Homeಚಳವಳಿಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

ಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರ ಮೂಲ ಬರಹಗಳು ಮತ್ತು ಭಾಷಣಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿ’ಯ 500ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಓದಿದ್ದಾರೆ.

ಈ ಕಾರ್ಯಕ್ರಮವನ್ನು ನಡೆಸುತ್ತಿರುವ ಡಾ.ಅರುಣ್ ಜೋಳದ ಕೂಡ್ಲಿಗಿ ಮತ್ತು ಅನೇಕ ವಿದ್ವಾಂಸರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ ಎಂಬ ಆತಂಕ ಅನೇಕರನ್ನು ಕಾಡುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಇದು ಸಾವಿರಾರು ಸಂಚಿಕೆಗಳನ್ನು ಕಾಣಲಿ ಎಂದು ಹಾರೈಸುತ್ತೇನೆ ಎಂದ ಸಿದ್ದರಾಮಯ್ಯನವರು, “ಪ್ರಜಾಪ್ರಭುತ್ವ ನ್ಯಾಯಪ್ರದವಾಗಿ ಕಾರ್ಯನಿರ್ವಹಿಸಲು ಇರುವ ಪೂರ್ವಭಾವಿ ನಿಯಮಗಳು” ಎಂಬ ಅಧ್ಯಾಯವನ್ನು ಓದಿದರು.

ಅದಕ್ಕೂ ಮುನ್ನ ಈ ದಿನ ಮಾಧ್ಯಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಚಿಂತಕ, ಬರಹಗಾರ ವಿಕಾಸ್ ಆರ್ ಮೌರ್ಯ ಮಾತನಾಡಿ, “ಡಿಜಿಟಲ್ ಸ್ಪೇಸ್‌ನಲ್ಲಿ ಅಂಬೇಡ್ಕರ್‌ರವರ ಚಿಂತನೆಗಳನ್ನು ನೆಲೆಗೊಳಿಸುವ ಈ ಪ್ರಯತ್ನ ಅಸಾಮಾನ್ಯವಾದುದು” ಎಂದರು.

ನಮ್ಮ ದೇಶಕ್ಕೆ ಅಂಟಿರುವ ಅಸ್ಪೃಶ್ಯತೆ ಮತ್ತು ಜಾತೀಯತೆಯ ಕಾರಣಕ್ಕೆ ಅಂಬೇಡ್ಕರ್‌ರನ್ನು ಮೂಲೆಗುಂಪು ಮಾಡಲಾಗಿತ್ತು. ಅವರು ನಿಧನರಾದ 10 ವರ್ಷಗಳ ನಂತರವಷ್ಟೆ 1966ರಲ್ಲಿ ಭಾರತೀಯ ಅಂಚೆ ಚೀಟಿಯಲ್ಲಿ ಅವರ ಭಾವಚಿತ್ರವನ್ನು ಒಳಗೊಳ್ಳಲಾಯಿತು. ಅಂಬೇಡ್ಕರ್‌ರವರಿಗೆ ಭಾರತ ರತ್ನ ಪ್ರಶಸ್ತ ಕೊಟ್ಟಿದ್ದು 1991ರಲ್ಲಿ. ಅವರ ಸಂಪೂರ್ಣ ಬರಹಗಳು ಮತ್ತು ಭಾಷಣಗಳನ್ನು 1991ರ ಇಸವಿಯಿಂದ ನಮಗೆ ತಲುಪಿದವು. 1916ರಿಂದಲೇ ಅಂಬೇಡ್ಕರ್ ಪ್ರಕಾರವಾಗಿ ಬರೆದಿದ್ದರು, 1936ರಲ್ಲಿಯೇ ಜಾತಿವಿನಾಶ ಕೃತಿ ರಚಿಸಿದ್ದರು. ಆದರೂ ಸಂವಿಧಾನ ಜಾರಿಯಾದ 41 ವರ್ಷದವರೆಗೂ ಅವರ ಬರಹಗಳನ್ನು ಸಾರ್ವಜನಿಕಗೊಳಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

21 ಸಂಪುಟಗಳಲ್ಲಿ ಅಂಬೇಡ್ಕರ್‌ರವರ ಬರಹಗಳು ಸಿಗುತ್ತಿವೆ. ಅವುಗಳನ್ನು ಆಡಿಯೋ ರೂಪದಲ್ಲಿ ಪ್ರತಿಯೊಂದು ಮನೆಮನೆಗೂ ತಲುಪಿಸುವ ಈ ಕೆಲಸ ಸಾಮಾನ್ಯವಾದುದ್ದಲ್ಲ. ಸೆಪ್ಟಂಬರ್ 09, 2020ರಿಂದ ಮೊದಲ ಕಂತು ಆರಂಭವಾಗಿ ಈಗ 500ನೇ ಸಂಚಿಕೆ ತಲುಪಿದ್ದೇವೆ. ಇದೊಂದು ಸಾಹಸವೇ ಆಗಿದೆ. ಜಾನಪದ, ಪುರಾಣ, ಭಜನೆ ಇತ್ಯಾದಿಗಳಲ್ಲಿ ಅಂಬೇಡ್ಕರ್‌ರವರನ್ನು ಹೇಗೆ ಕಾಣಲಾಗುತ್ತದೆ ಎಂದು ಅಧ್ಯಯನ ಮಾಡುತ್ತಿದ್ದ ಅರುಣ್ ಜೋಳದ ಕೂಡ್ಲಿಗಿಯರವರು ಈ ಕೆಲಸ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

