Homeಮುಖಪುಟತಮಿಳುನಾಡಿನ ವಿಸಿಕೆ ಪಕ್ಷ ನೀಡುವ ಡಾ.ಅಂಬೇಡ್ಕರ್‌ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ

ತಮಿಳುನಾಡಿನ ವಿಸಿಕೆ ಪಕ್ಷ ನೀಡುವ ಡಾ.ಅಂಬೇಡ್ಕರ್‌ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ

ವಿಸಿಕೆಯು ಬಿಜೆಪಿಯ ಹಿಂದೂ ಬಹುಸಂಖ್ಯಾತ ರಾಜಕೀಯ, ಮನುಸ್ಮೃತಿಯ ಬ್ರಾಹ್ಮಣ ಪಿತೃಪ್ರಭುತ್ವ ಮತ್ತು ಜಾತೀಯತೆಯ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

ತಮಿಳುನಾಡಿನ ವಿಡುದಲೈ ಚಿರುದೈಗಳ್ ಕಚ್ಚಿ (ವಿಸಿಕೆ) ಪ್ರತಿ ವರ್ಷ ನೀಡುವ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಕರ್ನಾಟಕ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, “ವಿಡುದಲೈ ಚಿರುದೈಗಳ್ ಪಕ್ಷ ನೀಡುವ ಡಾ.ಬಿ.ಆರ್‌.ಅಂಬೇಡ್ಕರ್‌‌ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಧನ್ಯವಾದಗಳು. ಪಕ್ಷದ ಸಂಸದರಾದ ತಿರುಮಾವಲವನ್ ಅವರು ಇಂದು ನನ್ನನ್ನು ಭೇಟಿ ನೀಡಿ ಪ್ರಶಸ್ತಿ ಸ್ವೀಕರಿಸಲು ಜುಲೈ 30ರಂದು ಚೆನ್ನೈಗೆ ಆಗಮಿಸುವಂತೆ ಆಹ್ವಾನ ನೀಡಿದರು” ಎಂದು ತಿಳಿಸಿದ್ದಾರೆ.

ವಿಡುದಲೈ ಚಿರುದೈಗಳ್ ಪಕ್ಷವು (ಲಿಬರೇಶನ್ ಪ್ಯಾಂಥರ್ ಪಾರ್ಟಿ) ದಲಿತ ಪ್ಯಾಂಥರ್ಸ್ ಚಳವಳಿಯಿಂದ ಹುಟ್ಟಿಕೊಂಡಿತು. ಭಾರತದಲ್ಲಿನ ಅಸಮಾನತೆ ವಿರುದ್ಧ ಈ ಪಕ್ಷ ಹೋರಾಡುತ್ತಿದೆ. ಜಾತಿ ಆಧಾರಿತ ತಾರತಮ್ಯದ ವಿರುದ್ಧ ತಮಿಳುನಾಡಿನಲ್ಲಿ  ಸಕ್ರಿಯವಾಗಿದೆ.

1970ರಲ್ಲಿ ಮಹಾರಾಷ್ಟ್ರದಲ್ಲಿ ಹುಟ್ಟಿಕೊಂಡ ದಲಿತ್ ಪ್ಯಾಂಥರ್ಸ್ ಆಫ್ ಇಂಡಿಯಾದಿಂದ ಪ್ರೇರೇಪಣೆಯಾಗಿ 1982ರಲ್ಲಿ ತಮಿಳುನಾಡಿನ ಮಧುರೈನಲ್ಲಿ ದಲಿತ ಪ್ಯಾಂಥರ್ಸ್ ರಚನೆಯಾಯಿತು. ಜಾತಿ ದೌರ್ಜನ್ಯಗಳಿಂದ ದಲಿತರ ರಕ್ಷಣೆ ಮಾಡುವಲ್ಲಿ ಸಕ್ರಿಯವಾಯಿತು. 1999 ರಲ್ಲಿ ವಿಸಿಕೆ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿತು. ಅಂದಿನಿಂದ ಎರಡು ದಶಕಗಳಲ್ಲಿ, ಪಕ್ಷವು ಹಲವಾರು ಏರಿಳಿತಗಳನ್ನು ಎದುರಿಸಿದೆ.

ವಿಸಿಕೆ ಈಗ ತನ್ನ ರಾಜಕೀಯ ಜೀವನದಲ್ಲಿ ಪರಿವರ್ತನೆಯ ಹಂತವನ್ನು ತಲುಪಿದೆ. ಇಬ್ಬರು ಸಂಸದರು ಮತ್ತು ನಾಲ್ವರು ಶಾಸಕರನ್ನು ಹೊಂದಿದೆ. ವಿಧಾನಸಭಾ ಚುನಾವಣೆಯಲ್ಲಿ ವಿಸಿಕೆ ಸ್ಪರ್ಧಿಸಿದ ಆರು ಸ್ಥಾನಗಳಲ್ಲಿ, ಎರಡು ಸಾಮಾನ್ಯ ಕ್ಷೇತ್ರಗಳನ್ನು ಒಳಗೊಂಡಂತೆ ನಾಲ್ಕು ಸ್ಥಾನಗಳಲ್ಲಿ ಗೆದ್ದಿದೆ.

ಕಳೆದ ಕೆಲವು ವರ್ಷಗಳಿಂದ ಈ ಪಕ್ಷವು  ಬಿಜೆಪಿಯ ಹಿಂದೂ ಬಹುಸಂಖ್ಯಾತ ರಾಜಕೀಯ, ಮನುಸ್ಮೃತಿಯ ಬ್ರಾಹ್ಮಣ ಪಿತೃಪ್ರಭುತ್ವ ಮತ್ತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ)ಯ ಅಸ್ಪಷ್ಟ ಜಾತಿವಾದದ ವಿರುದ್ಧ ಹೋರಾಡುವಲ್ಲಿ ವಿಸಿಕೆ ಮುಂಚೂಣಿಯಲ್ಲಿದೆ.

ವಿಸಿಕೆ ನಡೆಸಿದ ‘ಸೇವ್ ದಿ ನೇಷನ್’ ಸಮಾವೇಶಗಳಿಗೆ 80,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಡಿಎಂಕೆಯು ಹಿಂದೂ ಬಹುಸಂಖ್ಯಾತ ರಾಜಕೀಯದ ವಿರುದ್ಧ ಮೃದುವಾದಾಗ, ವಿಸಿಕೆ ಹಿಂದುತ್ವ ವಿರೋಧಿ ರಾಜಕೀಯದ ಹೊಸ ಮುಖವಾಗಿ ಹೊರಹೊಮ್ಮಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಯ ಭಾಗವಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...