Homeಚಳವಳಿಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

ಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರ ಮೂಲ ಬರಹಗಳು ಮತ್ತು ಭಾಷಣಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿ’ಯ 500ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಓದಿದ್ದಾರೆ.

ಈ ಕಾರ್ಯಕ್ರಮವನ್ನು ನಡೆಸುತ್ತಿರುವ ಡಾ.ಅರುಣ್ ಜೋಳದ ಕೂಡ್ಲಿಗಿ ಮತ್ತು ಅನೇಕ ವಿದ್ವಾಂಸರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ ಎಂಬ ಆತಂಕ ಅನೇಕರನ್ನು ಕಾಡುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಇದು ಸಾವಿರಾರು ಸಂಚಿಕೆಗಳನ್ನು ಕಾಣಲಿ ಎಂದು ಹಾರೈಸುತ್ತೇನೆ ಎಂದ ಸಿದ್ದರಾಮಯ್ಯನವರು, “ಪ್ರಜಾಪ್ರಭುತ್ವ ನ್ಯಾಯಪ್ರದವಾಗಿ ಕಾರ್ಯನಿರ್ವಹಿಸಲು ಇರುವ ಪೂರ್ವಭಾವಿ ನಿಯಮಗಳು” ಎಂಬ ಅಧ್ಯಾಯವನ್ನು ಓದಿದರು.

ಅದಕ್ಕೂ ಮುನ್ನ ಈ ದಿನ ಮಾಧ್ಯಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಚಿಂತಕ, ಬರಹಗಾರ ವಿಕಾಸ್ ಆರ್ ಮೌರ್ಯ ಮಾತನಾಡಿ, “ಡಿಜಿಟಲ್ ಸ್ಪೇಸ್‌ನಲ್ಲಿ ಅಂಬೇಡ್ಕರ್‌ರವರ ಚಿಂತನೆಗಳನ್ನು ನೆಲೆಗೊಳಿಸುವ ಈ ಪ್ರಯತ್ನ ಅಸಾಮಾನ್ಯವಾದುದು” ಎಂದರು.

ನಮ್ಮ ದೇಶಕ್ಕೆ ಅಂಟಿರುವ ಅಸ್ಪೃಶ್ಯತೆ ಮತ್ತು ಜಾತೀಯತೆಯ ಕಾರಣಕ್ಕೆ ಅಂಬೇಡ್ಕರ್‌ರನ್ನು ಮೂಲೆಗುಂಪು ಮಾಡಲಾಗಿತ್ತು. ಅವರು ನಿಧನರಾದ 10 ವರ್ಷಗಳ ನಂತರವಷ್ಟೆ 1966ರಲ್ಲಿ ಭಾರತೀಯ ಅಂಚೆ ಚೀಟಿಯಲ್ಲಿ ಅವರ ಭಾವಚಿತ್ರವನ್ನು ಒಳಗೊಳ್ಳಲಾಯಿತು. ಅಂಬೇಡ್ಕರ್‌ರವರಿಗೆ ಭಾರತ ರತ್ನ ಪ್ರಶಸ್ತ ಕೊಟ್ಟಿದ್ದು 1991ರಲ್ಲಿ. ಅವರ ಸಂಪೂರ್ಣ ಬರಹಗಳು ಮತ್ತು ಭಾಷಣಗಳನ್ನು 1991ರ ಇಸವಿಯಿಂದ ನಮಗೆ ತಲುಪಿದವು. 1916ರಿಂದಲೇ ಅಂಬೇಡ್ಕರ್ ಪ್ರಕಾರವಾಗಿ ಬರೆದಿದ್ದರು, 1936ರಲ್ಲಿಯೇ ಜಾತಿವಿನಾಶ ಕೃತಿ ರಚಿಸಿದ್ದರು. ಆದರೂ ಸಂವಿಧಾನ ಜಾರಿಯಾದ 41 ವರ್ಷದವರೆಗೂ ಅವರ ಬರಹಗಳನ್ನು ಸಾರ್ವಜನಿಕಗೊಳಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

21 ಸಂಪುಟಗಳಲ್ಲಿ ಅಂಬೇಡ್ಕರ್‌ರವರ ಬರಹಗಳು ಸಿಗುತ್ತಿವೆ. ಅವುಗಳನ್ನು ಆಡಿಯೋ ರೂಪದಲ್ಲಿ ಪ್ರತಿಯೊಂದು ಮನೆಮನೆಗೂ ತಲುಪಿಸುವ ಈ ಕೆಲಸ ಸಾಮಾನ್ಯವಾದುದ್ದಲ್ಲ. ಸೆಪ್ಟಂಬರ್ 09, 2020ರಿಂದ ಮೊದಲ ಕಂತು ಆರಂಭವಾಗಿ ಈಗ 500ನೇ ಸಂಚಿಕೆ ತಲುಪಿದ್ದೇವೆ. ಇದೊಂದು ಸಾಹಸವೇ ಆಗಿದೆ. ಜಾನಪದ, ಪುರಾಣ, ಭಜನೆ ಇತ್ಯಾದಿಗಳಲ್ಲಿ ಅಂಬೇಡ್ಕರ್‌ರವರನ್ನು ಹೇಗೆ ಕಾಣಲಾಗುತ್ತದೆ ಎಂದು ಅಧ್ಯಯನ ಮಾಡುತ್ತಿದ್ದ ಅರುಣ್ ಜೋಳದ ಕೂಡ್ಲಿಗಿಯರವರು ಈ ಕೆಲಸ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

