Homeಚಳವಳಿಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

ಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರ ಮೂಲ ಬರಹಗಳು ಮತ್ತು ಭಾಷಣಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿ’ಯ 500ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಓದಿದ್ದಾರೆ.

ಈ ಕಾರ್ಯಕ್ರಮವನ್ನು ನಡೆಸುತ್ತಿರುವ ಡಾ.ಅರುಣ್ ಜೋಳದ ಕೂಡ್ಲಿಗಿ ಮತ್ತು ಅನೇಕ ವಿದ್ವಾಂಸರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ ಎಂಬ ಆತಂಕ ಅನೇಕರನ್ನು ಕಾಡುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಇದು ಸಾವಿರಾರು ಸಂಚಿಕೆಗಳನ್ನು ಕಾಣಲಿ ಎಂದು ಹಾರೈಸುತ್ತೇನೆ ಎಂದ ಸಿದ್ದರಾಮಯ್ಯನವರು, “ಪ್ರಜಾಪ್ರಭುತ್ವ ನ್ಯಾಯಪ್ರದವಾಗಿ ಕಾರ್ಯನಿರ್ವಹಿಸಲು ಇರುವ ಪೂರ್ವಭಾವಿ ನಿಯಮಗಳು” ಎಂಬ ಅಧ್ಯಾಯವನ್ನು ಓದಿದರು.

ಅದಕ್ಕೂ ಮುನ್ನ ಈ ದಿನ ಮಾಧ್ಯಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಚಿಂತಕ, ಬರಹಗಾರ ವಿಕಾಸ್ ಆರ್ ಮೌರ್ಯ ಮಾತನಾಡಿ, “ಡಿಜಿಟಲ್ ಸ್ಪೇಸ್‌ನಲ್ಲಿ ಅಂಬೇಡ್ಕರ್‌ರವರ ಚಿಂತನೆಗಳನ್ನು ನೆಲೆಗೊಳಿಸುವ ಈ ಪ್ರಯತ್ನ ಅಸಾಮಾನ್ಯವಾದುದು” ಎಂದರು.

ನಮ್ಮ ದೇಶಕ್ಕೆ ಅಂಟಿರುವ ಅಸ್ಪೃಶ್ಯತೆ ಮತ್ತು ಜಾತೀಯತೆಯ ಕಾರಣಕ್ಕೆ ಅಂಬೇಡ್ಕರ್‌ರನ್ನು ಮೂಲೆಗುಂಪು ಮಾಡಲಾಗಿತ್ತು. ಅವರು ನಿಧನರಾದ 10 ವರ್ಷಗಳ ನಂತರವಷ್ಟೆ 1966ರಲ್ಲಿ ಭಾರತೀಯ ಅಂಚೆ ಚೀಟಿಯಲ್ಲಿ ಅವರ ಭಾವಚಿತ್ರವನ್ನು ಒಳಗೊಳ್ಳಲಾಯಿತು. ಅಂಬೇಡ್ಕರ್‌ರವರಿಗೆ ಭಾರತ ರತ್ನ ಪ್ರಶಸ್ತ ಕೊಟ್ಟಿದ್ದು 1991ರಲ್ಲಿ. ಅವರ ಸಂಪೂರ್ಣ ಬರಹಗಳು ಮತ್ತು ಭಾಷಣಗಳನ್ನು 1991ರ ಇಸವಿಯಿಂದ ನಮಗೆ ತಲುಪಿದವು. 1916ರಿಂದಲೇ ಅಂಬೇಡ್ಕರ್ ಪ್ರಕಾರವಾಗಿ ಬರೆದಿದ್ದರು, 1936ರಲ್ಲಿಯೇ ಜಾತಿವಿನಾಶ ಕೃತಿ ರಚಿಸಿದ್ದರು. ಆದರೂ ಸಂವಿಧಾನ ಜಾರಿಯಾದ 41 ವರ್ಷದವರೆಗೂ ಅವರ ಬರಹಗಳನ್ನು ಸಾರ್ವಜನಿಕಗೊಳಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

21 ಸಂಪುಟಗಳಲ್ಲಿ ಅಂಬೇಡ್ಕರ್‌ರವರ ಬರಹಗಳು ಸಿಗುತ್ತಿವೆ. ಅವುಗಳನ್ನು ಆಡಿಯೋ ರೂಪದಲ್ಲಿ ಪ್ರತಿಯೊಂದು ಮನೆಮನೆಗೂ ತಲುಪಿಸುವ ಈ ಕೆಲಸ ಸಾಮಾನ್ಯವಾದುದ್ದಲ್ಲ. ಸೆಪ್ಟಂಬರ್ 09, 2020ರಿಂದ ಮೊದಲ ಕಂತು ಆರಂಭವಾಗಿ ಈಗ 500ನೇ ಸಂಚಿಕೆ ತಲುಪಿದ್ದೇವೆ. ಇದೊಂದು ಸಾಹಸವೇ ಆಗಿದೆ. ಜಾನಪದ, ಪುರಾಣ, ಭಜನೆ ಇತ್ಯಾದಿಗಳಲ್ಲಿ ಅಂಬೇಡ್ಕರ್‌ರವರನ್ನು ಹೇಗೆ ಕಾಣಲಾಗುತ್ತದೆ ಎಂದು ಅಧ್ಯಯನ ಮಾಡುತ್ತಿದ್ದ ಅರುಣ್ ಜೋಳದ ಕೂಡ್ಲಿಗಿಯರವರು ಈ ಕೆಲಸ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

