Homeಕರ್ನಾಟಕಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

ಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

- Advertisement -
- Advertisement -

ನವೆಂಬರ್‌ ಮಾಸ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ‘ಈ ಹಿಂದೆ’ ಮಾಡಿಕೊಂಡ ಒಪ್ಪಂದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಡಿ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ ಎಂಬ ಬಿಸಿ ಬಿಸಿ ಚರ್ಚೆ ನಡೆದು ಈಗ ತಣ್ಣಗಾಗಿದೆ.

ಸಚಿವ ಸಂಪುಟ ಪುನರ್‌ರಚನೆ ಆಗುತ್ತದೆ ಎಂಬ ಸುದ್ದಿ ಬೆನ್ನಲ್ಲೇ ಹಲವು ಶಾಸಕರು ಮಂತ್ರಿ ಸ್ಥಾನಕ್ಕಾಗಿ ಮತ್ತು ತಮ್ಮ ಸ್ಥಾನ ಉಳಿಸಿಕೊಳ್ಳಲು ಹತ್ತಾರು ಮಂತ್ರಿಗಳು ದೆಹಲಿಗೆ ಮ್ಯಾರಥನ್ ಕೂಡ ನಡೆಸಿದ್ದಾರೆ. ಆದರೆ, ಇದೇ ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಿಗೆ ‘ಉಪಹಾರ’ ಸೇವಿಸುವ ಮೂಲಕ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತು ಸಂಪುಟ ಪುನರ್‌ರಚನೆ ಚರ್ಚೆಗೆ ಅಲ್ಪ ವಿರಾಮ ಬಿದ್ದಿದೆ. “ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ಮುಂದುವರಿಯುತ್ತೇವೆ” ಎಂದು ಉಭಯ ನಾಯಕರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಂದರೆ, ಮುಖ್ಯಮಂತ್ರಿ ಬದಲಾವಣೆ ಸಂಘರ್ಷಕ್ಕೀಗ ‘ಕದನ ವಿರಾಮ’ ಸಿಕ್ಕಿದೆ. ಸಿಎಂ ಬದಲಾವಣೆ ವಿಚಾರವಂತೂ ‘ಬೂದಿ ಮುಚ್ಚಿದ ಕೆಂಡ’ದಂತಿದೆ.

ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ಉಪಹಾರದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿವಾದ ಇನ್ನೇನು ಮುಗಿದೇ ಹೋಯಿತು ಎನ್ನುವ ಹೊತ್ತಿಗೆ, ಮತ್ತೊಂದು ಅಚ್ಚರಿ ಹೆಸರು ಮುನ್ನೆಲೆಗೆ ಬಂದಿದೆ. ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿಯಾಗಿರುವ ‘ಹಿರಿಯ ಕಾಂಗ್ರೆಸ್‌ ನಾಯಕ’ರೊಬ್ಬರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯ ಈಗ ಚರ್ಚೆಯಾಗುತ್ತಿದೆ.

ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ?

