Homeಕರ್ನಾಟಕಯಾತ್ರೆಯಲ್ಲಿ ಕಾರ್ಯಕರ್ತನಿಗೆ ಥಳಿತ - ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್ ಎಂದ ಸಿದ್ದರಾಮಯ್ಯ

ಯಾತ್ರೆಯಲ್ಲಿ ಕಾರ್ಯಕರ್ತನಿಗೆ ಥಳಿತ – ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್ ಎಂದ ಸಿದ್ದರಾಮಯ್ಯ

ಇದು ವಿಕೋಪಕ್ಕೆ ಹೋಗಿ ಜನರೇ ಪೊಲೀಸರ ವಿರುದ್ಧ ತಿರುಗಿ ಬೀಳುವಂತಹ ಪರಿಸ್ಥಿತಿಯನ್ನು ದಯವಿಟ್ಟು ಸೃಷ್ಟಿ ಮಾಡಬೇಡಿ ಎಂದು ಅವರು ಎಚ್ಚರಿಸಿದ್ದಾರೆ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ‌ ಐಕ್ಯತಾ ಯಾತ್ರೆ’ಯಲ್ಲಿ #PayCM ಬಾವುಟ ಮತ್ತು ಟಿ ಶರ್ಟ್ ಧರಿಸಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತನಿಗೆ ಪೊಲೀಸರು ಹಲ್ಲೆ ನಡೆಸಿರುವುದನ್ನು ವಿಪಕ್ಷ ನಾಯಕ ಶನಿವಾರ ಖಂಡಿಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ ಆಕ್ರೊಶ ವ್ಯಕ್ತಪಡಿಸಿದ್ದು, “#PayCM ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಬೀದಿ ಗೂಂಡಾನಂತೆ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ. ಈ‌ ಪುಂಡ ಪೋಲಿಸನನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ರಾಜ್ಯ ಮುಖ್ಯಮಂತ್ರಿಯವರನ್ನು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್. ಕರ್ನಾಟಕದಲ್ಲಿ ಯುಪಿ ಮಾದರಿ ಆಡಳಿತ ತರುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದರು. ಪೊಲೀಸರು ಅದನ್ನು ಅನುಷ್ಠಾನಗೊಳಿಸಲು ಹೊರಟಂತಿದೆ. 40% ಕಮಿಷನ್ಭ್ರ ಷ್ಟಾಚಾರದ ವಿರುದ್ಧದ ನಮ್ಮ ಪಕ್ಷದ ಅಭಿಯಾನವನ್ನು ಎದುರಿಸುವ ಧಮ್ಮು-ತಾಕತ್‌ ರಾಜ್ಯದ ಬಿಜೆಪಿ ಪಕ್ಷಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದೆ ಬಿಜೆಪಿ ಪೊಲೀಸರ ಮೂಲಕ ದಮನಿಸುವ ಹೇಡಿತನಕ್ಕೆ ಇಳಿದಿದೆ” ಎಂದು ಅವರು ಕಿಡಿ ಕಾರಿದ್ದಾರೆ.

ಭ್ರಷ್ಟಾಚಾರದ ವಿರುದ್ಧದ ಅಭಿಯಾನ ಅಪರಾಧ ಎಂದು ಯಾವ ಕಾನೂನಿನಲ್ಲಿ ಹೇಳಿದೆ? ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. “ನಮ್ಮ ವಿರುದ್ಧ ಕೊಳಕು ಭಾಷೆಯ ಜಾಹೀರಾತು ನೀಡಿದ್ದೀರಿ, ಅದನ್ನು ನಾವು ಹರಿದುಹಾಕಲು ಹೋಗುವುದಿಲ್ಲ. ರಾಜಕೀಯವಾಗಿಯೇ ಎದುರಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

“ಕಳೆದ ಕೆಲವು ದಿನಗಳಿಂದ ರಾಜ್ಯದ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಶುರುಮಾಡಿದ್ದಾರೆ. ಇದು ವಿಕೋಪಕ್ಕೆ ಹೋಗಿ ಜನರೇ ಪೊಲೀಸರ ವಿರುದ್ಧ ತಿರುಗಿ ಬೀಳುವಂತಹ ಪರಿಸ್ಥಿತಿಯನ್ನು ದಯವಿಟ್ಟು ಸೃಷ್ಟಿ ಮಾಡಬೇಡಿ” ಎಂದು ಅವರು ಎಚ್ಚರಿಸಿದ್ದಾರೆ.

“ಕರ್ನಾಟಕ ಶಾಂತಿಪ್ರಿಯರ ನಾಡು, ಇದನ್ನು ಪೊಲೀಸ್ ರಾಜ್ಯ ಮಾಡಲು ಹೋಗಬೇಡಿ. ಯಾವ ಸರ್ಕಾರವೂ ಶಾಶ್ವತ ಅಲ್ಲ, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾದೀತು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

🛑 Live | ಕರ್ನಾಟಕದಲ್ಲಿ ‘ಭಾರತ ಐಕ್ಯತಾ ಯಾತ್ರೆ’ಯ ಲೈವ್ ಅಪ್‌ಡೇಟ್‌‌ಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....