Homeಕರ್ನಾಟಕನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

’ನಾವು ಬೀದಿಗಿಳಿದು ಹೋರಾಟ ಮಾಡಿದರೆ ಕೋವಿಡ್ ನಿಯಮ ಉಲ್ಲಂಘನೆ ಎಂದು ಕೇಸು ಹಾಕುತ್ತಾರೆ. ಅರೆಸ್ಟ್ ಮಾಡುತ್ತಾರೆ. ಆದರೆ ಬಿಜೆಪಿ ಅವರಿಗೆ ಮಾತ್ರ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲ’

- Advertisement -
- Advertisement -

“ನಗರದ ಮಧ್ಯಮ ವರ್ಗದ ಮಂದಿಗೆ ನಕಲಿ ದೇಶಭಕ್ತಿಯನ್ನು ಹೇಳುತ್ತಿದ್ದ ಬಿಜೆಪಿ ಈಗ ನಗರ ವಾಸಿಗಳ ಮತ್ತು ತೆರಿಗೆದಾರರ ಬದುಕನ್ನೂ ಹೈರಾಣ ಮಾಡಿಟ್ಟಿದೆ. ವಿಪರೀತ ಬೆಲೆ ಏರಿಕೆ ಮತ್ತು ಪರೋಕ್ಷ ಹಾಗೂ ಪ್ರತ್ಯಕ್ಷ ತೆರಿಗೆಗಳ ಭಾರಕ್ಕೆ ನಗರ ಪ್ರದೇಶಗಳಲ್ಲಿರುವ ಜನರು, ಮಧ್ಯಮ ವರ್ಗದ ಮಂದಿ ಕೂಡ ಇತರೆ ಸಮುದಾಯಗಳ ರೀತಿಯಲ್ಲಿ ಹೈರಾಣಾಗಿ ಹೋಗಿದ್ದಾರೆ” ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ಕೆಲವರಿಗೆ ತಮ್ಮಲ್ಲಿ ಯಾವುದರ ಕೊರತೆ ಇರುತ್ತದೋ ಅದರ ಬಗ್ಗೆಯೇ ಹೆಚ್ಚೆಚ್ಚು ಮಾತನಾಡುವ ಚಟ ಇರುತ್ತದೆ. ಬಿಜೆಪಿ ಮತ್ತು ಪರಿವಾರದ ಮಂದಿ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲ. ಇಡೀ ದೇಶದ ಜನ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾಗ ಬಿಜೆಪಿ ಮತ್ತು ಪರಿವಾರ ದೇಶದ ಜನತೆಯ ಜತೆಗೆ ನಿಲ್ಲಲಿಲ್ಲ. ಹೀಗಾಗಿ ಬಿಜೆಪಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇಲ್ಲ ಮತ್ತು ಬಿಜೆಪಿಯಲ್ಲಿ ಹುತಾತ್ಮರಾದವರು ಯಾರೂ ಇಲ್ಲ. ಅದಕ್ಕೇ ಬಿಜೆಪಿ ಹೆಚ್ಚೆಚ್ಚು ದೇಶಭಕ್ತಿಯ ಬಗ್ಗೆ ಮಾತನಾಡುತ್ತದೆ” ಎಂದಿದ್ದಾರೆ.

’ಒಂದೇ ಮಾತರಂ, ಜೈ ಜವಾನ್-ಜೈ ಕಿಸಾನ್, ಸ್ವದೇಶಿ ಘೋಷಣೆಗಳೆಲ್ಲಾ ಸ್ವಾತಂತ್ರ್ಯ ಹೋರಾಟದ ನಾಯಕರುಗಳು ಕೊಟ್ಟಿದ್ದು. ಈ ಘೋಷಣೆಗಳಿಗೂ ಬಿಜೆಪಿಗೂ ಯಾವ ಸಂಬಂಧವೂ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ  ತಂದು ಕೊಟ್ಟಿದ್ದು, ದೇಶದ ಜನರ ಹೋರಾಟದ ಜತೆಗೆ ನಿಂತಿದ್ದು ಕಾಂಗ್ರೆಸ್ ಪಕ್ಷ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

