Homeಕರ್ನಾಟಕಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

- Advertisement -
- Advertisement -

“ನೀನು ಯಾವನಯ್ಯಾ ನಾನ್‌ವೆಜ್‌ ತಿನ್ನಲ್ವೇನಯ್ಯ? ನಾನು ಏನು ತಿಂದೆ ಅಂತ ಕೇಳಲು ನೀನ್ಯಾವನು?” ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತನೊಬ್ಬನಿಗೆ ತರಾಟೆ ತೆಗೆದುಕೊಂಡ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ‘ಬಾಡಿನ ಘಮಲು’ ಜೋರಾಗಿದೆ.

‘ಬಾಡು ತಿಂದ ಬಳಿಕ ದೇವಾಸ್ಥಾನಕ್ಕೆ ಸಿದ್ದರಾಮಯ್ಯ ಹೋಗಿದ್ದಾರೆ’ ಎಂದು ಬಿಜೆಪಿಯವರು ಹೇಳಿಕೆ ನೀಡಿದ್ದಾರೆಂದು ಸಿದ್ದರಾಮಯ್ಯನವರ ಆಹಾರ ಹಕ್ಕನ್ನು ಕೆಣಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾಂಸಾಹಾರ ಕೇಂದ್ರಿತ ಶೂದ್ರ, ದಲಿತ ಸಂಸ್ಕೃತಿಯ ಕುರಿತು ಜನರೇ ಈಗ ಬಿಜೆಪಿಗೆ ಪಾಠ ಹೇಳುತ್ತಿದ್ದಾರೆ.

‘ನಮ್ಮ ಆಹಾರ ನಮ್ಮ ಹಕ್ಕು. ನಾವು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಕೇಳಲು ನೀವ್ಯಾರು?’ ಎಂಬ ಪ್ರಶ್ನೆ ಬಿರುಸು ಪಡೆದಿದೆ. ‘ಬಾಡೇ ನಮ್‌ ಗಾಡು’ ಅಭಿಯಾನದ ಎರಡನೇ ಆವೃತ್ತಿಯೂ ಚಾಲನೆ ಪಡೆದಿದೆ.

ಹಂಸಲೇಖ ಅವರು ಮಾಂಸಾಹಾರದ ಕುರಿತು ಮಾತನಾಡಿದ್ದ ಸಂದರ್ಭದಲ್ಲಿ ಮಾಂಸಾಹಾರಿಗಳ ಕುರಿತು ಕೆಲವರು ಕುಹಕವಾಡಿದ್ದರು. ಇದರಿಂದ ಸಿಟ್ಟಿಗೆದ್ದ ಬಹುಸಂಖ್ಯಾತ ಮಾಂಸಪ್ರಿಯರು, ‘ಬಾಡೇ ನಮ್‌ ಗಾಡು’ ಅಭಿಯಾನವನ್ನು ಆರಂಭಿಸಿ, ಯಶಸ್ವಿಯಾಗಿದ್ದರು. ಸಿದ್ದರಾಮಯ್ಯನವರು ತಮ್ಮ ಆಹಾರ ಸಂಸ್ಕೃತಿ ಹಾಗೂ ಹಕ್ಕನ್ನು ಪ್ರತಿಪಾದಿಸಿದ ಬಳಿಕ ಮತ್ತೊಮ್ಮೆ ‘ಬಾಡೇ ನಮ್‌ ಗಾಡು’ ಎಂದು ಜನರು ಹೇಳತೊಡಗಿದ್ದಾರೆ.

“ನಾಳೆಯಿಂದ ಬರುವ ಅಮಾವಾಸ್ಯೆವರೆಗೂ #ಬಾಡೇ_ನಮ್_ಗಾಡು ಬೃಹತ್ ಅಭಿಯಾನ. ಈ Hashtag ಬಳಸಿ ಬಾಡೂಟದ ಫೋಟೋ ಪೋಸ್ಟ್ ಮಾಡಬೇಕು. ಬಾಡು ತಿನ್ನದದವರಿಗೂ ನೋಡೋಕೆ ಮುಕ್ತ ಅವಕಾಶವಿದೆ. ಶ್ರಾವಣ, ಸೋಮವಾರ, ಶುಕ್ರವಾರ ಅಂತ ಕಥೆ ಹೊಡೆಯೋ ದಲಿತ ಮತ್ತು ಶೂದ್ರ $#%% ಕ್ಕೆ ಪ್ರವೇಶ ನಿಷಿದ್ಧ. ಇನ್ನುಳಿದಂತೆ ಸರ್ವರಿಗೂ ಮುಕ್ತ ಪ್ರವೇಶ. ಪ್ರಕಟಣೆ : ಅಖಿಲ ಕರ್ನಾಟಕ ಬಾಡು ಪ್ರಿಯ ಸಂಘ” ಎಂಬ ಸಂದೇಶ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬಂದ ಕೆಲವು ಪ್ರತಿಕ್ರಿಯೆಗಳ ಝಲಕ್‌ ಹೀಗಿದೆ:

