Homeಚಳವಳಿಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

ಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರ ಮೂಲ ಬರಹಗಳು ಮತ್ತು ಭಾಷಣಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿ’ಯ 500ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಓದಿದ್ದಾರೆ.

ಈ ಕಾರ್ಯಕ್ರಮವನ್ನು ನಡೆಸುತ್ತಿರುವ ಡಾ.ಅರುಣ್ ಜೋಳದ ಕೂಡ್ಲಿಗಿ ಮತ್ತು ಅನೇಕ ವಿದ್ವಾಂಸರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ ಎಂಬ ಆತಂಕ ಅನೇಕರನ್ನು ಕಾಡುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಇದು ಸಾವಿರಾರು ಸಂಚಿಕೆಗಳನ್ನು ಕಾಣಲಿ ಎಂದು ಹಾರೈಸುತ್ತೇನೆ ಎಂದ ಸಿದ್ದರಾಮಯ್ಯನವರು, “ಪ್ರಜಾಪ್ರಭುತ್ವ ನ್ಯಾಯಪ್ರದವಾಗಿ ಕಾರ್ಯನಿರ್ವಹಿಸಲು ಇರುವ ಪೂರ್ವಭಾವಿ ನಿಯಮಗಳು” ಎಂಬ ಅಧ್ಯಾಯವನ್ನು ಓದಿದರು.

ಅದಕ್ಕೂ ಮುನ್ನ ಈ ದಿನ ಮಾಧ್ಯಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಚಿಂತಕ, ಬರಹಗಾರ ವಿಕಾಸ್ ಆರ್ ಮೌರ್ಯ ಮಾತನಾಡಿ, “ಡಿಜಿಟಲ್ ಸ್ಪೇಸ್‌ನಲ್ಲಿ ಅಂಬೇಡ್ಕರ್‌ರವರ ಚಿಂತನೆಗಳನ್ನು ನೆಲೆಗೊಳಿಸುವ ಈ ಪ್ರಯತ್ನ ಅಸಾಮಾನ್ಯವಾದುದು” ಎಂದರು.

ನಮ್ಮ ದೇಶಕ್ಕೆ ಅಂಟಿರುವ ಅಸ್ಪೃಶ್ಯತೆ ಮತ್ತು ಜಾತೀಯತೆಯ ಕಾರಣಕ್ಕೆ ಅಂಬೇಡ್ಕರ್‌ರನ್ನು ಮೂಲೆಗುಂಪು ಮಾಡಲಾಗಿತ್ತು. ಅವರು ನಿಧನರಾದ 10 ವರ್ಷಗಳ ನಂತರವಷ್ಟೆ 1966ರಲ್ಲಿ ಭಾರತೀಯ ಅಂಚೆ ಚೀಟಿಯಲ್ಲಿ ಅವರ ಭಾವಚಿತ್ರವನ್ನು ಒಳಗೊಳ್ಳಲಾಯಿತು. ಅಂಬೇಡ್ಕರ್‌ರವರಿಗೆ ಭಾರತ ರತ್ನ ಪ್ರಶಸ್ತ ಕೊಟ್ಟಿದ್ದು 1991ರಲ್ಲಿ. ಅವರ ಸಂಪೂರ್ಣ ಬರಹಗಳು ಮತ್ತು ಭಾಷಣಗಳನ್ನು 1991ರ ಇಸವಿಯಿಂದ ನಮಗೆ ತಲುಪಿದವು. 1916ರಿಂದಲೇ ಅಂಬೇಡ್ಕರ್ ಪ್ರಕಾರವಾಗಿ ಬರೆದಿದ್ದರು, 1936ರಲ್ಲಿಯೇ ಜಾತಿವಿನಾಶ ಕೃತಿ ರಚಿಸಿದ್ದರು. ಆದರೂ ಸಂವಿಧಾನ ಜಾರಿಯಾದ 41 ವರ್ಷದವರೆಗೂ ಅವರ ಬರಹಗಳನ್ನು ಸಾರ್ವಜನಿಕಗೊಳಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

21 ಸಂಪುಟಗಳಲ್ಲಿ ಅಂಬೇಡ್ಕರ್‌ರವರ ಬರಹಗಳು ಸಿಗುತ್ತಿವೆ. ಅವುಗಳನ್ನು ಆಡಿಯೋ ರೂಪದಲ್ಲಿ ಪ್ರತಿಯೊಂದು ಮನೆಮನೆಗೂ ತಲುಪಿಸುವ ಈ ಕೆಲಸ ಸಾಮಾನ್ಯವಾದುದ್ದಲ್ಲ. ಸೆಪ್ಟಂಬರ್ 09, 2020ರಿಂದ ಮೊದಲ ಕಂತು ಆರಂಭವಾಗಿ ಈಗ 500ನೇ ಸಂಚಿಕೆ ತಲುಪಿದ್ದೇವೆ. ಇದೊಂದು ಸಾಹಸವೇ ಆಗಿದೆ. ಜಾನಪದ, ಪುರಾಣ, ಭಜನೆ ಇತ್ಯಾದಿಗಳಲ್ಲಿ ಅಂಬೇಡ್ಕರ್‌ರವರನ್ನು ಹೇಗೆ ಕಾಣಲಾಗುತ್ತದೆ ಎಂದು ಅಧ್ಯಯನ ಮಾಡುತ್ತಿದ್ದ ಅರುಣ್ ಜೋಳದ ಕೂಡ್ಲಿಗಿಯರವರು ಈ ಕೆಲಸ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