ರಾಜ್ಯ ರಾಜಕೀಯ ಇತಿಹಾಸದಲ್ಲಿ ಈವರೆಗೆ ದಲಿತ (ಪರಿಶಿಷ್ಟ ಜಾತಿ ಮತ್ತು ಪಂಗಡ) ಸಮುದಾಯದವರೊಬ್ಬರು ಮುಖ್ಯಮಂತ್ರಿಯಾಗಿಲ್ಲ. ಸಿಎಂ ಹುದ್ದೆಯ ಚರ್ಚೆ ಆದಾಗಲೆಲ್ಲಾ ಈ ರಾಜ್ಯದ ಪ್ರಭಾವಿ ಜಾತಿಗಳೇ ಮುಂಚೂಣಿಯಲ್ಲಿರುತ್ತವೆ. ಆದರೆ, ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಬದಲಾವಣೆ ಚರ್ಚೆಯಲ್ಲಿ ‘ದಲಿತ ಮುಖ್ಯಮಂತ್ರಿ’ ಕೂಗು ಜೋರಾಗೇ ಕೇಳಿಬರುತ್ತಿದೆ. ಪರಿಶಿಷ್ಠ ಸಮುದಾಯದ ಶಾಸಕರು ಸಹ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಬಳಿ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಡಾ. ಜಿ.ಪರಮೇಶ್ವರ್ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸತೀಶ್‌ ಜಾರಕಿಹೊಳಿ ಹೆಸರುಗಳು ದಲಿತ ಮುಖ್ಯಮಂತ್ರಿ ಚರ್ಚೆಯ ಮುಂಚೂಣಿಯಲ್ಲಿವೆ. ಉಳಿದ ದಲಿತ ನಾಯಕರಿಗೆ ಹೋಲಿಸಿದರೆ ಹಾಗೂ ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಪರಮೇಶ್ವರ್ ಮತ್ತು ಸತೀಶ್‌ ಹೆಸರನ್ನು ಹೈಕಮಾಂಡ್‌ ಒಪ್ಪಲ್ಲ ಎನ್ನಲಾಗುತ್ತಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್‌ ಹೈಕಕಮಾಂಡ್ ನಾಯಕರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಮುಖ್ಯಮಂತ್ರಿ ಪಟ್ಟಕ್ಕೇರಿಸುವ ಇಂಗಿತ ವ್ಯಕ್ತಪಡಿಸಿದೆ ಎನ್ನಲಾಗುತ್ತಿದೆ.

ಖರ್ಗೆ ಆಯ್ಕೆಗೆ ಕಾರಣಗಳೇನು?

ಕಳೆದ ಐದು ದಶಕಗಳಿಂದ ರಾಜಕಾರಣದಲ್ಲಿರುವ ಖರ್ಗೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪ್ರಭಾವಿ ಎನಿಸಿದ್ದಾರೆ. ‘ಕ್ಲೀನ್‌ ಇಮೇಜ್‌’ ಜೊತೆಗೆ ರಾಜಕೀಯ ಚಾಕಚಕ್ಯತೆಯೂ ಇದೆ. ಬಿಜೆಪಿ ಮತ್ತು ಸಂಘಪರಿವಾರವನ್ನು ರಾಜಕೀಯವಾಗಿ ಎದುರಿಸುವ ಎದೆಗಾರಿಕೆ ಜೊತೆಗೆ, ಕಳೆದ 12 ವರ್ಷಗಳಿಂದ ಸಂಸತ್ತಿನಲ್ಲಿ ಕೇಂದ್ರ ಸರ್ಕಾರವನ್ನು ಸಾಕಷ್ಟು ಇಕ್ಕಟ್ಟಿಗೂ ಸಿಲುಕಿಸಿದ್ದಾರೆ. ಇದೇ ಕಾರಣಕ್ಕೆ ಬಹಳ ವರ್ಷಗಳ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ರಾಜ್ಯ ರಾಜಕಾರಣದಲ್ಲಿದ್ದಾಗಲೇ ಮುಖ್ಯಮಂತ್ರಿ ರೇಸ್‌ನಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಲವು ಭಾರಿ ಉನ್ನತ ಸ್ಥಾನ ಸ್ವಲ್ಪದರಲ್ಲೇ ಕೈತಪ್ಪಿದೆ. ಇದೀಗ, ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪ್ರಭಾವಿಯಾಗಿರುವ ಖರ್ಗೆ ಅವರು ರಾಜ್ಯದಲ್ಲಿ ಮುಖ್ಯಮಂತ್ರಿಯಾದರೆ ದಲಿತರ ಮತಗಳ ಕ್ರೋಢೀಕರಣದ ಜೊತೆಗೆ, ಕಾಂಗ್ರೆಸ್‌ ಪಕ್ಷದಲ್ಲಿ ಭುಗಿಲೆದ್ದಿರುವ ಬಣ ಬಡಿದಾಟವೂ ಶಮನಾಗಲಿದೆ ಎಂಬ ಲೆಕ್ಕಾಚಾರ ಹೈಕಮಾಂಡ್‌ನದ್ದು ಎಂಬ ಚರ್ಚೆಯಿದೆ.

