Homeಚಳವಳಿಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

ಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರ ಮೂಲ ಬರಹಗಳು ಮತ್ತು ಭಾಷಣಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿ’ಯ 500ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಓದಿದ್ದಾರೆ.

ಈ ಕಾರ್ಯಕ್ರಮವನ್ನು ನಡೆಸುತ್ತಿರುವ ಡಾ.ಅರುಣ್ ಜೋಳದ ಕೂಡ್ಲಿಗಿ ಮತ್ತು ಅನೇಕ ವಿದ್ವಾಂಸರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ ಎಂಬ ಆತಂಕ ಅನೇಕರನ್ನು ಕಾಡುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಇದು ಸಾವಿರಾರು ಸಂಚಿಕೆಗಳನ್ನು ಕಾಣಲಿ ಎಂದು ಹಾರೈಸುತ್ತೇನೆ ಎಂದ ಸಿದ್ದರಾಮಯ್ಯನವರು, “ಪ್ರಜಾಪ್ರಭುತ್ವ ನ್ಯಾಯಪ್ರದವಾಗಿ ಕಾರ್ಯನಿರ್ವಹಿಸಲು ಇರುವ ಪೂರ್ವಭಾವಿ ನಿಯಮಗಳು” ಎಂಬ ಅಧ್ಯಾಯವನ್ನು ಓದಿದರು.

ಅದಕ್ಕೂ ಮುನ್ನ ಈ ದಿನ ಮಾಧ್ಯಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಚಿಂತಕ, ಬರಹಗಾರ ವಿಕಾಸ್ ಆರ್ ಮೌರ್ಯ ಮಾತನಾಡಿ, “ಡಿಜಿಟಲ್ ಸ್ಪೇಸ್‌ನಲ್ಲಿ ಅಂಬೇಡ್ಕರ್‌ರವರ ಚಿಂತನೆಗಳನ್ನು ನೆಲೆಗೊಳಿಸುವ ಈ ಪ್ರಯತ್ನ ಅಸಾಮಾನ್ಯವಾದುದು” ಎಂದರು.

ನಮ್ಮ ದೇಶಕ್ಕೆ ಅಂಟಿರುವ ಅಸ್ಪೃಶ್ಯತೆ ಮತ್ತು ಜಾತೀಯತೆಯ ಕಾರಣಕ್ಕೆ ಅಂಬೇಡ್ಕರ್‌ರನ್ನು ಮೂಲೆಗುಂಪು ಮಾಡಲಾಗಿತ್ತು. ಅವರು ನಿಧನರಾದ 10 ವರ್ಷಗಳ ನಂತರವಷ್ಟೆ 1966ರಲ್ಲಿ ಭಾರತೀಯ ಅಂಚೆ ಚೀಟಿಯಲ್ಲಿ ಅವರ ಭಾವಚಿತ್ರವನ್ನು ಒಳಗೊಳ್ಳಲಾಯಿತು. ಅಂಬೇಡ್ಕರ್‌ರವರಿಗೆ ಭಾರತ ರತ್ನ ಪ್ರಶಸ್ತ ಕೊಟ್ಟಿದ್ದು 1991ರಲ್ಲಿ. ಅವರ ಸಂಪೂರ್ಣ ಬರಹಗಳು ಮತ್ತು ಭಾಷಣಗಳನ್ನು 1991ರ ಇಸವಿಯಿಂದ ನಮಗೆ ತಲುಪಿದವು. 1916ರಿಂದಲೇ ಅಂಬೇಡ್ಕರ್ ಪ್ರಕಾರವಾಗಿ ಬರೆದಿದ್ದರು, 1936ರಲ್ಲಿಯೇ ಜಾತಿವಿನಾಶ ಕೃತಿ ರಚಿಸಿದ್ದರು. ಆದರೂ ಸಂವಿಧಾನ ಜಾರಿಯಾದ 41 ವರ್ಷದವರೆಗೂ ಅವರ ಬರಹಗಳನ್ನು ಸಾರ್ವಜನಿಕಗೊಳಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

21 ಸಂಪುಟಗಳಲ್ಲಿ ಅಂಬೇಡ್ಕರ್‌ರವರ ಬರಹಗಳು ಸಿಗುತ್ತಿವೆ. ಅವುಗಳನ್ನು ಆಡಿಯೋ ರೂಪದಲ್ಲಿ ಪ್ರತಿಯೊಂದು ಮನೆಮನೆಗೂ ತಲುಪಿಸುವ ಈ ಕೆಲಸ ಸಾಮಾನ್ಯವಾದುದ್ದಲ್ಲ. ಸೆಪ್ಟಂಬರ್ 09, 2020ರಿಂದ ಮೊದಲ ಕಂತು ಆರಂಭವಾಗಿ ಈಗ 500ನೇ ಸಂಚಿಕೆ ತಲುಪಿದ್ದೇವೆ. ಇದೊಂದು ಸಾಹಸವೇ ಆಗಿದೆ. ಜಾನಪದ, ಪುರಾಣ, ಭಜನೆ ಇತ್ಯಾದಿಗಳಲ್ಲಿ ಅಂಬೇಡ್ಕರ್‌ರವರನ್ನು ಹೇಗೆ ಕಾಣಲಾಗುತ್ತದೆ ಎಂದು ಅಧ್ಯಯನ ಮಾಡುತ್ತಿದ್ದ ಅರುಣ್ ಜೋಳದ ಕೂಡ್ಲಿಗಿಯರವರು ಈ ಕೆಲಸ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