’ಬೆಲೆ ಏರಿಕೆ ಮತ್ತು ಹಣದುಬ್ಬರದಿಂದ ನಗರವಾಸಿಗಳ ಬದುಕು ನರಕವಾಗಿದೆ. ವಿದ್ಯುಚ್ಚಕ್ತಿ ಬಿಲ್ಲುಗಳು ಶೇ 30 ರಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಮೋದಿ ಅವರು ಪ್ರಧಾನಿ ಆಗಿರುವವರೆಗೂ ಇಳಿಯುವಂತೆ ಕಾಣುತ್ತಿಲ್ಲ. ಒಂದು ವಾರದಲ್ಲಿ ಅಡುಗೆ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಾಗಿ ನಗರದಲ್ಲಿ 886 ರೂಪಾಯಿ ಗ್ರಾಮೀಣ ಭಾಗದಲ್ಲಿ 900 ರೂಪಾಯಿ ತಲುಪಿದೆ. ಮನೆಗಳ ಆಸ್ತಿ ತೆರಿಗೆ ವಿಪರೀತ ಹೆಚ್ಚಾಗಿರುವುದು ಮಾತ್ರವಲ್ಲದೆ ಖಾಲಿ ಜಾಗಗಳಿಗೂ ತೆರಿಗೆ ವಿಧಿಸುತ್ತಿದ್ದಾರೆ. ಕಬ್ಬಿಣ, ಸಿಮೆಂಟ್ ಸೇರಿ ದಿನನಿತ್ಯ ಬಳಕೆಯ ಎಲ್ಲಾ ವಸ್ತುಗಳ ಬೆಲೆಯೂ ಆಕಾಶ ಮುಟ್ಟುತ್ತಿದೆ. ಅಚ್ಛೆ ದಿನ್ ಅಂದರೆ ಇದೇನಾ…?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

’ಕೇಂದ್ರ ಸರ್ಕಾರ ನಗರ ಪ್ರದೇಶಗಳಿಗೆ ಕೊಡುತ್ತಿದ್ದ ಅನುದಾನ ಕಡಿತಗೊಳಿಸಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬಜೆಟ್ ಗಾತ್ರ ಕಡಿಮೆ ಇದ್ದಾಗಲೂ 15 ಸಾವಿರ ಕೋಟಿ ಅನುದಾನ ನೀಡಿದ್ದೆ. ಈಗ ಬಜೆಟ್ ಗಾತ್ರ ಹೆಚ್ಚಾಗಿದ್ದರೂ ಬಿಜೆಪಿ ಸರ್ಕಾರ ನೀಡಿರುವುದು 14 ಸಾವಿರ ಕೋಟಿ ಮಾತ್ರ. ಹೀಗಾಗಿ ನಮ್ಮ ಸರ್ಕಾರದ ಅವಧಿಯಲ್ಲೇ ಅತಿ ಹೆಚ್ಚು ಹಣ ನಗರ ಅಭಿವೃದ್ಧಿಗೆ ನೀಡಿದ್ದು ಬಿಟ್ಟರೆ ಬಿಜೆಪಿಯವರು ಮಾಡಿದ್ದು ಬರೀ ಭಜನೆ ಅಷ್ಟೆ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

’ತೆರಿಗೆದಾರರ, ನಗರ ವಾಸಿಗಳ, ಗ್ರಾಮೀಣ ಜನರನ್ನು ಬೆಲೆ ಏರಿಕೆಯ ನರಕದಲ್ಲಿ ನರಳಿಸುತ್ತಿರುವ ಬಿಜೆಪಿ ಸರ್ಕಾರ ಕಾರ್ಪೋರೇಟ್ ಶ್ರೀಮಂತರ ಆಸ್ತಿ ಪ್ರತೀ ವರ್ಷ ಲಕ್ಷ ಲಕ್ಷ ಕೋಟಿಗಳ ಗಡಿ ದಾಟಿಸುತ್ತಿದೆ.
ರೈತರು ಸಾಲ ತೀರಿಸಿಲ್ಲ ಎಂದು ಅವರ ಟ್ರಾಕ್ಟರ್‌ಗಳನ್ನು ಜಪ್ತಿ ಮಾಡುವ ಬಿಜೆಪಿ ಸರ್ಕಾರ ಮೋದಿ ಪ್ರಧಾನಿ ಆದ 7 ವರ್ಷಗಳಲ್ಲಿ 7 ಲಕ್ಷ ಕೋಟಿಯಷ್ಟು ಕಾರ್ಪೋರೇಟ್ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದೆ. ಇದರಲ್ಲಿ ಅಂಬಾನಿ ಒಬ್ಬನದ್ದೇ 4.5 ಲಕ್ಷ ಕೋಟಿ ಸೇರಿದೆ’ ಎಂದಿದ್ದಾರೆ.

