Homeಚಳವಳಿಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

ಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರ ಮೂಲ ಬರಹಗಳು ಮತ್ತು ಭಾಷಣಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿ’ಯ 500ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಓದಿದ್ದಾರೆ.

ಈ ಕಾರ್ಯಕ್ರಮವನ್ನು ನಡೆಸುತ್ತಿರುವ ಡಾ.ಅರುಣ್ ಜೋಳದ ಕೂಡ್ಲಿಗಿ ಮತ್ತು ಅನೇಕ ವಿದ್ವಾಂಸರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ ಎಂಬ ಆತಂಕ ಅನೇಕರನ್ನು ಕಾಡುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಇದು ಸಾವಿರಾರು ಸಂಚಿಕೆಗಳನ್ನು ಕಾಣಲಿ ಎಂದು ಹಾರೈಸುತ್ತೇನೆ ಎಂದ ಸಿದ್ದರಾಮಯ್ಯನವರು, “ಪ್ರಜಾಪ್ರಭುತ್ವ ನ್ಯಾಯಪ್ರದವಾಗಿ ಕಾರ್ಯನಿರ್ವಹಿಸಲು ಇರುವ ಪೂರ್ವಭಾವಿ ನಿಯಮಗಳು” ಎಂಬ ಅಧ್ಯಾಯವನ್ನು ಓದಿದರು.

ಅದಕ್ಕೂ ಮುನ್ನ ಈ ದಿನ ಮಾಧ್ಯಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಚಿಂತಕ, ಬರಹಗಾರ ವಿಕಾಸ್ ಆರ್ ಮೌರ್ಯ ಮಾತನಾಡಿ, “ಡಿಜಿಟಲ್ ಸ್ಪೇಸ್‌ನಲ್ಲಿ ಅಂಬೇಡ್ಕರ್‌ರವರ ಚಿಂತನೆಗಳನ್ನು ನೆಲೆಗೊಳಿಸುವ ಈ ಪ್ರಯತ್ನ ಅಸಾಮಾನ್ಯವಾದುದು” ಎಂದರು.

ನಮ್ಮ ದೇಶಕ್ಕೆ ಅಂಟಿರುವ ಅಸ್ಪೃಶ್ಯತೆ ಮತ್ತು ಜಾತೀಯತೆಯ ಕಾರಣಕ್ಕೆ ಅಂಬೇಡ್ಕರ್‌ರನ್ನು ಮೂಲೆಗುಂಪು ಮಾಡಲಾಗಿತ್ತು. ಅವರು ನಿಧನರಾದ 10 ವರ್ಷಗಳ ನಂತರವಷ್ಟೆ 1966ರಲ್ಲಿ ಭಾರತೀಯ ಅಂಚೆ ಚೀಟಿಯಲ್ಲಿ ಅವರ ಭಾವಚಿತ್ರವನ್ನು ಒಳಗೊಳ್ಳಲಾಯಿತು. ಅಂಬೇಡ್ಕರ್‌ರವರಿಗೆ ಭಾರತ ರತ್ನ ಪ್ರಶಸ್ತ ಕೊಟ್ಟಿದ್ದು 1991ರಲ್ಲಿ. ಅವರ ಸಂಪೂರ್ಣ ಬರಹಗಳು ಮತ್ತು ಭಾಷಣಗಳನ್ನು 1991ರ ಇಸವಿಯಿಂದ ನಮಗೆ ತಲುಪಿದವು. 1916ರಿಂದಲೇ ಅಂಬೇಡ್ಕರ್ ಪ್ರಕಾರವಾಗಿ ಬರೆದಿದ್ದರು, 1936ರಲ್ಲಿಯೇ ಜಾತಿವಿನಾಶ ಕೃತಿ ರಚಿಸಿದ್ದರು. ಆದರೂ ಸಂವಿಧಾನ ಜಾರಿಯಾದ 41 ವರ್ಷದವರೆಗೂ ಅವರ ಬರಹಗಳನ್ನು ಸಾರ್ವಜನಿಕಗೊಳಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

21 ಸಂಪುಟಗಳಲ್ಲಿ ಅಂಬೇಡ್ಕರ್‌ರವರ ಬರಹಗಳು ಸಿಗುತ್ತಿವೆ. ಅವುಗಳನ್ನು ಆಡಿಯೋ ರೂಪದಲ್ಲಿ ಪ್ರತಿಯೊಂದು ಮನೆಮನೆಗೂ ತಲುಪಿಸುವ ಈ ಕೆಲಸ ಸಾಮಾನ್ಯವಾದುದ್ದಲ್ಲ. ಸೆಪ್ಟಂಬರ್ 09, 2020ರಿಂದ ಮೊದಲ ಕಂತು ಆರಂಭವಾಗಿ ಈಗ 500ನೇ ಸಂಚಿಕೆ ತಲುಪಿದ್ದೇವೆ. ಇದೊಂದು ಸಾಹಸವೇ ಆಗಿದೆ. ಜಾನಪದ, ಪುರಾಣ, ಭಜನೆ ಇತ್ಯಾದಿಗಳಲ್ಲಿ ಅಂಬೇಡ್ಕರ್‌ರವರನ್ನು ಹೇಗೆ ಕಾಣಲಾಗುತ್ತದೆ ಎಂದು ಅಧ್ಯಯನ ಮಾಡುತ್ತಿದ್ದ ಅರುಣ್ ಜೋಳದ ಕೂಡ್ಲಿಗಿಯರವರು ಈ ಕೆಲಸ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