ಡಿಜಿಟಲ್ ಮಾಧ್ಯಮದಲ್ಲಿ ಅಂಬೇಡ್ಕರ್‌ರನ್ನು ಕಾಣುವುದು ವಿರಳ. ಕೌಂಟರ್‌ ಕರೆಂಟ್ಸ್, ರೌಂಟ್‌ ಟೇಬಲ್ ನಂತಹ ಕೆಲವೇ ವೆಬ್‌ಸೈಟ್‌ಗಳು ಆ ಕೆಲಸ ಮಾಡುತ್ತಿವೆ. ನಮ್ಮ ಕರ್ನಾಟಕದಲ್ಲಿ ಈ ಓದು ಸರಣಿ ಆರಂಭವಾದ್ದರಿಂದ ನೇರವಾಗಿ ಅಂಬೇಡ್ಕರ್‌ರವರ ಬರಹ ಮತ್ತು ಭಾಷಣಗಳನ್ನು ನಮಗೆ ಸಿಗುತ್ತಿವೆ. ಈ ಪ್ರಯತ್ನ ಇಡೀ ದೇಶಕ್ಕೆ ಮೊಟ್ಟಮೊದಲ ಪ್ರಯತ್ನವಾಗಿದೆ. ಈ ಆಡಿಯೋ ಆರ್ಕೈವ್ ಸರಣಿಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡೋಣ. ಇದು ಮುಂದುವರೆಯಲಿ ಎಂದರು.

ಹೋರಾಟಗಾರ್ತಿ ದು.ಸರಸ್ವತಿಯವರು ಮಾತನಾಡಿ, “ಅಂಬೇಡ್ಕರ್‌ ಎಲ್ಲರಿಗೂ ದಕ್ಕುತ್ತಿದ್ದಾರೆ, ಇಂದಿಗೂ ನಮ್ಮೊಳಗೆ ಜೀವಂತವಿದ್ದಾರೆ. ಇನ್ನೂ ನೂರು ವರ್ಷ ಕಳೆದರೂ ಜೀವಂತವಾಗಿಯೇ ಇರುತ್ತಾರೆ. ಏಕೆಂದರೆ ಅಂಬೇಡ್ಕರ್ ಮಾಡಿರುವ ಕೆಲಸಗಳಿಗೆ ಎಂದಿಗೂ ಸಾವಿಲ್ಲ” ಎಂದರು.

“ಮಹಾರಾಷ್ಟ್ರದ ಸಂಶೋಧಕರಾದ ಉರ್ಮಿಳಾ ಪಾವರ್, ಮೀನಾಕ್ಷಿ ಮೂನ್‌ರವರು ಅಂಬೇಡ್ಕರ್‌ ಬಗ್ಗೆ ಹೆಚ್ಚು ತಿಳಿದುಕೊಳ್ಳಲು, ಓದಲು ಮುಂದಾದಾಗ ಅವರಿಗೆ ಕೊನೆಗೆ ಹೆಚ್ಚಿನ ಮಾಹಿತಿ ಸಿಕ್ಕಿದ್ದು ಅಂಬೇಡ್ಕರ್‌ರವರೆ ಹೊರತಂದಿದ್ದ ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳಿಂದ ಮಾತ್ರ. ಏಕೆಂದರೆ ಆ ಕಾಲದಲ್ಲಿಯೇ ಮುಖ್ಯವಾಹಿನಿ ಮಾಧ್ಯಮಗಳು ಅಂಬೇಡ್ಕರ್‌ರವರನ್ನು ನಿರ್ಲಕ್ಷಿಸಿದ್ದವು. ದಲಿತ ಚಳವಳಿ ದೇಶಾದ್ಯಂತ ಹರಡಿದ ಕಾರಣಕ್ಕೆ ಮಾತ್ರ ಅವರಿಗೆ ಭಾರತ ರತ್ನ ನೀಡಲಾಯಿತು” ಎಂದರು.

ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರು ಅಂಬೇಡ್ಕರ್ ಓದು ಕುರಿತು ಮಾತನಾಡಿದರು. ರಂಗಭೂಮಿ ಕಲಾವಿದರಾದ ರವಿಕಿರಣ್ ರಾಜೇಂದ್ರನ್ ಮತ್ತು ಅಶ್ವಿನಿ ಬೋಧ್ ತಮ್ಮ ಅನಿಸಿಕೆ ಹಂಚಿಕೊಂಡರು.

ಅಂಬೇಡ್ಕರ್‌ ಓದು ಅಭಿಯಾನದ ಎಲ್ಲಾ ಆಡಿಯೋಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: 100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಉಳಿವಿಗಾಗಿ dr b r ambedkar ಅವರನ್ನು ಎಳೆದು ತರಬೇಡಿ. ಸಿದ್ದರಾಮಯ್ಯ ನವರು ನಮಗೆ ಅಂಬೇಡ್ಕರನ್ನು ಪರಿಚಯಿಸಿ ಕೊಡುವ ಪ್ರಯತ್ನ ಮಾಡುವುದು ಬೇಡ. ಆತ ಮಹಾನ್ ವ್ಯಕ್ತಿ, ದೀನ ದಲಿತರಿಗೆ ತಮ್ಮ ಜೀವನವನ್ನೇ ಪಣವಾಗಿಟ್ಟ ದೇವರು. ಅಂಥ ವ್ಯಕ್ತಿಯನ್ನ ಸಿದ್ದರಾಮಯ್ಯ ನವರೂ ಪ್ರಚಾರಕ್ಕೆ ಬಳಿಸಿದ್ದು ಏಕೋ ಸರಿ ಕಾಣಿಸುತ್ತಿಲ್ಲ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...