ಡಿಜಿಟಲ್ ಮಾಧ್ಯಮದಲ್ಲಿ ಅಂಬೇಡ್ಕರ್‌ರನ್ನು ಕಾಣುವುದು ವಿರಳ. ಕೌಂಟರ್‌ ಕರೆಂಟ್ಸ್, ರೌಂಟ್‌ ಟೇಬಲ್ ನಂತಹ ಕೆಲವೇ ವೆಬ್‌ಸೈಟ್‌ಗಳು ಆ ಕೆಲಸ ಮಾಡುತ್ತಿವೆ. ನಮ್ಮ ಕರ್ನಾಟಕದಲ್ಲಿ ಈ ಓದು ಸರಣಿ ಆರಂಭವಾದ್ದರಿಂದ ನೇರವಾಗಿ ಅಂಬೇಡ್ಕರ್‌ರವರ ಬರಹ ಮತ್ತು ಭಾಷಣಗಳನ್ನು ನಮಗೆ ಸಿಗುತ್ತಿವೆ. ಈ ಪ್ರಯತ್ನ ಇಡೀ ದೇಶಕ್ಕೆ ಮೊಟ್ಟಮೊದಲ ಪ್ರಯತ್ನವಾಗಿದೆ. ಈ ಆಡಿಯೋ ಆರ್ಕೈವ್ ಸರಣಿಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡೋಣ. ಇದು ಮುಂದುವರೆಯಲಿ ಎಂದರು.

ಹೋರಾಟಗಾರ್ತಿ ದು.ಸರಸ್ವತಿಯವರು ಮಾತನಾಡಿ, “ಅಂಬೇಡ್ಕರ್‌ ಎಲ್ಲರಿಗೂ ದಕ್ಕುತ್ತಿದ್ದಾರೆ, ಇಂದಿಗೂ ನಮ್ಮೊಳಗೆ ಜೀವಂತವಿದ್ದಾರೆ. ಇನ್ನೂ ನೂರು ವರ್ಷ ಕಳೆದರೂ ಜೀವಂತವಾಗಿಯೇ ಇರುತ್ತಾರೆ. ಏಕೆಂದರೆ ಅಂಬೇಡ್ಕರ್ ಮಾಡಿರುವ ಕೆಲಸಗಳಿಗೆ ಎಂದಿಗೂ ಸಾವಿಲ್ಲ” ಎಂದರು.

“ಮಹಾರಾಷ್ಟ್ರದ ಸಂಶೋಧಕರಾದ ಉರ್ಮಿಳಾ ಪಾವರ್, ಮೀನಾಕ್ಷಿ ಮೂನ್‌ರವರು ಅಂಬೇಡ್ಕರ್‌ ಬಗ್ಗೆ ಹೆಚ್ಚು ತಿಳಿದುಕೊಳ್ಳಲು, ಓದಲು ಮುಂದಾದಾಗ ಅವರಿಗೆ ಕೊನೆಗೆ ಹೆಚ್ಚಿನ ಮಾಹಿತಿ ಸಿಕ್ಕಿದ್ದು ಅಂಬೇಡ್ಕರ್‌ರವರೆ ಹೊರತಂದಿದ್ದ ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳಿಂದ ಮಾತ್ರ. ಏಕೆಂದರೆ ಆ ಕಾಲದಲ್ಲಿಯೇ ಮುಖ್ಯವಾಹಿನಿ ಮಾಧ್ಯಮಗಳು ಅಂಬೇಡ್ಕರ್‌ರವರನ್ನು ನಿರ್ಲಕ್ಷಿಸಿದ್ದವು. ದಲಿತ ಚಳವಳಿ ದೇಶಾದ್ಯಂತ ಹರಡಿದ ಕಾರಣಕ್ಕೆ ಮಾತ್ರ ಅವರಿಗೆ ಭಾರತ ರತ್ನ ನೀಡಲಾಯಿತು” ಎಂದರು.

ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರು ಅಂಬೇಡ್ಕರ್ ಓದು ಕುರಿತು ಮಾತನಾಡಿದರು. ರಂಗಭೂಮಿ ಕಲಾವಿದರಾದ ರವಿಕಿರಣ್ ರಾಜೇಂದ್ರನ್ ಮತ್ತು ಅಶ್ವಿನಿ ಬೋಧ್ ತಮ್ಮ ಅನಿಸಿಕೆ ಹಂಚಿಕೊಂಡರು.

ಅಂಬೇಡ್ಕರ್‌ ಓದು ಅಭಿಯಾನದ ಎಲ್ಲಾ ಆಡಿಯೋಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: 100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಉಳಿವಿಗಾಗಿ dr b r ambedkar ಅವರನ್ನು ಎಳೆದು ತರಬೇಡಿ. ಸಿದ್ದರಾಮಯ್ಯ ನವರು ನಮಗೆ ಅಂಬೇಡ್ಕರನ್ನು ಪರಿಚಯಿಸಿ ಕೊಡುವ ಪ್ರಯತ್ನ ಮಾಡುವುದು ಬೇಡ. ಆತ ಮಹಾನ್ ವ್ಯಕ್ತಿ, ದೀನ ದಲಿತರಿಗೆ ತಮ್ಮ ಜೀವನವನ್ನೇ ಪಣವಾಗಿಟ್ಟ ದೇವರು. ಅಂಥ ವ್ಯಕ್ತಿಯನ್ನ ಸಿದ್ದರಾಮಯ್ಯ ನವರೂ ಪ್ರಚಾರಕ್ಕೆ ಬಳಿಸಿದ್ದು ಏಕೋ ಸರಿ ಕಾಣಿಸುತ್ತಿಲ್ಲ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....