Homeಕರ್ನಾಟಕಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

ಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

- Advertisement -
- Advertisement -

ನವೆಂಬರ್‌ ಮಾಸ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ‘ಈ ಹಿಂದೆ’ ಮಾಡಿಕೊಂಡ ಒಪ್ಪಂದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಡಿ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ ಎಂಬ ಬಿಸಿ ಬಿಸಿ ಚರ್ಚೆ ನಡೆದು ಈಗ ತಣ್ಣಗಾಗಿದೆ.

ಸಚಿವ ಸಂಪುಟ ಪುನರ್‌ರಚನೆ ಆಗುತ್ತದೆ ಎಂಬ ಸುದ್ದಿ ಬೆನ್ನಲ್ಲೇ ಹಲವು ಶಾಸಕರು ಮಂತ್ರಿ ಸ್ಥಾನಕ್ಕಾಗಿ ಮತ್ತು ತಮ್ಮ ಸ್ಥಾನ ಉಳಿಸಿಕೊಳ್ಳಲು ಹತ್ತಾರು ಮಂತ್ರಿಗಳು ದೆಹಲಿಗೆ ಮ್ಯಾರಥನ್ ಕೂಡ ನಡೆಸಿದ್ದಾರೆ. ಆದರೆ, ಇದೇ ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಿಗೆ ‘ಉಪಹಾರ’ ಸೇವಿಸುವ ಮೂಲಕ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತು ಸಂಪುಟ ಪುನರ್‌ರಚನೆ ಚರ್ಚೆಗೆ ಅಲ್ಪ ವಿರಾಮ ಬಿದ್ದಿದೆ. “ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ಮುಂದುವರಿಯುತ್ತೇವೆ” ಎಂದು ಉಭಯ ನಾಯಕರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಂದರೆ, ಮುಖ್ಯಮಂತ್ರಿ ಬದಲಾವಣೆ ಸಂಘರ್ಷಕ್ಕೀಗ ‘ಕದನ ವಿರಾಮ’ ಸಿಕ್ಕಿದೆ. ಸಿಎಂ ಬದಲಾವಣೆ ವಿಚಾರವಂತೂ ‘ಬೂದಿ ಮುಚ್ಚಿದ ಕೆಂಡ’ದಂತಿದೆ.

ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ಉಪಹಾರದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿವಾದ ಇನ್ನೇನು ಮುಗಿದೇ ಹೋಯಿತು ಎನ್ನುವ ಹೊತ್ತಿಗೆ, ಮತ್ತೊಂದು ಅಚ್ಚರಿ ಹೆಸರು ಮುನ್ನೆಲೆಗೆ ಬಂದಿದೆ. ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿಯಾಗಿರುವ ‘ಹಿರಿಯ ಕಾಂಗ್ರೆಸ್‌ ನಾಯಕ’ರೊಬ್ಬರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯ ಈಗ ಚರ್ಚೆಯಾಗುತ್ತಿದೆ.

ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ?