ರಾಜ್ಯ ಸರ್ಕಾರ ತಕ್ಷಣ ಒಂದು ಆದೇಶ ಹೊರಡಿಸಿ ಎಲ್ಲ ದೇವಸ್ಥಾನಗಳ ಮುಂದೆ ಅಲ್ಲಿಗೆ ಭೇಟಿ ನೀಡುವ ಭಕ್ತರ ಹೊಟ್ಟೆಯಲ್ಲಿ ಏನಿದೆ ಎಂದು ಪರೀಕ್ಷೆ ಮಾಡಲು ಸ್ಕಾನಿಂಗ್ ಮೆಷಿನ್ ಅಳವಡಿಸುವುದನ್ನು ಕಡ್ಡಾಯಗೊಳಿಸ ಬೇಕು.

– ದಿನೇಶ್ ಅಮೀನ್‌ ಮಟ್ಟು

***

ಮಾಂಸಾಹಾರದ ಕುರಿತಾದ ಕೀಳರಿಮೆಯನ್ನು ಮೊದಲು ತೊಡೆದು ಹಾಕಿ. ನಮ್ಮ ಬದುಕು ,ನಮ್ಮ ಊಟ, ನಮ್ಮ ಆಚರಣೆ- ಇದೊಂದು ‘ಪುಷ್ಕಳ’ ಕಂ ಸಮೃದ್ಧ ದ್ರಾವಿಡ ಸಂಸ್ಕೃತಿ. ಮಾಂಸದೂಟದ ಜತೆಗಿನ ಸುಂದರ ನೆನಪುಗಳನ್ನು ಚಿತ್ರ ಬರೆಹಗಳ ಮೂಲಕ ಆದಷ್ಟೂ ದಾಖಲಿಸಿ. ಇಲ್ಲಿ ಯಾವ ಸಂಪಾದಕನೂ ಇಲ್ಲ. ನಿಮ್ಮ ಗೋಡೆ ನಿಮ್ಮಿಷ್ಟ. ನಡೀರಿ. ಇದೊಂದು ಆಂದೋಲನವಾಗಲಿ.

– ದಿನೇಶ್ ಕುಕ್ಕುಜಡ್ಕ

*****

****

ದೇವಸ್ಥಾನಕ್ಕೆ ಹೋಗುವ ಮುನ್ನ ಮಾತ್ರೆ ತೆಗೆದುಕೊಂಡೋ, ಇನ್ಯಾವುದೋ ರೀತಿಯಲ್ಲಿಯೋ ಜಠರ, ಕರುಳು ಸಂಪೂರ್ಣ ಖಾಲಿ ಮಾಡಿ, ಸೋಪು ಸರ್ಫು ಹಾಕಿ ತೊಳೆದು ಹೊಟ್ಟೆಯೊಳಗೆ ಏನೂ ಇಲ್ಲ ಎಂಬುದನ್ನು ಖಾತ್ರಿ ಮಾಡಿಕೊಂಡು ಆಮೇಲೆ ಹೋಗಬೇಕಾಗಿ ವಿನಂತಿ. ಹಾಗೆಯೇ ಹೋದುದು ಕನ್ನಡ ಸುದ್ದಿವಾಹಿನಿಗಳಿಗೆ ಗೊತ್ತಾದರೆ ಕಷ್ಟ.

– ಶ್ರೀನಿವಾಸ ಕಾರ್ಕಳ

****

2016- ದನದ ಮಾಂಸ ತಿಂದ ಎಂದು ಬಡಿದು ಕೊಂದರು ಸೈಯದ್ ಅಕ್ಲಾಕ್‌‌ನನ್ನು. 2022- ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋದರೆಂದು ದಾಳಿ ನಡೆಸಿದರು ಸಿದ್ದರಾಮಯ್ಯ ಮೇಲೆ. ಬಿಜೆಪಿಯ ಈ ಕ್ರೊನಾಲಜಿ ಗಮನಿಸಿ. ನಿನ್ನೆ ಅಕ್ಲಾಕ್, ಇವತ್ತು ಸಿದ್ದರಾಮಯ್ಯ, ನಾಳೆ ನೀವು, ನೀವು. #ನಮ್ಮ_ಆಹಾರ_ನಮ್ಮ_ಹಕ್ಕು #ಕ್ರೊನಾಲಜಿ_ಸಂಝೇ #bjp_is_sick #my_food_my_right

-ಶಶಿ ಸಂಪಳ್ಳಿ

***

ಏಯ್, ನೀ ಯಾವನಯ್ಯಾ ಕೇಳಾಕೆ? ಆಹಾರ ಅವರವರ ಹಕ್ಕು. ಬಾಡು ನಮ್ಮ ಗಾಡು. ಯಾವುದು ತಿನ್ನಬೇಕು ಯಾವುದು ತಿನ್ನಬಾರದು ಎಂದು ಕೇಳೋಕೆ ನೀನು ಯಾವನಯ್ಯ.