ಡಿಜಿಟಲ್ ಮಾಧ್ಯಮದಲ್ಲಿ ಅಂಬೇಡ್ಕರ್‌ರನ್ನು ಕಾಣುವುದು ವಿರಳ. ಕೌಂಟರ್‌ ಕರೆಂಟ್ಸ್, ರೌಂಟ್‌ ಟೇಬಲ್ ನಂತಹ ಕೆಲವೇ ವೆಬ್‌ಸೈಟ್‌ಗಳು ಆ ಕೆಲಸ ಮಾಡುತ್ತಿವೆ. ನಮ್ಮ ಕರ್ನಾಟಕದಲ್ಲಿ ಈ ಓದು ಸರಣಿ ಆರಂಭವಾದ್ದರಿಂದ ನೇರವಾಗಿ ಅಂಬೇಡ್ಕರ್‌ರವರ ಬರಹ ಮತ್ತು ಭಾಷಣಗಳನ್ನು ನಮಗೆ ಸಿಗುತ್ತಿವೆ. ಈ ಪ್ರಯತ್ನ ಇಡೀ ದೇಶಕ್ಕೆ ಮೊಟ್ಟಮೊದಲ ಪ್ರಯತ್ನವಾಗಿದೆ. ಈ ಆಡಿಯೋ ಆರ್ಕೈವ್ ಸರಣಿಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡೋಣ. ಇದು ಮುಂದುವರೆಯಲಿ ಎಂದರು.

ಹೋರಾಟಗಾರ್ತಿ ದು.ಸರಸ್ವತಿಯವರು ಮಾತನಾಡಿ, “ಅಂಬೇಡ್ಕರ್‌ ಎಲ್ಲರಿಗೂ ದಕ್ಕುತ್ತಿದ್ದಾರೆ, ಇಂದಿಗೂ ನಮ್ಮೊಳಗೆ ಜೀವಂತವಿದ್ದಾರೆ. ಇನ್ನೂ ನೂರು ವರ್ಷ ಕಳೆದರೂ ಜೀವಂತವಾಗಿಯೇ ಇರುತ್ತಾರೆ. ಏಕೆಂದರೆ ಅಂಬೇಡ್ಕರ್ ಮಾಡಿರುವ ಕೆಲಸಗಳಿಗೆ ಎಂದಿಗೂ ಸಾವಿಲ್ಲ” ಎಂದರು.

“ಮಹಾರಾಷ್ಟ್ರದ ಸಂಶೋಧಕರಾದ ಉರ್ಮಿಳಾ ಪಾವರ್, ಮೀನಾಕ್ಷಿ ಮೂನ್‌ರವರು ಅಂಬೇಡ್ಕರ್‌ ಬಗ್ಗೆ ಹೆಚ್ಚು ತಿಳಿದುಕೊಳ್ಳಲು, ಓದಲು ಮುಂದಾದಾಗ ಅವರಿಗೆ ಕೊನೆಗೆ ಹೆಚ್ಚಿನ ಮಾಹಿತಿ ಸಿಕ್ಕಿದ್ದು ಅಂಬೇಡ್ಕರ್‌ರವರೆ ಹೊರತಂದಿದ್ದ ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳಿಂದ ಮಾತ್ರ. ಏಕೆಂದರೆ ಆ ಕಾಲದಲ್ಲಿಯೇ ಮುಖ್ಯವಾಹಿನಿ ಮಾಧ್ಯಮಗಳು ಅಂಬೇಡ್ಕರ್‌ರವರನ್ನು ನಿರ್ಲಕ್ಷಿಸಿದ್ದವು. ದಲಿತ ಚಳವಳಿ ದೇಶಾದ್ಯಂತ ಹರಡಿದ ಕಾರಣಕ್ಕೆ ಮಾತ್ರ ಅವರಿಗೆ ಭಾರತ ರತ್ನ ನೀಡಲಾಯಿತು” ಎಂದರು.

ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರು ಅಂಬೇಡ್ಕರ್ ಓದು ಕುರಿತು ಮಾತನಾಡಿದರು. ರಂಗಭೂಮಿ ಕಲಾವಿದರಾದ ರವಿಕಿರಣ್ ರಾಜೇಂದ್ರನ್ ಮತ್ತು ಅಶ್ವಿನಿ ಬೋಧ್ ತಮ್ಮ ಅನಿಸಿಕೆ ಹಂಚಿಕೊಂಡರು.

ಅಂಬೇಡ್ಕರ್‌ ಓದು ಅಭಿಯಾನದ ಎಲ್ಲಾ ಆಡಿಯೋಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: 100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಉಳಿವಿಗಾಗಿ dr b r ambedkar ಅವರನ್ನು ಎಳೆದು ತರಬೇಡಿ. ಸಿದ್ದರಾಮಯ್ಯ ನವರು ನಮಗೆ ಅಂಬೇಡ್ಕರನ್ನು ಪರಿಚಯಿಸಿ ಕೊಡುವ ಪ್ರಯತ್ನ ಮಾಡುವುದು ಬೇಡ. ಆತ ಮಹಾನ್ ವ್ಯಕ್ತಿ, ದೀನ ದಲಿತರಿಗೆ ತಮ್ಮ ಜೀವನವನ್ನೇ ಪಣವಾಗಿಟ್ಟ ದೇವರು. ಅಂಥ ವ್ಯಕ್ತಿಯನ್ನ ಸಿದ್ದರಾಮಯ್ಯ ನವರೂ ಪ್ರಚಾರಕ್ಕೆ ಬಳಿಸಿದ್ದು ಏಕೋ ಸರಿ ಕಾಣಿಸುತ್ತಿಲ್ಲ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...