ಒಂದು ವೇಳೆ, ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ, ದಲಿತ ಸಮುದಾಯದವರೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವುದೇ ಆದರೆ, ಕಾಂಗ್ರೆಸ್‌ ಹೈಕಮಾಂಡ್‌ನ ಮೊದಲ ಆಯ್ಕೆ ಖರ್ಗೆ ಎನ್ನಲಾಗುತ್ತಿದೆ. ಆದರೆ, ಹೈಕಮಾಂಡ್‌ ನಾಯಕರ ಬೇಡಿಕೆಯನ್ನು ಖರ್ಗೆ ಸುಲಭಕ್ಕೆ ಒಪ್ಪಿಲ್ಲ ಎಂಬ ಮಾತುಗಳಿದ್ದು, ಅವರನ್ನು ಮನವೊಲಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಆಗಬೇಕೆಂಬ ಹಠದಿಂದ ಹಿನ್ನಡೆಯಾಯಿತೇ?

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದುಕೊಂಡಿತು. ಬಿಜೆಪಿಗಿದ್ದ ಆಡಳಿತ ವಿರೋಧಿ ಅಲೆಯ ಜೊತೆಗೆ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಅವರ ಪಕ್ಷ ಸಂಘಟನೆ ಮತ್ತು ಚುನಾವಣಾ ಪ್ರಚಾರವೂ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ನೆರವಾಗಿತ್ತು. ಫಲಿತಾಂಶ ಬಂದ ಹಲವಾರು ದಿನಗಳ ಹಗ್ಗಜಗ್ಗಾಟದ ಬಳಿಕ ಕೊನೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ತಲಾ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಎಂಬ ಒಪ್ಪಂದವಾಗಿದೆ ಎಂಬ ಸುದ್ದಿಯೂ ಇತ್ತು. ಆದರೆ, ಇಬ್ಬರೂ ನಾಯಕರು ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಮಾತನಾಡಿರಲಿಲ್ಲ. ಆದರೆ, ಉಭಯ ನಾಯಕರ ಆಪ್ತರು ಮಾತ್ರ ಈ ಬಗ್ಗೆ ಆಗಾಗ್ಗೆ ವೇದಿಕೆಗಳ ಮೇಲೆ ಅಧಿಕಾರ ಹಂಚಿಕೆ ಸೂತ್ರದ ಕುರಿತು ಮಾತನಾಡಿದ್ದುಂಟು.

ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿದ್ದಂತೆಯೇ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಖುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಸಹ ದೆಹಲಿಯಲ್ಲಿ ಕುಳಿತು ಅಷ್ಟೇ ಪ್ರಮಾಣದಲ್ಲಿ ಕಾರ್ಯತಂತ್ರ ಮಾಡಿದ್ದಾರೆ. ಈ ಒಟ್ಟಾರೆ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿಯಾಗಬೇಕೆಂಬ ಡಿ.ಕೆ. ಶಿವಕುಮಾರ್ ಒತ್ತಡವೇ ಅವರಿಗೆ ನಕಾರಾತ್ಮಕವಾಗಿ ತಿರುಗಿದೆ ಎನ್ನಲಾಗುತ್ತದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ, ಖರ್ಗೆ ಅವರನ್ನೇ ಆಯ್ಕೆ ಮಾಡುವ ಮೂಲಕ ಉಭಯ ನಾಯಕರ ಬಾಯಿ ಮುಚ್ಚಿಸಲು ಹೈಕಮಾಂಡ್ ಉಪಾಯ ಮಾಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...