Homeಕರ್ನಾಟಕಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

ಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

- Advertisement -
- Advertisement -

ನವೆಂಬರ್‌ ಮಾಸ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ‘ಈ ಹಿಂದೆ’ ಮಾಡಿಕೊಂಡ ಒಪ್ಪಂದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಡಿ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ ಎಂಬ ಬಿಸಿ ಬಿಸಿ ಚರ್ಚೆ ನಡೆದು ಈಗ ತಣ್ಣಗಾಗಿದೆ.

ಸಚಿವ ಸಂಪುಟ ಪುನರ್‌ರಚನೆ ಆಗುತ್ತದೆ ಎಂಬ ಸುದ್ದಿ ಬೆನ್ನಲ್ಲೇ ಹಲವು ಶಾಸಕರು ಮಂತ್ರಿ ಸ್ಥಾನಕ್ಕಾಗಿ ಮತ್ತು ತಮ್ಮ ಸ್ಥಾನ ಉಳಿಸಿಕೊಳ್ಳಲು ಹತ್ತಾರು ಮಂತ್ರಿಗಳು ದೆಹಲಿಗೆ ಮ್ಯಾರಥನ್ ಕೂಡ ನಡೆಸಿದ್ದಾರೆ. ಆದರೆ, ಇದೇ ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಿಗೆ ‘ಉಪಹಾರ’ ಸೇವಿಸುವ ಮೂಲಕ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತು ಸಂಪುಟ ಪುನರ್‌ರಚನೆ ಚರ್ಚೆಗೆ ಅಲ್ಪ ವಿರಾಮ ಬಿದ್ದಿದೆ. “ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ಮುಂದುವರಿಯುತ್ತೇವೆ” ಎಂದು ಉಭಯ ನಾಯಕರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಂದರೆ, ಮುಖ್ಯಮಂತ್ರಿ ಬದಲಾವಣೆ ಸಂಘರ್ಷಕ್ಕೀಗ ‘ಕದನ ವಿರಾಮ’ ಸಿಕ್ಕಿದೆ. ಸಿಎಂ ಬದಲಾವಣೆ ವಿಚಾರವಂತೂ ‘ಬೂದಿ ಮುಚ್ಚಿದ ಕೆಂಡ’ದಂತಿದೆ.

ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ಉಪಹಾರದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿವಾದ ಇನ್ನೇನು ಮುಗಿದೇ ಹೋಯಿತು ಎನ್ನುವ ಹೊತ್ತಿಗೆ, ಮತ್ತೊಂದು ಅಚ್ಚರಿ ಹೆಸರು ಮುನ್ನೆಲೆಗೆ ಬಂದಿದೆ. ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿಯಾಗಿರುವ ‘ಹಿರಿಯ ಕಾಂಗ್ರೆಸ್‌ ನಾಯಕ’ರೊಬ್ಬರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯ ಈಗ ಚರ್ಚೆಯಾಗುತ್ತಿದೆ.

ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ?

