Homeಮುಖಪುಟತಮಿಳುನಾಡಿನ ವಿಸಿಕೆ ಪಕ್ಷ ನೀಡುವ ಡಾ.ಅಂಬೇಡ್ಕರ್‌ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ

ತಮಿಳುನಾಡಿನ ವಿಸಿಕೆ ಪಕ್ಷ ನೀಡುವ ಡಾ.ಅಂಬೇಡ್ಕರ್‌ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ

ವಿಸಿಕೆಯು ಬಿಜೆಪಿಯ ಹಿಂದೂ ಬಹುಸಂಖ್ಯಾತ ರಾಜಕೀಯ, ಮನುಸ್ಮೃತಿಯ ಬ್ರಾಹ್ಮಣ ಪಿತೃಪ್ರಭುತ್ವ ಮತ್ತು ಜಾತೀಯತೆಯ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

ತಮಿಳುನಾಡಿನ ವಿಡುದಲೈ ಚಿರುದೈಗಳ್ ಕಚ್ಚಿ (ವಿಸಿಕೆ) ಪ್ರತಿ ವರ್ಷ ನೀಡುವ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಕರ್ನಾಟಕ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, “ವಿಡುದಲೈ ಚಿರುದೈಗಳ್ ಪಕ್ಷ ನೀಡುವ ಡಾ.ಬಿ.ಆರ್‌.ಅಂಬೇಡ್ಕರ್‌‌ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಧನ್ಯವಾದಗಳು. ಪಕ್ಷದ ಸಂಸದರಾದ ತಿರುಮಾವಲವನ್ ಅವರು ಇಂದು ನನ್ನನ್ನು ಭೇಟಿ ನೀಡಿ ಪ್ರಶಸ್ತಿ ಸ್ವೀಕರಿಸಲು ಜುಲೈ 30ರಂದು ಚೆನ್ನೈಗೆ ಆಗಮಿಸುವಂತೆ ಆಹ್ವಾನ ನೀಡಿದರು” ಎಂದು ತಿಳಿಸಿದ್ದಾರೆ.

ವಿಡುದಲೈ ಚಿರುದೈಗಳ್ ಪಕ್ಷವು (ಲಿಬರೇಶನ್ ಪ್ಯಾಂಥರ್ ಪಾರ್ಟಿ) ದಲಿತ ಪ್ಯಾಂಥರ್ಸ್ ಚಳವಳಿಯಿಂದ ಹುಟ್ಟಿಕೊಂಡಿತು. ಭಾರತದಲ್ಲಿನ ಅಸಮಾನತೆ ವಿರುದ್ಧ ಈ ಪಕ್ಷ ಹೋರಾಡುತ್ತಿದೆ. ಜಾತಿ ಆಧಾರಿತ ತಾರತಮ್ಯದ ವಿರುದ್ಧ ತಮಿಳುನಾಡಿನಲ್ಲಿ  ಸಕ್ರಿಯವಾಗಿದೆ.

1970ರಲ್ಲಿ ಮಹಾರಾಷ್ಟ್ರದಲ್ಲಿ ಹುಟ್ಟಿಕೊಂಡ ದಲಿತ್ ಪ್ಯಾಂಥರ್ಸ್ ಆಫ್ ಇಂಡಿಯಾದಿಂದ ಪ್ರೇರೇಪಣೆಯಾಗಿ 1982ರಲ್ಲಿ ತಮಿಳುನಾಡಿನ ಮಧುರೈನಲ್ಲಿ ದಲಿತ ಪ್ಯಾಂಥರ್ಸ್ ರಚನೆಯಾಯಿತು. ಜಾತಿ ದೌರ್ಜನ್ಯಗಳಿಂದ ದಲಿತರ ರಕ್ಷಣೆ ಮಾಡುವಲ್ಲಿ ಸಕ್ರಿಯವಾಯಿತು. 1999 ರಲ್ಲಿ ವಿಸಿಕೆ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿತು. ಅಂದಿನಿಂದ ಎರಡು ದಶಕಗಳಲ್ಲಿ, ಪಕ್ಷವು ಹಲವಾರು ಏರಿಳಿತಗಳನ್ನು ಎದುರಿಸಿದೆ.

ವಿಸಿಕೆ ಈಗ ತನ್ನ ರಾಜಕೀಯ ಜೀವನದಲ್ಲಿ ಪರಿವರ್ತನೆಯ ಹಂತವನ್ನು ತಲುಪಿದೆ. ಇಬ್ಬರು ಸಂಸದರು ಮತ್ತು ನಾಲ್ವರು ಶಾಸಕರನ್ನು ಹೊಂದಿದೆ. ವಿಧಾನಸಭಾ ಚುನಾವಣೆಯಲ್ಲಿ ವಿಸಿಕೆ ಸ್ಪರ್ಧಿಸಿದ ಆರು ಸ್ಥಾನಗಳಲ್ಲಿ, ಎರಡು ಸಾಮಾನ್ಯ ಕ್ಷೇತ್ರಗಳನ್ನು ಒಳಗೊಂಡಂತೆ ನಾಲ್ಕು ಸ್ಥಾನಗಳಲ್ಲಿ ಗೆದ್ದಿದೆ.

ಕಳೆದ ಕೆಲವು ವರ್ಷಗಳಿಂದ ಈ ಪಕ್ಷವು  ಬಿಜೆಪಿಯ ಹಿಂದೂ ಬಹುಸಂಖ್ಯಾತ ರಾಜಕೀಯ, ಮನುಸ್ಮೃತಿಯ ಬ್ರಾಹ್ಮಣ ಪಿತೃಪ್ರಭುತ್ವ ಮತ್ತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ)ಯ ಅಸ್ಪಷ್ಟ ಜಾತಿವಾದದ ವಿರುದ್ಧ ಹೋರಾಡುವಲ್ಲಿ ವಿಸಿಕೆ ಮುಂಚೂಣಿಯಲ್ಲಿದೆ.

ವಿಸಿಕೆ ನಡೆಸಿದ ‘ಸೇವ್ ದಿ ನೇಷನ್’ ಸಮಾವೇಶಗಳಿಗೆ 80,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಡಿಎಂಕೆಯು ಹಿಂದೂ ಬಹುಸಂಖ್ಯಾತ ರಾಜಕೀಯದ ವಿರುದ್ಧ ಮೃದುವಾದಾಗ, ವಿಸಿಕೆ ಹಿಂದುತ್ವ ವಿರೋಧಿ ರಾಜಕೀಯದ ಹೊಸ ಮುಖವಾಗಿ ಹೊರಹೊಮ್ಮಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಯ ಭಾಗವಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...