ಡಿಜಿಟಲ್ ಮಾಧ್ಯಮದಲ್ಲಿ ಅಂಬೇಡ್ಕರ್‌ರನ್ನು ಕಾಣುವುದು ವಿರಳ. ಕೌಂಟರ್‌ ಕರೆಂಟ್ಸ್, ರೌಂಟ್‌ ಟೇಬಲ್ ನಂತಹ ಕೆಲವೇ ವೆಬ್‌ಸೈಟ್‌ಗಳು ಆ ಕೆಲಸ ಮಾಡುತ್ತಿವೆ. ನಮ್ಮ ಕರ್ನಾಟಕದಲ್ಲಿ ಈ ಓದು ಸರಣಿ ಆರಂಭವಾದ್ದರಿಂದ ನೇರವಾಗಿ ಅಂಬೇಡ್ಕರ್‌ರವರ ಬರಹ ಮತ್ತು ಭಾಷಣಗಳನ್ನು ನಮಗೆ ಸಿಗುತ್ತಿವೆ. ಈ ಪ್ರಯತ್ನ ಇಡೀ ದೇಶಕ್ಕೆ ಮೊಟ್ಟಮೊದಲ ಪ್ರಯತ್ನವಾಗಿದೆ. ಈ ಆಡಿಯೋ ಆರ್ಕೈವ್ ಸರಣಿಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡೋಣ. ಇದು ಮುಂದುವರೆಯಲಿ ಎಂದರು.

ಹೋರಾಟಗಾರ್ತಿ ದು.ಸರಸ್ವತಿಯವರು ಮಾತನಾಡಿ, “ಅಂಬೇಡ್ಕರ್‌ ಎಲ್ಲರಿಗೂ ದಕ್ಕುತ್ತಿದ್ದಾರೆ, ಇಂದಿಗೂ ನಮ್ಮೊಳಗೆ ಜೀವಂತವಿದ್ದಾರೆ. ಇನ್ನೂ ನೂರು ವರ್ಷ ಕಳೆದರೂ ಜೀವಂತವಾಗಿಯೇ ಇರುತ್ತಾರೆ. ಏಕೆಂದರೆ ಅಂಬೇಡ್ಕರ್ ಮಾಡಿರುವ ಕೆಲಸಗಳಿಗೆ ಎಂದಿಗೂ ಸಾವಿಲ್ಲ” ಎಂದರು.

“ಮಹಾರಾಷ್ಟ್ರದ ಸಂಶೋಧಕರಾದ ಉರ್ಮಿಳಾ ಪಾವರ್, ಮೀನಾಕ್ಷಿ ಮೂನ್‌ರವರು ಅಂಬೇಡ್ಕರ್‌ ಬಗ್ಗೆ ಹೆಚ್ಚು ತಿಳಿದುಕೊಳ್ಳಲು, ಓದಲು ಮುಂದಾದಾಗ ಅವರಿಗೆ ಕೊನೆಗೆ ಹೆಚ್ಚಿನ ಮಾಹಿತಿ ಸಿಕ್ಕಿದ್ದು ಅಂಬೇಡ್ಕರ್‌ರವರೆ ಹೊರತಂದಿದ್ದ ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳಿಂದ ಮಾತ್ರ. ಏಕೆಂದರೆ ಆ ಕಾಲದಲ್ಲಿಯೇ ಮುಖ್ಯವಾಹಿನಿ ಮಾಧ್ಯಮಗಳು ಅಂಬೇಡ್ಕರ್‌ರವರನ್ನು ನಿರ್ಲಕ್ಷಿಸಿದ್ದವು. ದಲಿತ ಚಳವಳಿ ದೇಶಾದ್ಯಂತ ಹರಡಿದ ಕಾರಣಕ್ಕೆ ಮಾತ್ರ ಅವರಿಗೆ ಭಾರತ ರತ್ನ ನೀಡಲಾಯಿತು” ಎಂದರು.

ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರು ಅಂಬೇಡ್ಕರ್ ಓದು ಕುರಿತು ಮಾತನಾಡಿದರು. ರಂಗಭೂಮಿ ಕಲಾವಿದರಾದ ರವಿಕಿರಣ್ ರಾಜೇಂದ್ರನ್ ಮತ್ತು ಅಶ್ವಿನಿ ಬೋಧ್ ತಮ್ಮ ಅನಿಸಿಕೆ ಹಂಚಿಕೊಂಡರು.

ಅಂಬೇಡ್ಕರ್‌ ಓದು ಅಭಿಯಾನದ ಎಲ್ಲಾ ಆಡಿಯೋಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: 100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಉಳಿವಿಗಾಗಿ dr b r ambedkar ಅವರನ್ನು ಎಳೆದು ತರಬೇಡಿ. ಸಿದ್ದರಾಮಯ್ಯ ನವರು ನಮಗೆ ಅಂಬೇಡ್ಕರನ್ನು ಪರಿಚಯಿಸಿ ಕೊಡುವ ಪ್ರಯತ್ನ ಮಾಡುವುದು ಬೇಡ. ಆತ ಮಹಾನ್ ವ್ಯಕ್ತಿ, ದೀನ ದಲಿತರಿಗೆ ತಮ್ಮ ಜೀವನವನ್ನೇ ಪಣವಾಗಿಟ್ಟ ದೇವರು. ಅಂಥ ವ್ಯಕ್ತಿಯನ್ನ ಸಿದ್ದರಾಮಯ್ಯ ನವರೂ ಪ್ರಚಾರಕ್ಕೆ ಬಳಿಸಿದ್ದು ಏಕೋ ಸರಿ ಕಾಣಿಸುತ್ತಿಲ್ಲ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...