ರಾಜ್ಯ ರಾಜಕೀಯ ಇತಿಹಾಸದಲ್ಲಿ ಈವರೆಗೆ ದಲಿತ (ಪರಿಶಿಷ್ಟ ಜಾತಿ ಮತ್ತು ಪಂಗಡ) ಸಮುದಾಯದವರೊಬ್ಬರು ಮುಖ್ಯಮಂತ್ರಿಯಾಗಿಲ್ಲ. ಸಿಎಂ ಹುದ್ದೆಯ ಚರ್ಚೆ ಆದಾಗಲೆಲ್ಲಾ ಈ ರಾಜ್ಯದ ಪ್ರಭಾವಿ ಜಾತಿಗಳೇ ಮುಂಚೂಣಿಯಲ್ಲಿರುತ್ತವೆ. ಆದರೆ, ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಬದಲಾವಣೆ ಚರ್ಚೆಯಲ್ಲಿ ‘ದಲಿತ ಮುಖ್ಯಮಂತ್ರಿ’ ಕೂಗು ಜೋರಾಗೇ ಕೇಳಿಬರುತ್ತಿದೆ. ಪರಿಶಿಷ್ಠ ಸಮುದಾಯದ ಶಾಸಕರು ಸಹ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಬಳಿ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಡಾ. ಜಿ.ಪರಮೇಶ್ವರ್ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸತೀಶ್‌ ಜಾರಕಿಹೊಳಿ ಹೆಸರುಗಳು ದಲಿತ ಮುಖ್ಯಮಂತ್ರಿ ಚರ್ಚೆಯ ಮುಂಚೂಣಿಯಲ್ಲಿವೆ. ಉಳಿದ ದಲಿತ ನಾಯಕರಿಗೆ ಹೋಲಿಸಿದರೆ ಹಾಗೂ ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಪರಮೇಶ್ವರ್ ಮತ್ತು ಸತೀಶ್‌ ಹೆಸರನ್ನು ಹೈಕಮಾಂಡ್‌ ಒಪ್ಪಲ್ಲ ಎನ್ನಲಾಗುತ್ತಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್‌ ಹೈಕಕಮಾಂಡ್ ನಾಯಕರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಮುಖ್ಯಮಂತ್ರಿ ಪಟ್ಟಕ್ಕೇರಿಸುವ ಇಂಗಿತ ವ್ಯಕ್ತಪಡಿಸಿದೆ ಎನ್ನಲಾಗುತ್ತಿದೆ.

ಖರ್ಗೆ ಆಯ್ಕೆಗೆ ಕಾರಣಗಳೇನು?

ಕಳೆದ ಐದು ದಶಕಗಳಿಂದ ರಾಜಕಾರಣದಲ್ಲಿರುವ ಖರ್ಗೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪ್ರಭಾವಿ ಎನಿಸಿದ್ದಾರೆ. ‘ಕ್ಲೀನ್‌ ಇಮೇಜ್‌’ ಜೊತೆಗೆ ರಾಜಕೀಯ ಚಾಕಚಕ್ಯತೆಯೂ ಇದೆ. ಬಿಜೆಪಿ ಮತ್ತು ಸಂಘಪರಿವಾರವನ್ನು ರಾಜಕೀಯವಾಗಿ ಎದುರಿಸುವ ಎದೆಗಾರಿಕೆ ಜೊತೆಗೆ, ಕಳೆದ 12 ವರ್ಷಗಳಿಂದ ಸಂಸತ್ತಿನಲ್ಲಿ ಕೇಂದ್ರ ಸರ್ಕಾರವನ್ನು ಸಾಕಷ್ಟು ಇಕ್ಕಟ್ಟಿಗೂ ಸಿಲುಕಿಸಿದ್ದಾರೆ. ಇದೇ ಕಾರಣಕ್ಕೆ ಬಹಳ ವರ್ಷಗಳ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ರಾಜ್ಯ ರಾಜಕಾರಣದಲ್ಲಿದ್ದಾಗಲೇ ಮುಖ್ಯಮಂತ್ರಿ ರೇಸ್‌ನಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಲವು ಭಾರಿ ಉನ್ನತ ಸ್ಥಾನ ಸ್ವಲ್ಪದರಲ್ಲೇ ಕೈತಪ್ಪಿದೆ. ಇದೀಗ, ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪ್ರಭಾವಿಯಾಗಿರುವ ಖರ್ಗೆ ಅವರು ರಾಜ್ಯದಲ್ಲಿ ಮುಖ್ಯಮಂತ್ರಿಯಾದರೆ ದಲಿತರ ಮತಗಳ ಕ್ರೋಢೀಕರಣದ ಜೊತೆಗೆ, ಕಾಂಗ್ರೆಸ್‌ ಪಕ್ಷದಲ್ಲಿ ಭುಗಿಲೆದ್ದಿರುವ ಬಣ ಬಡಿದಾಟವೂ ಶಮನಾಗಲಿದೆ ಎಂಬ ಲೆಕ್ಕಾಚಾರ ಹೈಕಮಾಂಡ್‌ನದ್ದು ಎಂಬ ಚರ್ಚೆಯಿದೆ.

