Homeಕರ್ನಾಟಕಯಾತ್ರೆಯಲ್ಲಿ ಕಾರ್ಯಕರ್ತನಿಗೆ ಥಳಿತ - ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್ ಎಂದ ಸಿದ್ದರಾಮಯ್ಯ

ಯಾತ್ರೆಯಲ್ಲಿ ಕಾರ್ಯಕರ್ತನಿಗೆ ಥಳಿತ – ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್ ಎಂದ ಸಿದ್ದರಾಮಯ್ಯ

ಇದು ವಿಕೋಪಕ್ಕೆ ಹೋಗಿ ಜನರೇ ಪೊಲೀಸರ ವಿರುದ್ಧ ತಿರುಗಿ ಬೀಳುವಂತಹ ಪರಿಸ್ಥಿತಿಯನ್ನು ದಯವಿಟ್ಟು ಸೃಷ್ಟಿ ಮಾಡಬೇಡಿ ಎಂದು ಅವರು ಎಚ್ಚರಿಸಿದ್ದಾರೆ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ‌ ಐಕ್ಯತಾ ಯಾತ್ರೆ’ಯಲ್ಲಿ #PayCM ಬಾವುಟ ಮತ್ತು ಟಿ ಶರ್ಟ್ ಧರಿಸಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತನಿಗೆ ಪೊಲೀಸರು ಹಲ್ಲೆ ನಡೆಸಿರುವುದನ್ನು ವಿಪಕ್ಷ ನಾಯಕ ಶನಿವಾರ ಖಂಡಿಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ ಆಕ್ರೊಶ ವ್ಯಕ್ತಪಡಿಸಿದ್ದು, “#PayCM ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಬೀದಿ ಗೂಂಡಾನಂತೆ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ. ಈ‌ ಪುಂಡ ಪೋಲಿಸನನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ರಾಜ್ಯ ಮುಖ್ಯಮಂತ್ರಿಯವರನ್ನು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್. ಕರ್ನಾಟಕದಲ್ಲಿ ಯುಪಿ ಮಾದರಿ ಆಡಳಿತ ತರುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದರು. ಪೊಲೀಸರು ಅದನ್ನು ಅನುಷ್ಠಾನಗೊಳಿಸಲು ಹೊರಟಂತಿದೆ. 40% ಕಮಿಷನ್ಭ್ರ ಷ್ಟಾಚಾರದ ವಿರುದ್ಧದ ನಮ್ಮ ಪಕ್ಷದ ಅಭಿಯಾನವನ್ನು ಎದುರಿಸುವ ಧಮ್ಮು-ತಾಕತ್‌ ರಾಜ್ಯದ ಬಿಜೆಪಿ ಪಕ್ಷಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದೆ ಬಿಜೆಪಿ ಪೊಲೀಸರ ಮೂಲಕ ದಮನಿಸುವ ಹೇಡಿತನಕ್ಕೆ ಇಳಿದಿದೆ” ಎಂದು ಅವರು ಕಿಡಿ ಕಾರಿದ್ದಾರೆ.

ಭ್ರಷ್ಟಾಚಾರದ ವಿರುದ್ಧದ ಅಭಿಯಾನ ಅಪರಾಧ ಎಂದು ಯಾವ ಕಾನೂನಿನಲ್ಲಿ ಹೇಳಿದೆ? ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. “ನಮ್ಮ ವಿರುದ್ಧ ಕೊಳಕು ಭಾಷೆಯ ಜಾಹೀರಾತು ನೀಡಿದ್ದೀರಿ, ಅದನ್ನು ನಾವು ಹರಿದುಹಾಕಲು ಹೋಗುವುದಿಲ್ಲ. ರಾಜಕೀಯವಾಗಿಯೇ ಎದುರಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

“ಕಳೆದ ಕೆಲವು ದಿನಗಳಿಂದ ರಾಜ್ಯದ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಶುರುಮಾಡಿದ್ದಾರೆ. ಇದು ವಿಕೋಪಕ್ಕೆ ಹೋಗಿ ಜನರೇ ಪೊಲೀಸರ ವಿರುದ್ಧ ತಿರುಗಿ ಬೀಳುವಂತಹ ಪರಿಸ್ಥಿತಿಯನ್ನು ದಯವಿಟ್ಟು ಸೃಷ್ಟಿ ಮಾಡಬೇಡಿ” ಎಂದು ಅವರು ಎಚ್ಚರಿಸಿದ್ದಾರೆ.

“ಕರ್ನಾಟಕ ಶಾಂತಿಪ್ರಿಯರ ನಾಡು, ಇದನ್ನು ಪೊಲೀಸ್ ರಾಜ್ಯ ಮಾಡಲು ಹೋಗಬೇಡಿ. ಯಾವ ಸರ್ಕಾರವೂ ಶಾಶ್ವತ ಅಲ್ಲ, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾದೀತು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

🛑 Live | ಕರ್ನಾಟಕದಲ್ಲಿ ‘ಭಾರತ ಐಕ್ಯತಾ ಯಾತ್ರೆ’ಯ ಲೈವ್ ಅಪ್‌ಡೇಟ್‌‌ಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....