ಡಿಜಿಟಲ್ ಮಾಧ್ಯಮದಲ್ಲಿ ಅಂಬೇಡ್ಕರ್‌ರನ್ನು ಕಾಣುವುದು ವಿರಳ. ಕೌಂಟರ್‌ ಕರೆಂಟ್ಸ್, ರೌಂಟ್‌ ಟೇಬಲ್ ನಂತಹ ಕೆಲವೇ ವೆಬ್‌ಸೈಟ್‌ಗಳು ಆ ಕೆಲಸ ಮಾಡುತ್ತಿವೆ. ನಮ್ಮ ಕರ್ನಾಟಕದಲ್ಲಿ ಈ ಓದು ಸರಣಿ ಆರಂಭವಾದ್ದರಿಂದ ನೇರವಾಗಿ ಅಂಬೇಡ್ಕರ್‌ರವರ ಬರಹ ಮತ್ತು ಭಾಷಣಗಳನ್ನು ನಮಗೆ ಸಿಗುತ್ತಿವೆ. ಈ ಪ್ರಯತ್ನ ಇಡೀ ದೇಶಕ್ಕೆ ಮೊಟ್ಟಮೊದಲ ಪ್ರಯತ್ನವಾಗಿದೆ. ಈ ಆಡಿಯೋ ಆರ್ಕೈವ್ ಸರಣಿಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡೋಣ. ಇದು ಮುಂದುವರೆಯಲಿ ಎಂದರು.

ಹೋರಾಟಗಾರ್ತಿ ದು.ಸರಸ್ವತಿಯವರು ಮಾತನಾಡಿ, “ಅಂಬೇಡ್ಕರ್‌ ಎಲ್ಲರಿಗೂ ದಕ್ಕುತ್ತಿದ್ದಾರೆ, ಇಂದಿಗೂ ನಮ್ಮೊಳಗೆ ಜೀವಂತವಿದ್ದಾರೆ. ಇನ್ನೂ ನೂರು ವರ್ಷ ಕಳೆದರೂ ಜೀವಂತವಾಗಿಯೇ ಇರುತ್ತಾರೆ. ಏಕೆಂದರೆ ಅಂಬೇಡ್ಕರ್ ಮಾಡಿರುವ ಕೆಲಸಗಳಿಗೆ ಎಂದಿಗೂ ಸಾವಿಲ್ಲ” ಎಂದರು.

“ಮಹಾರಾಷ್ಟ್ರದ ಸಂಶೋಧಕರಾದ ಉರ್ಮಿಳಾ ಪಾವರ್, ಮೀನಾಕ್ಷಿ ಮೂನ್‌ರವರು ಅಂಬೇಡ್ಕರ್‌ ಬಗ್ಗೆ ಹೆಚ್ಚು ತಿಳಿದುಕೊಳ್ಳಲು, ಓದಲು ಮುಂದಾದಾಗ ಅವರಿಗೆ ಕೊನೆಗೆ ಹೆಚ್ಚಿನ ಮಾಹಿತಿ ಸಿಕ್ಕಿದ್ದು ಅಂಬೇಡ್ಕರ್‌ರವರೆ ಹೊರತಂದಿದ್ದ ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳಿಂದ ಮಾತ್ರ. ಏಕೆಂದರೆ ಆ ಕಾಲದಲ್ಲಿಯೇ ಮುಖ್ಯವಾಹಿನಿ ಮಾಧ್ಯಮಗಳು ಅಂಬೇಡ್ಕರ್‌ರವರನ್ನು ನಿರ್ಲಕ್ಷಿಸಿದ್ದವು. ದಲಿತ ಚಳವಳಿ ದೇಶಾದ್ಯಂತ ಹರಡಿದ ಕಾರಣಕ್ಕೆ ಮಾತ್ರ ಅವರಿಗೆ ಭಾರತ ರತ್ನ ನೀಡಲಾಯಿತು” ಎಂದರು.

ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರು ಅಂಬೇಡ್ಕರ್ ಓದು ಕುರಿತು ಮಾತನಾಡಿದರು. ರಂಗಭೂಮಿ ಕಲಾವಿದರಾದ ರವಿಕಿರಣ್ ರಾಜೇಂದ್ರನ್ ಮತ್ತು ಅಶ್ವಿನಿ ಬೋಧ್ ತಮ್ಮ ಅನಿಸಿಕೆ ಹಂಚಿಕೊಂಡರು.

ಅಂಬೇಡ್ಕರ್‌ ಓದು ಅಭಿಯಾನದ ಎಲ್ಲಾ ಆಡಿಯೋಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: 100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಉಳಿವಿಗಾಗಿ dr b r ambedkar ಅವರನ್ನು ಎಳೆದು ತರಬೇಡಿ. ಸಿದ್ದರಾಮಯ್ಯ ನವರು ನಮಗೆ ಅಂಬೇಡ್ಕರನ್ನು ಪರಿಚಯಿಸಿ ಕೊಡುವ ಪ್ರಯತ್ನ ಮಾಡುವುದು ಬೇಡ. ಆತ ಮಹಾನ್ ವ್ಯಕ್ತಿ, ದೀನ ದಲಿತರಿಗೆ ತಮ್ಮ ಜೀವನವನ್ನೇ ಪಣವಾಗಿಟ್ಟ ದೇವರು. ಅಂಥ ವ್ಯಕ್ತಿಯನ್ನ ಸಿದ್ದರಾಮಯ್ಯ ನವರೂ ಪ್ರಚಾರಕ್ಕೆ ಬಳಿಸಿದ್ದು ಏಕೋ ಸರಿ ಕಾಣಿಸುತ್ತಿಲ್ಲ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...