ರಾಜ್ಯ ರಾಜಕೀಯ ಇತಿಹಾಸದಲ್ಲಿ ಈವರೆಗೆ ದಲಿತ (ಪರಿಶಿಷ್ಟ ಜಾತಿ ಮತ್ತು ಪಂಗಡ) ಸಮುದಾಯದವರೊಬ್ಬರು ಮುಖ್ಯಮಂತ್ರಿಯಾಗಿಲ್ಲ. ಸಿಎಂ ಹುದ್ದೆಯ ಚರ್ಚೆ ಆದಾಗಲೆಲ್ಲಾ ಈ ರಾಜ್ಯದ ಪ್ರಭಾವಿ ಜಾತಿಗಳೇ ಮುಂಚೂಣಿಯಲ್ಲಿರುತ್ತವೆ. ಆದರೆ, ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಬದಲಾವಣೆ ಚರ್ಚೆಯಲ್ಲಿ ‘ದಲಿತ ಮುಖ್ಯಮಂತ್ರಿ’ ಕೂಗು ಜೋರಾಗೇ ಕೇಳಿಬರುತ್ತಿದೆ. ಪರಿಶಿಷ್ಠ ಸಮುದಾಯದ ಶಾಸಕರು ಸಹ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಬಳಿ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಡಾ. ಜಿ.ಪರಮೇಶ್ವರ್ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸತೀಶ್‌ ಜಾರಕಿಹೊಳಿ ಹೆಸರುಗಳು ದಲಿತ ಮುಖ್ಯಮಂತ್ರಿ ಚರ್ಚೆಯ ಮುಂಚೂಣಿಯಲ್ಲಿವೆ. ಉಳಿದ ದಲಿತ ನಾಯಕರಿಗೆ ಹೋಲಿಸಿದರೆ ಹಾಗೂ ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಪರಮೇಶ್ವರ್ ಮತ್ತು ಸತೀಶ್‌ ಹೆಸರನ್ನು ಹೈಕಮಾಂಡ್‌ ಒಪ್ಪಲ್ಲ ಎನ್ನಲಾಗುತ್ತಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್‌ ಹೈಕಕಮಾಂಡ್ ನಾಯಕರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಮುಖ್ಯಮಂತ್ರಿ ಪಟ್ಟಕ್ಕೇರಿಸುವ ಇಂಗಿತ ವ್ಯಕ್ತಪಡಿಸಿದೆ ಎನ್ನಲಾಗುತ್ತಿದೆ.

ಖರ್ಗೆ ಆಯ್ಕೆಗೆ ಕಾರಣಗಳೇನು?

ಕಳೆದ ಐದು ದಶಕಗಳಿಂದ ರಾಜಕಾರಣದಲ್ಲಿರುವ ಖರ್ಗೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪ್ರಭಾವಿ ಎನಿಸಿದ್ದಾರೆ. ‘ಕ್ಲೀನ್‌ ಇಮೇಜ್‌’ ಜೊತೆಗೆ ರಾಜಕೀಯ ಚಾಕಚಕ್ಯತೆಯೂ ಇದೆ. ಬಿಜೆಪಿ ಮತ್ತು ಸಂಘಪರಿವಾರವನ್ನು ರಾಜಕೀಯವಾಗಿ ಎದುರಿಸುವ ಎದೆಗಾರಿಕೆ ಜೊತೆಗೆ, ಕಳೆದ 12 ವರ್ಷಗಳಿಂದ ಸಂಸತ್ತಿನಲ್ಲಿ ಕೇಂದ್ರ ಸರ್ಕಾರವನ್ನು ಸಾಕಷ್ಟು ಇಕ್ಕಟ್ಟಿಗೂ ಸಿಲುಕಿಸಿದ್ದಾರೆ. ಇದೇ ಕಾರಣಕ್ಕೆ ಬಹಳ ವರ್ಷಗಳ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ರಾಜ್ಯ ರಾಜಕಾರಣದಲ್ಲಿದ್ದಾಗಲೇ ಮುಖ್ಯಮಂತ್ರಿ ರೇಸ್‌ನಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಲವು ಭಾರಿ ಉನ್ನತ ಸ್ಥಾನ ಸ್ವಲ್ಪದರಲ್ಲೇ ಕೈತಪ್ಪಿದೆ. ಇದೀಗ, ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪ್ರಭಾವಿಯಾಗಿರುವ ಖರ್ಗೆ ಅವರು ರಾಜ್ಯದಲ್ಲಿ ಮುಖ್ಯಮಂತ್ರಿಯಾದರೆ ದಲಿತರ ಮತಗಳ ಕ್ರೋಢೀಕರಣದ ಜೊತೆಗೆ, ಕಾಂಗ್ರೆಸ್‌ ಪಕ್ಷದಲ್ಲಿ ಭುಗಿಲೆದ್ದಿರುವ ಬಣ ಬಡಿದಾಟವೂ ಶಮನಾಗಲಿದೆ ಎಂಬ ಲೆಕ್ಕಾಚಾರ ಹೈಕಮಾಂಡ್‌ನದ್ದು ಎಂಬ ಚರ್ಚೆಯಿದೆ.

