ಉಪಚುನಾವಣೆಯ ಸೋಲನ್ನು ಒಪ್ಪಿಕೊಂಡು ಕಾಂಗ್ರೆಸ್ ಶಾಸಕಾಂಗ ನಾಯಕತ್ವ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
I respect the mandate given by the electorate in the #KarnatakaBypolls. I expected people to teach @BJP4Karnataka leaders a great lesson for orchestrating #OpertionKamala.
I am taking the moral responsibility & resigning as Leader of CLP & Leader of Opposition. pic.twitter.com/AaG9Xl3SdP
— Siddaramaiah (@siddaramaiah) December 9, 2019
ನಾನು ಜನರ ಆದೇಶವನ್ನು ಗೌರವಿಸುತ್ತೇನೆ. ಆಪರೇಷನ್ ಕಮಲದ ಪಿತಾಮಹಾರಾದ ಬಿಜೆಪಿ ನಾಯಕರಿಗೆ ಮತದಾರರು ಪಾಠ ಕಲಿಸುತ್ತಾರೆ ಎಂದು ಭಾವಿಸಿದ್ದೆ ಆದರೆ ಹಾಗಾಗಲಿಲ್ಲ. ಹಾಗಾಗಿ ನಾನು ಈ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ನಾಯಕತ್ವ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.
Siddaramaiah, Congress: I have also resigned as leader of opposition in Karnataka Assembly. https://t.co/uBdpfo67C8
— ANI (@ANI) December 9, 2019
ಇಂದು ಬಂದ ಫಲಿತಾಂಶದಲ್ಲಿ ಕಾಂಗ್ರೆಸ್ ಕೇವಲ ಎರಡು ಸ್ಥಾನಗಳಲ್ಲಿ ಮಾತ್ರ ಗೆಲ್ಲುವು ಮೂಲಕ ಉಳಿದ 13 ಕ್ಷೇತ್ರಗಳಲ್ಲಿಯೂ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಹಾಗಾಗಿ ನೈತಿಕ ಹೊಣೆ ಹೊತ್ತು ತಾನು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.