Homeಮುಖಪುಟತಮಿಳುನಾಡಿನ ವಿಸಿಕೆ ಪಕ್ಷ ನೀಡುವ ಡಾ.ಅಂಬೇಡ್ಕರ್‌ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ

ತಮಿಳುನಾಡಿನ ವಿಸಿಕೆ ಪಕ್ಷ ನೀಡುವ ಡಾ.ಅಂಬೇಡ್ಕರ್‌ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ

ವಿಸಿಕೆಯು ಬಿಜೆಪಿಯ ಹಿಂದೂ ಬಹುಸಂಖ್ಯಾತ ರಾಜಕೀಯ, ಮನುಸ್ಮೃತಿಯ ಬ್ರಾಹ್ಮಣ ಪಿತೃಪ್ರಭುತ್ವ ಮತ್ತು ಜಾತೀಯತೆಯ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

ತಮಿಳುನಾಡಿನ ವಿಡುದಲೈ ಚಿರುದೈಗಳ್ ಕಚ್ಚಿ (ವಿಸಿಕೆ) ಪ್ರತಿ ವರ್ಷ ನೀಡುವ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಕರ್ನಾಟಕ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, “ವಿಡುದಲೈ ಚಿರುದೈಗಳ್ ಪಕ್ಷ ನೀಡುವ ಡಾ.ಬಿ.ಆರ್‌.ಅಂಬೇಡ್ಕರ್‌‌ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಧನ್ಯವಾದಗಳು. ಪಕ್ಷದ ಸಂಸದರಾದ ತಿರುಮಾವಲವನ್ ಅವರು ಇಂದು ನನ್ನನ್ನು ಭೇಟಿ ನೀಡಿ ಪ್ರಶಸ್ತಿ ಸ್ವೀಕರಿಸಲು ಜುಲೈ 30ರಂದು ಚೆನ್ನೈಗೆ ಆಗಮಿಸುವಂತೆ ಆಹ್ವಾನ ನೀಡಿದರು” ಎಂದು ತಿಳಿಸಿದ್ದಾರೆ.

ವಿಡುದಲೈ ಚಿರುದೈಗಳ್ ಪಕ್ಷವು (ಲಿಬರೇಶನ್ ಪ್ಯಾಂಥರ್ ಪಾರ್ಟಿ) ದಲಿತ ಪ್ಯಾಂಥರ್ಸ್ ಚಳವಳಿಯಿಂದ ಹುಟ್ಟಿಕೊಂಡಿತು. ಭಾರತದಲ್ಲಿನ ಅಸಮಾನತೆ ವಿರುದ್ಧ ಈ ಪಕ್ಷ ಹೋರಾಡುತ್ತಿದೆ. ಜಾತಿ ಆಧಾರಿತ ತಾರತಮ್ಯದ ವಿರುದ್ಧ ತಮಿಳುನಾಡಿನಲ್ಲಿ  ಸಕ್ರಿಯವಾಗಿದೆ.

1970ರಲ್ಲಿ ಮಹಾರಾಷ್ಟ್ರದಲ್ಲಿ ಹುಟ್ಟಿಕೊಂಡ ದಲಿತ್ ಪ್ಯಾಂಥರ್ಸ್ ಆಫ್ ಇಂಡಿಯಾದಿಂದ ಪ್ರೇರೇಪಣೆಯಾಗಿ 1982ರಲ್ಲಿ ತಮಿಳುನಾಡಿನ ಮಧುರೈನಲ್ಲಿ ದಲಿತ ಪ್ಯಾಂಥರ್ಸ್ ರಚನೆಯಾಯಿತು. ಜಾತಿ ದೌರ್ಜನ್ಯಗಳಿಂದ ದಲಿತರ ರಕ್ಷಣೆ ಮಾಡುವಲ್ಲಿ ಸಕ್ರಿಯವಾಯಿತು. 1999 ರಲ್ಲಿ ವಿಸಿಕೆ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿತು. ಅಂದಿನಿಂದ ಎರಡು ದಶಕಗಳಲ್ಲಿ, ಪಕ್ಷವು ಹಲವಾರು ಏರಿಳಿತಗಳನ್ನು ಎದುರಿಸಿದೆ.

ವಿಸಿಕೆ ಈಗ ತನ್ನ ರಾಜಕೀಯ ಜೀವನದಲ್ಲಿ ಪರಿವರ್ತನೆಯ ಹಂತವನ್ನು ತಲುಪಿದೆ. ಇಬ್ಬರು ಸಂಸದರು ಮತ್ತು ನಾಲ್ವರು ಶಾಸಕರನ್ನು ಹೊಂದಿದೆ. ವಿಧಾನಸಭಾ ಚುನಾವಣೆಯಲ್ಲಿ ವಿಸಿಕೆ ಸ್ಪರ್ಧಿಸಿದ ಆರು ಸ್ಥಾನಗಳಲ್ಲಿ, ಎರಡು ಸಾಮಾನ್ಯ ಕ್ಷೇತ್ರಗಳನ್ನು ಒಳಗೊಂಡಂತೆ ನಾಲ್ಕು ಸ್ಥಾನಗಳಲ್ಲಿ ಗೆದ್ದಿದೆ.

ಕಳೆದ ಕೆಲವು ವರ್ಷಗಳಿಂದ ಈ ಪಕ್ಷವು  ಬಿಜೆಪಿಯ ಹಿಂದೂ ಬಹುಸಂಖ್ಯಾತ ರಾಜಕೀಯ, ಮನುಸ್ಮೃತಿಯ ಬ್ರಾಹ್ಮಣ ಪಿತೃಪ್ರಭುತ್ವ ಮತ್ತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ)ಯ ಅಸ್ಪಷ್ಟ ಜಾತಿವಾದದ ವಿರುದ್ಧ ಹೋರಾಡುವಲ್ಲಿ ವಿಸಿಕೆ ಮುಂಚೂಣಿಯಲ್ಲಿದೆ.

ವಿಸಿಕೆ ನಡೆಸಿದ ‘ಸೇವ್ ದಿ ನೇಷನ್’ ಸಮಾವೇಶಗಳಿಗೆ 80,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಡಿಎಂಕೆಯು ಹಿಂದೂ ಬಹುಸಂಖ್ಯಾತ ರಾಜಕೀಯದ ವಿರುದ್ಧ ಮೃದುವಾದಾಗ, ವಿಸಿಕೆ ಹಿಂದುತ್ವ ವಿರೋಧಿ ರಾಜಕೀಯದ ಹೊಸ ಮುಖವಾಗಿ ಹೊರಹೊಮ್ಮಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಯ ಭಾಗವಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...