Homeಕರ್ನಾಟಕನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

’ನಾವು ಬೀದಿಗಿಳಿದು ಹೋರಾಟ ಮಾಡಿದರೆ ಕೋವಿಡ್ ನಿಯಮ ಉಲ್ಲಂಘನೆ ಎಂದು ಕೇಸು ಹಾಕುತ್ತಾರೆ. ಅರೆಸ್ಟ್ ಮಾಡುತ್ತಾರೆ. ಆದರೆ ಬಿಜೆಪಿ ಅವರಿಗೆ ಮಾತ್ರ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲ’

- Advertisement -
- Advertisement -

“ನಗರದ ಮಧ್ಯಮ ವರ್ಗದ ಮಂದಿಗೆ ನಕಲಿ ದೇಶಭಕ್ತಿಯನ್ನು ಹೇಳುತ್ತಿದ್ದ ಬಿಜೆಪಿ ಈಗ ನಗರ ವಾಸಿಗಳ ಮತ್ತು ತೆರಿಗೆದಾರರ ಬದುಕನ್ನೂ ಹೈರಾಣ ಮಾಡಿಟ್ಟಿದೆ. ವಿಪರೀತ ಬೆಲೆ ಏರಿಕೆ ಮತ್ತು ಪರೋಕ್ಷ ಹಾಗೂ ಪ್ರತ್ಯಕ್ಷ ತೆರಿಗೆಗಳ ಭಾರಕ್ಕೆ ನಗರ ಪ್ರದೇಶಗಳಲ್ಲಿರುವ ಜನರು, ಮಧ್ಯಮ ವರ್ಗದ ಮಂದಿ ಕೂಡ ಇತರೆ ಸಮುದಾಯಗಳ ರೀತಿಯಲ್ಲಿ ಹೈರಾಣಾಗಿ ಹೋಗಿದ್ದಾರೆ” ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ಕೆಲವರಿಗೆ ತಮ್ಮಲ್ಲಿ ಯಾವುದರ ಕೊರತೆ ಇರುತ್ತದೋ ಅದರ ಬಗ್ಗೆಯೇ ಹೆಚ್ಚೆಚ್ಚು ಮಾತನಾಡುವ ಚಟ ಇರುತ್ತದೆ. ಬಿಜೆಪಿ ಮತ್ತು ಪರಿವಾರದ ಮಂದಿ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲ. ಇಡೀ ದೇಶದ ಜನ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾಗ ಬಿಜೆಪಿ ಮತ್ತು ಪರಿವಾರ ದೇಶದ ಜನತೆಯ ಜತೆಗೆ ನಿಲ್ಲಲಿಲ್ಲ. ಹೀಗಾಗಿ ಬಿಜೆಪಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇಲ್ಲ ಮತ್ತು ಬಿಜೆಪಿಯಲ್ಲಿ ಹುತಾತ್ಮರಾದವರು ಯಾರೂ ಇಲ್ಲ. ಅದಕ್ಕೇ ಬಿಜೆಪಿ ಹೆಚ್ಚೆಚ್ಚು ದೇಶಭಕ್ತಿಯ ಬಗ್ಗೆ ಮಾತನಾಡುತ್ತದೆ” ಎಂದಿದ್ದಾರೆ.

’ಒಂದೇ ಮಾತರಂ, ಜೈ ಜವಾನ್-ಜೈ ಕಿಸಾನ್, ಸ್ವದೇಶಿ ಘೋಷಣೆಗಳೆಲ್ಲಾ ಸ್ವಾತಂತ್ರ್ಯ ಹೋರಾಟದ ನಾಯಕರುಗಳು ಕೊಟ್ಟಿದ್ದು. ಈ ಘೋಷಣೆಗಳಿಗೂ ಬಿಜೆಪಿಗೂ ಯಾವ ಸಂಬಂಧವೂ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ  ತಂದು ಕೊಟ್ಟಿದ್ದು, ದೇಶದ ಜನರ ಹೋರಾಟದ ಜತೆಗೆ ನಿಂತಿದ್ದು ಕಾಂಗ್ರೆಸ್ ಪಕ್ಷ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