– ಹನುಮೇಶ್‌ ಗುಂಡೂರು

***

ಮಾಂಸ ತಿನ್ನುವವರು
ಇವಿಎಂನಲ್ಲಿ
ಕಮಲದ ಮೇಲೆ
ಬೆರಳಿಡಬೇಡಿ,
ಮಡಿ ಕೆಟ್ಟು ಮೈಲಿಗೆಯಾದೀತು.

– ಡಾ.ಶ್ರೀನಿವಾಸ ಕಕ್ಕಿಲ್ಲಾಯ

***

ಮಾಂಸಾಹಾರ ತಿಂದವರು ದೇವಸ್ಥಾನಕ್ಕೆ ಬರಬಾರದೆಂದು ಯಾವ ದೇವರು ಬಂದು ಹೇಳಿದ್ದು ಅಂತ ಯಾರಾದರೂ ದಾಖಲೆ ಸಮೇತ ಹೇಳಿದರೆ ಒಳ್ಳೆಯದು. ಯಾಕಂದ್ರೆ ನಮ್ಮ ಮಾರಮ್ಮನಿಗೆ ನಾವು ಕುರಿ‌ ಕಡಿದೇ ಹಬ್ಬ ಮಾಡೋದು.‌ ಹಾಗಾದ್ರೆ ಮಾರಮ್ಮ ದೇವರಲ್ಲವೇ?

– ದೇಶಾದ್ರಿ ಹೊಸಮನೆ

***

ನಾನು ಮಾಂಸಹಾರಿ. ಮಾಂಸ ತಿನ್ನುತ್ತೇನೆ. ಇದು ನನ್ನ ಆಹಾರದ ಆಯ್ಕೆ ಮತ್ತು ಹಕ್ಕು.
ನೀನ್ಯಾವನಯ್ಯ ಕೇಳುವುದಕ್ಕೆ. #isupportsiddaramaiah

– ಶ್ರೀಪಾದ ಭಟ್‌

***

#ಬಾಡೇ_ನಮ್_ಗಾಡು

ಸುಮ್ನೆ ಮಾತಾಡೋದೇನು ಅಂತ ಬರುವಾಗ ಕೆ.ಎಂ.ದೊಡ್ಡೀಲಿ ಎರಡೂವರೆ ಕೆ.ಜಿ. ಹಂದಿ ಬಾಡು ತಂದು ಮೆಣಸುಪ್ಪಿನ ಕರಿ ಮಾಡಿ ಹೊಟ್ಟೆ ತುಂಬಾ ತಿಂದೊ. ನಾಳೆಗೂ ಇದೆ. ತಿಂಡಿಗೇ ಬನ್ನಿ.

– ಕೃಷ್ಣೇಗೌಡ ಟಿ.ಲಿಂಗಯ್ಯ

***

ಒಂದು ಎರಡು
ಬಾಳೆಲೆ ಹರಡು
ಮೂರು ನಾಕು
ಬಾಡು ಹಾಕು
ಐದು ಆರು
ಕೋಳಿ ಸಾರು
ಏಳು ಎಂಟು
ಮೀನು ಉಂಟು
ಒಂಬತ್ತು ಹತ್ತು
ಬಲು ರುಚಿ ಇತ್ತು
ಒಂದರಿಂದ ಹತ್ತು ಹೀಗಿತ್ತು
ಬಾಡಿನ ಗತ್ತು ಮುಗಿದಿತ್ತು.
( ಮೂಲ ಕವಿಗಳ ಕ್ಷಮೆ ಕೋರಿ)

– ಪುರುಷೋತ್ತಮ ಬಿಳಿಮಲೆ

****

***

***

ಹೀಗೆ ಸೋಷಿಯಲ್ ಮೀಡಿಯಾಗಳ ತುಂಬಾ ಬಾಡಿನ ಘಮಲು ಹೆಚ್ಚಾಗಿದೆ. ಮಾಂಸ ತಿನ್ನುವವರನ್ನು ಹಂಗಿಸುವ ಬಿಜೆಪಿಯವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...