’ಆಸ್ತಿ ನಗದೀಕರಣ ಹೆಸರಿನಲ್ಲಿ ಭಾರತದ ರಸ್ತೆಗಳು, ಏರ್ಪೋರ್ಟ್ಗಳು, ರೈಲು ನಿಲ್ದಾಣಗಳು ಸೇರಿ ಪ್ರತಿಯೊಂದನ್ನೂ ಖಾಸಗಿಯವರಿಗೆ ಒಪ್ಪಿಸಲಾಗುತ್ತಿದೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುವ ಮೋದಿ ಅವರು ಈಗ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದೆಲ್ಲಾ ಯಾರ ಅವಧಿಯಲ್ಲಿ ಆಗಿದ್ದು..? ದೇಶದ ಜನ ಕಳೆದ 70 ವರ್ಷಗಳಲ್ಲಿ ಸೃಷ್ಟಿಸಿದ 6 ಲಕ್ಷ ಕೋಟಿ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಮೋದಿಯವರು ಈ ದೇಶದ ಜನರ ಅನುಮತಿ, ಒಪ್ಪಿಗೆ ಪಡೆದಿದ್ದಾರಾ..?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

’7 ವರ್ಷಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಂದ ಸುಲಿಗೆ ಮಾಡಿದ ಹಣದ ಪ್ರಮಾಣ 22 ಲಕ್ಷ ಕೋಟಿ. ಇದರಲ್ಲಿ ಕರ್ನಾಟಕವೊಂದರಿಂದಲೇ ಸುಲಿಗೆ ಮಾಡಿದ್ದು 1.20 ಲಕ್ಷ ಕೋಟಿ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ದೇಶಕ್ಕೆ ಆಹಾರ ಭದ್ರತೆ ಒದಗಿಸಿ, ಸಾರ್ವಜನಿಕ ಉದ್ದಿಮೆಗಳನ್ನು ಸೃಷ್ಟಿಸಿ ಲಕ್ಷಾಂತರ ಕೋಟಿ ಆಸ್ತಿಯನ್ನು ಸೃಷ್ಟಿಸಿದ್ದು ಕಾಂಗ್ರೆಸ್. ಇದನ್ನೆಲ್ಲಾ ಒಂದೊಂದಾಗಿ ಮಾರಾಟ ಮಾಡುತ್ತಾ ಕುಳಿತಿರುವ ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ಸಾವಿರಾರು ಸುಳ್ಳುಗಳನ್ನು ಹಿಂದೆ ಮುಂದೆ ನೋಡದೆ ಹೇಳುತ್ತಲೇ ಹೋಗುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

’ನಾನು ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿತ್ತು. ಈ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ ಒಂದೇ ಒಂದು ಮನೆ ಕಟ್ಟಿಸಿದ್ದರೆ ತೋರಿಸಲಿ. ನಮ್ಮ ಕಾಂಗ್ರೆಸ್ ಅವಧಿಯಲ್ಲಿ ನೀಡಿದ ಬಡವರ ಮನೆಗಳಿಗೆ ಕಟ್ಟಲು ಬಾಕಿ ಇದ್ದ 2,786 ಕೋಟಿ ರೂಪಾಯಿಯನ್ನು ಮನ್ನಾ ಮಾಡಿ ಬಡವರಿಗೆ ನೆರವಾದೆವು’ ಎಂದಿದ್ದಾರೆ.

“ವಿಪರೀತ ಬೆಲೆ ಏರಿಕೆ, ತೆರಿಗೆಯ ಸುಲಿಗೆ ನಡೆಯುತ್ತಿದ್ದರೂ ಕಾಂಗ್ರೆಸ್ ವಿರೋಧ ಪಕ್ಷವಾಗಿ ದೊಡ್ಡ ಮಟ್ಟದ ಹೋರಾಟ ಮಾಡುವಲ್ಲಿ ವಿಫಲವಾಗಿದ್ದು ಏಕೆ ಎಂದು ಕೆಲವರು ಪ್ರಶ್ನಿಸುತ್ತಾರೆ. ನಾವೇನು ಬಿಜೆಪಿಯವರ ಕಪಾಳಕ್ಕೆ ಹೊಡೆಯಲು ಸಾಧ್ಯವಾ ? ನಾವು ಬೀದಿಗಿಳಿದು ಹೋರಾಟ ಮಾಡಿದರೆ ಕೋವಿಡ್ ನಿಯಮ ಉಲ್ಲಂಘನೆ ಎಂದು ಕೇಸು ಹಾಕುತ್ತಾರೆ. ಅರೆಸ್ಟ್ ಮಾಡುತ್ತಾರೆ. ಆದರೆ ಬಿಜೆಪಿ ಕೇಂದ್ರ ಮಂತ್ರಿಗಳು ‘ಜನಾಶೀರ್ವಾದ ಯಾತ್ರೆ” ಹೆಸರಿನಲ್ಲಿ ಸಾವಿರಾರು ಮಂದಿಯನ್ನು ಸೇರಿಸಿ ಮೆರವಣಿಗೆ ಮಾಡಬಹುದು. ಅವರಿಗೆ ಮಾತ್ರ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲ. ಆದರೆ ಬೆಲೆ ಏರಿಕೆ, ತೆರಿಗೆ ಸುಲಿಗೆ ವಿರೋಧಿಸಿ ಜನಪರವಾದ ಪ್ರತಿಭಟನೆ ಮಾಡಲೂ ಅವಕಾಶ ಆಗುತ್ತಿಲ್ಲ” ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...