Homeಕರ್ನಾಟಕಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ಈ ದೇಶದ್ದಾ? ಅವರೇನು ದ್ರಾವಿಡರಾ? ಚರಿತ್ರೆಯನ್ನು ಕೆದಕಲು ಹೋಗಬಾರದು: ಸಿದ್ದರಾಮಯ್ಯ

“ವಿರೋಧ ಪಕ್ಷದ ನಾಯಕರು ಮಾತನಾಡುತ್ತಾರೆ ಎಂದು ನೆಹರೂ ಅವರು ಪಾರ್ಲಿಮೆಂಟ್‌ಗೆ ಗೈರು ಹಾಜರಾಗುತ್ತಿರಲಿಲ್ಲ. ಈ ಎದೆಗಾರಿಕೆ ಈಗಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಏಕಿಲ್ಲ?”

- Advertisement -
- Advertisement -

ಆರ್‌ಎಸ್‌ಎಸ್ ಈ ದೇಶದ್ದಾ? ಅವರೇನು ದ್ರಾವಿಡರಾ? ದ್ರಾವಿಡರು ಈ ದೇಶದವರು. ಇದನ್ನೆಲ್ಲಾ ಪ್ರಶ್ನಿಸುತ್ತಾ ಹೋದರೆ ಏನಾಗುತ್ತದೆ ಗೊತ್ತಾ? ಅದಕ್ಕೆ ಚರಿತ್ರೆಯನ್ನು ಕೆದಕಲು ಹೋಗಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಮಾಜಿ ಪ್ರಧಾನಿ ದಿವಂಗತ ಜವಾಹರ್‌ಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು, “ಚರಿತ್ರೆ ಗೊತ್ತಿಲ್ಲದವರು ಭವಿಷ್ಯ ರೂಪಿಸಲಾರರು” ಎಂದು ಹೇಳಿದ್ದರು. ಯುವಕರು, ದ್ರಾವಿಡರು, ದುಡಿಯುವ ಜನ ಸಮುದಾಯಗಳು ಈ ದೇಶದ ನಿಜವಾದ ಚರಿತ್ರೆ ಓದಬೇಕು. ನಿಜವಾದ ಚರಿತ್ರೆಯನ್ನು ಅರಿತುಕೊಂಡರೆ ಏನಾಗಬಹುದು ಎನ್ನುವುದು ಆರ್ ಎಸ್‌ಎಸ್ ನವರಿಗೆ ಗೊತ್ತಿದೆ ಮತ್ತು ನಿಜವಾದ ಚರಿತ್ರೆ ಬಗ್ಗೆ ಅವರಿಗೆ ಭಯವಿದೆ. ಈ ಕಾರಣಕ್ಕೇ ಇತಿಹಾಸವನ್ನು ತಿರುಚುತ್ತಾರೆ. ಪಠ್ಯ ಪುಸ್ತಕಗಳ ಸಮಿತಿಗೆ ಚಕ್ರತೀರ್ಥನಂತವರನ್ನು ಹಾಕುವುದೇ ಈ ಉದ್ದೇಶಗಳಿಗೆ ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಎನ್ನುವ ಒಬ್ಬನಿಗೆ ಮಕ್ಕಳ ಪಠ್ಯ ಪುಸ್ತಕ ರೂಪಿಸುವ ಜವಾಬ್ದಾರಿ ನೀಡಲಾಗಿದೆ. ಇದಕ್ಕಿಂತ ಮೂರ್ಖತನವನ್ನು ನಾನು ನೋಡಿಲ್ಲ. ಈತ ಹೆಡಗೇವಾರ್‌ಗಿಂತ ಒಂದು ಹೆಜ್ಜೆ ಮುಂದಿದ್ದಾನೆ. ಅಪ್ರತಿಮ ದೇಶಭಕ್ತ ಭಗತ್‌ಸಿಂಗ್ ಪಠ್ಯವನ್ನು ತೆಗೆದು ಹೆಡಗೇವಾರ್ ಭಾಷಣ ಹಾಕಿದ್ದಾನೆ. ಭಗತ್‌ಸಿಂಗ್ ಗಿಂತ ದೇಶಭಕ್ತ ಬೇಕಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಬ್ರಾಹ್ಮಣ್ಯ ಯಾಜಮಾನ್ಯ ಉಳಿಸಿಕೊಳ್ಳುವ ಹುನ್ನಾರ; ಸುಳ್ಳು ಸಮರ್ಥನೆಗಿಳಿದ ಸಚಿವ ಬಿ.ಸಿ ನಾಗೇಶ್

