Homeಚಳವಳಿಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

ಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರ ಮೂಲ ಬರಹಗಳು ಮತ್ತು ಭಾಷಣಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿ’ಯ 500ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಓದಿದ್ದಾರೆ.

ಈ ಕಾರ್ಯಕ್ರಮವನ್ನು ನಡೆಸುತ್ತಿರುವ ಡಾ.ಅರುಣ್ ಜೋಳದ ಕೂಡ್ಲಿಗಿ ಮತ್ತು ಅನೇಕ ವಿದ್ವಾಂಸರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ ಎಂಬ ಆತಂಕ ಅನೇಕರನ್ನು ಕಾಡುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಇದು ಸಾವಿರಾರು ಸಂಚಿಕೆಗಳನ್ನು ಕಾಣಲಿ ಎಂದು ಹಾರೈಸುತ್ತೇನೆ ಎಂದ ಸಿದ್ದರಾಮಯ್ಯನವರು, “ಪ್ರಜಾಪ್ರಭುತ್ವ ನ್ಯಾಯಪ್ರದವಾಗಿ ಕಾರ್ಯನಿರ್ವಹಿಸಲು ಇರುವ ಪೂರ್ವಭಾವಿ ನಿಯಮಗಳು” ಎಂಬ ಅಧ್ಯಾಯವನ್ನು ಓದಿದರು.

ಅದಕ್ಕೂ ಮುನ್ನ ಈ ದಿನ ಮಾಧ್ಯಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಚಿಂತಕ, ಬರಹಗಾರ ವಿಕಾಸ್ ಆರ್ ಮೌರ್ಯ ಮಾತನಾಡಿ, “ಡಿಜಿಟಲ್ ಸ್ಪೇಸ್‌ನಲ್ಲಿ ಅಂಬೇಡ್ಕರ್‌ರವರ ಚಿಂತನೆಗಳನ್ನು ನೆಲೆಗೊಳಿಸುವ ಈ ಪ್ರಯತ್ನ ಅಸಾಮಾನ್ಯವಾದುದು” ಎಂದರು.

ನಮ್ಮ ದೇಶಕ್ಕೆ ಅಂಟಿರುವ ಅಸ್ಪೃಶ್ಯತೆ ಮತ್ತು ಜಾತೀಯತೆಯ ಕಾರಣಕ್ಕೆ ಅಂಬೇಡ್ಕರ್‌ರನ್ನು ಮೂಲೆಗುಂಪು ಮಾಡಲಾಗಿತ್ತು. ಅವರು ನಿಧನರಾದ 10 ವರ್ಷಗಳ ನಂತರವಷ್ಟೆ 1966ರಲ್ಲಿ ಭಾರತೀಯ ಅಂಚೆ ಚೀಟಿಯಲ್ಲಿ ಅವರ ಭಾವಚಿತ್ರವನ್ನು ಒಳಗೊಳ್ಳಲಾಯಿತು. ಅಂಬೇಡ್ಕರ್‌ರವರಿಗೆ ಭಾರತ ರತ್ನ ಪ್ರಶಸ್ತ ಕೊಟ್ಟಿದ್ದು 1991ರಲ್ಲಿ. ಅವರ ಸಂಪೂರ್ಣ ಬರಹಗಳು ಮತ್ತು ಭಾಷಣಗಳನ್ನು 1991ರ ಇಸವಿಯಿಂದ ನಮಗೆ ತಲುಪಿದವು. 1916ರಿಂದಲೇ ಅಂಬೇಡ್ಕರ್ ಪ್ರಕಾರವಾಗಿ ಬರೆದಿದ್ದರು, 1936ರಲ್ಲಿಯೇ ಜಾತಿವಿನಾಶ ಕೃತಿ ರಚಿಸಿದ್ದರು. ಆದರೂ ಸಂವಿಧಾನ ಜಾರಿಯಾದ 41 ವರ್ಷದವರೆಗೂ ಅವರ ಬರಹಗಳನ್ನು ಸಾರ್ವಜನಿಕಗೊಳಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

21 ಸಂಪುಟಗಳಲ್ಲಿ ಅಂಬೇಡ್ಕರ್‌ರವರ ಬರಹಗಳು ಸಿಗುತ್ತಿವೆ. ಅವುಗಳನ್ನು ಆಡಿಯೋ ರೂಪದಲ್ಲಿ ಪ್ರತಿಯೊಂದು ಮನೆಮನೆಗೂ ತಲುಪಿಸುವ ಈ ಕೆಲಸ ಸಾಮಾನ್ಯವಾದುದ್ದಲ್ಲ. ಸೆಪ್ಟಂಬರ್ 09, 2020ರಿಂದ ಮೊದಲ ಕಂತು ಆರಂಭವಾಗಿ ಈಗ 500ನೇ ಸಂಚಿಕೆ ತಲುಪಿದ್ದೇವೆ. ಇದೊಂದು ಸಾಹಸವೇ ಆಗಿದೆ. ಜಾನಪದ, ಪುರಾಣ, ಭಜನೆ ಇತ್ಯಾದಿಗಳಲ್ಲಿ ಅಂಬೇಡ್ಕರ್‌ರವರನ್ನು ಹೇಗೆ ಕಾಣಲಾಗುತ್ತದೆ ಎಂದು ಅಧ್ಯಯನ ಮಾಡುತ್ತಿದ್ದ ಅರುಣ್ ಜೋಳದ ಕೂಡ್ಲಿಗಿಯರವರು ಈ ಕೆಲಸ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

