ಮೀನು ಉಂಟು
ಒಂಬತ್ತು ಹತ್ತು
ಬಲು ರುಚಿ ಇತ್ತು
ಒಂದರಿಂದ ಹತ್ತು ಹೀಗಿತ್ತು
ಬಾಡಿನ ಗತ್ತು ಮುಗಿದಿತ್ತು.
( ಮೂಲ ಕವಿಗಳ ಕ್ಷಮೆ ಕೋರಿ)

– ಪುರುಷೋತ್ತಮ ಬಿಳಿಮಲೆ

****

***

***

ಹೀಗೆ ಸೋಷಿಯಲ್ ಮೀಡಿಯಾಗಳ ತುಂಬಾ ಬಾಡಿನ ಘಮಲು ಹೆಚ್ಚಾಗಿದೆ. ಮಾಂಸ ತಿನ್ನುವವರನ್ನು ಹಂಗಿಸುವ ಬಿಜೆಪಿಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....