ಒಂದು ವೇಳೆ, ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ, ದಲಿತ ಸಮುದಾಯದವರೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವುದೇ ಆದರೆ, ಕಾಂಗ್ರೆಸ್‌ ಹೈಕಮಾಂಡ್‌ನ ಮೊದಲ ಆಯ್ಕೆ ಖರ್ಗೆ ಎನ್ನಲಾಗುತ್ತಿದೆ. ಆದರೆ, ಹೈಕಮಾಂಡ್‌ ನಾಯಕರ ಬೇಡಿಕೆಯನ್ನು ಖರ್ಗೆ ಸುಲಭಕ್ಕೆ ಒಪ್ಪಿಲ್ಲ ಎಂಬ ಮಾತುಗಳಿದ್ದು, ಅವರನ್ನು ಮನವೊಲಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಆಗಬೇಕೆಂಬ ಹಠದಿಂದ ಹಿನ್ನಡೆಯಾಯಿತೇ?

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದುಕೊಂಡಿತು. ಬಿಜೆಪಿಗಿದ್ದ ಆಡಳಿತ ವಿರೋಧಿ ಅಲೆಯ ಜೊತೆಗೆ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಅವರ ಪಕ್ಷ ಸಂಘಟನೆ ಮತ್ತು ಚುನಾವಣಾ ಪ್ರಚಾರವೂ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ನೆರವಾಗಿತ್ತು. ಫಲಿತಾಂಶ ಬಂದ ಹಲವಾರು ದಿನಗಳ ಹಗ್ಗಜಗ್ಗಾಟದ ಬಳಿಕ ಕೊನೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ತಲಾ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಎಂಬ ಒಪ್ಪಂದವಾಗಿದೆ ಎಂಬ ಸುದ್ದಿಯೂ ಇತ್ತು. ಆದರೆ, ಇಬ್ಬರೂ ನಾಯಕರು ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಮಾತನಾಡಿರಲಿಲ್ಲ. ಆದರೆ, ಉಭಯ ನಾಯಕರ ಆಪ್ತರು ಮಾತ್ರ ಈ ಬಗ್ಗೆ ಆಗಾಗ್ಗೆ ವೇದಿಕೆಗಳ ಮೇಲೆ ಅಧಿಕಾರ ಹಂಚಿಕೆ ಸೂತ್ರದ ಕುರಿತು ಮಾತನಾಡಿದ್ದುಂಟು.

ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿದ್ದಂತೆಯೇ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಖುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಸಹ ದೆಹಲಿಯಲ್ಲಿ ಕುಳಿತು ಅಷ್ಟೇ ಪ್ರಮಾಣದಲ್ಲಿ ಕಾರ್ಯತಂತ್ರ ಮಾಡಿದ್ದಾರೆ. ಈ ಒಟ್ಟಾರೆ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿಯಾಗಬೇಕೆಂಬ ಡಿ.ಕೆ. ಶಿವಕುಮಾರ್ ಒತ್ತಡವೇ ಅವರಿಗೆ ನಕಾರಾತ್ಮಕವಾಗಿ ತಿರುಗಿದೆ ಎನ್ನಲಾಗುತ್ತದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ, ಖರ್ಗೆ ಅವರನ್ನೇ ಆಯ್ಕೆ ಮಾಡುವ ಮೂಲಕ ಉಭಯ ನಾಯಕರ ಬಾಯಿ ಮುಚ್ಚಿಸಲು ಹೈಕಮಾಂಡ್ ಉಪಾಯ ಮಾಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...