’ಬೆಲೆ ಏರಿಕೆ ಮತ್ತು ಹಣದುಬ್ಬರದಿಂದ ನಗರವಾಸಿಗಳ ಬದುಕು ನರಕವಾಗಿದೆ. ವಿದ್ಯುಚ್ಚಕ್ತಿ ಬಿಲ್ಲುಗಳು ಶೇ 30 ರಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಮೋದಿ ಅವರು ಪ್ರಧಾನಿ ಆಗಿರುವವರೆಗೂ ಇಳಿಯುವಂತೆ ಕಾಣುತ್ತಿಲ್ಲ. ಒಂದು ವಾರದಲ್ಲಿ ಅಡುಗೆ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಾಗಿ ನಗರದಲ್ಲಿ 886 ರೂಪಾಯಿ ಗ್ರಾಮೀಣ ಭಾಗದಲ್ಲಿ 900 ರೂಪಾಯಿ ತಲುಪಿದೆ. ಮನೆಗಳ ಆಸ್ತಿ ತೆರಿಗೆ ವಿಪರೀತ ಹೆಚ್ಚಾಗಿರುವುದು ಮಾತ್ರವಲ್ಲದೆ ಖಾಲಿ ಜಾಗಗಳಿಗೂ ತೆರಿಗೆ ವಿಧಿಸುತ್ತಿದ್ದಾರೆ. ಕಬ್ಬಿಣ, ಸಿಮೆಂಟ್ ಸೇರಿ ದಿನನಿತ್ಯ ಬಳಕೆಯ ಎಲ್ಲಾ ವಸ್ತುಗಳ ಬೆಲೆಯೂ ಆಕಾಶ ಮುಟ್ಟುತ್ತಿದೆ. ಅಚ್ಛೆ ದಿನ್ ಅಂದರೆ ಇದೇನಾ…?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

’ಕೇಂದ್ರ ಸರ್ಕಾರ ನಗರ ಪ್ರದೇಶಗಳಿಗೆ ಕೊಡುತ್ತಿದ್ದ ಅನುದಾನ ಕಡಿತಗೊಳಿಸಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬಜೆಟ್ ಗಾತ್ರ ಕಡಿಮೆ ಇದ್ದಾಗಲೂ 15 ಸಾವಿರ ಕೋಟಿ ಅನುದಾನ ನೀಡಿದ್ದೆ. ಈಗ ಬಜೆಟ್ ಗಾತ್ರ ಹೆಚ್ಚಾಗಿದ್ದರೂ ಬಿಜೆಪಿ ಸರ್ಕಾರ ನೀಡಿರುವುದು 14 ಸಾವಿರ ಕೋಟಿ ಮಾತ್ರ. ಹೀಗಾಗಿ ನಮ್ಮ ಸರ್ಕಾರದ ಅವಧಿಯಲ್ಲೇ ಅತಿ ಹೆಚ್ಚು ಹಣ ನಗರ ಅಭಿವೃದ್ಧಿಗೆ ನೀಡಿದ್ದು ಬಿಟ್ಟರೆ ಬಿಜೆಪಿಯವರು ಮಾಡಿದ್ದು ಬರೀ ಭಜನೆ ಅಷ್ಟೆ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

’ತೆರಿಗೆದಾರರ, ನಗರ ವಾಸಿಗಳ, ಗ್ರಾಮೀಣ ಜನರನ್ನು ಬೆಲೆ ಏರಿಕೆಯ ನರಕದಲ್ಲಿ ನರಳಿಸುತ್ತಿರುವ ಬಿಜೆಪಿ ಸರ್ಕಾರ ಕಾರ್ಪೋರೇಟ್ ಶ್ರೀಮಂತರ ಆಸ್ತಿ ಪ್ರತೀ ವರ್ಷ ಲಕ್ಷ ಲಕ್ಷ ಕೋಟಿಗಳ ಗಡಿ ದಾಟಿಸುತ್ತಿದೆ.
ರೈತರು ಸಾಲ ತೀರಿಸಿಲ್ಲ ಎಂದು ಅವರ ಟ್ರಾಕ್ಟರ್‌ಗಳನ್ನು ಜಪ್ತಿ ಮಾಡುವ ಬಿಜೆಪಿ ಸರ್ಕಾರ ಮೋದಿ ಪ್ರಧಾನಿ ಆದ 7 ವರ್ಷಗಳಲ್ಲಿ 7 ಲಕ್ಷ ಕೋಟಿಯಷ್ಟು ಕಾರ್ಪೋರೇಟ್ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದೆ. ಇದರಲ್ಲಿ ಅಂಬಾನಿ ಒಬ್ಬನದ್ದೇ 4.5 ಲಕ್ಷ ಕೋಟಿ ಸೇರಿದೆ’ ಎಂದಿದ್ದಾರೆ.

