Homeಕರ್ನಾಟಕಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

“ವಿರೋಧ ಪಕ್ಷದ ನಾಯಕರು ಮಾತನಾಡುತ್ತಾರೆ ಎಂದು ನೆಹರೂ ಅವರು ಪಾರ್ಲಿಮೆಂಟ್‌ಗೆ ಗೈರು ಹಾಜರಾಗುತ್ತಿರಲಿಲ್ಲ. ಈ ಎದೆಗಾರಿಕೆ ಈಗಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಏಕಿಲ್ಲ?”

- Advertisement -
- Advertisement -

ಆರ್‌ಎಸ್‌ಎಸ್ ಈ ದೇಶದ್ದಾ? ಅವರೇನು ದ್ರಾವಿಡರಾ? ದ್ರಾವಿಡರು ಈ ದೇಶದವರು. ಇದನ್ನೆಲ್ಲಾ ಪ್ರಶ್ನಿಸುತ್ತಾ ಹೋದರೆ ಏನಾಗುತ್ತದೆ ಗೊತ್ತಾ? ಅದಕ್ಕೆ ಚರಿತ್ರೆಯನ್ನು ಕೆದಕಲು ಹೋಗಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಮಾಜಿ ಪ್ರಧಾನಿ ದಿವಂಗತ ಜವಾಹರ್‌ಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು, “ಚರಿತ್ರೆ ಗೊತ್ತಿಲ್ಲದವರು ಭವಿಷ್ಯ ರೂಪಿಸಲಾರರು” ಎಂದು ಹೇಳಿದ್ದರು. ಯುವಕರು, ದ್ರಾವಿಡರು, ದುಡಿಯುವ ಜನ ಸಮುದಾಯಗಳು ಈ ದೇಶದ ನಿಜವಾದ ಚರಿತ್ರೆ ಓದಬೇಕು. ನಿಜವಾದ ಚರಿತ್ರೆಯನ್ನು ಅರಿತುಕೊಂಡರೆ ಏನಾಗಬಹುದು ಎನ್ನುವುದು ಆರ್ ಎಸ್‌ಎಸ್ ನವರಿಗೆ ಗೊತ್ತಿದೆ ಮತ್ತು ನಿಜವಾದ ಚರಿತ್ರೆ ಬಗ್ಗೆ ಅವರಿಗೆ ಭಯವಿದೆ. ಈ ಕಾರಣಕ್ಕೇ ಇತಿಹಾಸವನ್ನು ತಿರುಚುತ್ತಾರೆ. ಪಠ್ಯ ಪುಸ್ತಕಗಳ ಸಮಿತಿಗೆ ಚಕ್ರತೀರ್ಥನಂತವರನ್ನು ಹಾಕುವುದೇ ಈ ಉದ್ದೇಶಗಳಿಗೆ ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಎನ್ನುವ ಒಬ್ಬನಿಗೆ ಮಕ್ಕಳ ಪಠ್ಯ ಪುಸ್ತಕ ರೂಪಿಸುವ ಜವಾಬ್ದಾರಿ ನೀಡಲಾಗಿದೆ. ಇದಕ್ಕಿಂತ ಮೂರ್ಖತನವನ್ನು ನಾನು ನೋಡಿಲ್ಲ. ಈತ ಹೆಡಗೇವಾರ್‌ಗಿಂತ ಒಂದು ಹೆಜ್ಜೆ ಮುಂದಿದ್ದಾನೆ. ಅಪ್ರತಿಮ ದೇಶಭಕ್ತ ಭಗತ್‌ಸಿಂಗ್ ಪಠ್ಯವನ್ನು ತೆಗೆದು ಹೆಡಗೇವಾರ್ ಭಾಷಣ ಹಾಕಿದ್ದಾನೆ. ಭಗತ್‌ಸಿಂಗ್ ಗಿಂತ ದೇಶಭಕ್ತ ಬೇಕಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಬ್ರಾಹ್ಮಣ್ಯ ಯಾಜಮಾನ್ಯ ಉಳಿಸಿಕೊಳ್ಳುವ ಹುನ್ನಾರ; ಸುಳ್ಳು ಸಮರ್ಥನೆಗಿಳಿದ ಸಚಿವ ಬಿ.ಸಿ ನಾಗೇಶ್

ಪಂಡಿತ್ ಜವಾಹರಲಾಲ್ ನೆಹರೂ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಪ್ರಜಾತಂತ್ರದ ಆಧಾರದಲ್ಲಿ ದೇಶವನ್ನು ಕಟ್ಟಿ ನಿಲ್ಲಿಸಿದ್ದು ಮಾತ್ರವಲ್ಲದೆ, ಪ್ರಜಾಪ್ರಭುತ್ವದ ಬೇರುಗಳು ದೇಶದಲ್ಲಿ ಆಳವಾಗಿ ಬೇರೂರಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡರು. ಸಂವಿಧಾನ ಬದ್ದವಾದ ಸಂಸ್ಥೆಗಳನ್ನು ರೂಪಿಸಿ ಅವುಗಳಿಗೆ ಶಕ್ತಿ ತುಂಬಿದರು. ಹೀಗಾಗಿ ದೇಶ ಈ ಮಟ್ಟದ ಪ್ರಗತಿ ಪಥದಲ್ಲಿ ಮುನ್ನಡೆದು ಬರಲು ಸಾಧ್ಯವಾಯಿತು ಎಂದು ತಿಳಿಸಿದರು.