ಪಂಡಿತ್ ಜವಾಹರಲಾಲ್ ನೆಹರೂ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಪ್ರಜಾತಂತ್ರದ ಆಧಾರದಲ್ಲಿ ದೇಶವನ್ನು ಕಟ್ಟಿ ನಿಲ್ಲಿಸಿದ್ದು ಮಾತ್ರವಲ್ಲದೆ, ಪ್ರಜಾಪ್ರಭುತ್ವದ ಬೇರುಗಳು ದೇಶದಲ್ಲಿ ಆಳವಾಗಿ ಬೇರೂರಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡರು. ಸಂವಿಧಾನ ಬದ್ದವಾದ ಸಂಸ್ಥೆಗಳನ್ನು ರೂಪಿಸಿ ಅವುಗಳಿಗೆ ಶಕ್ತಿ ತುಂಬಿದರು. ಹೀಗಾಗಿ ದೇಶ ಈ ಮಟ್ಟದ ಪ್ರಗತಿ ಪಥದಲ್ಲಿ ಮುನ್ನಡೆದು ಬರಲು ಸಾಧ್ಯವಾಯಿತು ಎಂದು ತಿಳಿಸಿದರು.

ಬ್ರಿಟಿಷರು ಭಾರತ ಬಿಟ್ಟು ಹೊರಟಾಗ ಇಲ್ಲಿ ಏನಿತ್ತು? ಶಿಕ್ಷಣ, ಆರೋಗ್ಯ, ನೀರಾವರಿ, ಕೃಷಿ, ತಂತ್ರಜ್ಞಾನ, ವಿಜ್ಞಾನ ಸೇರಿ ಪ್ರತಿ ಕ್ಷೇತ್ರವನ್ನೂ ಸೊನ್ನೆಯಿಂದ ಆರಂಭಿಸಿ ಹೊಸದಾಗಿ ನಿರ್ಮಿಸಿದರು. ಆಗ ದೇಶದ ಸಾಕ್ಷರತಾ ಪ್ರಮಾಣ ಶೇ 15-18 ಇತ್ತು. ಇಂದು ಸಾಕ್ಷರತಾ ಪ್ರಮಾಣ ಶೇ 75-80 ನ್ನು ತಲುಪಲು ಅಂದು ನೆಹರೂ ಅವರು ಹಾಕಿಕೊಟ್ಟ ಅಡಿಪಾಯಗಳೇ ಮುಖ್ಯ ಕಾರಣ. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಇದಕ್ಕೆಲ್ಲಾ ತದ್ವಿರುದ್ಧ. ಇವರು ಪ್ರಧಾನಿ ಆದ ಬಳಿಕ ಒಂದೇ ಒಂದು ಸಂಸ್ಥೆಯನ್ನೂ ಕಟ್ಟಿ ಬೆಳೆಸಿಲ್ಲ. ನೆಹರೂ ಅವರು ಕಟ್ಟಿದ ತಾಂತ್ರಿಕ-ವೈಜ್ಞಾನಿಕ-ಶೈಕ್ಷಣಿಕ ಸಂಸ್ಥೆಗಳ ಹೆಸರನ್ನು ಹಾಳು ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿದ್ದಾರೆ. ಸಂವಿಧಾನ ಬದ್ದವಾದ ಸಂಸ್ಥೆಗಳ ಕುತ್ತಿಗೆ ಹಿಚುಕಿ ಎಲ್ಲವನ್ನೂ ಸರ್ಕಾರದ ಕೈಗೊಂಬೆ ಮಾಡಿಕೊಳ್ಳಲು ಒದ್ದಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನೆಹರೂ ಅವರು ದೇಶವನ್ನು ಮುನ್ನಡೆಸಲು ಬೇಕಾದ ಅರ್ಹತೆ ದೂರದೃಷ್ಟಿ ಹೊಂದಿದ್ದರು. ಇಂದು ದೇಶದಲ್ಲಿರುವ ವಿಶ್ವ ದರ್ಜೆಯ ವಿಜ್ಞಾನ, ಸಂಶೋಧನಾ ಸಂಸ್ಥೆಗಳು ನೆಹರೂ ಅವರ ಸಾಧನೆ. ಪಂಚವಾರ್ಷಿಕ ಯೋಜನೆಗಳು ನೆಹರೂ ಅವರ ಕೊಡುಗೆ. ಆದರೆ ಈಗಿನ ಪ್ರಧಾನಿ ನೆಹರೂ ಅವರಿಗೆ ದೇಶವನ್ನು ಮುನ್ನಡೆಸುವುದು ಗೊತ್ತಿಲ್ಲ. ಐದು ಸಾವಿರ ವರ್ಷಗಳಷ್ಟು ಹಿಂದಕ್ಕೆ ದೇಶವನ್ನು ಎಳೆದೊಯ್ಯುವ ಅಪಾಯಕಾರಿ ಬೆಳವಣಿಗೆಗಳು ಈಗ ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ನೆಹರೂ ಅವರು ಪ್ರಧಾನಿ ಆದ ಮೇಲೂ ವಿರೋಧ ಪಕ್ಷಗಳಿಗೆ ಮನ್ನಣೆ ನೀಡುತ್ತಿದ್ದರು. ವಿರೋಧ ಪಕ್ಷದ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದ ನಾಯಕರು ಮಾತನಾಡುತ್ತಾರೆ ಎಂದು ಪ್ರಧಾನಿ ನೆಹರೂ ಅವರು ಪಾರ್ಲಿಮೆಂಟ್‌ಗೆ ಗೈರು ಹಾಜರಾಗುತ್ತಿರಲಿಲ್ಲ. ಸದನದಲ್ಲೇ ಕುಳಿತು ವಿರೋಧ ಪಕ್ಷದವರ ಮಾತು ಮತ್ತು ಅಭಿಪ್ರಾಯಗಳನ್ನು ಸಂಪೂರ್ಣವಾಗಿ ಕೇಳಿಸಿಕೊಳ್ಳುವ ಎದೆಗಾರಿಕೆ ಇತ್ತು. ಈ ಎದೆಗಾರಿಕೆ ಈಗಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಏಕಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ದೇಶದ ನಿರುದ್ಯೋಗ, ಕೃಷಿ, ಆರ್ಥಿಕತೆ ಪ್ರತಿಯೊಂದನ್ನೂ ಸಮೀಕ್ಷೆ ನಡೆಸಿ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಲು ಅನುಕೂಲ ಆಗುವಂತಹ ಸಂಸ್ಥೆಗಳನ್ನು ನೆಹರೂ ಮತ್ತು ನಂತರದವರು ರೂಪಿಸಿದ್ದರು. ಆದರೆ ಮೋದಿ ಅವರು ಎಲ್ಲಾ ಸಂಸ್ಥೆಗಳ ಕುತ್ತಿಗೆ ಹಿಚುಕುತ್ತಿದ್ದಾರೆ. ಸಮೀಕ್ಷೆಗಳೇ ನಡೆಯದಂತೆ, ಖಾಸಗಿ ಸಂಸ್ಥೆಗಳು ನಡೆಸುವ ಸಮೀಕ್ಷೆಗಳೂ ಬಹಿರಂಗಗೊಳ್ಳದಂತೆ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.

ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮ ನೆಹರೂ ಅವರ ಆಲೋಚನೆಯಾಗಿತ್ತು. ಕಂದಾಚಾರ-ಮೌಢ್ಯಕ್ಕೆ ದೇಶದ ಯುವ ಸಮೂಹವನ್ನು ಬಲಿ ಕೊಡದೆ ಅವರನ್ನು ವೈಜ್ಞಾನಿಕ ಮಾರ್ಗದಲ್ಲಿ ಶಿಕ್ಷಿತರನ್ನಾಗಿ ಮಾಡುವ ಮೂಲಕ ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಬೇಕು ಎನ್ನುವುದನ್ನು ನೆಹರೂ ಅವರು ಸಾಧಿಸಿ ತೋರಿಸಿದರು. ಈಗಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೈಜ್ಞಾನಿಕ ಮನೋಧರ್ಮ ಎಂದರೆ ಏನು ಎನ್ನುವುದೇ ಗೊತ್ತಿಲ್ಲ. ಹೀಗಾಗಿ ಈ ದೇಶದ ಯುವ ಸಮೂಹ ಮತ್ತು ವಿದ್ಯಾರ್ಥಿ ಸಮೂಹಕ್ಕೆ ಅಗತ್ಯವಾದ ಶಿಕ್ಷಣ, ಉದ್ಯೋಗ, ಪ್ರಗತಿ ಇದ್ಯಾವುದರ ಬಗ್ಗೆಯೂ ಅವರು ಮಾತನಾಡುವುದಿಲ್ಲ. ಈ ಕ್ಷೇತ್ರಗಳಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಈ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಅವರು ಧರ್ಮ ಮತ್ತು ಜಾತಿ ಸಂಘರ್ಷಗಳ ಬಗ್ಗೆಯೇ ಮಾತನಾಡುತ್ತಾ ದೇಶದ ದಾರಿ ತಪ್ಪಿಸುತ್ತಾರೆ.
ಈ ಸತ್ಯವನ್ನು ದೇಶದ ಯುವಕರು, ಪ್ರಜೆಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಮತ್ತು ನಿಮ್ಮ ಮಕ್ಕಳು ಐದು ಸಾವಿರ ವರ್ಷದ ಹಿಂದಕ್ಕೆ ಜಾರಬೇಕೋ, ಅಭಿವೃದ್ಧಿ ಪಥದಲ್ಲಿ ವಿಶ್ವ ಸಮುದಾಯದೊಂದಿಗೆ ಮುನ್ನಡೆಯಬೇಕೋ ಎನ್ನುವುದನ್ನು ಯುವಕರು ನಿರ್ಧರಿಸಬೇಕು ಎಂದು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹೌದು ಸ್ವಾಮಿ, ಆರ್ ಎಸ್ ಎಸ್ ಈ ದೇಶದ ಮೂಲದ್ದಲ್ಲ, ಸೋನಿಯಾ ಗಾಂಧಿ ಈ ದೇಶದಲ್ಲೇ ಹುಟ್ಟಿದವರು. ಭಲೇ, ಭೇಷ್.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...