ಡಿಜಿಟಲ್ ಮಾಧ್ಯಮದಲ್ಲಿ ಅಂಬೇಡ್ಕರ್‌ರನ್ನು ಕಾಣುವುದು ವಿರಳ. ಕೌಂಟರ್‌ ಕರೆಂಟ್ಸ್, ರೌಂಟ್‌ ಟೇಬಲ್ ನಂತಹ ಕೆಲವೇ ವೆಬ್‌ಸೈಟ್‌ಗಳು ಆ ಕೆಲಸ ಮಾಡುತ್ತಿವೆ. ನಮ್ಮ ಕರ್ನಾಟಕದಲ್ಲಿ ಈ ಓದು ಸರಣಿ ಆರಂಭವಾದ್ದರಿಂದ ನೇರವಾಗಿ ಅಂಬೇಡ್ಕರ್‌ರವರ ಬರಹ ಮತ್ತು ಭಾಷಣಗಳನ್ನು ನಮಗೆ ಸಿಗುತ್ತಿವೆ. ಈ ಪ್ರಯತ್ನ ಇಡೀ ದೇಶಕ್ಕೆ ಮೊಟ್ಟಮೊದಲ ಪ್ರಯತ್ನವಾಗಿದೆ. ಈ ಆಡಿಯೋ ಆರ್ಕೈವ್ ಸರಣಿಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡೋಣ. ಇದು ಮುಂದುವರೆಯಲಿ ಎಂದರು.

ಹೋರಾಟಗಾರ್ತಿ ದು.ಸರಸ್ವತಿಯವರು ಮಾತನಾಡಿ, “ಅಂಬೇಡ್ಕರ್‌ ಎಲ್ಲರಿಗೂ ದಕ್ಕುತ್ತಿದ್ದಾರೆ, ಇಂದಿಗೂ ನಮ್ಮೊಳಗೆ ಜೀವಂತವಿದ್ದಾರೆ. ಇನ್ನೂ ನೂರು ವರ್ಷ ಕಳೆದರೂ ಜೀವಂತವಾಗಿಯೇ ಇರುತ್ತಾರೆ. ಏಕೆಂದರೆ ಅಂಬೇಡ್ಕರ್ ಮಾಡಿರುವ ಕೆಲಸಗಳಿಗೆ ಎಂದಿಗೂ ಸಾವಿಲ್ಲ” ಎಂದರು.

“ಮಹಾರಾಷ್ಟ್ರದ ಸಂಶೋಧಕರಾದ ಉರ್ಮಿಳಾ ಪಾವರ್, ಮೀನಾಕ್ಷಿ ಮೂನ್‌ರವರು ಅಂಬೇಡ್ಕರ್‌ ಬಗ್ಗೆ ಹೆಚ್ಚು ತಿಳಿದುಕೊಳ್ಳಲು, ಓದಲು ಮುಂದಾದಾಗ ಅವರಿಗೆ ಕೊನೆಗೆ ಹೆಚ್ಚಿನ ಮಾಹಿತಿ ಸಿಕ್ಕಿದ್ದು ಅಂಬೇಡ್ಕರ್‌ರವರೆ ಹೊರತಂದಿದ್ದ ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳಿಂದ ಮಾತ್ರ. ಏಕೆಂದರೆ ಆ ಕಾಲದಲ್ಲಿಯೇ ಮುಖ್ಯವಾಹಿನಿ ಮಾಧ್ಯಮಗಳು ಅಂಬೇಡ್ಕರ್‌ರವರನ್ನು ನಿರ್ಲಕ್ಷಿಸಿದ್ದವು. ದಲಿತ ಚಳವಳಿ ದೇಶಾದ್ಯಂತ ಹರಡಿದ ಕಾರಣಕ್ಕೆ ಮಾತ್ರ ಅವರಿಗೆ ಭಾರತ ರತ್ನ ನೀಡಲಾಯಿತು” ಎಂದರು.

ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರು ಅಂಬೇಡ್ಕರ್ ಓದು ಕುರಿತು ಮಾತನಾಡಿದರು. ರಂಗಭೂಮಿ ಕಲಾವಿದರಾದ ರವಿಕಿರಣ್ ರಾಜೇಂದ್ರನ್ ಮತ್ತು ಅಶ್ವಿನಿ ಬೋಧ್ ತಮ್ಮ ಅನಿಸಿಕೆ ಹಂಚಿಕೊಂಡರು.

ಅಂಬೇಡ್ಕರ್‌ ಓದು ಅಭಿಯಾನದ ಎಲ್ಲಾ ಆಡಿಯೋಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: 100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಉಳಿವಿಗಾಗಿ dr b r ambedkar ಅವರನ್ನು ಎಳೆದು ತರಬೇಡಿ. ಸಿದ್ದರಾಮಯ್ಯ ನವರು ನಮಗೆ ಅಂಬೇಡ್ಕರನ್ನು ಪರಿಚಯಿಸಿ ಕೊಡುವ ಪ್ರಯತ್ನ ಮಾಡುವುದು ಬೇಡ. ಆತ ಮಹಾನ್ ವ್ಯಕ್ತಿ, ದೀನ ದಲಿತರಿಗೆ ತಮ್ಮ ಜೀವನವನ್ನೇ ಪಣವಾಗಿಟ್ಟ ದೇವರು. ಅಂಥ ವ್ಯಕ್ತಿಯನ್ನ ಸಿದ್ದರಾಮಯ್ಯ ನವರೂ ಪ್ರಚಾರಕ್ಕೆ ಬಳಿಸಿದ್ದು ಏಕೋ ಸರಿ ಕಾಣಿಸುತ್ತಿಲ್ಲ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...