ಡಿಜಿಟಲ್ ಮಾಧ್ಯಮದಲ್ಲಿ ಅಂಬೇಡ್ಕರ್‌ರನ್ನು ಕಾಣುವುದು ವಿರಳ. ಕೌಂಟರ್‌ ಕರೆಂಟ್ಸ್, ರೌಂಟ್‌ ಟೇಬಲ್ ನಂತಹ ಕೆಲವೇ ವೆಬ್‌ಸೈಟ್‌ಗಳು ಆ ಕೆಲಸ ಮಾಡುತ್ತಿವೆ. ನಮ್ಮ ಕರ್ನಾಟಕದಲ್ಲಿ ಈ ಓದು ಸರಣಿ ಆರಂಭವಾದ್ದರಿಂದ ನೇರವಾಗಿ ಅಂಬೇಡ್ಕರ್‌ರವರ ಬರಹ ಮತ್ತು ಭಾಷಣಗಳನ್ನು ನಮಗೆ ಸಿಗುತ್ತಿವೆ. ಈ ಪ್ರಯತ್ನ ಇಡೀ ದೇಶಕ್ಕೆ ಮೊಟ್ಟಮೊದಲ ಪ್ರಯತ್ನವಾಗಿದೆ. ಈ ಆಡಿಯೋ ಆರ್ಕೈವ್ ಸರಣಿಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡೋಣ. ಇದು ಮುಂದುವರೆಯಲಿ ಎಂದರು.

ಹೋರಾಟಗಾರ್ತಿ ದು.ಸರಸ್ವತಿಯವರು ಮಾತನಾಡಿ, “ಅಂಬೇಡ್ಕರ್‌ ಎಲ್ಲರಿಗೂ ದಕ್ಕುತ್ತಿದ್ದಾರೆ, ಇಂದಿಗೂ ನಮ್ಮೊಳಗೆ ಜೀವಂತವಿದ್ದಾರೆ. ಇನ್ನೂ ನೂರು ವರ್ಷ ಕಳೆದರೂ ಜೀವಂತವಾಗಿಯೇ ಇರುತ್ತಾರೆ. ಏಕೆಂದರೆ ಅಂಬೇಡ್ಕರ್ ಮಾಡಿರುವ ಕೆಲಸಗಳಿಗೆ ಎಂದಿಗೂ ಸಾವಿಲ್ಲ” ಎಂದರು.

“ಮಹಾರಾಷ್ಟ್ರದ ಸಂಶೋಧಕರಾದ ಉರ್ಮಿಳಾ ಪಾವರ್, ಮೀನಾಕ್ಷಿ ಮೂನ್‌ರವರು ಅಂಬೇಡ್ಕರ್‌ ಬಗ್ಗೆ ಹೆಚ್ಚು ತಿಳಿದುಕೊಳ್ಳಲು, ಓದಲು ಮುಂದಾದಾಗ ಅವರಿಗೆ ಕೊನೆಗೆ ಹೆಚ್ಚಿನ ಮಾಹಿತಿ ಸಿಕ್ಕಿದ್ದು ಅಂಬೇಡ್ಕರ್‌ರವರೆ ಹೊರತಂದಿದ್ದ ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳಿಂದ ಮಾತ್ರ. ಏಕೆಂದರೆ ಆ ಕಾಲದಲ್ಲಿಯೇ ಮುಖ್ಯವಾಹಿನಿ ಮಾಧ್ಯಮಗಳು ಅಂಬೇಡ್ಕರ್‌ರವರನ್ನು ನಿರ್ಲಕ್ಷಿಸಿದ್ದವು. ದಲಿತ ಚಳವಳಿ ದೇಶಾದ್ಯಂತ ಹರಡಿದ ಕಾರಣಕ್ಕೆ ಮಾತ್ರ ಅವರಿಗೆ ಭಾರತ ರತ್ನ ನೀಡಲಾಯಿತು” ಎಂದರು.

ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರು ಅಂಬೇಡ್ಕರ್ ಓದು ಕುರಿತು ಮಾತನಾಡಿದರು. ರಂಗಭೂಮಿ ಕಲಾವಿದರಾದ ರವಿಕಿರಣ್ ರಾಜೇಂದ್ರನ್ ಮತ್ತು ಅಶ್ವಿನಿ ಬೋಧ್ ತಮ್ಮ ಅನಿಸಿಕೆ ಹಂಚಿಕೊಂಡರು.

ಅಂಬೇಡ್ಕರ್‌ ಓದು ಅಭಿಯಾನದ ಎಲ್ಲಾ ಆಡಿಯೋಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: 100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಉಳಿವಿಗಾಗಿ dr b r ambedkar ಅವರನ್ನು ಎಳೆದು ತರಬೇಡಿ. ಸಿದ್ದರಾಮಯ್ಯ ನವರು ನಮಗೆ ಅಂಬೇಡ್ಕರನ್ನು ಪರಿಚಯಿಸಿ ಕೊಡುವ ಪ್ರಯತ್ನ ಮಾಡುವುದು ಬೇಡ. ಆತ ಮಹಾನ್ ವ್ಯಕ್ತಿ, ದೀನ ದಲಿತರಿಗೆ ತಮ್ಮ ಜೀವನವನ್ನೇ ಪಣವಾಗಿಟ್ಟ ದೇವರು. ಅಂಥ ವ್ಯಕ್ತಿಯನ್ನ ಸಿದ್ದರಾಮಯ್ಯ ನವರೂ ಪ್ರಚಾರಕ್ಕೆ ಬಳಿಸಿದ್ದು ಏಕೋ ಸರಿ ಕಾಣಿಸುತ್ತಿಲ್ಲ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...