Homeಮುಖಪುಟಸಿ.ಟಿ ರವಿಯವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ: ಸಿದ್ದರಾಮಯ್ಯ

ಸಿ.ಟಿ ರವಿಯವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ: ಸಿದ್ದರಾಮಯ್ಯ

- Advertisement -
- Advertisement -

ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಸಿ.ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ವಿಚಾರದ ಕುರಿತು ಸರಣ ಟ್ವೀಟ್ ಮಾಡಿರುವ ಅವರು, “ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ” ಎಂದಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ ರವಿಯವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಸಿದ್ದರಾಯ್ಯ ಕಿಡಿಕಾರಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ ರವಿಯವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 19ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, “ಕಾಂಗ್ರೆಸ್‌ನವರು ತಿಂದರೆ ಮಾಂಸ, ಬಿಜೆಪಿಗರು ತಿಂದರೆ ಮಾಂಸವೂ ಕ್ಯಾರೆಟ್ ಹಲ್ವಾದಂತಾಗುತ್ತದೆಯೇ? ಮಾಂಸದೂಟ ಸೇವಿಸಿ ಹನುಮನ ದೇವಸ್ಥಾನಕ್ಕೆ ಹೋಗಿದ್ದ ಸಿ.ಟಿ.ರವಿಯವರು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಬಾಯಿ ಬಡಿದುಕೊಳ್ಳುತ್ತಿಲ್ಲವೇಕೆ? ಈಗ ದೇವಾಲಯ ಮೈಲಿಗೆಯಾಗಿಲ್ಲವೇ? ಗೋಮೂತ್ರ ಎರಚುವುದಿಲ್ಲವೇ?” ಎಂದು ಕೇಳಿತ್ತು.

ತಲೆಗೆ ಸುರಿದ ನೀರು ಕಾಲಿಗೆ ಬರಲೇಬೇಕಲ್ಲ, ರವಿಯವರೆ! ಬರೀ ಇಂತಹ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಮುಖ್ಯ ಸಂಗತಿಗಳಿಂದ ಜನರನ್ನು ವಿಮುಖರನ್ನಾಗಿಸುತ್ತಿದ್ದ ಬಿಜೆಪಿಯ ‘ಹುರಿಯಾಳು’ ಈ ಪರಿಸ್ಥಿತಿಯಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಏನು ಹೇಳುತ್ತಿದೆ? ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’, ಎಂಬಂತಾಗಲಿಲ್ಲವೆ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಅಂದಹಾಗೆ, ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ ಎಂದು ತನ್ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮಾಂಸಾಹಾರದ ಪರ ಸಿ.ಟಿ.ರವಿ ಬ್ಯಾಟಿಂಗ್; ಕಾಂಗ್ರೆಸ್‌, ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...