Homeಮುಖಪುಟಸಿ.ಟಿ ರವಿಯವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ: ಸಿದ್ದರಾಮಯ್ಯ

ಸಿ.ಟಿ ರವಿಯವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ: ಸಿದ್ದರಾಮಯ್ಯ

- Advertisement -
- Advertisement -

ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಸಿ.ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ವಿಚಾರದ ಕುರಿತು ಸರಣ ಟ್ವೀಟ್ ಮಾಡಿರುವ ಅವರು, “ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ” ಎಂದಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ ರವಿಯವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಸಿದ್ದರಾಯ್ಯ ಕಿಡಿಕಾರಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ ರವಿಯವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 19ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, “ಕಾಂಗ್ರೆಸ್‌ನವರು ತಿಂದರೆ ಮಾಂಸ, ಬಿಜೆಪಿಗರು ತಿಂದರೆ ಮಾಂಸವೂ ಕ್ಯಾರೆಟ್ ಹಲ್ವಾದಂತಾಗುತ್ತದೆಯೇ? ಮಾಂಸದೂಟ ಸೇವಿಸಿ ಹನುಮನ ದೇವಸ್ಥಾನಕ್ಕೆ ಹೋಗಿದ್ದ ಸಿ.ಟಿ.ರವಿಯವರು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಬಾಯಿ ಬಡಿದುಕೊಳ್ಳುತ್ತಿಲ್ಲವೇಕೆ? ಈಗ ದೇವಾಲಯ ಮೈಲಿಗೆಯಾಗಿಲ್ಲವೇ? ಗೋಮೂತ್ರ ಎರಚುವುದಿಲ್ಲವೇ?” ಎಂದು ಕೇಳಿತ್ತು.

ತಲೆಗೆ ಸುರಿದ ನೀರು ಕಾಲಿಗೆ ಬರಲೇಬೇಕಲ್ಲ, ರವಿಯವರೆ! ಬರೀ ಇಂತಹ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಮುಖ್ಯ ಸಂಗತಿಗಳಿಂದ ಜನರನ್ನು ವಿಮುಖರನ್ನಾಗಿಸುತ್ತಿದ್ದ ಬಿಜೆಪಿಯ ‘ಹುರಿಯಾಳು’ ಈ ಪರಿಸ್ಥಿತಿಯಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಏನು ಹೇಳುತ್ತಿದೆ? ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’, ಎಂಬಂತಾಗಲಿಲ್ಲವೆ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಅಂದಹಾಗೆ, ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ ಎಂದು ತನ್ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಮಾಂಸಾಹಾರದ ಪರ ಸಿ.ಟಿ.ರವಿ ಬ್ಯಾಟಿಂಗ್; ಕಾಂಗ್ರೆಸ್‌, ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...