Homeಮುಖಪುಟಸಿ.ಟಿ ರವಿಯವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ: ಸಿದ್ದರಾಮಯ್ಯ

ಸಿ.ಟಿ ರವಿಯವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ: ಸಿದ್ದರಾಮಯ್ಯ

- Advertisement -
- Advertisement -

ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಸಿ.ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ವಿಚಾರದ ಕುರಿತು ಸರಣ ಟ್ವೀಟ್ ಮಾಡಿರುವ ಅವರು, “ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ” ಎಂದಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ ರವಿಯವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಸಿದ್ದರಾಯ್ಯ ಕಿಡಿಕಾರಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ ರವಿಯವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 19ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, “ಕಾಂಗ್ರೆಸ್‌ನವರು ತಿಂದರೆ ಮಾಂಸ, ಬಿಜೆಪಿಗರು ತಿಂದರೆ ಮಾಂಸವೂ ಕ್ಯಾರೆಟ್ ಹಲ್ವಾದಂತಾಗುತ್ತದೆಯೇ? ಮಾಂಸದೂಟ ಸೇವಿಸಿ ಹನುಮನ ದೇವಸ್ಥಾನಕ್ಕೆ ಹೋಗಿದ್ದ ಸಿ.ಟಿ.ರವಿಯವರು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಬಾಯಿ ಬಡಿದುಕೊಳ್ಳುತ್ತಿಲ್ಲವೇಕೆ? ಈಗ ದೇವಾಲಯ ಮೈಲಿಗೆಯಾಗಿಲ್ಲವೇ? ಗೋಮೂತ್ರ ಎರಚುವುದಿಲ್ಲವೇ?” ಎಂದು ಕೇಳಿತ್ತು.

ತಲೆಗೆ ಸುರಿದ ನೀರು ಕಾಲಿಗೆ ಬರಲೇಬೇಕಲ್ಲ, ರವಿಯವರೆ! ಬರೀ ಇಂತಹ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಮುಖ್ಯ ಸಂಗತಿಗಳಿಂದ ಜನರನ್ನು ವಿಮುಖರನ್ನಾಗಿಸುತ್ತಿದ್ದ ಬಿಜೆಪಿಯ ‘ಹುರಿಯಾಳು’ ಈ ಪರಿಸ್ಥಿತಿಯಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಏನು ಹೇಳುತ್ತಿದೆ? ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’, ಎಂಬಂತಾಗಲಿಲ್ಲವೆ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಅಂದಹಾಗೆ, ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ ಎಂದು ತನ್ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮಾಂಸಾಹಾರದ ಪರ ಸಿ.ಟಿ.ರವಿ ಬ್ಯಾಟಿಂಗ್; ಕಾಂಗ್ರೆಸ್‌, ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...