ಒಂದು ವೇಳೆ, ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ, ದಲಿತ ಸಮುದಾಯದವರೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವುದೇ ಆದರೆ, ಕಾಂಗ್ರೆಸ್‌ ಹೈಕಮಾಂಡ್‌ನ ಮೊದಲ ಆಯ್ಕೆ ಖರ್ಗೆ ಎನ್ನಲಾಗುತ್ತಿದೆ. ಆದರೆ, ಹೈಕಮಾಂಡ್‌ ನಾಯಕರ ಬೇಡಿಕೆಯನ್ನು ಖರ್ಗೆ ಸುಲಭಕ್ಕೆ ಒಪ್ಪಿಲ್ಲ ಎಂಬ ಮಾತುಗಳಿದ್ದು, ಅವರನ್ನು ಮನವೊಲಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಆಗಬೇಕೆಂಬ ಹಠದಿಂದ ಹಿನ್ನಡೆಯಾಯಿತೇ?

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದುಕೊಂಡಿತು. ಬಿಜೆಪಿಗಿದ್ದ ಆಡಳಿತ ವಿರೋಧಿ ಅಲೆಯ ಜೊತೆಗೆ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಅವರ ಪಕ್ಷ ಸಂಘಟನೆ ಮತ್ತು ಚುನಾವಣಾ ಪ್ರಚಾರವೂ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ನೆರವಾಗಿತ್ತು. ಫಲಿತಾಂಶ ಬಂದ ಹಲವಾರು ದಿನಗಳ ಹಗ್ಗಜಗ್ಗಾಟದ ಬಳಿಕ ಕೊನೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ತಲಾ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಎಂಬ ಒಪ್ಪಂದವಾಗಿದೆ ಎಂಬ ಸುದ್ದಿಯೂ ಇತ್ತು. ಆದರೆ, ಇಬ್ಬರೂ ನಾಯಕರು ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಮಾತನಾಡಿರಲಿಲ್ಲ. ಆದರೆ, ಉಭಯ ನಾಯಕರ ಆಪ್ತರು ಮಾತ್ರ ಈ ಬಗ್ಗೆ ಆಗಾಗ್ಗೆ ವೇದಿಕೆಗಳ ಮೇಲೆ ಅಧಿಕಾರ ಹಂಚಿಕೆ ಸೂತ್ರದ ಕುರಿತು ಮಾತನಾಡಿದ್ದುಂಟು.

ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿದ್ದಂತೆಯೇ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಖುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಸಹ ದೆಹಲಿಯಲ್ಲಿ ಕುಳಿತು ಅಷ್ಟೇ ಪ್ರಮಾಣದಲ್ಲಿ ಕಾರ್ಯತಂತ್ರ ಮಾಡಿದ್ದಾರೆ. ಈ ಒಟ್ಟಾರೆ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿಯಾಗಬೇಕೆಂಬ ಡಿ.ಕೆ. ಶಿವಕುಮಾರ್ ಒತ್ತಡವೇ ಅವರಿಗೆ ನಕಾರಾತ್ಮಕವಾಗಿ ತಿರುಗಿದೆ ಎನ್ನಲಾಗುತ್ತದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ, ಖರ್ಗೆ ಅವರನ್ನೇ ಆಯ್ಕೆ ಮಾಡುವ ಮೂಲಕ ಉಭಯ ನಾಯಕರ ಬಾಯಿ ಮುಚ್ಚಿಸಲು ಹೈಕಮಾಂಡ್ ಉಪಾಯ ಮಾಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...