ಬ್ರಿಟಿಷರು ಭಾರತ ಬಿಟ್ಟು ಹೊರಟಾಗ ಇಲ್ಲಿ ಏನಿತ್ತು? ಶಿಕ್ಷಣ, ಆರೋಗ್ಯ, ನೀರಾವರಿ, ಕೃಷಿ, ತಂತ್ರಜ್ಞಾನ, ವಿಜ್ಞಾನ ಸೇರಿ ಪ್ರತಿ ಕ್ಷೇತ್ರವನ್ನೂ ಸೊನ್ನೆಯಿಂದ ಆರಂಭಿಸಿ ಹೊಸದಾಗಿ ನಿರ್ಮಿಸಿದರು. ಆಗ ದೇಶದ ಸಾಕ್ಷರತಾ ಪ್ರಮಾಣ ಶೇ 15-18 ಇತ್ತು. ಇಂದು ಸಾಕ್ಷರತಾ ಪ್ರಮಾಣ ಶೇ 75-80 ನ್ನು ತಲುಪಲು ಅಂದು ನೆಹರೂ ಅವರು ಹಾಕಿಕೊಟ್ಟ ಅಡಿಪಾಯಗಳೇ ಮುಖ್ಯ ಕಾರಣ. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಇದಕ್ಕೆಲ್ಲಾ ತದ್ವಿರುದ್ಧ. ಇವರು ಪ್ರಧಾನಿ ಆದ ಬಳಿಕ ಒಂದೇ ಒಂದು ಸಂಸ್ಥೆಯನ್ನೂ ಕಟ್ಟಿ ಬೆಳೆಸಿಲ್ಲ. ನೆಹರೂ ಅವರು ಕಟ್ಟಿದ ತಾಂತ್ರಿಕ-ವೈಜ್ಞಾನಿಕ-ಶೈಕ್ಷಣಿಕ ಸಂಸ್ಥೆಗಳ ಹೆಸರನ್ನು ಹಾಳು ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿದ್ದಾರೆ. ಸಂವಿಧಾನ ಬದ್ದವಾದ ಸಂಸ್ಥೆಗಳ ಕುತ್ತಿಗೆ ಹಿಚುಕಿ ಎಲ್ಲವನ್ನೂ ಸರ್ಕಾರದ ಕೈಗೊಂಬೆ ಮಾಡಿಕೊಳ್ಳಲು ಒದ್ದಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನೆಹರೂ ಅವರು ದೇಶವನ್ನು ಮುನ್ನಡೆಸಲು ಬೇಕಾದ ಅರ್ಹತೆ ದೂರದೃಷ್ಟಿ ಹೊಂದಿದ್ದರು. ಇಂದು ದೇಶದಲ್ಲಿರುವ ವಿಶ್ವ ದರ್ಜೆಯ ವಿಜ್ಞಾನ, ಸಂಶೋಧನಾ ಸಂಸ್ಥೆಗಳು ನೆಹರೂ ಅವರ ಸಾಧನೆ. ಪಂಚವಾರ್ಷಿಕ ಯೋಜನೆಗಳು ನೆಹರೂ ಅವರ ಕೊಡುಗೆ. ಆದರೆ ಈಗಿನ ಪ್ರಧಾನಿ ನೆಹರೂ ಅವರಿಗೆ ದೇಶವನ್ನು ಮುನ್ನಡೆಸುವುದು ಗೊತ್ತಿಲ್ಲ. ಐದು ಸಾವಿರ ವರ್ಷಗಳಷ್ಟು ಹಿಂದಕ್ಕೆ ದೇಶವನ್ನು ಎಳೆದೊಯ್ಯುವ ಅಪಾಯಕಾರಿ ಬೆಳವಣಿಗೆಗಳು ಈಗ ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ನೆಹರೂ ಅವರು ಪ್ರಧಾನಿ ಆದ ಮೇಲೂ ವಿರೋಧ ಪಕ್ಷಗಳಿಗೆ ಮನ್ನಣೆ ನೀಡುತ್ತಿದ್ದರು. ವಿರೋಧ ಪಕ್ಷದ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದ ನಾಯಕರು ಮಾತನಾಡುತ್ತಾರೆ ಎಂದು ಪ್ರಧಾನಿ ನೆಹರೂ ಅವರು ಪಾರ್ಲಿಮೆಂಟ್‌ಗೆ ಗೈರು ಹಾಜರಾಗುತ್ತಿರಲಿಲ್ಲ. ಸದನದಲ್ಲೇ ಕುಳಿತು ವಿರೋಧ ಪಕ್ಷದವರ ಮಾತು ಮತ್ತು ಅಭಿಪ್ರಾಯಗಳನ್ನು ಸಂಪೂರ್ಣವಾಗಿ ಕೇಳಿಸಿಕೊಳ್ಳುವ ಎದೆಗಾರಿಕೆ ಇತ್ತು. ಈ ಎದೆಗಾರಿಕೆ ಈಗಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಏಕಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ದೇಶದ ನಿರುದ್ಯೋಗ, ಕೃಷಿ, ಆರ್ಥಿಕತೆ ಪ್ರತಿಯೊಂದನ್ನೂ ಸಮೀಕ್ಷೆ ನಡೆಸಿ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಲು ಅನುಕೂಲ ಆಗುವಂತಹ ಸಂಸ್ಥೆಗಳನ್ನು ನೆಹರೂ ಮತ್ತು ನಂತರದವರು ರೂಪಿಸಿದ್ದರು. ಆದರೆ ಮೋದಿ ಅವರು ಎಲ್ಲಾ ಸಂಸ್ಥೆಗಳ ಕುತ್ತಿಗೆ ಹಿಚುಕುತ್ತಿದ್ದಾರೆ. ಸಮೀಕ್ಷೆಗಳೇ ನಡೆಯದಂತೆ, ಖಾಸಗಿ ಸಂಸ್ಥೆಗಳು ನಡೆಸುವ ಸಮೀಕ್ಷೆಗಳೂ ಬಹಿರಂಗಗೊಳ್ಳದಂತೆ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.

ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮ ನೆಹರೂ ಅವರ ಆಲೋಚನೆಯಾಗಿತ್ತು. ಕಂದಾಚಾರ-ಮೌಢ್ಯಕ್ಕೆ ದೇಶದ ಯುವ ಸಮೂಹವನ್ನು ಬಲಿ ಕೊಡದೆ ಅವರನ್ನು ವೈಜ್ಞಾನಿಕ ಮಾರ್ಗದಲ್ಲಿ ಶಿಕ್ಷಿತರನ್ನಾಗಿ ಮಾಡುವ ಮೂಲಕ ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಬೇಕು ಎನ್ನುವುದನ್ನು ನೆಹರೂ ಅವರು ಸಾಧಿಸಿ ತೋರಿಸಿದರು. ಈಗಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೈಜ್ಞಾನಿಕ ಮನೋಧರ್ಮ ಎಂದರೆ ಏನು ಎನ್ನುವುದೇ ಗೊತ್ತಿಲ್ಲ. ಹೀಗಾಗಿ ಈ ದೇಶದ ಯುವ ಸಮೂಹ ಮತ್ತು ವಿದ್ಯಾರ್ಥಿ ಸಮೂಹಕ್ಕೆ ಅಗತ್ಯವಾದ ಶಿಕ್ಷಣ, ಉದ್ಯೋಗ, ಪ್ರಗತಿ ಇದ್ಯಾವುದರ ಬಗ್ಗೆಯೂ ಅವರು ಮಾತನಾಡುವುದಿಲ್ಲ. ಈ ಕ್ಷೇತ್ರಗಳಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಈ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಅವರು ಧರ್ಮ ಮತ್ತು ಜಾತಿ ಸಂಘರ್ಷಗಳ ಬಗ್ಗೆಯೇ ಮಾತನಾಡುತ್ತಾ ದೇಶದ ದಾರಿ ತಪ್ಪಿಸುತ್ತಾರೆ.
ಈ ಸತ್ಯವನ್ನು ದೇಶದ ಯುವಕರು, ಪ್ರಜೆಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಮತ್ತು ನಿಮ್ಮ ಮಕ್ಕಳು ಐದು ಸಾವಿರ ವರ್ಷದ ಹಿಂದಕ್ಕೆ ಜಾರಬೇಕೋ, ಅಭಿವೃದ್ಧಿ ಪಥದಲ್ಲಿ ವಿಶ್ವ ಸಮುದಾಯದೊಂದಿಗೆ ಮುನ್ನಡೆಯಬೇಕೋ ಎನ್ನುವುದನ್ನು ಯುವಕರು ನಿರ್ಧರಿಸಬೇಕು ಎಂದು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹೌದು ಸ್ವಾಮಿ, ಆರ್ ಎಸ್ ಎಸ್ ಈ ದೇಶದ ಮೂಲದ್ದಲ್ಲ, ಸೋನಿಯಾ ಗಾಂಧಿ ಈ ದೇಶದಲ್ಲೇ ಹುಟ್ಟಿದವರು. ಭಲೇ, ಭೇಷ್.

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...