’ಆಸ್ತಿ ನಗದೀಕರಣ ಹೆಸರಿನಲ್ಲಿ ಭಾರತದ ರಸ್ತೆಗಳು, ಏರ್ಪೋರ್ಟ್ಗಳು, ರೈಲು ನಿಲ್ದಾಣಗಳು ಸೇರಿ ಪ್ರತಿಯೊಂದನ್ನೂ ಖಾಸಗಿಯವರಿಗೆ ಒಪ್ಪಿಸಲಾಗುತ್ತಿದೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುವ ಮೋದಿ ಅವರು ಈಗ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದೆಲ್ಲಾ ಯಾರ ಅವಧಿಯಲ್ಲಿ ಆಗಿದ್ದು..? ದೇಶದ ಜನ ಕಳೆದ 70 ವರ್ಷಗಳಲ್ಲಿ ಸೃಷ್ಟಿಸಿದ 6 ಲಕ್ಷ ಕೋಟಿ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಮೋದಿಯವರು ಈ ದೇಶದ ಜನರ ಅನುಮತಿ, ಒಪ್ಪಿಗೆ ಪಡೆದಿದ್ದಾರಾ..?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

’7 ವರ್ಷಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಂದ ಸುಲಿಗೆ ಮಾಡಿದ ಹಣದ ಪ್ರಮಾಣ 22 ಲಕ್ಷ ಕೋಟಿ. ಇದರಲ್ಲಿ ಕರ್ನಾಟಕವೊಂದರಿಂದಲೇ ಸುಲಿಗೆ ಮಾಡಿದ್ದು 1.20 ಲಕ್ಷ ಕೋಟಿ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ದೇಶಕ್ಕೆ ಆಹಾರ ಭದ್ರತೆ ಒದಗಿಸಿ, ಸಾರ್ವಜನಿಕ ಉದ್ದಿಮೆಗಳನ್ನು ಸೃಷ್ಟಿಸಿ ಲಕ್ಷಾಂತರ ಕೋಟಿ ಆಸ್ತಿಯನ್ನು ಸೃಷ್ಟಿಸಿದ್ದು ಕಾಂಗ್ರೆಸ್. ಇದನ್ನೆಲ್ಲಾ ಒಂದೊಂದಾಗಿ ಮಾರಾಟ ಮಾಡುತ್ತಾ ಕುಳಿತಿರುವ ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ಸಾವಿರಾರು ಸುಳ್ಳುಗಳನ್ನು ಹಿಂದೆ ಮುಂದೆ ನೋಡದೆ ಹೇಳುತ್ತಲೇ ಹೋಗುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

’ನಾನು ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿತ್ತು. ಈ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ ಒಂದೇ ಒಂದು ಮನೆ ಕಟ್ಟಿಸಿದ್ದರೆ ತೋರಿಸಲಿ. ನಮ್ಮ ಕಾಂಗ್ರೆಸ್ ಅವಧಿಯಲ್ಲಿ ನೀಡಿದ ಬಡವರ ಮನೆಗಳಿಗೆ ಕಟ್ಟಲು ಬಾಕಿ ಇದ್ದ 2,786 ಕೋಟಿ ರೂಪಾಯಿಯನ್ನು ಮನ್ನಾ ಮಾಡಿ ಬಡವರಿಗೆ ನೆರವಾದೆವು’ ಎಂದಿದ್ದಾರೆ.

“ವಿಪರೀತ ಬೆಲೆ ಏರಿಕೆ, ತೆರಿಗೆಯ ಸುಲಿಗೆ ನಡೆಯುತ್ತಿದ್ದರೂ ಕಾಂಗ್ರೆಸ್ ವಿರೋಧ ಪಕ್ಷವಾಗಿ ದೊಡ್ಡ ಮಟ್ಟದ ಹೋರಾಟ ಮಾಡುವಲ್ಲಿ ವಿಫಲವಾಗಿದ್ದು ಏಕೆ ಎಂದು ಕೆಲವರು ಪ್ರಶ್ನಿಸುತ್ತಾರೆ. ನಾವೇನು ಬಿಜೆಪಿಯವರ ಕಪಾಳಕ್ಕೆ ಹೊಡೆಯಲು ಸಾಧ್ಯವಾ ? ನಾವು ಬೀದಿಗಿಳಿದು ಹೋರಾಟ ಮಾಡಿದರೆ ಕೋವಿಡ್ ನಿಯಮ ಉಲ್ಲಂಘನೆ ಎಂದು ಕೇಸು ಹಾಕುತ್ತಾರೆ. ಅರೆಸ್ಟ್ ಮಾಡುತ್ತಾರೆ. ಆದರೆ ಬಿಜೆಪಿ ಕೇಂದ್ರ ಮಂತ್ರಿಗಳು ‘ಜನಾಶೀರ್ವಾದ ಯಾತ್ರೆ” ಹೆಸರಿನಲ್ಲಿ ಸಾವಿರಾರು ಮಂದಿಯನ್ನು ಸೇರಿಸಿ ಮೆರವಣಿಗೆ ಮಾಡಬಹುದು. ಅವರಿಗೆ ಮಾತ್ರ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲ. ಆದರೆ ಬೆಲೆ ಏರಿಕೆ, ತೆರಿಗೆ ಸುಲಿಗೆ ವಿರೋಧಿಸಿ ಜನಪರವಾದ ಪ್ರತಿಭಟನೆ ಮಾಡಲೂ ಅವಕಾಶ ಆಗುತ್ತಿಲ್ಲ” ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...